Homeಮುಖಪುಟಆರೋಗ್ಯ ಕೇಂದ್ರಗಳ ಹೆಸರು ಬದಲಿಸಲು ನಿರಾಕರಿಸಿದ ಕೇರಳ ಸರ್ಕಾರ: ಅನುದಾನ ತಡೆ ಹಿಡಿದ ಕೇಂದ್ರ

ಆರೋಗ್ಯ ಕೇಂದ್ರಗಳ ಹೆಸರು ಬದಲಿಸಲು ನಿರಾಕರಿಸಿದ ಕೇರಳ ಸರ್ಕಾರ: ಅನುದಾನ ತಡೆ ಹಿಡಿದ ಕೇಂದ್ರ

- Advertisement -
- Advertisement -

ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಹೆಚ್‌ಎಂ) ಕೇಂದ್ರಗಳಿಗೆ ‘ಆಯುಷ್ಮಾನ್ ಆರೋಗ್ಯ ಮಂದಿರಗಳು’ ಎಂದು ಮರುನಾಮಕರಣ ಮಾಡಬೇಕೆಂಬ ಕೇಂದ್ರದ ಆದೇಶವನ್ನು ಅನುಸರಿಸಲು ಸಾಧ್ಯವಿಲ್ಲ ಎಂದು ಕೇರಳ ಸರ್ಕಾರ ಮಂಗಳವಾರ ಹೇಳಿದೆ.

