Homeಚಳವಳಿಗಳಿಸಿಕೊಂಡಿದ್ದನ್ನೂ ಕಳೆದುಕೊಳ್ಳಬೇಕಿರುವ ಟ್ರಾನ್ಸ್-ಕ್ವಿಯರ್ ಸಮುದಾಯ : ಕಾರ್ತಿಕ್ ಬಿಟ್ಟು

ಗಳಿಸಿಕೊಂಡಿದ್ದನ್ನೂ ಕಳೆದುಕೊಳ್ಳಬೇಕಿರುವ ಟ್ರಾನ್ಸ್-ಕ್ವಿಯರ್ ಸಮುದಾಯ : ಕಾರ್ತಿಕ್ ಬಿಟ್ಟು

- Advertisement -
- Advertisement -

ಪಾದರಸದಂತಹ ವ್ಯಕ್ತಿತ್ವದ ಕಾರ್ತಿಕ್ ಬಿಟ್ಟು ಹುಟ್ಟಿದ್ದು ಬೆಂಗಳೂರಿನಲ್ಲಿ. ದೆಹಲಿಯಲ್ಲಿ ಬೆಳೆದು ಹಾರ್ವರ್ಡ್‍ನಲ್ಲಿ ನ್ಯೂರೋ ಬಿಹೇವಿಯರ್ ವಿಜ್ಞಾನದಲ್ಲಿ ಪಿಎಚ್‍ಡಿ ಮಾಡಿದ್ದಾರೆ. ಜಗತ್ತಿನ ಯಾವುದೇ ಮೂಲೆಯಲ್ಲಿ ನಡೆಯುವ ಅನ್ಯಾಯಗಳ ವಿರುದ್ಧ ಸಿಡಿಯುವ ಸಂಗಾತಿ, ಸ್ಥಳೀಯ ದುರ್ಬಲ ಸಮುದಾಯಗಳ ಪರವಾಗಿ ಕೆಲಸ ಮಾಡಲು ಆದ್ಯತೆ. ರೋಹಿತ್ ವೇಮುಲಾ ಆತ್ಮಹತ್ಯೆಯಾದಾಗ ಅದೇ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕನಾಗಿದ್ದು, ದನಿಯೆತ್ತಿದ್ದರು. ಇದೀಗ ಅಶೋಕಾ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರು ಮತ್ತು ವಿಜ್ಞಾನಿ. ಕರ್ನಾಟಕ ಜನಶಕ್ತಿ, ಡಬ್ಲ್ಯುಎಸ್‍ಎಸ್ ಮತ್ತು ಟ್ರಾನ್ಸ್‍ಜೆಂಡರ್ ಸಂಘಟನೆಗಳ ಸದಸ್ಯರು. ಇವರ ಈ ಲೇಖನವನ್ನು ಕನ್ನಡಕ್ಕೆ ರಾಜಶೇಖರ್ ಅಕ್ಕಿಯವರು ಅನುವಾದ ಮಾಡಿದ್ದಾರೆ.

ಇಂದು ಭಾರತದ ಟ್ರಾನ್ಸ್‌ಜೆಂಡರ್ ಮತ್ತು ಕ್ವೀಯರ್ (ಲೈಂಗಿಕ ಅಲ್ಪಸಂಖ್ಯಾತ) ಸಮುದಾಯಗಳು ಸಂದಿಗ್ಧದಲ್ಲಿ ಇದ್ದಾರೆ. ಒಂದೆಡೆ ಭಾರತೀಯ ನ್ಯಾಯಾಲಯಗಳು ಎನ್‍ಎಎಲ್‍ಎಸ್‍ಏ ತೀರ್ಪಿನ ಅಡಿಯಲ್ಲಿ ನಮಗೆ ಹಿಂದೆಂದೂ ಇಲ್ಲದಂತಹ ನಮ್ಮನ್ನು ನಾವು ನಾವೇ ಇಚ್ಛಿಸಿದ ಲಿಂಗದೊಂದಿಗೆ ಗುರುತಿಸಿಕೊಳ್ಳುವ ಹಕ್ಕನ್ನು ನೀಡಿದ್ದಾರೆ. ಇದರಿಂದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳು ನಮ್ಮ ದೇಹಗಳು ಹೇಗೆ ಕಾಣಿಸಿಕೊಂಡರೂ ನಮ್ಮ ಗುರುತಿನ ದಾಖಲೆಗಳಲ್ಲಿಯೂ ನಮ್ಮ ಆಯ್ಕೆಯ ಲಿಂಗದೊಂದಿಗೆ ಗುರುತಿಸಕೊಳ್ಳಬಹುದಾಗಿದೆ. ಈ ತೀರ್ಪಿನ ಮುಖಾಂತರ ಉಚ್ಚ ನ್ಯಾಯಾಲಯವು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಈ ದೇಶದಲ್ಲಿ ಆದ ಅನ್ಯಾಯವನ್ನು ಗುರುತಿಸಿದೆ ಹಾಗೂ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ, ಉಚಿತ ಆರೋಗ್ಯ ಸೇವೆ, ವಸತಿ ಮುಂತಾದ ಸವಲತ್ತುಗಳನ್ನು ನೀಡಬೇಕೆಂದು ಹೇಳಿದೆ. ಸೆಕ್ಷನ್ 377ಅನ್ನು ತೆಗೆದುಹಾಕುವುದರಿಂದ ನ್ಯಾಯಾಲಯಗಳು ಒಂದು ಬಲವಾದ ಸಂದೇಶವನ್ನೂ ನೀಡಿದಂತಾಗಿದೆ.

