Homeಮುಖಪುಟಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

ಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

- Advertisement -
- Advertisement -

ಭಾರತದ 75ನೇ ಸ್ವಾತಂತ್ರ್ಯ ದಿನ ಕೆಂಪು ಕೋಟೆಯಿಂದ ಭಾಷಣ ಮಾಡಿದ ಮೋದಿ ಮಹಿಳಾ ಶಕ್ತಿ ಅಥವಾ ‘ನಾರಿ ಶಕ್ತಿ’ಯ ಬಲವರ್ಧನೆಗೆ ಕರೆ ನೀಡಿದ್ದರು ಮತ್ತು ಮಹಿಳೆಯರನ್ನು ಅವಮಾನಿಸುವ ಪ್ರತಿಯೊಂದು ನಡವಳಿಕೆ, ಸಂಸ್ಕೃತಿಯನ್ನು ಕೊನೆಗೊಳಿಸಬೇಕೆಂದು ಹೇಳಿದ್ದರು. ಆಗಸ್ಟ್ 15 ರಂದು ಪ್ರಧಾನ ಮಂತ್ರಿಗಳು ಕೆಂಪುಕೋಟೆಯಲ್ಲಿ ನಿಂತು ಮಹಿಳೆಯರ ಸುರಕ್ಷತೆ ಮತ್ತು ಮಹಿಳೆಯರಿಗೆ ಗೌರವದ ಬಗ್ಗೆ ಮಾತನಾಡುತ್ತಿದ್ದಾಗ, ಗುಜರಾತ್ ಸರ್ಕಾರವು ಕ್ಷಮಾಧಾನ ನೀಡಿ 2002ರ ಬಿಲ್ಕಿಸ್‌ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬಸ್ಥರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 11 ಅಪರಾಧಿಗಳನ್ನು ಬಿಡುಗಡೆ ಮಾಡಿ ಆದೇಶಿಸಿತ್ತು.

ಬಿಲ್ಕಿಸ್ ‘ಇದು ನ್ಯಾಯದ ಅಂತ್ಯವೇ’ ಎಂಬ ಪ್ರಶ್ನೆಯನ್ನು ಕೇಳಿದ್ದರು. ಈ ಪ್ರಶ್ನೆ ನನ್ನನ್ನು ಮತ್ತು ನನ್ನಂತಹ ಅನೇಕರನ್ನು ಬೆಚ್ಚಿಬೀಳಿಸಿದೆ ಸಿಪಿಐ(ಎಂ) ನಾಯಕಿ ಸುಭಾಷಿಣಿ ಅಲಿ ಅವರು ಹೇಳಿದ್ದಾರೆ. ಸುಭಾಷಿಣಿ ಅಲಿ, ಮಾಜಿ ಪ್ರೊಫೆಸರ್ ರೂಪ್ ರೇಖಾ ವರ್ಮಾ ಮತ್ತು ಪತ್ರಕರ್ತೆ ರೇವತಿ ಲಾಲ್ ಅವರು ಗುಜರಾತ್ ಸರ್ಕಾರದ ಬಿಡುಗಡೆ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಜಂಟಿಯಾಗಿ ಅರ್ಜಿ ಸಲ್ಲಿಸಿದ್ದರು. ತೀರ್ಪು ಬಂದಾಗ ನಾವು ಏನು ಮಾಡಬಹುದೆಂದು ಯೋಚಿಸುತ್ತಿದ್ದೆವು, ಸೂಕ್ತ ಸಮಯದಲ್ಲೇ  ಕಪಿಲ್ ಸಿಬಲ್ ಮತ್ತು ಅಪರ್ಣಾ ಭಟ್ ಮತ್ತು ಇತರ ವಕೀಲರು ಮುಂದೆ ಬಂದಿರುವುದು ತುಂಬಾ ಅದೃಷ್ಟವಾಗಿತ್ತು ಎಂದು ಅಲಿ ಹೇಳಿದರು.

