Homeಮುಖಪುಟಹೆಚ್ಚು ಮಕ್ಕಳಿಗೆ ಜನ್ಮ ನೀಡಿ, ಪ್ರಧಾನಿ ಅವರಿಗಾಗಿ ಮನೆಗಳನ್ನು ನಿರ್ಮಿಸುತ್ತಾರೆ: ರಾಜಸ್ಥಾನ ಸಚಿವರ ವಿವಾದಾತ್ಮಕ ಹೇಳಿಕೆ

ಹೆಚ್ಚು ಮಕ್ಕಳಿಗೆ ಜನ್ಮ ನೀಡಿ, ಪ್ರಧಾನಿ ಅವರಿಗಾಗಿ ಮನೆಗಳನ್ನು ನಿರ್ಮಿಸುತ್ತಾರೆ: ರಾಜಸ್ಥಾನ ಸಚಿವರ ವಿವಾದಾತ್ಮಕ ಹೇಳಿಕೆ

- Advertisement -
- Advertisement -

‘ನೀವು ಸಾಕಷ್ಟು ಮಕ್ಕಳಿಗೆ ಜನ್ಮ ನೀಡುತ್ತಿರಿ, ಪ್ರಧಾನ ಮಂತ್ರಿಯವರು ನಿಮ್ಮ ಮನೆಗಳನ್ನು ನಿರ್ಮಿಸುತ್ತಾರೆ’ ಎಂದು ರಾಜಸ್ಥಾನದ ಸಚಿವ ಬಾಬುಲಾಲ್ ಖರಾಡಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬುಡಕಟ್ಟು ಪ್ರದೇಶ ಅಭಿವೃದ್ಧಿ ಸಚಿವರಾದ ಖಾರಾಡಿ ಮಾತನಾಡಿ, ‘ಯಾರೂ ಹಸಿವಿನಿಂದ ಮಲಗಬಾರದು ಮತ್ತು ತಲೆಯ ಮೇಲೆ ಸೂರು ಇಲ್ಲದೆ ಮಲಗಬಾರದು ಎಂಬುದು ಪ್ರಧಾನಿಯವರ ಕನಸು. ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲರಿಗೂ ಮನೆಗಳನ್ನು ನಿರ್ಮಿಸಿಕೊಡುವುದರಿಂದ ಯಾವುದೇ ತೊಂದರೆಯಾಗಬಾರದು’ ಎಂದು ಹೇಳಿದ ಅವರು, ಜನರಿಗೆ ಹೆಚ್ಚು ಮಕ್ಕಳನ್ನು ಹೊಂದುವಂತೆ ಒತ್ತಾಯಿಸಿದ್ದಾರೆ.

‘ತಲೆಯ ಮೇಲೆ ಸೂರು ಇಲ್ಲದೆ, ಯಾರೂ ಹಸಿವಿನಿಂದ ಮಲಗಬಾರದು ಎಂಬುದು ಪ್ರಧಾನಿಯವರ ಕನಸು. ನೀವು ಸಾಕಷ್ಟು ಮಕ್ಕಳಿಗೆ ಜನ್ಮ ನೀಡುತ್ತೀರಿ. ಪ್ರಧಾನ ಮಂತ್ರಿಯವರು ನಿಮ್ಮ ಮನೆಗಳನ್ನು ನಿರ್ಮಿಸುತ್ತಾರೆ, ಆಗ ಸಮಸ್ಯೆ ಏನು’ ಎಂದು ಮಂಗಳವಾರ ಉದಯಪುರದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದಾರೆ.

