Homeಚಳವಳಿಜನರ ಉಸಿರಾಗಿರುವ ಹಸಿರು ’ನಲ್ಲಮಲ’ ಕಾಡಿನ ಮೇಲೆ ಕೇಂದ್ರ, ರಾಜ್ಯ ಸರ್ಕಾರದ ಕೆಂಗಣ್ಣು..

ಜನರ ಉಸಿರಾಗಿರುವ ಹಸಿರು ’ನಲ್ಲಮಲ’ ಕಾಡಿನ ಮೇಲೆ ಕೇಂದ್ರ, ರಾಜ್ಯ ಸರ್ಕಾರದ ಕೆಂಗಣ್ಣು..

- Advertisement -
- Advertisement -

‘ನಲ್ಲಮಲ’ ಒಂದು ಕಾಡಿನ ಹೆಸರು. ತೆಲಂಗಾಣ ಮತ್ತು ಆಂಧ್ರಪ್ರದೇಶಕ್ಕೆ ಉಸಿರಿನಂತಿರುವ ಹಸಿರ ಹೊದಿಕೆಯ ದಟ್ಟಾರಣ್ಯ ಇದು. ಇಲ್ಲಿ ವಿವಿಧ ಬುಡಕಟ್ಟು ಜನಾಂಗಗಳು ಈಗಲೂ ಸಹ ತಮ್ಮ ಜೀವನವನ್ನ ಸಾಗಿಸುತ್ತಾ ಬಂದಿದ್ದಾರೆ. ಚೆಂಚು ಎಂಬ ಬುಡಕಟ್ಟು ಜನಾಂಗ ಇಲ್ಲಿ ತಲೆ ತಲೆಮಾರುಗಳಿಂದ ಜೀವಿಸುತ್ತಾ ಬಂದಿದ್ದಾರೆ. ಸದಾ ಹಚ್ಚ ಹಸಿರಿನಿಂದ ಕೂಡಿರುವ ಈ ಕಾಡು ಎರಡು ರಾಜ್ಯಗಳ ಮಳೆ, ಬೆಳೆ ಮತ್ತು ವಾತಾವರಣ ಸಮತೋಲನಕ್ಕೆ ಪ್ರಮುಖ ಪಾತ್ರವಹಿಸುತ್ತದೆ.

ನಲ್ಲಮಲ ಕಾಡು ಜೀವಜಂತುಗಳ ವೈವಿಧ್ಯತೆಯಿಂದ ಕೂಡಿದ್ದು ಇಲ್ಲಿ 600ಕ್ಕೂ ವಿವಿಧ ಜಾತಿಯ ಮರಗಳು, 300 ರೀತಿಯ ಪಕ್ಷಿಗಳು, ವಿಶೇಷವಾಗಿ ವಿನಾಶದ ಅಂಚಿನಲ್ಲಿರುವ ಹುಲಿಗಳು, ಚಿರತೆ, ಆನೆ, ಕೃಷ್ಣಮೃಗ, ಮುಂತಾದ 70ಕ್ಕೂ ಅಧಿಕ ಜಾತಿಯ ಪ್ರಾಣಿಗಳು ಇಲ್ಲಿವೆ. ಇಂತಹ ಜೀವ ವೈವಿಧ್ಯತೆಯ ತಾಣಕ್ಕೆ ಈಗ ಗಂಡಾಂತರ ಬಂದೊದಗಿದೆ. ಅದೇನೆಂದರೆ ನಲ್ಲಮಲ ಕಾಡಿನಲ್ಲಿ ಯುರೇನಿಯಂ ಇದೆಯೆಂದು ಕೆಲವು ಸಂಶೋಧನೆಗಳಿಂದ ತಿಳಿದು ಬಂದಿದ್ದು, ಇಲ್ಲಿ ಕೇಂದ್ರ ಸರ್ಕಾರ ರಾಜ್ಯಸರ್ಕಾರದ ಸಹಕಾರದೊಂದಿಗೆ ಯುರೇನಿಯಂ ಗಣಿಗಾರಿಕೆಯನ್ನು ಪ್ರಾರಂಭಿಸಲು ಸಿದ್ಧತೆ ನಡೆಸಿದೆ.