ಆಯುಷ್ಮಾನ್ ಆರೋಗ್ಯ ಮಂದಿರಗಳು ಎಂಬ ಹೆಸರು ರಾಜ್ಯದ ಗ್ರಾಮೀಣ ಜನರ ಭಾಷೆ ಮತ್ತು ಸಂಸ್ಕೃತಿಗೆ ಹೊಂದಿಕೆಯಾಗುವುದಿಲ್ಲ. ಇದು ಅವರಿಗೆ ವಿದೇಶಿ ಹೆಸರಿನಂತೆ ತೋರುತ್ತದೆ. ಕೇಂದ್ರದ ಹಿಂದಿ ಹೇರಿಕೆಯನ್ನು ನಾವು ಒಪ್ಪುವುದಿಲ್ಲ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ಬುಧವಾರ ತಿರುವನಂತಪುರಂನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಆರೋಗ್ಯ ಕೇಂದ್ರಗಳಿಗೆ ಮರುನಾಮಕರಣ ಮಾಡದ ಹೊರತು ಅನುದಾನ ನೀಡಲು ಕೇಂದ್ರ ನಿರಾಕರಿಸಿದೆ. ಕೇಂದ್ರ ಮೊದಲು ಕೋ-ಬ್ರಾಂಡಿಂಗ್‌ಗೆ ಒತ್ತಡ ಹೇರಿತ್ತು. ಅದರಂತೆ ನಾವು ಆರೋಗ್ಯ ಕೇಂದ್ರಗಳ ನಾಮಫಲಕಗಳಲ್ಲಿ ಕೇಂದ್ರ ಸರ್ಕಾರ ನೀಡಿದ ಆರು ಚಿಹ್ನೆಗಳನ್ನು ಸೇರಿಸಿದೆವು. ಕೇಂದ್ರ ನಿರ್ದೇಶನ ನೀಡುವುದಕ್ಕಿಂತ ಒಂದೆರಡು ವರ್ಷಗಳ ಮೊದಲು ನಿರ್ಮಿಸಿದ್ದ ಆರೋಗ್ಯ ಕೇಂದ್ರಗಳ ನಾಮಫಲಕಗಳಲ್ಲಿ ನಾವು ಈ ಬದಲಾವಣೆ ಮಾಡಿದ್ದೆವು. ಆದರೆ, ಈಗ ಅವರು ಸಂಪೂರ್ಣ ಮರುನಾಮಕರಣಕ್ಕೆ ಒತ್ತಾಯಿಸುತ್ತಿದ್ದಾರೆ. ಮರುನಾಮಕರಣದ ಬಳಿಕವಷ್ಟೇ ಅನುದಾನ ನೀಡುವುದಾಗಿ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಅನುದಾನ ನೀಡಿದ ಕಾರಣ ಆರೋಗ್ಯ ಕೇಂದ್ರಗಳ ನಿರ್ವಹಣೆ ಕಷ್ಟವಾಗುತ್ತಿದೆ. ಪ್ರಸ್ತುತ, ರಾಜ್ಯ ಸರ್ಕಾರ ಮೀಸಲಿಟ್ಟ ಹಣದಲ್ಲಿ ಆರೋಗ್ಯ ಕೇಂದ್ರಗಳನ್ನು ನಿರ್ವಹಣೆ ಮಾಡಲಾಗ್ತಿದೆ. ಆಶಾ ಕಾರ್ಯಕರ್ತೆಯಿರಿಗೆ ವೇತನ ನೀಡಲು ಸಮಸ್ಯೆಯಾಗಿದೆ. ರೋಗಿಗಳಿಗೆ ಪೆರಿಟೋನಿಯಲ್ ಡಯಾಲಿಸಿಸ್‌ಗೆ ಕೊಡು ಹಣವನ್ನು ಕೇಂದ್ರದಿಂದ ನೀಡಲಾಗಿಲ್ಲ. ಇದಕ್ಕಾಗಿ ಕೇಂದ್ರದಿಂದ ರಾಜ್ಯಕ್ಕೆ ಸುಮಾರು 7 ಕೋಟಿ ರೂ. ಬರಲು ಬಾಕಿಯಿದೆ ಎಂದು ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ಅನುದಾನ ಬಾರದ ಹಿನ್ನೆಲೆ ಬಡ ರೋಗಿಗಳಿಗೆ ಸಮಸ್ಯೆಯಾಗ್ತಿದೆ. ಡಯಾಲಿಸಿಸ್ ವ್ಯವಸ್ಥೆಗಾಗಿ ರಾಜ್ಯ ಸರ್ಕಾರ ವೆಚ್ಚ ಭರಿಸುತ್ತಿದೆ. ಹಣಕಾಸು ವರ್ಷ ನಾಲ್ಕನೇ ಮತ್ತು ಅಂತಿಮ ತ್ರೈಮಾಸಿಕಕ್ಕೆ ತಲುಪಿದರೂ, ಕೇಂದ್ರ ಸರ್ಕಾರದ ಹಂಚಿಕೆಯ ಭಾಗವಾಗಿ ರಾಜ್ಯಕ್ಕೆ ಬರಬೇಕಾದ 826.02 ಕೋಟಿ ರೂ.ಗಳಲ್ಲಿ ಒಂದು ಕಂತನ್ನೂ ಕೇಂದ್ರ ಬಿಡುಗಡೆ ಮಾಡಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಎನ್‌ಹೆಚ್‌ಎಂನ ಭಾಗವಾಗಿ ನೇಮಕಗೊಂಡಿರುವ ವೈದ್ಯರಿಗೆ ವೇತನ ಪಾವತಿಸಲು ರಾಜ್ಯ ಭಾರೀ ಸಮಸ್ಯೆ ಎದುರಿಸುತ್ತಿದೆ. ಈ ಕುರಿತು ಹಲವು ಬಾರಿ ಕೇಂದ್ರ ಆರೋಗ್ಯ ಸಚಿವರ ಗಮನಕ್ಕೆ ತಂದರೂ, ಇನ್ನೂ ಹಣ ಬಿಡುಗಡೆ ಮಾಡಿಲ್ಲ. ಇದು ನಮ್ಮ ಸಂವಿಧಾನದ ಫೆಡರಲ್ ಸ್ವರೂಪಕ್ಕೆ ವಿರುದ್ಧವಾಗಿ. ನಾವು ಅನುದಾನ ಬಿಡುಗಡೆಗೆ ಕೋರಿ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ಸಚಿವೆ ದೂರಿದ್ದಾರೆ.

ಇದನ್ನೂ ಓದಿ : ‘ಭಾರತ್ ಜೋಡೋ ನ್ಯಾಯ್‌ ಯಾತ್ರೆ’ಗೆ ಶರತ್ತುಬದ್ಧ ಅನುಮತಿ ನೀಡಿದ ಮಣಿಪುರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...