Homeಮುಖಪುಟಜೀವಾವಧಿ ಶಿಕ್ಷೆ ಪ್ರಶ್ನಿಸಿ ಸಂಜೀವ್ ಭಟ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಗುಜರಾತ್‌ ಹೈಕೋರ್ಟ್‌

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಸಂಜೀವ್ ಭಟ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಗುಜರಾತ್‌ ಹೈಕೋರ್ಟ್‌

- Advertisement -
- Advertisement -

1990ರ ಕಸ್ಟಡಿ ಚಿತ್ರಹಿಂಸೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮ್‌ನಗರ ನ್ಯಾಯಾಲಯವು ದೋಷಿ ಎಂದು ಪರಿಗಣಿಸಿರುವುದನ್ನು ಮತ್ತು ಜೀವಾವಧಿ ಶಿಕ್ಷೆ ವಿಧಿಸಿರುವುದನ್ನು ಪ್ರಶ್ನಿಸಿ ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್ ಭಟ್ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿ ಎ.ಜೆ. ಶಾಸ್ತ್ರಿ ಹಾಗೂ ಸಂದೀಪ್ ಭಟ್ ಅವರನ್ನು ಒಳಗೊಂಡ ವಿಭಾಗೀಯ ಪೀಠ, ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್ ಭಟ್ ಅವರು ಸಲ್ಲಿಸಿದ ಮೇಲ್ಮನವಿ ಅರ್ಜಿ ಬಗ್ಗೆ ವಿಚಾರಣೆ ನಡೆಸಿದ್ದು, ಐಪಿಸಿ ಸೆಕ್ಷನ್ 302ರಡಿಯಲ್ಲಿ ಆರೋಪಿಗಳನ್ನು ದೋಷಿ ಎಂದು ಪರಿಗಣಿಸುವಾಗ ವಿಚಾರಣಾ ನ್ಯಾಯಾಲಯ ದಾಖಲಿಸಿದ ಕಾರಣಗಳನ್ನು ನಾವು ಪರಿಶೀಲನೆ ನಡೆಸಿದ್ದೇವೆ. ವಿಚಾರಣಾ ನ್ಯಾಯಾಲಯದಲ್ಲಿ ಸಲ್ಲಿಸಿದ ಎಲ್ಲಾ ಸಾಕ್ಷ್ಯಗಳನ್ನು ಪರಿಶೀಲಿಸಿದಾಗ ಜಾಮ್‌ನಗರ ನ್ಯಾಯಾಲಯವು ಸರಿಯಾದ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಗಮನಿಸಿದ್ದೇವೆ. ತೀರ್ಪಿನಲ್ಲಿ ಮಧ್ಯಪ್ರವೇಶಕ್ಕೆ ನಾವು ಯಾವುದೇ ಕಾರಣ ಕಂಡುಕೊಂಡಿಲ್ಲ ಎಂದು ಹೇಳಿದೆ.

ಪ್ರಕರಣದ ವಿವರ:

