Homeಮುಖಪುಟ'ಅನ್ನಪೂರಣಿ' ಸಿನಿಮಾವನ್ನು ತೆಗೆದುಹಾಕಿದ ನೆಟ್‌ಫ್ಲಿಕ್ಸ್ , ವಿಹೆಚ್‌ಪಿಗೆ ಕ್ಷಮಾಪನಾ ಪತ್ರ ಬರೆದ ಝೀ ಸ್ಟುಡಿಯೋ!

‘ಅನ್ನಪೂರಣಿ’ ಸಿನಿಮಾವನ್ನು ತೆಗೆದುಹಾಕಿದ ನೆಟ್‌ಫ್ಲಿಕ್ಸ್ , ವಿಹೆಚ್‌ಪಿಗೆ ಕ್ಷಮಾಪನಾ ಪತ್ರ ಬರೆದ ಝೀ ಸ್ಟುಡಿಯೋ!

- Advertisement -
- Advertisement -

‘ಅನ್ನಪೂರಣಿ’ ತಮಿಳು ಚಲನಚಿತ್ರ ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡಿದೆ ಎಂದು ಹಿಂದೂ ಬಲಪಂಥೀಯ ಗುಂಪುಗಳು ವಿವಾದ ಸೃಷ್ಟಿಸಿದ ಬೆನ್ನಲ್ಲಿ ನಯನತಾರಾ ಅವರ  ‘ಅನ್ನಪೂರಣಿ’ ಚಲನ ಚಿತ್ರವನ್ನು ನೆಟ್‌ಫ್ಲಿಕ್ಸ್ ತೆಗೆದು ಹಾಕಿದ್ದು, ‘ಅನ್ನಪೂರಣಿ’ ಚಲನಚಿತ್ರದ ನಿರ್ಮಾಪಕರು ಮತ್ತು ಝೀ ಸ್ಟುಡಿಯೊ ಕ್ಷಮೆಯಾಚಿಸಿ ವಿಹೆಚ್‌ಪಿಗೆ ಪತ್ರವನ್ನು ಬರೆದಿದೆ.

ಪತ್ರದಲ್ಲಿ Zee ಸ್ಟುಡಿಯೋ, ನಾವು ಹಿಂದೂ ಮತ್ತು ಬ್ರಾಹ್ಮಣ ಸಮುದಾಯಗಳಿಗೆ ಉಂಟಾದ ಅನಾನುಕೂಲತೆ ಮತ್ತು ನೋವಿಗೆ ಈ ಮೂಲಕ ಕ್ಷಮೆಯಾಚಿಸಲು ಬಯಸುತ್ತೇವೆ ಎಂದು ಹೇಳಿದೆ. ಝೀ ಸ್ಟುಡಿಯೋ ಸಹ-ನಿರ್ಮಾಪಕರಾದ ಟ್ರೈಡೆಂಟ್ ಆರ್ಟ್ಸ್‌ನೊಂದಿಗೆ ಚಲನಚಿತ್ರವನ್ನು ಎಡಿಟ್ ಮಾಡುವವರೆಗೆ ನೆಟ್‌ಫ್ಲಿಕ್ಸ್‌ನಿಂದ ತೆಗೆದುಹಾಕಲು ಕೆಲಸ ಮಾಡುತ್ತಿದೆ ಎಂದು ಪತ್ರದಲ್ಲಿ ತಿಳಿಸಿತ್ತು.

