Homeಮುಖಪುಟಖ್ಯಾತ ಹಿಂದೂಸ್ತಾನಿ ಗಾಯಕ ಉಸ್ತಾದ್ ರಶೀದ್ ಖಾನ್ ನಿಧನ

ಖ್ಯಾತ ಹಿಂದೂಸ್ತಾನಿ ಗಾಯಕ ಉಸ್ತಾದ್ ರಶೀದ್ ಖಾನ್ ನಿಧನ

- Advertisement -
- Advertisement -

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರ ಉಸ್ತಾದ್ ರಶೀದ್ ಖಾನ್ ಮಂಗಳವಾರ ಮಧ್ಯಾಹ್ನ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ತಿಳಿಸಿದ್ದಾರೆ. ಅವರಿಗೆ ಕೇವಲ 55 ವರ್ಷ ವಯಸ್ಸಾಗಿತ್ತು.

ಉಸ್ತಾದ್ ರಶೀದ್ ಖಾನ್ ಉತ್ತರ ಪ್ರದೇಶದ ಬಡಾಯುನ್‌ನಲ್ಲಿ ಜನಿಸಿದರು. ಅವರ ತಾಯಿಯ ಅಜ್ಜ ಉಸ್ತಾದ್ ನಿಸ್ಸಾರ್ ಹುಸೇನ್ ಖಾನ್ ಅವರಿಂದ ಆರಂಭಿಕ ಸಂಗೀತ ತರಬೇತಿ ಪಡೆದರು. ಉಸ್ತಾದ್ ಖಾನ್ ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

‘ಇದು ತುಂಬಾ ದುರದೃಷ್ಟಕರ. ಅವರು ಕೇವಲ 55ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಇದು ದೇಶಕ್ಕೆ ಮತ್ತು ನಮಗೆಲ್ಲರಿಗೂ ದೊಡ್ಡ ನಷ್ಟವಾಗಿದೆ. ನನ್ನ ಸಹೋದರನಂತೆ ಇದ್ದ ಅವರು, ನನ್ನನ್ನು ‘ತಾಯಿ’ ಎಂದು ಕರೆಯುತ್ತಿದ್ದರು’ ಎಂದು ಬ್ಯಾನರ್ಜಿ ಆಸ್ಪತ್ರೆಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಖಾನ್ ಅವರು ಕಳೆದ ವರ್ಷ ನವೆಂಬರ್ 22ರಂದು ಪೂರ್ವ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು ಇಂಟ್ರಾಸೆರೆಬ್ರಲ್ ಹೆಮರೇಜ್‌ಗೆ ಒಳಗಾಗಿದ್ದರು.

ನರಶಸ್ತ್ರಚಿಕಿತ್ಸಕರ ತಂಡವು ಅವರನ್ನು ಸಾಂಪ್ರದಾಯಿಕ ಚಿಕಿತ್ಸೆಯಲ್ಲಿ ಇರಿಸಲು ನಿರ್ಧರಿಸಿತು. ಅವರು ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದರು. ಆದರೆ ಇಷ್ಟು ದಿನ ಆಸ್ಪತ್ರೆಯಲ್ಲಿದ್ದ ಕಾರಣ ಅವರಿಗೆ ಸೋಂಕು ಉಲ್ಭಣವಾಗಿ ವೇಗವಾಗಿ ಹರಡಿತ್ತು. ‘ಅವರನ್ನು ಇಂದು ಬೆಳಿಗ್ಗೆ ವೆಂಟಿಲೇಟರ್‌ನಲ್ಲಿ ಇರಿಸಲಾಯಿತು. ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸಿದರೂ ಅವರನ್ನು ಬದುಕಿಸಲು ಸಾಧ್ಯವಾಗಲಿಲ್ಲ’ ಎಂದು ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ.

‘ಉಸ್ತಾದ್ ರಶೀದ್ ಖಾನ್ ಅವರಿಗೆ ನಮ್ಮ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಬಂಗಾ ಬಿಭೂಷಣ’ ಮತ್ತು ಸಂಗೀತ ಮಹಾಸಮ್ಮಾನ್ ಕೂಡ ಲಭಿಸಿದೆ. ಅವರು ನಮ್ಮ ರಾಜ್ಯದ ಹಲವಾರು ಸಾಂಸ್ಕೃತಿಕ ಸಂಸ್ಥೆಗಳಿಗೆ ಸಲಹೆ ನೀಡುತ್ತಿದ್ದರು’ ಎಂದು ಬ್ಯಾನರ್ಜಿ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಹಿಂದೂಸ್ಥಾನಿ ಶಾಸ್ತ್ರೀಯ ಗಾಯಕನಿಗೆ 2006ರಲ್ಲಿ ಪದ್ಮಶ್ರೀ ಮತ್ತು 2022 ರಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ಸಹ ನೀಡಲಾಯಿತು. ‘ಅವರು ಉತ್ತರ ಪ್ರದೇಶದಲ್ಲಿ ಜನಿಸಿದ್ದರೂ ಪಶ್ಚಿಮ ಬಂಗಾಳವನ್ನು ಅಪಾರವಾಗಿ ಪ್ರೀತಿಸುತ್ತಿದ್ದರು. ಅವರ ಶವವನ್ನು ಶವಾಗಾರದಲ್ಲಿ ಇಡಲಾಗುವುದು. ಬುಧವಾರ ಮಧ್ಯಾಹ್ನ ಸಕಲ ಸರ್ಕಾರಿ ಗೌರವದ ಬಳಿಕ, ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಗುವುದು’ ಎಂದು ಬ್ಯಾನರ್ಜಿ ತಿಳಿಸಿದ್ದಾರೆ.

ಇದನ್ನೂ ಓದಿ; ರಾಮಮಂದಿರ ಉದ್ಘಾಟನೆ ಗಿಮಿಕ್ ಶೋ: ಬಿಜೆಪಿ ವಿರುದ್ಧ ದೀದಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...