ಜನವರಿ 8ರಂದು ಸುಪ್ರೀಂಕೋರ್ಟ್ ತನ್ನ ಅದೇಶದಲ್ಲಿ ಅಪರಾಧಿಗಳನ್ನು ಬಿಡುಗಡೆ ಮಾಡುವ ಗುಜರಾತ್‌ ಸರಕಾರದ ಆದೇಶವನ್ನು ರದ್ದುಗಳಿಸಿದೆ ಮತ್ತು ಎರಡು ವಾರಗಳಲ್ಲಿ ಜೈಲಿಗೆ ಮರಳಲು ಅಪರಾಧಿಗಳಿಗೆ ಸೂಚಿಸಲಾಗಿದೆ. ಗುಜರಾತ್ ಸರ್ಕಾರವು ಅಪರಾಧಿಗಳಿಗೆ ಸಹಕಾರ ನೀಡಿದೆ ಎಂದು ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ವಲ್ ಭುಯಾನ್ ಅವರ ಪೀಠವುದ ತೀರ್ಪು ದೇಶದ ಜನರಲ್ಲಿ ನ್ಯಾಯಾಂಗ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಹೆಚ್ಚಿಸಿದೆ.

ಲಕ್ನೋ ವಿಶ್ವವಿದ್ಯಾನಿಲಯದ ಮಾಜಿ ಪ್ರೊಫೆಸರ್ ರೂಪ್ ರೇಖಾ ವರ್ಮಾ ಈ ಕುರಿತು ಪ್ರತಿಕ್ರಿಯಿಸಿದ್ದು, ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಅಳಲು ತೋಡಿಕೊಳ್ಳುವ ಮೊದಲೇ ಪ್ರಧಾನಿಯವರು ಕ್ಷಮಾಧಾನಕ್ಕೆ ಅನುಮತಿ ನೀಡಿದ್ದರು. ಅದು ಕ್ರೂರ ಹಾಸ್ಯವಾಗಿತ್ತು. ನಂತರ ತನ್ನ ಕೆಲವು ಸ್ನೇಹಿತರು ಮತ್ತು ಸಹವರ್ತಿಗಳೊಂದಿಗೆ ಬೆಳವಣಿಗೆಗಳ ಬಗ್ಗೆ ಚರ್ಚಿಸಿದೆ ಆ ಸಮಯದಲ್ಲಿ ನ್ಯಾಯಾಲಯಗಳನ್ನು ಹೆಚ್ಚು ಭರವಸೆಯಿಂದ ನೋಡದಿರಲು ನಮ್ಮಲ್ಲಿ ಸಾಕಷ್ಟು ಉದಾಹರಣೆಗಳಿದ್ದರೂ, ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆ ಹೊರತುಪಡಿಸಿ ನಮಗೆ ಬೇರೆ ಆಯ್ಕೆ ಇರಲಿಲ್ಲ ಎಂದು ಹೇಳಿದ್ದಾರೆ.

ಪತ್ರಕರ್ತೆ ರೇವತಿ ಲಾಲ್ ಅವರು ಈ ವಿಚಾರದಲ್ಲಿ ಅರ್ಜಿದಾರರಾಗಿದ್ದಾರೆ. ಅವರು ಮೂರನೇ ಮಹಿಳಾ ಅರ್ಜಿದಾರರನ್ನು ಹುಡುಕುತ್ತಿದ್ದರು. ಅದಕ್ಕೆ ನಾನು ಸಮ್ಮತಿಸಿದೆ. ಬಳಿಕ ವಕೀಲರಾದ ಇಂದಿರಾ ಜೈಸಿಂಗ್ ಮೂಲಕ ತೃಣಮೂಲ ಕಾಂಗ್ರೆಸ್‌ನಿಂದ ಉಚ್ಛಾಟಿತರಾಗಿರುವ ಲೋಕಸಭಾ ಸಂಸದ ಮಹುವಾ ಮೊಯಿತ್ರಾ ಅವರು ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ.  ಸೆಪ್ಟೆಂಬರ್ 2022ರಲ್ಲಿ ಮಾಜಿ IPS ಅಧಿಕಾರಿ ಮೀರನ್ ಚಡಾ ಬೋರ್ವಾಂಕರ್ ಅವರು ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದರು. ಅವರ ತಂಡದಲ್ಲಿ ಜಗದೀಪ್ ಚೋಖರ್ ಮತ್ತು ಮಧು ಭಂಡಾರಿ ಕೂಡ ಇದ್ದರು. ನಾನು ಪ್ರಕರಣವನ್ನು ನಿಕಟವಾಗಿ ಗಮನಿಸುತ್ತಿದ್ದೆ ಮತ್ತು ಬಿಲ್ಕಿಸ್ ಬಾನು ಅವರು ಮೊದಲು ಸರಕಾರದ ಆದೇಶವನ್ನು ಪ್ರಶ್ನಿಸಲು ಮುಂದೆ ಬಂದಿಲ್ಲ ಎಂದು ಅರಿತುಕೊಂಡ ಬಳಿಕ ನಾನು ಕೋರ್ಟ್‌ ಮೊರೆ ಹೋಗಲು ನಿರ್ಧರಿಸಿದೆ. ಆದರೆ ತಡವಾಗಿ ಅವರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಪ್ರೊಫೆಸರ್ ರೂಪ್ ರೇಖಾ ವರ್ಮಾ ಹೇಳಿದ್ದಾರೆ.