ಚಿತ್ರದ ವಿವಾದಾತ್ಮಕ ಅಂಶಗಳನ್ನು ತಕ್ಷಣವೇ ತೆಗೆದುಹಾಕಲು ಸಹ-ನಿರ್ಮಾಪಕರಾದ ಟ್ರೈಡೆಂಟ್ ಆರ್ಟ್ಸ್‌ಗೆ Zee ಸ್ಟುಡಿಯೋಸ್ ಮನವಿ ಮಾಡಿದೆ ಎಂದು ಪತ್ರವು ಬಹಿರಂಗಪಡಿಸಿದೆ. ಹೆಚ್ಚುವರಿಯಾಗಿ ಅಗತ್ಯ ಬದಲಾವಣೆಗಳನ್ನು ಮಾಡುವವರೆಗೆ ತನ್ನ OTT ಪ್ಲಾಟ್‌ಫಾರ್ಮ್‌ನಿಂದ ‘ಅನ್ನಪೂರಣಿ’ ಯನ್ನು ತಾತ್ಕಾಲಿಕವಾಗಿ ತೆಗೆದುಹಾಕುವಂತೆ ಸ್ಟುಡಿಯೋ ನೆಟ್‌ಫ್ಲಿಕ್ಸ್‌ಗೆ ಒತ್ತಾಯಿಸಿತ್ತು.

ಇಂದು ನೆಟ್‌ಫ್ಲಿಕ್ಸ್ ಚಲನಚಿತ್ರವನ್ನು ತೆಗೆದುಹಾಕಿದೆ, ಚಲನಚಿತ್ರವನ್ನು ಆವರಿಸಿರುವ ವಿವಾದವನ್ನು  ಗಂಭೀರವಾಗಿ ಪರಿಗಣಿಸಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ತಮಿಳುನಾಡಿನಲ್ಲಿ ಚಿತ್ರವು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿದೆ. ಅಂದರೆ ಅದು ಈಗಾಗಲೇ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ನಿಂದ ಅನುಮತಿ ಪಡೆದಿದೆ.

ಜನವರಿ 8 ರಂದು ಶಿವಸೇನೆಯ ಮಾಜಿ ಕಾರ್ಯಕರ್ತ ರಮೇಶ್ ಸೋಲಂಕಿ ಮುಂಬೈನಲ್ಲಿ ‘ಅನ್ನಪೂರಣಿ’ ತಮಿಳು ಚಲನ ಚಿತ್ರದ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಚಲನಚಿತ್ರವು ಲವ್ ಜಿಹಾದ್‌ನ್ನು ಉತ್ತೇಜಿಸುತ್ತದೆ ಮತ್ತು ಅದರ ಒಂದು ಪಾತ್ರವು ವಾಲ್ಮೀಕಿ ರಾಮಾಯಣವನ್ನು ತಪ್ಪಾಗಿ ಅರ್ಥೈಸುತ್ತದೆ, ಭಗವಾನ್ ರಾಮನನ್ನು ‘ಮಾಂಸ ಭಕ್ಷಕ’ ಎಂದು ಚಿತ್ರಿಸುತ್ತದೆ ಎಂದು ಆರೋಪಿಸಿ ಮುಂಬೈನ ಎಲ್‌ಟಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಈ ಎಫ್‌ಐಆರ್ ದಾಖಲಿಸಿದ್ದಾರೆ.

ಅನ್ನಪೂರಣಿ’ ನಯನತಾರಾ ಅಭಿನಯಿಸುತ್ತಿರುವ 75ನೇ ಸಿನಿಮಾ. ಈ ಚಿತ್ರಕ್ಕೆ ನಿಲೇಶ್ ಕೃಷ್ಣ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಯುವತಿಯೊಬ್ಬಳು ಸಮಾಜದ ವಿರೋಧದ ನಡುವೆ ಹೇಗೆ ಶೆಫ್ ಆಗುವ ಕನಸನ್ನು ನನಸಾಗಿಸಿಕೊಳ್ಳಲು ಪ್ರಯತ್ನಿಸುತ್ತಾಳೆ ಎನ್ನುವುದರ ಸುತ್ತ ಕಥೆ ಸಾಗುತ್ತದೆ. ಬ್ರಾಹ್ಮಣರ ಮನೆತನದ ಯುವತಿ ಮಾಂಸಾಹಾರ ತಯಾರಿಸುವ ಸವಾಲನ್ನು ಹೇಗೆ ನಿಭಾಯಿಸುತ್ತಾಳೆ ಎನ್ನುವುದು ಸಿನಿಮಾದ ಕಥೆಯಾಗಿದೆ.