1990 ಅಕ್ಟೋಬರ್ 30ರಂದು ಬಿಜೆಪಿ ಹಾಗೂ ವಿಹೆಚ್‌ಪಿ ಭಾರತ್ ಬಂದ್‌ಗೆ ಕರೆ ನೀಡಿದ ಬಳಿಕ ಜಾಮ್ನಗರ್ ಜಿಲ್ಲೆಯಲ್ಲಿ ನಡೆದ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿ ಸಂಜಯ್ ಭಟ್ ಅವರು ನೂರಕ್ಕಿಂತ ಅಧಿಕ ಜನರನ್ನು ವಶಕ್ಕೆ ತೆಗೆದುಕೊಂಡಿದ್ದರು. ಬಂಧಿತರಲ್ಲಿ ಓರ್ವ ಪ್ರಭುದಾಸ್ ವೈಷ್ಣಾನಿ ಬಿಡುಗಡೆಯ ಬಳಿಕ ಮೂತ್ರ ಪಿಂಡದ ವೈಫಲ್ಯದಿಂದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ವೈಷ್ಣಾನಿ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಮೃತಪಟ್ಟಿರುವುದಾಗಿ ಆರೋಪಿಸಲಾಗಿತ್ತು. ಆ ಸಮಯದಲ್ಲಿ ಸಂಜಯ್‌ ಭಟ್ ಅವರು ಜಾಮ್‌ನಗರದ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದರು. ಒಂಬತ್ತು ದಿನಗಳ ಕಾಲ ಬಂಧನದಲ್ಲಿದ್ದ ವೈಷ್ಣಾನಿ, ಜಾಮೀನಿನ ಮೇಲೆ ಬಿಡುಗಡೆಯಾದ 10 ದಿನಗಳ ನಂತರ ಮೃತಪಟ್ಟಿದ್ದ. ಪ್ರಭುದಾಸ್ ವೈಷ್ಣಾನಿ ಸಾವಿಗೆ ಮೂತ್ರಪಿಂಡ ವೈಫಲ್ಯ ಕಾರಣ ಎಂದು ವೈದ್ಯಕೀಯ ದಾಖಲೆ ತಿಳಿಸಿತ್ತು. ಆತನಿಗೆ ಕುಡಿಯಲು ನೀರು ಕೂಡ ನೀಡದೆ ಪೊಲೀಸರು ತಡೆದಿದ್ದರು ಎಂದು ವೈಷ್ಣಾನಿ ಕುಟುಂಬ ಆರೋಪಿಸಿತ್ತು.

ಕಸ್ಟಡಿ ಚಿತ್ರಹಿಂಸೆ ಆರೋಪದ ಮೇಲೆ ಭಟ್ ಮತ್ತು ಇತರ ಕೆಲವು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಜೂನ್ 2019ರಲ್ಲಿ ಜಾಮ್‌ನಗರ ಜಿಲ್ಲೆಯ ಸೆಷನ್ಸ್ ನ್ಯಾಯಾಲಯವು ಪ್ರಕರಣದಲ್ಲಿ ಭಟ್ ಮತ್ತು ಪೊಲೀಸ್ ಕಾನ್‌ಸ್ಟೆಬಲ್ ಪ್ರವೀಣ್‌ಸಿಂಹ ಝಲಾ ಅವರಿಗೆ ಸೆಕ್ಷನ್ 302, 323 ಮತ್ತು 506 (11) ಅಡಿಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ. ಇದಲ್ಲದೆ ಪೊಲೀಸ್ ಪೇದೆಗಳಾದ ಪ್ರವಿನ್‌ಸಿನ್ಹ್ ಜಡೇಜಾ, ಅನೋಪ್‌ಸಿನ್ಹ್ ಜೇತ್ವಾ ಮತ್ತು ಕೇಸುಭ ಡೊಲುಭಾ ಜಡೇಜಾ ಮತ್ತು ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳಾದ ಶೈಲೇಶ್ ಪಾಂಡ್ಯ ಮತ್ತು ದೀಪಕ್‌ ಕುಮಾರ್ ಭಗವಾನದಾಸ್ ಶಾ ಕೂಡ ಕಸ್ಟಡಿ ಚಿತ್ರಹಿಂಸೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸೆಕ್ಷನ್ 323 ಮತ್ತು 506ರಡಿಯಲ್ಲಿ ಅವರಿಗೆ  ಶಿಕ್ಷೆ ವಿಧಿಸಿದೆ. ತಮ್ಮ ಶಿಕ್ಷೆಯನ್ನು ಪ್ರಶ್ನಿಸಿ, ಪ್ರವೀಣ್‌ಸಿಂಹ ಝಲಾ, ಸಂಜಯ್‌ ಭಟ್, ಭಗವಾನದಾಸ್ ‍ಶಾ ಮತ್ತು ಪಾಂಡ್ಯ ಅವರು 2019ರಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು.

ಇದನ್ನು ಓದಿ: ‘ಶಾಸ್ತ್ರ’ಗಳಿಗೆ ವಿರುದ್ಧವಾಗಿ ‘ರಾಮಮಂದಿರ’ದ ಪ್ರಾಣ ಪ್ರತಿಷ್ಠಾನ: ಹಿಂದೂ ಮಠಾಧೀಶರ ಆರೋಪ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...