11 ಅಪರಾಧಿಗಳನ್ನು ಈಗ ಜೈಲಿಗೆ ಮರಳುವಂತೆ ನ್ಯಾಯಾಲಯವು ನಿರ್ದೇಶಿಸಿರುವ ಹಿನ್ನೆಲೆಯಲ್ಲಿ, ಮೊಯಿತ್ರಾ ಅವರನ್ನು ಪ್ರತಿನಿಧಿಸಿರುವ ಜೈಸಿಂಗ್ ಅವರು ತೀರ್ಪು ಅಸಾಮಾನ್ಯವಾದುದು ಎಂದು ಹೇಳಿದರು ಏಕೆಂದರೆ ಸುಪ್ರೀಂ ಕೋರ್ಟ್ ಅತ್ಯಂತ ಅಪರೂಪವಾಗಿ ತನ್ನದೇ ಆದ ತೀರ್ಪನ್ನು ಶೂನ್ಯ ಮತ್ತು ಅನೂರ್ಜಿತ ಎಂದು ಘೋಷಿಸುತ್ತದೆ. ಇದು ನಿಮಗೆ ನ್ಯಾಯದ ಮಾರ್ಗಸೂಚಿಯನ್ನು ಸಹ ನೀಡುತ್ತದೆ. ಅವರು ಮಹಾರಾಷ್ಟ್ರ ಕೋರ್ಟ್‌ಗೆ ಹೋಗುತ್ತಾರೆ ಎಂದು ನನಗೆ ತಿಳಿದಿದೆ. ಭವಿಷ್ಯದಲ್ಲಿ ಏನಾಗುತ್ತದೆ ಎಂಬುದನ್ನು ನಾವು ಕಾದು ನೋಡಬೇಕಾಗಿದೆ ಆದರೆ ತೀರ್ಪು ನ್ಯಾಯದ ಹಾದಿಯಲ್ಲಿ ಒಂದು ಮೈಲಿಗಲ್ಲು ಎಂದು ಅವರು ಹೇಳಿದ್ದಾರೆ.

ಸುಪ್ರೀಂಕೋರ್ಟ್‌ನಲ್ಲಿ ನಂಬಿಕೆ ಕಡಿಮೆಯಾದ ಸಮಯದಲ್ಲಿ ಈ ತೀರ್ಪು ಬಂದಿದೆ. ಈ ತೀರ್ಪು ನನಗೆ ಅನೇಕ ವಿಧಗಳಲ್ಲಿ ಅಮೂಲ್ಯವಾಗಿದೆ. ಸುಪ್ರೀಂಕೋರ್ಟ್ ಮತ್ತು ಇತರ ನ್ಯಾಯಾಲಯಗಳ ಮೇಲಿನ ನಮ್ಮ ನಂಬಿಕೆಯು ಆ ಸಮಯದಲ್ಲಿ ಕುಸಿಯುತ್ತಿರುವಾಗ ಅಂತಹ ತೀರ್ಪು ನ್ಯಾಯಾಲಯಗಳ ಮೇಲಿನ ನಮ್ಮ ನಂಬಿಕೆಯನ್ನು ಸ್ವಲ್ಪವಾದರೂ ಹೆಚ್ಚಿಸುತ್ತದೆ. ಇದು ನನಗೆ ವೈಯಕ್ತಿಕವಾಗಿ ಮಾತ್ರವಲ್ಲದೆ ದೇಶಕ್ಕೂ ಅರ್ಥವಾಗಿದೆ ಎಂದು ವರ್ಮಾ ಹೇಳಿದ್ದಾರೆ.

