Homeಕರ್ನಾಟಕಬೆಂಗಳೂರು: ಸಿಇಒ ಪುತ್ರನ ಕೊಲೆ ಪೂರ್ವ ಯೋಜಿತ?

ಬೆಂಗಳೂರು: ಸಿಇಒ ಪುತ್ರನ ಕೊಲೆ ಪೂರ್ವ ಯೋಜಿತ?

- Advertisement -
- Advertisement -

ಗೋವಾದ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದ ಸ್ಟಾರ್ಟ್‌ಅಪ್‌ನ ಸಿಇಒ ಸುಚನಾ ಸೇಠ್ ನಿನ್ನೆ ಬ್ಯಾಗ್‌ನಲ್ಲಿ ಮಗನ ಮೃತದೇಹವನ್ನು ಕಾರಿನಲ್ಲಿ ಬೆಂಗಳೂರಿಗೆ ಸಾಗಿಸುತ್ತಿದ್ದಾಗ ಪೊಲೀಸರು ಆಕೆಯನ್ನು ಬಂಧಿಸಿದ್ದರು. ಇದೀಗ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಕೃತ್ಯ ನಡೆದಿದೆ ಎನ್ನಲಾದ ಕೊಠಡಿಯಲ್ಲಿ ಕೆಮ್ಮಿನ ಸಿರಪ್‌ನ ಎರಡು ಖಾಲಿ ಬಾಟಲಿಗಳು ಸಿಕ್ಕಿದೆ. ಮಗುವಿಗೆ ಓವರ್‌ ಡೋಸ್‌ ಕೊಟ್ಟು ಕೊಲೆ ಮಾಡಿರುವ ಶಂಕೆ ಇದ್ದು ಇದೊಂದು ಪೂರ್ವಯೋಜಿತ ಕೃತ್ಯದಂತೆ ತೋರುತ್ತಿದೆ ಎಂದು ಪೊಲೀಸ್‌ ಅಧಿಕಾರಿಯೋರ್ವರು ಹೇಳಿದ್ದಾರೆ.

ಸುಚನಾ ಸೇಠ್ ಬಂಧನದ ನಂತರ ಮಂಗಳವಾರ ಆಕೆಯನ್ನು ಗೋವಾದ ಮಾಪುಸಾ ಪಟ್ಟಣದ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಆಕೆಗೆ ಕೋರ್ಟ್ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಯನ್ನು ವಿಧಿಸಿದೆ.

ಮರಣೋತ್ತರ ಪರೀಕ್ಷೆಯಲ್ಲಿ ಮಗುವನ್ನು ಬಟ್ಟೆ ಅಥವಾ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವ ಬಗ್ಗೆ ಮಾಹಿತಿ ಇದೆ. ಆದರೆ ಮಗು ನರಲಾಟ ಮಾಡಿರುವ ಲಕ್ಷಣ ಕಂಡು ಬಂದಿಲ್ಲ. ಮಗುವನ್ನು ಕೊಲೆ ಮಾಡುವ ಮೊದಲು ಅದಕ್ಕೆ ಓವರ್‌ ಡೋಸ್‌ ನೀಡಿರುವ ಸಾಧ್ಯತೆ ಇದೆ ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಅಪಾರ್ಟ್‌ಮೆಂಟ್ ಸಿಬ್ಬಂದಿಯನ್ನು ವಿಚಾರಣೆ ನಡೆಸಿದಾಗ ಮಹಿಳೆ ತನಗೆ ಕೆಮ್ಮು ಇದೆ ಎಂದು ಹೇಳಿಕೊಂಡು ಕೆಮ್ಮಿನ ಸಿರಪ್‌ನ ಸಣ್ಣ ಬಾಟಲಿಯನ್ನು ತರುವಂತೆ ಹೇಳಿದ್ದಳು. ಆದರೆ ದೊಡ್ಡ ಬಾಟಲಿಯನ್ನು ಅವಳೇ ಕೊಂಡೊಯ್ದಿರಬಹುದು ಎಂದು ಹೇಳಿದ್ದಾರೆ. ಇದನ್ನು ಗಮನಿಸಿದಾಗ ಪೂರ್ವ ನಿಯೋಜಿತ ಕೃತ್ಯದಂತೆ ತೋರುತ್ತದೆ ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