ಜಗತ್ತನ್ನೆ ನಾಶ ಮಾಡಲು ಶಕ್ತಿಯುಳ್ಳ ಅಣು ಬಾಂಬ್ ತಯಾರಿಕೆಯಲ್ಲಿ ಬಳಸುವ ‘ಯುರೇನಿಯಂ’ ನಲ್ಲಮಲ ಕಾಡಿನಲ್ಲಿ ಸಿಗಲಿದೆ ಎಂದಿದ್ದೆ ತಡ ಹಿಂದೆ ಮುಂದೆ ನೋಡದೆ ಕೇಂದ್ರ ಮತ್ತು ತೆಲಂಗಾಣ ರಾಜ್ಯ ಸರ್ಕಾರ ಕಾಡನ್ನು ಬಗೆಯಲು ವಿವೇಚನ ರಹಿತವಾಗಿ ಹೊರಟಿವೆ. ಇದನ್ನು ಸ್ಥಳೀಯ ಜನಪರ ಹೋರಾಟಗಾರರು ಮತ್ತು ಪ್ರಜ್ಞಾವಂತರು ತೀವ್ರವಾಗಿ ಖಂಡಿಸುತ್ತಿದ್ದಾರೆ. ರಾಜ್ಯ ಸರ್ಕಾರ ಸ್ವಲ್ಫ ಹಿಂದೇಟು ಹಾಕುತ್ತಿದ್ದರು ಸಹ ಕೇಂದ್ರ ಸರ್ಕಾರ ಸ್ಥಳೀಯ ಗ್ರಾಮಪಂಚಾಯಿತಿಯ ಅನುಮತಿ ಪಡೆಯದೆ ‘ಯುರೇನಿಯಂ ಕಾರ್ಪೋರೇಷನ್’ (ಯು.ಸಿ.ಎಲ್) ಗೆ ಅನುಮತಿ ನೀಡಿ ಗಣಿಗಾರಿಕೆ ಶುರು ಮಾಡುವ ಆತುರದಲ್ಲಿದೆ. ಮೇಲ್ನೋಟಕ್ಕೆ ಇದನ್ನು ವಿರೋಧಿಸುವಂತೆ ಮಾತನಾಡುವ ತೆಲಂಗಾಣದ ಮುಖ್ಯಮಂತ್ರಿ ಕೆ.ಸಿ.ಆರ್ ಸರ್ಕಾರ, ಕೇಂದ್ರ ಸರ್ಕಾರ ಮಾಡುತ್ತಿರುವ ಕೆಲಸಕ್ಕೆ ಯಾವುದೇ ವಿರೋಧ ವ್ಯಕ್ತಪಡಿಸುತ್ತಿಲ್ಲ.

ಯುರೇನಿಯಂನ್ನು ಇತ್ತಿಚಿಗೆ ಅಣು ವಿದ್ಯುತ್ ಉತ್ಪಾದನೆಗೂ ಬಳಸುತ್ತಾರೆ. ಇದು ಬಹಳ ಅಪಾಯಕಾರಿಯಾದ ಖನಿಜವಾಗಿದೆ. ಇದನ್ನು ಸರಿಯಾಗಿ ನಿವರ್ಹಣೆ ಮಾಡದೆ ಹೋದರೆ ಈ ಗಣಿಗಾರಿಕೆ ನಡೆಯುವ ಸುತ್ತಲಿನ ಪ್ರದೇಶ ವಿಷಮಯವಾಗುವ ಎಲ್ಲಾ ಸಾಧ್ಯತೆ ಇದೆ. ಯುರೇನಿಯಂನ್ನು ಇಂಧನವಾಗಿ ಬಳಸುವ ಅಣು ವಿದ್ಯುತ್ ಕೇಂದ್ರಗಳು ಅವಘಡಗಳಾಗಿ ಸ್ಫೋಟಗಳ್ಳದೆ ಇರುವ ಸಮಯದಲ್ಲೂ ಸಹ ಅಣು ವಿದ್ಯುತ್ ಕೇಂದ್ರದ ಮೂಲಕ ಅಲ್ಫಾ, ಬೀಟಾ, ಗಾಮಾ ವಿಕಿರಣಗಳು ಹೋರಸೂಸುತ್ತಲೇ ಇರುತ್ತವೆ. ಕ್ಯಾನ್ಸರ್ ಮತ್ತು ತಲೆಮಾರುಗಳವರೆಗೂ ವಿವಿಧ ಅಂಗ ವೈಕಲ್ಯ ಸೃಷ್ಟಿಸುವ ಅಪಾಯ ಇದರಿಂದಾಗುತ್ತದೆ.

