Homeಮುಖಪುಟಮಧ್ಯಪ್ರದೇಶ: ಧಾರ್ಮಿಕ ಮೆರವಣಿಗೆ ವೇಳೆ ಕಲ್ಲು ತೂರಾಟ; ನಿಷೇಧಾಜ್ಞೆ ಜಾರಿ

ಮಧ್ಯಪ್ರದೇಶ: ಧಾರ್ಮಿಕ ಮೆರವಣಿಗೆ ವೇಳೆ ಕಲ್ಲು ತೂರಾಟ; ನಿಷೇಧಾಜ್ಞೆ ಜಾರಿ

- Advertisement -
- Advertisement -

ಮಧ್ಯಪ್ರದೇಶದಲ್ಲಿ ಧಾರ್ಮಿಕ ಮೆರವಣಿಗೆಯೊಂದರಲ್ಲಿ ಭಾಗವಹಿಸುವವರ ಮೇಲೆ ಕೆಲವರು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದ್ದು, ಜಿಲ್ಲಾಡಳಿತವು ಮಧ್ಯಪ್ರದೇಶದ ಶಾಜಾಪುರ ನಗರದ ಮೂರು ವಲಯಗಳಲ್ಲಿ ಸಿಆರ್‌ಪಿಸಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಿದೆ.

ಮಗರಿಯಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ರಾಮ ಮಂದಿರದ ಉದ್ಘಾಟನೆ ಹಿನ್ನೆಲೆ ಸ್ಥಳೀಯರು ಮೆರವಣಿಗೆ ನಡೆಸುವಾಗ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಓರ್ವ ಗಾಯಗೊಂಡಿದ್ದು, ಈ ಪ್ರದೇಶದಲ್ಲಿ ಸೂಕ್ತ ಭದ್ರತೆ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ.

ಶಾಜಾಪುರ ಕಲೆಕ್ಟರ್ ರಿಜು ಬಫ್ನಾ ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದು, ಮಗರಿಯಾ, ಕಚ್ಚಿವಾಡ ಮತ್ತು ಲಾಲ್ಪುರ ಪ್ರದೇಶಗಳಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಕ್ರಿಮಿನಲ್ ಪ್ರೊಸೀಜರ್ ಕೋಡ್ ಸೆಕ್ಷನ್ 144ರಡಿ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ. ಸದ್ಯ ಸ್ಥಳದಲ್ಲಿ ಶಾಂತಿಯುತ ವಾತಾವರಣವಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಸಂಬಂಧ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಏನಿದು ಘಟನೆ?

ಪ್ರಥಮ ಮಾಹಿತಿ ವರದಿಯ ಪ್ರಕಾರ, ಶಾಜಾಪುರ ನಗರದ ನಾಗ್-ನಾಗಿನ್ ರಸ್ತೆಯಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಹಿನ್ನೆಲೆ ಮೆರವಣಿಗೆ ಮಾಡುತ್ತಿದ್ದ ಗುಂಪನ್ನು ಕೆಲವರು ತಡೆದಿದ್ದಾರೆ. ಈ ಪ್ರದೇಶದಲ್ಲಿ ಮೆರವಣಿಗೆ ನಡೆಸದಂತೆ ಆಗ್ರಹಿಸಿದ್ದಾರೆ. ಈ ವೇಳೆ ಜನರ ಗುಂಪು ಸೇರಿ ಮೆರವಣಿಗೆಯಲ್ಲಿ ಭಾಗವಹಿಸಿದ್ದವರ ಮೇಲೆ ಹಲ್ಲೆ ನಡೆಸಿ ಅವರ ಮೇಲೆ ಕಲ್ಲುಗಳನ್ನು ತೂರಲಾಗಿದ್ದು, ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ ಮತ್ತು ಮನೆಗಳ ಛಾವಣಿಗಳ ಮೇಲಿನಿಂದ ಕಲ್ಲುಗಳನ್ನು ತೂರಲಾಗಿದೆ ಎಂದು ಮೋಹಿತ್ ರಾಥೋಡ್ ಎಂಬಾತ ದೂರು ನೀಡಿದ್ದಾನೆ.

ಮೋಹಿತ್ ರಾಥೋಡ್ ನೀಡಿದ ದೂರಿನ ಮೇರೆಗೆ ಪೊಲೀಸರು 24 ಗುರುತಿಸಲ್ಪಟ್ಟ ಜನರು ಮತ್ತು 15-20 ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಘಟನೆಯ ನಂತರ ಉಜ್ಜಯಿನಿಯ ವಿಭಾಗೀಯ ಆಯುಕ್ತ ಸಂಜಯ್ ಗೋಯಲ್ ಮತ್ತು ಇನ್ಸ್‌ಪೆಕ್ಟರ್ ಜನರಲ್ ಸಂತೋಷ್ ಕುಮಾರ್ ಸಿಂಗ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪೊಲೀಸರು ಘಟನೆ ನಡೆದ ಪ್ರದೇಶದಲ್ಲಿ ಮಾರ್ಚ್‌ ನಡೆಸುತ್ತಾ ಧ್ವನಿವರ್ಧಕಗಳ ಮೂಲಕ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಘಟನೆ ಬಳಿಕ ಶಾಜಾಪುರ ಶಾಸಕ ಅರುಣ್ ಭೀಮವಾಡ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇದನ್ನು ಓದಿ: ನರೇಂದ್ರ ದಾಭೋಲ್ಕರ್ ಹತ್ಯೆ: ತನಿಖೆಯ ಮೇಲ್ವಿಚಾರಣೆ ಕೋರಿ ಸಲ್ಲಿಸಿದ ಅರ್ಜಿ ತಿರಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...