ಇದೇ ಹೊತ್ತಿನಲ್ಲಿ ಶಾಸಕಾಂಗವು ಟ್ರಾನ್ಸ್‌ಜೆಂಡರ್ ಸಮುದಾಯವನ್ನು ಅಪರಾಧೀಕರಿಸುವ ಮಸೂದೆಗಳನ್ನು ಅತ್ಯಂತ ತ್ವರಿತ ಗತಿಯಲ್ಲಿ ಜಾರಿ ಮಾಡುತ್ತಿದೆ; ಇದರಿಂದ ಪರಿಸ್ಥಿತಿ ಮೊದಲಿಗಿಂತಲೂ ಹದಗೆಡಲಿದೆ. ಬಿಜೆಪಿ ಸರಕಾರವು 2015ರಲ್ಲಿ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ರಕ್ಷಣೆ) ಮಸೂದೆ ರಚಿಸಿತು. ಈ ಮಸೂದೆಯ ಹೆಸರೇ ಅತ್ಯಂತ ಗೊಂದಲಮಯವಾಗಿದೆ; ಏಕೆಂದರೆ, ರಾಜ್ಯಸಭೆಯಲ್ಲಿ ಡಿಎಮ್‍ಕೆಯ ತಿರುಚಾ ಶಿವ ಅವರು, ಟ್ರಾನ್ಸ್‌ಜೆಂಡರ್ ಸಮುದಾಯ ಸಹಾಯದಿಂದ ಇದೇ ಹೆಸರಿನಲ್ಲಿ ರಚಿಸಲಾದ ಮಸೂದೆಯನ್ನು ಮಂಡಿಸಿದ್ದರು. ಆದರೆ ಲೋಕಸಭೆಯಲ್ಲಿ ಈ ಮಸೂದೆಯನ್ನು ತಂದಾಗ ಮೂಲ ಮಸೂದೆಯಲ್ಲಿದ್ದ ಎಲ್ಲಾ ಸಕಾರಾತ್ಮಕ ಅಂಶಗಳು ಕಣ್ಮರೆಯಾಗಿದ್ದವು. ಲೋಕಸಭೆಯಲ್ಲಿ ಮಂಡಿಸಿದ ಮಸೂದೆಯಲ್ಲಿ ಆರೋಗ್ಯ ಸೇವೆ, ಶಿಕ್ಷಣ ಮತ್ತು ಉದ್ಯೋಗದಲ್ಲಿ ತಾರತಮ್ಯ ಮಾಡಿದರೆ ಇರಬೇಕಾದ ದಂಡ ಇರಲಿಲ್ಲ ಹಾಗೂ ಈ ಕ್ಷೇತ್ರಗಳಲ್ಲಿ ಮೀಸಲಾತಿ ಅವಕಾಶವನ್ನು ಕಲ್ಪಿಸದೇ ಸಾಂಪ್ರದಾಯಿಕ ಭಿಕ್ಷಾಟನೆಯನ್ನು ಅಪರಾಧೀಕರಿಸಲಾಯಿತು. ಟ್ರಾನ್ಸ್‌ಜೆಂಡರ್ ಸಮುದಾಯವು ದೀರ್ಘಕಾಲಿಕ ಹೋರಾಟ ನಡೆಸಿದ ನಂತರ 2019ರ ಅವೃತ್ತಿಯಲ್ಲಿ ಆ ತಿದ್ದುಪಡಿಗಳನ್ನು ಹಿಂಪಡೆಯಲಾಯಿತು.

