Homeಮುಖಪುಟಜೀವಾವಧಿ ಶಿಕ್ಷೆ ಪ್ರಶ್ನಿಸಿ ಸಂಜೀವ್ ಭಟ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಗುಜರಾತ್‌ ಹೈಕೋರ್ಟ್‌

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಸಂಜೀವ್ ಭಟ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಗುಜರಾತ್‌ ಹೈಕೋರ್ಟ್‌

- Advertisement -
- Advertisement -

1990ರ ಕಸ್ಟಡಿ ಚಿತ್ರಹಿಂಸೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮ್‌ನಗರ ನ್ಯಾಯಾಲಯವು ದೋಷಿ ಎಂದು ಪರಿಗಣಿಸಿರುವುದನ್ನು ಮತ್ತು ಜೀವಾವಧಿ ಶಿಕ್ಷೆ ವಿಧಿಸಿರುವುದನ್ನು ಪ್ರಶ್ನಿಸಿ ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್ ಭಟ್ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿ ಎ.ಜೆ. ಶಾಸ್ತ್ರಿ ಹಾಗೂ ಸಂದೀಪ್ ಭಟ್ ಅವರನ್ನು ಒಳಗೊಂಡ ವಿಭಾಗೀಯ ಪೀಠ, ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್ ಭಟ್ ಅವರು ಸಲ್ಲಿಸಿದ ಮೇಲ್ಮನವಿ ಅರ್ಜಿ ಬಗ್ಗೆ ವಿಚಾರಣೆ ನಡೆಸಿದ್ದು, ಐಪಿಸಿ ಸೆಕ್ಷನ್ 302ರಡಿಯಲ್ಲಿ ಆರೋಪಿಗಳನ್ನು ದೋಷಿ ಎಂದು ಪರಿಗಣಿಸುವಾಗ ವಿಚಾರಣಾ ನ್ಯಾಯಾಲಯ ದಾಖಲಿಸಿದ ಕಾರಣಗಳನ್ನು ನಾವು ಪರಿಶೀಲನೆ ನಡೆಸಿದ್ದೇವೆ. ವಿಚಾರಣಾ ನ್ಯಾಯಾಲಯದಲ್ಲಿ ಸಲ್ಲಿಸಿದ ಎಲ್ಲಾ ಸಾಕ್ಷ್ಯಗಳನ್ನು ಪರಿಶೀಲಿಸಿದಾಗ ಜಾಮ್‌ನಗರ ನ್ಯಾಯಾಲಯವು ಸರಿಯಾದ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಗಮನಿಸಿದ್ದೇವೆ. ತೀರ್ಪಿನಲ್ಲಿ ಮಧ್ಯಪ್ರವೇಶಕ್ಕೆ ನಾವು ಯಾವುದೇ ಕಾರಣ ಕಂಡುಕೊಂಡಿಲ್ಲ ಎಂದು ಹೇಳಿದೆ.

ಪ್ರಕರಣದ ವಿವರ:

1990 ಅಕ್ಟೋಬರ್ 30ರಂದು ಬಿಜೆಪಿ ಹಾಗೂ ವಿಹೆಚ್‌ಪಿ ಭಾರತ್ ಬಂದ್‌ಗೆ ಕರೆ ನೀಡಿದ ಬಳಿಕ ಜಾಮ್ನಗರ್ ಜಿಲ್ಲೆಯಲ್ಲಿ ನಡೆದ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿ ಸಂಜಯ್ ಭಟ್ ಅವರು ನೂರಕ್ಕಿಂತ ಅಧಿಕ ಜನರನ್ನು ವಶಕ್ಕೆ ತೆಗೆದುಕೊಂಡಿದ್ದರು. ಬಂಧಿತರಲ್ಲಿ ಓರ್ವ ಪ್ರಭುದಾಸ್ ವೈಷ್ಣಾನಿ ಬಿಡುಗಡೆಯ ಬಳಿಕ ಮೂತ್ರ ಪಿಂಡದ ವೈಫಲ್ಯದಿಂದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ವೈಷ್ಣಾನಿ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಮೃತಪಟ್ಟಿರುವುದಾಗಿ ಆರೋಪಿಸಲಾಗಿತ್ತು. ಆ ಸಮಯದಲ್ಲಿ ಸಂಜಯ್‌ ಭಟ್ ಅವರು ಜಾಮ್‌ನಗರದ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದರು. ಒಂಬತ್ತು ದಿನಗಳ ಕಾಲ ಬಂಧನದಲ್ಲಿದ್ದ ವೈಷ್ಣಾನಿ, ಜಾಮೀನಿನ ಮೇಲೆ ಬಿಡುಗಡೆಯಾದ 10 ದಿನಗಳ ನಂತರ ಮೃತಪಟ್ಟಿದ್ದ. ಪ್ರಭುದಾಸ್ ವೈಷ್ಣಾನಿ ಸಾವಿಗೆ ಮೂತ್ರಪಿಂಡ ವೈಫಲ್ಯ ಕಾರಣ ಎಂದು ವೈದ್ಯಕೀಯ ದಾಖಲೆ ತಿಳಿಸಿತ್ತು. ಆತನಿಗೆ ಕುಡಿಯಲು ನೀರು ಕೂಡ ನೀಡದೆ ಪೊಲೀಸರು ತಡೆದಿದ್ದರು ಎಂದು ವೈಷ್ಣಾನಿ ಕುಟುಂಬ ಆರೋಪಿಸಿತ್ತು.

ಕಸ್ಟಡಿ ಚಿತ್ರಹಿಂಸೆ ಆರೋಪದ ಮೇಲೆ ಭಟ್ ಮತ್ತು ಇತರ ಕೆಲವು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಜೂನ್ 2019ರಲ್ಲಿ ಜಾಮ್‌ನಗರ ಜಿಲ್ಲೆಯ ಸೆಷನ್ಸ್ ನ್ಯಾಯಾಲಯವು ಪ್ರಕರಣದಲ್ಲಿ ಭಟ್ ಮತ್ತು ಪೊಲೀಸ್ ಕಾನ್‌ಸ್ಟೆಬಲ್ ಪ್ರವೀಣ್‌ಸಿಂಹ ಝಲಾ ಅವರಿಗೆ ಸೆಕ್ಷನ್ 302, 323 ಮತ್ತು 506 (11) ಅಡಿಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ. ಇದಲ್ಲದೆ ಪೊಲೀಸ್ ಪೇದೆಗಳಾದ ಪ್ರವಿನ್‌ಸಿನ್ಹ್ ಜಡೇಜಾ, ಅನೋಪ್‌ಸಿನ್ಹ್ ಜೇತ್ವಾ ಮತ್ತು ಕೇಸುಭ ಡೊಲುಭಾ ಜಡೇಜಾ ಮತ್ತು ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳಾದ ಶೈಲೇಶ್ ಪಾಂಡ್ಯ ಮತ್ತು ದೀಪಕ್‌ ಕುಮಾರ್ ಭಗವಾನದಾಸ್ ಶಾ ಕೂಡ ಕಸ್ಟಡಿ ಚಿತ್ರಹಿಂಸೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸೆಕ್ಷನ್ 323 ಮತ್ತು 506ರಡಿಯಲ್ಲಿ ಅವರಿಗೆ  ಶಿಕ್ಷೆ ವಿಧಿಸಿದೆ. ತಮ್ಮ ಶಿಕ್ಷೆಯನ್ನು ಪ್ರಶ್ನಿಸಿ, ಪ್ರವೀಣ್‌ಸಿಂಹ ಝಲಾ, ಸಂಜಯ್‌ ಭಟ್, ಭಗವಾನದಾಸ್ ‍ಶಾ ಮತ್ತು ಪಾಂಡ್ಯ ಅವರು 2019ರಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು.

ಇದನ್ನು ಓದಿ: ‘ಶಾಸ್ತ್ರ’ಗಳಿಗೆ ವಿರುದ್ಧವಾಗಿ ‘ರಾಮಮಂದಿರ’ದ ಪ್ರಾಣ ಪ್ರತಿಷ್ಠಾನ: ಹಿಂದೂ ಮಠಾಧೀಶರ ಆರೋಪ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...