ಇಪ್ಪತ್ತು ಮೂವತ್ತು ವರ್ಷ ಮಾತ್ರ ಇರುವ ಯುರೇನಿಯಂ ಅನ್ನು ಬಳಸಬಹುದು ನಂತರ ಅವು ಕೆಲಸಕ್ಕೆ ಬರೆದೆ ಹೋಗುತ್ತವೆ. ತದ ನಂತರವು ಅವು ಹೊರ ಸೂಸುವ ಕಿರಣಗಳಿಂದ ಅತ್ಯಂತ ಘೋರವಾದ ಪರಿಸರ ಮತ್ತು ಜೀವ ನಾಶವಾಗಲಿದೆ. ಇದೇ ಭಾಗದಲ್ಲಿ ಕೃಷ್ಣಾನದಿ, ಶ್ರೀ ಶೈಲಂ, ನಾಗಾರ್ಜುನ ಸಾಗರ ಜಲಾಶಯಗಳು ಇವೆ. ಇಲ್ಲಿಂದ  ಕುಡಿಯಲು ಮತ್ತು ಬೆಳೆಯಲು ಈ ನೀರನ್ನು ಬಳಸುವುದರಿಂದ ಸ್ವಲ್ಫ ಹೆಚ್ಚುಕಮ್ಮಿ ಆದರೂ ಸಹ ವಿಕಿರಣಗಳು ಈ ನೀರಿನಲ್ಲಿ ಸೇರಿದರೆ ಜನಸಾಮಾನ್ಯರು ಮತ್ತು ಜೀವ ಸಂಕುಲಕ್ಕೆ ಕುತ್ತು ಬರಲಿದೆ.

ಈಗ ಸರ್ಕಾರದ ಮುಂದೆ ಇರುವ ಪ್ರಶ್ನೆ ಅಪಾಯಕಾರಿ ಖನಿಜವನ್ನು ಬಳಸಿ ವಿದ್ಯುತ್ ಉತ್ಫಾದನೆ ಮಾಡುವ ಅವಶ್ಯಕತೆಯಾದರೂ ಎನಿದೆ? ಈಗಾಗಲೆ ನಮ್ಮಲ್ಲಿ ಸೌರ ಮತ್ತು ಪವನ ವಿದ್ಯುತ್ ಅತ್ಯಂತ ಯಶಸ್ವಿಯಾಗಿ ಉತ್ಫಾದನೆ ಮಾಡಲಾಗುತ್ತಿದೆ. ಇಂತಹ ಮರುಬಳಕೆಯ ಸಂಪನ್ಮೂಲವನ್ನು ಬಳಸಿ ವಿದ್ಯುತ್ ಉತ್ಫಾದನೆ ಮಾಡುವುದನ್ನು ಬಿಟ್ಟು ಯುರೇನಿಯಂನ್ನು ಬಳಸಿ ಅಣು ವಿದ್ಯುತ್ ಅನ್ನೇ ಉತ್ಫಾದಿಸುತ್ತೆವೆ ಎಂಬ ಸರ್ಕಾರದ ಹುನ್ನಾರವೇನು? ಇದು ಬರಿ ಅಣು ವಿದ್ಯುತ್‌ಗೆ ನಿಲ್ಲದೇ ಅಣುಬಾಂಬ್ ತಯಾರಿಕೆಯವರೆಗೂ ವಿಸ್ತರಿಸುವ ಸಾಧ್ಯತೆ ಹೆಚ್ಚಿದೆ. ಈ ರೀತಿಯ ನಡೆಗಳು ಮುಂದುವರೆದ ದೇಶಗಳೆನಿಸಿಕೊಂಡ ಅಮೆರಿಕಾ, ಕೆನಡಾ, ಇಂಗ್ಲೆಂಡ್, ಫ್ರಾನ್ಸ್ ಮುಂತಾದ ದೇಶಗಳ ಪ್ರಯತ್ನಗಳ ವಿರುದ್ಧ ಅಲ್ಲಿನ ಜನಸಾಮಾನ್ಯರು ಬೃಹತ್‍ಮಟ್ಟದ ಹೋರಾಟಗಳನ್ನು ಮಾಡಿ ಬೀದಿಯಲ್ಲಿ ಪ್ರತಿಭಟಿಸಿದ್ದಾರೆ.

