Homeಮುಖಪುಟ'ಭಾರತ್ ಜೋಡೋ ನ್ಯಾಯ್‌ ಯಾತ್ರೆ'ಗೆ ಶರತ್ತುಬದ್ಧ ಅನುಮತಿ ನೀಡಿದ ಮಣಿಪುರ ಸರ್ಕಾರ

‘ಭಾರತ್ ಜೋಡೋ ನ್ಯಾಯ್‌ ಯಾತ್ರೆ’ಗೆ ಶರತ್ತುಬದ್ಧ ಅನುಮತಿ ನೀಡಿದ ಮಣಿಪುರ ಸರ್ಕಾರ

- Advertisement -
- Advertisement -

ಎಂಟು ದಿನಗಳ ಅನಿಶ್ಚಿತತೆ ಮತ್ತು ಗೊಂದಲದ ಬಳಿಕ, ಕೊನೆಗೂ ರಾಹುಲ್ ಗಾಂಧಿ ಮುನ್ನಡೆಸುವ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಇಂಫಾಲ್‌ನಿಂದ ಪ್ರಾರಂಭಿಸಲು ಬಿಜೆಪಿ ನೇತೃತ್ವದ ಮಣಿಪುರ ಸರ್ಕಾರ ಅನುಮತಿ ನೀಡಿದೆ.

ಇಂಫಾಲ್ ಪೂರ್ವ ಜಿಲ್ಲೆಯ ಸಾರ್ವಜನಿಕ ಮೈದಾನದಲ್ಲಿ ಸೀಮಿತ ಸಂಖ್ಯೆಯ ಜನರೊಂದಿಗೆ ಧ್ವಜಾರೋಹಣದ ಮೂಲಕ ಯಾತ್ರೆಗೆ ಚಾಲನೆ ನೀಡಲು ಸರ್ಕಾರ ಅನುಮತಿ ನೀಡಿದೆ. ಜನವರಿ 14ರಂದು ರಾಹುಲ್‌ ಗಾಂಧಿಯ ಯಾತ್ರೆ ಪ್ರಾರಂಭಗೊಳ್ಳಲಿದೆ.

“ನಾವು ಯಾತ್ರೆ ಉದ್ಘಾಟನೆಗೆ ಅನುಮತಿ ಕೋರಲು ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರ ನಿವಾಸಕ್ಕೆ ತೆರಳಿದ್ದೆವು. ಆದರೆ, ಅವರು ಅನುಮತಿ ನೀಡಲು ನಿರಾಕರಿಸಿದ್ದಾರೆ” ಎಂದು ಬುಧವಾರ ಕಾಂಗ್ರೆಸ್ ನಾಯಕರು ಮಾಧ್ಯಮಗಳಿಗೆ ತಿಳಿಸಿದ್ದರು. ಈ ಬೆನ್ನಲ್ಲೇ ಇಂಫಾಲ್‌ ಜಿಲ್ಲಾಡಳಿತ ಶರತ್ತುಬದ್ಧ ಅನುಮತಿ ನೀಡಿದೆ.

ಅನುಮತಿ ದೊರೆಯುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಮಣಿಪುರ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೇಶಾಮ್ ಮೇಗಾಚಂದ್ರ, “ಇಂಫಾಲ್ ಪೂರ್ವ ಜಿಲ್ಲೆಯ ಹಟ್ಟಾ ಕಾಂಗ್ಜೆಬುಂಗ್‌ನ ಸಾರ್ವಜನಿಕ ಮೈದಾನದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ಉದ್ಘಾಟನೆಗೆ ಅನುಮತಿ ಕೋರಿ ನಾವು ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದೆವು. ಅವರು ಅನುಮತಿ ನೀಡಲು ನಿರಾಕರಿಸಿದ್ದಾರೆ” ಎಂದಿದ್ದರು.