ಆದರೂ, ಸುಪ್ರೀಂಕೋರ್ಟಿನ ಎನ್‍ಏಎಲ್‍ಎಸ್‍ಏ ತೀರ್ಪಿನಲ್ಲಿ ಅಡಕವಾದ ಸ್ವ ಇಚ್ಛೆಯಿಂದ ತಮಗಿಷ್ಟವಾದ ಲಿಂಗವನ್ನು ಗುರುತಿಸುವ ಹಕ್ಕನ್ನು ಈ ಮಸೂದೆ ಉಲ್ಲಂಘಿಸುತ್ತದೆ. ಈಗ ಆ ವ್ಯಕ್ತಿಗಳು ಮೊದಲು ತಾವು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳೆಂದು ಸರಕಾರಕ್ಕೆ ಬಹಿರಂಗಪಡಿಸಬೇಕು ಹಾಗೂ ಜಿಲ್ಲಾ ನ್ಯಾಯಾಧೀಶರ ನೇತೃತ್ವದ ಸಮಿತಿಯಿಂದ ತಮ್ಮ ಗುರುತಿನ ದಾಖಲೆಗಳನ್ನು ಪಡೆಯಲು ಮನವಿ ಸಲ್ಲಿಸಬೇಕು ಎನ್ನುವುದನ್ನು ಕಡ್ಡಾಯಗೊಳಿಸಿದೆ. ಹಾಗೂ ನಮ್ಮ ಆಯ್ಕೆಯ ಯಾವುದೇ ಇತರ ಲಿಂಗದಲ್ಲಿ ಗುರುತಿನ ದಾಖಲೆಗಳನ್ನು ಪಡೆಯಬೇಕಾದರೆ ಶಸ್ತ್ರಚಿಕಿತ್ಸೆಯ ದಾಖಲೆಗಳನ್ನು ಸಲ್ಲಿಸಬೇಕು ಎಂತಲೂ ಹೇಳಿದೆ. ಇದರ ಅರ್ಥ, ಒಬ್ಬ ಟ್ರಾನ್ಸ್ ಪುರುಷ, ಹಾರ್ಮೋನುಗಳನ್ನು ಸೇವಿಸಿ, ಗಡ್ಡವನ್ನು ಬೆಳೆಸಿದರೂ, ಒಂದು ವೇಳೆ ಆತ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಇಚ್ಛಿಸದಿದ್ದರೆ ತನ್ನ ಆಯ್ಕೆಯ ಲಿಂಗಕ್ಕೆ ವಿರುದ್ಧವಾದ ಲಿಂಗದ ಗುರುತಿನೊಂದಿಗೇ ಜೀವಿಸಬೇಕಾಗುತ್ತದೆ. ಈ ಮಸೂದೆಯು ಬೇರೆ ಬೇರೆ ರೀತಿಯ ಟ್ರಾನ್ಸ್ ವ್ಯಕ್ತಿಗಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಬೇರೆ ಬೇರೆ ಪ್ರಮಾಣದ ಶಿಕ್ಷೆ ನೀಡುವ ತಾರತಮ್ಯವನ್ನೂ ಹೊಂದಿದೆ.