ನಮ್ಮ ಅರ್ಜಿಗಳನ್ನು ಪ್ರಶ್ನಿಸಿ ಅಪರಾಧಿಯೋರ್ವ ಸಲ್ಲಿಸಿದ ಅರ್ಜಿಯ ಬಳಿಕ ಬಿಲ್ಕಿಸ್‌ ಬಾನು ಅವರು ನವೆಂಬರ್ 2022ರಲ್ಲಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರಿಗೆ ಯಾವುದೇ ಸ್ಥಾನವಿಲ್ಲ ಮತ್ತು ಈ ವಿಷಯದಲ್ಲಿ ಸಂಪೂರ್ಣ ಅಪರಿಚಿತರು ಎಂದು ಅಪರಾಧಿ ಬಿಡುಗಡೆ ಪ್ರಶ್ನಿಸಿದ್ದ ನಮ್ಮ ಅರ್ಜಿ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.  ಈ ಅರ್ಜಿಗಳ ನಿರ್ವಹಣೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ ನಂತರ ಬಾನು ಅರ್ಜಿದಾರರಾಗಬೇಕಾಯಿತು ಎಂದು ಬಿಲ್ಕಿಸ್‌ ಬಾನು ಪರ ವಕೀಲೆ ಶೋಭಾ ಗುಪ್ತಾ ಹೇಳಿದ್ದಾರೆ.

ಈ ಬಗ್ಗೆ ವಕೀಲೆ ಶೋಭಾ ಗುಪ್ತಾ ಮತನಾಡುತ್ತಾ, ಅವಳು ಮಾತ್ರ ಏಕೆ ಮುಂದೆ ಬರಬೇಕು? ಇದು ವೈಯಕ್ತಿಕ ಅಪರಾಧವಲ್ಲ. ಇದು ಮಾನವೀಯತೆಯ ವಿರುದ್ಧದ ಅಪರಾಧ ಮತ್ತು ಅಪರಾಧದ ಅನಾಗರಿಕ ಸ್ವರೂಪದ್ದಾಗಿತ್ತು. ಅದನ್ನು ಸಮಾಜವೇ ನಿರ್ಧರಿಸಬೇಕು. ಅದಕ್ಕಾಗಿಯೇ ಅವಳು ಮೊದಲು ಅರ್ಜಿ ಸಲ್ಲಿಸಬೇಕೆಂದು ನಾನು ಭಾವಿಸುವುದಿಲ್ಲ ಅವಳು ತನ್ನ ಸಮಯವನ್ನು ತೆಗೆದುಕೊಂಡಿದ್ದಕ್ಕೆ ನನಗೆ ಖುಷಿಯಾಗಿದೆ. ಈ ಮಧ್ಯೆ ಸರಿಯಾದ ಸಮಯದಲ್ಲಿ ಇತರರು ಕೋರ್ಟ್‌ ಮೊರೆ ಹೋಗಿದ್ದಾರೆ ಎಂದು  ಹೇಳಿದ್ದಾರೆ.

2002ರಲ್ಲಿ ನಡೆದ ಗಲಭೆಯ ನಂತರದ ಪ್ರಕರಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ವಕೀಲರಾಗಿ ನನ್ನನ್ನು ನೇಮಿಸಿದ ಬಳಿಕ ತಾನು ಈ ವಿಷಯದಲ್ಲಿ ಒಂದು ಪೈಸೆಯನ್ನೂ ವಿಧಿಸಿಲ್ಲ. ನಾನು ವೃತ್ತಿಗೆ ಬಂದು ಕೇವಲ ಐದು ವರ್ಷವಾಗಿತ್ತು. ವಕೀಲರಿಗೆ ಪಾವತಿಸಲು ನಮ್ಮ ಬಳಿ ಸಾಕಷ್ಟು ಹಣವಿದೆ ಎಂದು ಎನ್‌ಎಚ್‌ಆರ್‌ಸಿ ನನಗೆ ಹೇಳಿತ್ತು. ಆದರೆ ನಾನು ಈ ವಿಷಯದಲ್ಲಿ ಕಾಗದದ ಕೆಲಸಕ್ಕೂ  ಒಂದು ರೂ. ಕೂಡ ಬೇಡ ಎಂದು ಹೇಳಿದೆ ಎಂದು ಶೋಭಾ ಗುಪ್ತಾ ಹೇಳಿದ್ದಾರೆ.

ಇದನ್ನು ಓದಿ: ನರೇಂದ್ರ ದಾಭೋಲ್ಕರ್ ಹತ್ಯೆ: ತನಿಖೆಯ ಮೇಲ್ವಿಚಾರಣೆ ಕೋರಿ ಸಲ್ಲಿಸಿದ ಅರ್ಜಿ ತಿರಸ್ಕಾರ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...