ಆರೋಪಿತ ಸುಚನಾ ಸೇಠ್ ವಿಚಾರಣೆಯ ಸಮಯದಲ್ಲಿ ತಾನು ಕೊಲೆ ಮಾಡಿರುವುದನ್ನು ನಿರಾಕರಿಸಿದ್ದು,  ಮಗು ನಿದ್ರೆಯಿಂದ ಎದ್ದಾಗ ಮೃತಪಟ್ಟಿತ್ತು ಎಂದು ಹೇಳಿದ್ದಾಳೆ. ನಾವು ಅವಳ ವಾದವನ್ನು ಒಪ್ಪುವುದಿಲ್ಲ. ಈ ಕುರಿತ ಹೆಚ್ಚಿನ ತನಿಖೆಯು ಮಗುವಿನ ಕೊಲೆಯ ಹಿಂದಿನ ಉದ್ದೇಶವನ್ನು ಬಹಿರಂಗಪಡಿಸುತ್ತದೆ. ಆರೋಪಿ ಮಹಿಳೆ ಮತ್ತು ಅವಳ ಪತಿ ದೂರವಾಗಿದ್ದರು. ಅದಕ್ಕಾಗಿಯೇ ಅವಳು ಇದನ್ನು ಮಾಡಿರಬಹುದು ಎಂದು ನಮಗೆ ತೋರುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಗುವನ್ನು ಕತ್ತು ಹಿಸುಕಿ ಅಥವಾ ಅದನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ಬಟ್ಟೆ ಅಥವಾ ದಿಂಬನ್ನು ಬಳಸಲಾಗಿದೆ. ಮಗುವನ್ನು ಕೈಯಿಂದ ಕತ್ತು ಹಿಸುಕಿದಂತೆ ಕಾಣುತ್ತಿಲ್ಲ. ಇದು ದಿಂಬು ಅಥವಾ ಇತರ ವಸ್ತುವಿನಂತೆ ಕಾಣುತ್ತದೆ ಎಂದು ಹಿರಿಯೂರು ತಾಲೂಕು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಕುಮಾರ್ ನಾಯ್ಕ್ ಸುದ್ದಿಗಾರರಿಗೆ ತಿಳಿಸಿದ್ದರು.

ಸುಚನಾ ಸೇಠ್ ಜನವರಿ 6 ರಂದು ತನ್ನ ಮಗನೊಂದಿಗೆ ಉತ್ತರ ಗೋವಾದ ಸಿಂಕ್ವೆರಿಮ್‌ನಲ್ಲಿರುವ ಹೋಟೆಲ್‌ಗೆ ತೆರಳಿದ್ದರು (ಚೆಕ್‌ ಇನ್ ಮಾಡಿದ್ದರು). ಆದರೆ ಆಕೆ ವಾಪಸ್‌ ಬರುವಾಗ (ಚೆಕ್‌ ಔಟ್ ಮಾಡುವಾಗ) ಒಬ್ಬರೇ ಬಂದಿದ್ದರು. ಇದರಿಂದ ಹೋಟೆಲ್‌ ಸಿಬ್ಬಂದಿಗೆ ಅನುಮಾನ ಕಾಡಿತ್ತು.

ಸುಚನಾ ಹೋಟೆಲ್ ತೊರೆದ ಬಳಿಕ, ಅಲ್ಲಿನ ನೌಕರರು ಕೊಠಡಿ ಸ್ವಚ್ಚಗೊಳಿಸಲು ತೆರಳಿದ್ದರು. ಈ ವೇಳೆ ಕೊಠಡಿಯಲ್ಲಿ ರಕ್ತದ ಕಲೆಗಳನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು.

ಬಳಿಕ ಪೊಲೀಸರು ಸುಚನಾರನ್ನು ಕರೆದುಕೊಂಡು ಬಂದಿದ್ದ ಕಾರು ಚಾಲಕನನ್ನು ಸಂಪರ್ಕಿಸಿ ಮಹಿಳೆಯಲ್ಲಿ ಮಗುವಿನ ಕುರಿತು ವಿಚಾರಿಸಿದ್ದರು. ಚಾಲಕ ವಿಚಾರಿಸಿದಾಗ, ಮಗ ಗೆಳತಿಯೊಂದಿಗೆ ತೆರಳಿದ್ದಾಗಿ ಆಕೆ ಸುಳ್ಳು ಹೇಳಿದ್ದರು. ಪೊಲೀಸರು ಮತ್ತೆ ಕಾರು ಚಾಲಕನಿಗೆ ಕರೆ ಮಾಡಿ ಸುಚನಾ ಅವರಿಗೆ ಕೊಂಕಣಿ ತಿಳಿದಿಲ್ಲದೆ ಇರುವುದರಿಂದ ಕೊಂಕಣಿಯಲ್ಲಿ ಮಾತನಾಡಿ ಕಾರನ್ನು ಹತ್ತಿರದ ಚಿತ್ರದುರ್ಗದ ಐಮಂಗಲ ಠಾಣೆಗೆ ತೆಗೆದುಕೊಂಡು ಹೋಗುವಂತೆ ಸೂಚಿಸಿದ್ದರು. ಕಾರು ಚಾಲಕ ಹಾಗೆಯೆ ಮಾಡಿದ್ದ. ನಂತರ ಪೊಲೀಸರು ಆಕೆಯನ್ನು ಬಂಧಿಸಿದಾಗ ಆಕೆಯ ಜೊತೆಗಿನ ಬ್ಯಾಗಿನಲ್ಲಿ ಮಗನ ಮೃತದೇಹ ಪತ್ತೆಯಾಗಿತ್ತು.

ಇದನ್ನು ಓದಿ: ‘ಭಾರತ ಜೋಡೋ ನ್ಯಾಯ ಯಾತ್ರೆ’ಗೆ ಮಣಿಪುರ ಹಿಂಸಾಚಾರದ ಕರಿ ನೆರಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...