ಅಸ್ಸಾಂನ ಬಿಜೆಪಿ ಸರ್ಕಾರವೂ ರಾಜ್ಯದಲ್ಲಿ ಕಾಂಗ್ರೆಸ್ ಯಾತ್ರೆಯನ್ನು ತಡೆಯಲು ಪ್ರಯತ್ನಿಸುತ್ತಿದೆ ಎಂದು ಅಸ್ಸಾಂ ಕಾಂಗ್ರೆಸ್ ಘಟಕದ ಅಧ್ಯಕ್ಷ ಭೂಪೇನ್ ಬೋರಾ ಹೇಳಿದ್ದಾರೆ. “ಜೋರ್ಹತ್‌ನ ಕಾಲೇಜು ಮೈದಾನದಲ್ಲಿ ತರಗತಿ ನಡೆಯದ ಸಮಯ ರಾತ್ರಿ ಹೊತ್ತು ನಮ್ಮ ಕಂಟೇನರ್‌ಗಳನ್ನು ನಿಲ್ಲಿಸಲು ಅನುಮತಿ ಸಿಕ್ಕಿಲ್ಲ. ಬ್ರಹ್ಮಪುತ್ರ ನದಿಯ ಮೂಲಕ ಮಜುಲಿ ದ್ವೀಪಕ್ಕೆ ಪ್ರಯಾಣಿಸಲು ನಮಗೆ ಬೋಟ್ ಸೇವೆಯನ್ನೂ ನಿರಾಕರಿಸಿಲಾಗಿದೆ” ಎಂದು ಅವರು ತಿಳಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ರಾಹುಲ್ ಗಾಂಧಿ ಮುಂದಿನ ಭಾನುವಾರ ಬೆಳಿಗ್ಗೆ ಇಂಫಾಲ್‌ಗೆ ತೆರಳಲಿದ್ದಾರೆ. ಸರ್ಕಾರ ಇಂಫಾಲ್‌ ಮೈದಾನದಲ್ಲಿ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ ಹಿನ್ನೆಲೆ ಕಾಂಗ್ರೆಸ್ ನಾಯಕರು ಪರ್ಯಾಯ ಸ್ಥಳ ಹುಡುಕುತ್ತಿದ್ದರು. ಈಗ ಸರ್ಕಾರ ಅನುಮತಿ ನೀಡಿದೆ. ಹಾಗಾಗಿ, ಅಲ್ಲಿಯೇ ಕಾರ್ಯಕ್ರಮ ನಡೆಯುತ್ತದಾ, ಇಲ್ಲ ಬೇರೆ ಸ್ಥಳವನ್ನು ಹುಡುಕುತ್ತಾರಾ ಎಂಬುವುದು ಖಚಿತವಾಗಿಲ್ಲ.

ಭಾರತ್ ಜೋಡೋ ನ್ಯಾಯ್ ಯಾತ್ರೆಯು, 66 ದಿನಗಳಲ್ಲಿ 110 ಜಿಲ್ಲೆಗಳು, 100 ಲೋಕಸಭಾ ಕ್ಷೇತ್ರಗಳು ಮತ್ತು 337 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸುವ ಮೂಲಕ 6,713 ಕಿಮೀ ದೂರವನ್ನು ಬಸ್‌ ಮತ್ತು ಕಾಲ್ನಡಿಗೆಯ ಮೂಲಕ ಕ್ರಮಿಸಲಿದೆ. ರಾಹುಲ್ ಗಾಂಧಿ ಜನವರಿ 14 ರಂದು ಇಂಫಾಲ್‌ನಿಂದ ಯಾತ್ರೆ ಪ್ರಾರಂಭಿಸಲಿದ್ದಾರೆ. ಇದು ಮಾರ್ಚ್ 20 ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ.

ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಸೋನಿಯಾ, ಖರ್ಗೆ ಭಾಗವಹಿಸುವುದಿಲ್ಲ: ಕಾಂಗ್ರೆಸ್‌ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...