ಬಹುಶಃ ನಮ್ಮ ಹಕ್ಕುಗಳ ಮೇಲೆ ಇಂತಹ ಕಾನೂನು ದಾಳಿಗೆ ಪ್ರತಿಕ್ರಿಯೆಯಾಗಿಯೇ, ನಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳ ಅವಶ್ಯಕತೆ ಎಲ್ಲರಿಗೂ ಕಾಣಿಸುವಂತಾಗಲಿ ಎಂದು ಟ್ರಾನ್ಸ್‌ಜೆಂಡರ್ ಸಮುದಾಯವು 2019ರ ಚುನಾವಣೆಗಳಲ್ಲಿ ಗಟ್ಟಿಯಾಗಿ ತೊಡಗಿಸಿಕೊಂಡಿತ್ತು. ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಚುನಾವಣೆಯಲ್ಲಿ ಬಹಳ ಹಿಂದಿನಿಂದ ಭಾಗವಹಿಸುತ್ತಿದ್ದರೂ, 2019ರ ಚುನಾವಣೆ ಮುಂಚೆಗಿಂತ ಭಿನ್ನವಾಗಿತ್ತು. ದೇಶದ ವಿವಿಧೆಡೆಯಲ್ಲಿ 2019ರ ಚುನಾವಣೆಯಲ್ಲಿ ಭಾಗವಹಿಸಿದ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರ ಸಂಖ್ಯೆ ಗಣನೀಯವಾಗಿತ್ತು. ಹಾಗೂ ಅದಕ್ಕಿಂತ ಮುಖ್ಯವಾಗಿ ಟ್ರಾನ್ಸ್‌ಜೆಂಡರ್ ಸಮುದಾಯದ ವಿಷಯಗಳನ್ನು ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಗಳಲ್ಲಿ ವಿವರವಾಗಿ ಉಲ್ಲೇಖಸಿದ್ದು 2019ರ ಚುನಾವಣೆಗಳಲ್ಲಿ.

ಪ್ರಸ್ತುತ ಮಸೂದೆಯ ವಿರುದ್ಧ ಹೋರಾಟ ಮಾಡುವ ಭರವಸೆಯನ್ನು ಕೆಲವು ರಾಜಕೀಯ ಪಕ್ಷಗಳ ಪ್ರಣಾಳಿಕೆಗಳು ಸ್ಪಷ್ಟವಾಗಿ ಹೇಳಿದವು; ಕಾಂಗ್ರೆಸ್ ಪಕ್ಷ, ಸಿಪಿಎಮ್ ಹಾಗೂ ಹೊಸದಾಗಿ ರಚಿತಗೊಂಡ ವಂಚಿತ್ ಬಹುಜನ್ ಅಘಾಡಿ ಪಕ್ಷದ ಪ್ರಣಾಳಿಕೆಗಳು ಈ ಭರವಸೆಯನ್ನು ಒಳಗೊಂಡ ಕೆಲವು ಪಕ್ಷಗಳು. ಅದರೊಂದಿಗೆ, ಹಲವಾರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳು ಚುನಾವಣೆಗೂ ಸ್ಪರ್ಧಿಸಿದರು; ಅಲಹಾಬಾದ್‍ನಲ್ಲಿ ಭವಾನಿ ಸಿಂಗ್ ಆಪ್‍ನಿಂದ ಸ್ಪರ್ಧಿಸಿದರೆ, ಇತರ ಅಭ್ಯರ್ಥಿಗಳು ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದರು; ಅವರೆಂದರೆ ಎರ್ನಾಕುಲಮ್‍ದಿಂದ ‘ಚಿಂಚು’ ಅಸ್ವಥಿ ರಾಜಪ್ಪನ್, ಅಹ್ಮದಾಬಾದ್‍ನಿಂದ ರಾಜು ಮಾತಾಜಿ, ಮುಂಬಯಿಯಲ್ಲಿ ಜತಿನ್ ರಂಗರಾವ್ ಹರ್ನೆ ಮತ್ತು ಸ್ನೇಹಾ ಕಾಳೆ ಹಾಗೂ ಚೆನ್ನೈನಿಂದ ಎಮ್.ರಾಧಾ.