ಇಪ್ಪತ್ತು ಸಾವಿರ ಟನ್ನುನಷ್ಟು ಯುರೇನಿಯಂ ಇರಬಹುದೆಂದು ಅಂದಾಜು ಮಾಡಲಾಗಿದೆ. ಇದನ್ನು ತೆಗೆಯಲು ಅನುಕೂಲವಾಗುವಂತೆ ಸುಮಾರು ನಾಲ್ಕು ಸಾವಿರ ಬೋರ್‍ವೆಲ್‍ಗಳನ್ನು ಕೊರೆಯಬೇಕಾಗುತ್ತದೆ ಎನ್ನಲಾಗುತ್ತಿದೆ. 2030ರ ಹೊತ್ತಿಗೆ 40ಸಾವಿರ ಮೆಗಾವ್ಯಾಟ್‌ಗಳ ಅಣುವಿದ್ಯುತ್ ಉತ್ಫಾದನೆ ಮಾಡಬೇಕೆಂಬ ಗುರಿ ಇಟ್ಟುಕೊಳ್ಳಲಾಗಿದ್ದು, ಸರ್ಕಾರ ಮಾಡುತ್ತಿರುವ ಆತುರಕ್ಕೆ ಬಹುರಾಷ್ಟ್ರಿಯ ಕಂಪನಿಗೆಳ ಒತ್ತಡ ಕಾರಣವಾಗಿದೆ ಎಂದು ಕೆಲವು ಜನಪರ ಚಿಂತಕರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ರಾಜ್ಯ ಸಚಿವ ಕೆಟಿಆರ್ ಸಂಪುಟದಲ್ಲಿ ‘ನಲ್ಲಮಲ’ ಯರೇನಿಯಂ ಗಣಿ ಯೋಜನೆಗೆ ವಿರುದ್ಧವಾಗಿ ಬಿಲ್ ಮಂಡಿಸಿದ್ದಾರೆ. ಮತ್ತು ಸಿನೆಮಾ ನಿರ್ದೇಶಕ ಪೂರಿ ಜಗನ್ನಾತ್, ನಟ ಪವನ್ ಕಲ್ಯಾಣ್, ವಿಜಯ್ ದೇವರಕೊಂಡ, ನಟಿ ಸಮಂತ ಮತ್ತಿತರರು ಕೂಡ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಯೋಜನೆಯನ್ನು ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದ್ಧಾರೆ. ಈ ಟ್ವಿಟ್ಟರ್‍ ಅಭಿಯಾನವನ್ನು ಡಿವೈಎಫ್‍ಐ ಸಂಘಟನೆ ಫ್ರಾರಂಬಿಸಿದ್ದು ಟ್ರೆಂಡ್ ಆಗಿತ್ತು.

ಬೆಲ್ಲ ಇದ್ದ ಕಡೆ ಇರುವೆಯ ಜಾಡು ಮೂಡುವ ಹಾಗೆ ಬಹುರಾಷ್ಟ್ರೀಯ ಕಂಪನಿಗಳು ಸದಾ ನೈಸರ್ಗಿಕ ಸಂಪನ್ಮೂಲಗಳಿರುವ ಕಡೆ ಕಣ್ಣು ಹಾಕಿರುತ್ತಾರೆ. ಅವರಿಗೆ ಪೂರಕವಾದ ಸರ್ಕಾರಗಳಿದ್ದರಂತು ಮುಗಿದೆ ಹೋಯಿತು. ಕಡಿಮೆ ಸಮಯದಲ್ಲಿ ಹೆಚ್ಚು ತಿಂದು ತೇಗಲು ಬೇಕಾದ ವಾತಾವರಣ ರೂಪಿಸಿಕೊಂಡು ಕಾರ್ಯಕ್ಕಿಳಿಯುತ್ತವೆ. ಇತ್ತಿಚಿಗೆ ಅಮೇಜಾನ್ ಕಾಡು ಮನುಷ್ಯನ ದುರಂಹಾಕರಕ್ಕೆ ಹೊತ್ತಿ ಉರಿದ ಹಾಗೆ ನಲ್ಲಮಲ ಕಾಡು ಮನುಷ್ಯನ ದುರಾಸೆಗೆ ಬಲಿಯಾಗದೆ ಇರಲಿ. ಅಲ್ಲಿನ ಮೂಲ ನಿವಾಸಿಗಳಾದ ‘ಚೆಂಚು’, ’ಕೋಯಾ’ ಬುಡಕಟ್ಟು ಜನಾಂಗಗಳು ಇದುವರೆಗೂ ಆ ಕಾಡನ್ನು ನಾಶವಾಗದೆ ಕಾಪಾಡಿಕೊಂಡು ಬಂದಿದ್ಧಾರೆ. ಸರ್ಕಾರದ ಈ ಆತುರದ ತೀರ್ಮಾನಗಳಿಂದ ಈ ಜನಾಂಗ ನಾಶವಾಗದಂತೆ ಕಪಾಡಿಕೊಳ್ಳಬೇಕಾಗಿದೆ.

ಅದಕ್ಕಾಗಿ ನಲ್ಲಮಲ್ಲ ಕಾಡು ಉಳಿಸಲು ನಡೆಸುತ್ತಿರುವ ಹೋರಾಟ ಮತ್ತಷ್ಟು ದೃಢಗೊಳ್ಳಬೇಕಿದೆ. ಬೀದಿಯಲ್ಲಿ ನಡೆಯುವ ಹೋರಾಟಕ್ಕೆ ಸಿನಿಮಾ ತಾರೆಯರು ಜೊತೆಗೂಡಬೇಕಿದೆ ಮತ್ತು ನಾವೆಲ್ಲರೂ ಬೆಂಬಲಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...