ಖಾರಾಡಿ ಅವರಿಗೆ ಎಂಟು ಮಕ್ಕಳಿದ್ದು, ನಾಲ್ಕು ಗಂಡು ಮತ್ತು ನಾಲ್ಕು ಹೆಣ್ಣು ಮಕ್ಕಳಿದ್ದಾರೆ. ಇಬ್ಬರು ಪತ್ನಿಯರಿರುವ ಇಡೀ ಕುಟುಂಬವು ಉದಯಪುರದ ಕೋಟ್ಡಾ ತಹಸಿಲ್‌ನಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿರುವ ನೀಚಲಾ ತಾಲಾ ಗ್ರಾಮದಲ್ಲಿ ವಾಸಿಸುತ್ತಿದೆ.

ಸಚಿವರು ಹೇಳಿಕೆ ನೀಡುವಾಗ, ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರು ವೇದಿಕೆ ಮೇಲಿದ್ದರು ಉದಯಪುರದ ನೈ ಗ್ರಾಮದಲ್ಲಿ ‘ವಿಕಸಿತ್ ಭಾರತ್ ಸಂಕಲ್ಪ ಯಾತ್ರಾ ಶಿಬಿರ’ದಲ್ಲಿ ಈ ಹೇಳಿಕೆ ನೀಡಿದ್ದಾರೆ.
ಖಾರಾಡಿ ಹೇಳಿಕೆ ನೀಡುತ್ತಿದ್ದಂತೆಯೇ ಸಭಿಕರು ನಗೆಗಡಲಲ್ಲಿ ತೇಲಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜನಪ್ರತಿನಿಧಿಗಳು ಪರಸ್ಪರ ಮುಖ ನೋಡಿಕೊಂಡಿದ್ದು ಕಂಡುಬಂತು.

ಬಿಜೆಪಿ ನೇತೃತ್ವದ ಕೇಂದ್ರವು ವಿವಿಧ ಸಾರ್ವಜನಿಕ ಕಲ್ಯಾಣ ಕ್ರಮಗಳನ್ನು ಪ್ರಾರಂಭಿಸುತ್ತಿದೆ ಎಂದು ಹೇಳಿದ ಖಾರಾಡಿ ಅವರು, 2024ರ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಪ್ರಧಾನಿ ಮೋದಿಗೆ ಮತ ನೀಡುವಂತೆ ಜನರನ್ನು ಒತ್ತಾಯಿಸಿದರು. ಕೇಂದ್ರವು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ₹200 ಕಡಿತಗೊಳಿಸಿದೆ. ರಾಜಸ್ಥಾನದ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರವು ಈಗ ಉಜ್ವಲ ಯೋಜನೆಯಡಿ ಜನರಿಗೆ ₹450 ಕ್ಕೆ ಸಿಲಿಂಡರ್‌ಗಳನ್ನು ಲಭ್ಯವಾಗುವಂತೆ ಮಾಡುತ್ತಿದೆ’ ಎಂದು ಅವರು ಹೇಳಿದರು.

‘2023ರ ವಿಧಾನಸಭಾ ಚುನಾವಣೆಯಲ್ಲಿ ಝಾಡೋಲ್‌ನಿಂದ ಖಾರಾಡಿ ನಾಲ್ಕನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು. 15ನೇ ರಾಜಸ್ಥಾನ ಅಸೆಂಬ್ಲಿಯಲ್ಲಿ 2022ರಲ್ಲಿ ಅತ್ಯುತ್ತಮ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಖಾರಾಡಿ ಅವರು ಇತ್ತೀಚೆಗೆ ರಾಜ್ಯದಲ್ಲಿ ಕ್ಯಾಬಿನೆಟ್ ಸಚಿವರಾಗಿ ಸೇರ್ಪಡೆಗೊಂಡಿದ್ದಾರೆ.

ಇದನ್ನೂ ಓದಿ; ಬಿಜೆಪಿ ಮುಖಂಡನ ಸೆಕ್ಸ್ ಟೇಪ್ ಸುದ್ದಿ ಪ್ರಸಾರ: ‘ಲೋಕಶಾಹಿ’ ಮರಾಠಿ ಚಾನೆಲ್‌ ಲೈಸೆನ್ಸ್ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....