ಬಿಜೆಪಿಯ ಗೆಲವು ಟ್ರಾನ್ಸ್‌ಜೆಂಡರ್ ಸಮುದಾಯಕ್ಕೆ ಇನ್ನಷ್ಟು ದುಗುಡವನ್ನು ತಂದಿದೆ. ಈ ಕಾರಣದಿಂದಲೇ ಅವರ ನೀತಿಗಳ ವಿರುದ್ಧ ಸಮುದಾಯದ ರಾಜಕೀಯ ಪಾಲ್ಗೊಳ್ಳುವಿಕೆ ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಬಹುದು. ಬಿಜೆಪಿಯ ಪ್ರಣಾಳಿಕೆಯು ತುಂಬಾ ನಯವಾಗಿ ‘ಸೂಕ್ತ ಸಾಮಾಜಿಕ, ಆರ್ಥಿಕ ಮತ್ತು ನೀತಿಗಳ ಕ್ರಮಗಳ’ ಮೂಲಕ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳನ್ನು ಮುಖ್ಯವಾಹಿನಿ ತರಲಾಗುವುದು’, ‘ಸ್ವ-ಉದ್ಯೋಗ’ ಮತ್ತು ‘ಕೌಶಲ್ಯ ಅಭಿವೃದ್ಧಿ’ಯನ್ನು ಸುನಿಶ್ಚಿತಗೊಳಿಸಲಾಗುವುದು ಎಂದೂ ಹೇಳಿತು. ಆದರೆ, ಭಿಕ್ಷಾಟನೆ ಮತ್ತು ಲೈಂಗಿಕ ವೃತ್ತಿಯ ರೂಪದಲ್ಲಿ ಸಮುದಾಯವು ಸ್ವ-ಉದ್ಯೋಗದಲ್ಲಿಯೇ ತೊಡಗಿದೆ, ಇವರೆಡೂ ಸಂಕಷ್ಟದಿಂದ ಹುಟ್ಟಿಕೊಂಡ ಸ್ವಯಂ-ಸಂಘಟಿತ ಜೀವನೋಪಾಯಗಳಾಗಿವೆ.

ಮುಂದಿನ ದಿನಗಳು ಅಷ್ಟು ಚೆನ್ನಾಗಿರುವುದಿಲ್ಲವೆಂಬುದು ಖಚಿತ. ಆರ್ಥಿಕ ಬಿಕ್ಕಟ್ಟಿನೆದುರು, ಫ್ಯಾಸಿಸ್ಟ್ ತತ್ವಾಧಾರಿತ ಹಿಂದೂ ಬಹುಸಂಖ್ಯಾತವಾದಿ ಸಂಘಟನೆಯಿಂದ ಆಳಲ್ಪಡುತ್ತಿರುವ ಈ ದೇಶವು ಒಂದು ದೀರ್ಘ ಸಾಮಾಜಿಕ ರಾಜಕೀಯ ಪ್ರಕ್ರಿಯೆಯ ಮೂಲಕ ಹಾದುಹೋಗಲೇಬೇಕಿದೆ ಎಂಬುದು ಸ್ಪಷ್ಟ.

ಅಂಕಿಅಂಶಗಳ ಪ್ರಕಾರ ಎಲ್‍ಜಿಬಿಟಿಕ್ಯುಐಏ (LGBTQIA) ಎಂದು ಗುರುತಿಸಿಕೊಂಡವರ ಸಂಖ್ಯೆ ಭಾರತದ ಜನಸಂಖ್ಯೆಯ ಶೇ.4-11ರಷ್ಟಿದೆ. ಅಂದರೆ, ಈ ಸಮುದಾಯ ವೋಟ್ ಬ್ಯಾಂಕ್ ಎಂದು ಪರಿಗಣಿಸುವಷ್ಟು ದೊಡ್ಡದಾಗಿದೆ. ಆದರೆ ನನ್ನ ಚಿಂತೆ LGBTQIA ಸಮುದಾಯದ ಸದಸ್ಯರ ಮತ್ತು ಅವರ ಹೆಚ್ಚುತ್ತಿರುವ ಸಾರ್ವಜನಿಕ ಅಸ್ತಿತ್ವ ಅಲ್ಲ; ತುಳಿತಕೊಳಪಟ್ಟ ಇತರ ಸಮುದಾಯಗಳೊಂದಿಗೆ ಈ ಸಮುದಾಯವು ಹೇಗೆ ಸಹ-ಸಂಬಂಧವನ್ನು ಸಾಧಿಸಬಹುದು ಎನ್ನುವುದು ನನ್ನ ಚಿಂತೆ. ಸ್ವ-ವಿಮೋಚನೆಯ ಒಂದು ಸಂಕುಚಿತ ರೂಪಕ್ಕಾಗಿ ಹೋರಾಡುವುದು ನಮ್ಮ ಗುರಿಯಾಗಬಾರದು. ಅದರ ಬದಲಿಗೆ ಇಂದು ಇರುವ ಕ್ರೂರ, ಅಸಮಾನ ಸಮಾಜದಿಂದ ಎಲ್ಲರನ್ನೂ ವಿಮೋಚನೆಗೊಳಿಸುವುದು ನಮ್ಮ ಗುರಿಯಾಗಿರಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...