ನಟಿ ನಯನತಾರಾ, ನಿರ್ದೇಶಕರಾದ ನೀಲೇಶ್ ಕೃಷ್ಣ ಮತ್ತು ನಿರ್ಮಾಪಕರಾದ ಜತಿನ್ ಸೇಥಿ, ಆರ್ ರವೀಂದ್ರನ್ ಮತ್ತು ಪುನಿತ್ ಗೋಯೆಂಕಾ, ಜೀ ಸ್ಟುಡಿಯೋಸ್, ಶಾರಿಕ್ ಪಟೇಲ್ ಮತ್ತು ನೆಟ್‌ಫ್ಲಿಕ್ಸ್ ಇಂಡಿಯಾದ ಮುಖ್ಯಸ್ಥೆ ಮೋನಿಕಾ ಶೆರ್ಗಿಲ್ ವಿರುದ್ಧ ದೂರು ದಾಖಲಿಸಲಾಗಿತ್ತು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ರಮೇಶ್‌ ಸೋಲಂಕಿ, ನಾನು AntiHinduZee ಮತ್ತು #AntiHinduNetflix ವಿರುದ್ಧ ದೂರು ದಾಖಲಿಸಿದ್ದೇನೆ. ಭಗವಾನ್ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆಯ ನಿರೀಕ್ಷೆಯಲ್ಲಿ ಇಡೀ ವಿಶ್ವವೇ ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ ಝೀ ಸ್ಟುಡಿಯೋಸ್, ನಾಡ್ ಸ್ಟುಡಿಯೋಸ್ ಮತ್ತು ಟ್ರೈಡೆಂಟ್ ಆರ್ಟ್ಸ್ ನಿರ್ಮಾಣದ ಈ ಹಿಂದೂ ವಿರೋಧಿ ಸಿನಿಮಾ ಅನ್ನಪೂರಣಿ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾದೆ. ಹಿಂದೂ ಪೂಜಾರಿಯ ಮಗಳು ಬಿರಿಯಾನಿ ಅಡುಗೆ ಮಾಡಲು ನಮಾಜ್ ಮಾಡುತ್ತಾಳೆ, ಈ ಚಿತ್ರದಲ್ಲಿ ಲವ್ ಜಿಹಾದ್‌ ಪರ ಪ್ರಚಾರ ಮಾಡಲಾಗಿದೆ. ಫರ್ಹಾನ್ (ನಟ) ಭಗವಾನ್ ಶ್ರೀ ರಾಮ್ ಕೂಡ ಮಾಂಸಾಹಾರಿ ಎಂದು ನಟಿಯನ್ನು ಮಾಂಸ ತಿನ್ನಲು ಮನವೊಲಿಸುವುದು ಚಿತ್ರದಲ್ಲಿದೆ. @NetflixIndia
ಮತ್ತು @ZeeStudios_ ಹಿಂದೂ ಭಾವನೆಗಳಿಗೆ ಧಕ್ಕೆ ತರಲು ಉದ್ದೇಶಪೂರ್ವಕವಾಗಿ ಈ ಸಿನಿಮಾ ಮಾಡಿ    ಮಂದಿರದ ಪ್ರಾಣ ಪ್ರತಿಷ್ಠೆಯ ವೇಳೆ ಬಿಡುಗಡೆ ಮಾಡಿದೆ ಎಂದು ಆರೋಪಿಸಿದ್ದರು.

ಇದನ್ನು ಓದಿ: ‘ಎಲ್ಲಾ ಮಹಿಳೆಯರ ಗೆಲುವು’: ಬಿಲ್ಕಿಸ್ ಬಾನು ತೀರ್ಪಿನ ಬಗ್ಗೆ ಕುಸ್ತಿಪಟು ವಿನೇಶ್ ಫೋಗಟ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....