Homeಮುಖಪುಟರಾಜೌರಿ-ಪೂಂಚ್‌ನಲ್ಲಿ ಭಯೋತ್ಪಾದನೆ ಹೆಚ್ಚಳ; ಕಳವಳ ವ್ಯಕ್ತಪಡಿಸಿದ ಸೇನಾ ಮುಖ್ಯಸ್ಥ

ರಾಜೌರಿ-ಪೂಂಚ್‌ನಲ್ಲಿ ಭಯೋತ್ಪಾದನೆ ಹೆಚ್ಚಳ; ಕಳವಳ ವ್ಯಕ್ತಪಡಿಸಿದ ಸೇನಾ ಮುಖ್ಯಸ್ಥ

- Advertisement -
- Advertisement -

ಭಾರತ-ಮ್ಯಾನ್ಮಾರ್ ಗಡಿಯಲ್ಲಿನ ಪರಿಸ್ಥಿತಿ ಮತ್ತು ಜಮ್ಮು-ಕಾಶ್ಮೀರದ ರಾಜೌರಿ-ಪೂಂಚ್ ಸೆಕ್ಟರ್‌ನಲ್ಲಿನ ಭಯೋತ್ಪಾದಕ ಚಟುವಟಿಕೆಗಳ ಬಗ್ಗೆ ಸೇನಾ ಮುಖ್ಯಸ್ಥ (COAS) ಜನರಲ್ ಮನೋಜ್ ಪಾಂಡೆ ಗುರುವಾರ ಕಳವಳ ವ್ಯಕ್ತಪಡಿಸಿದ್ದಾರೆ.

ಸೇನಾ ವಾರ್ಷಿಕ ದಿನದ ಪ್ರಯುಕ್ತ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾಂಡೆ, ಭಾರತದ ಗಡಿಗಳಲ್ಲಿ ಚಾಲ್ತಿಯಲ್ಲಿರುವ ಭದ್ರತಾ ಸನ್ನಿವೇಶಗಳ ಬಗ್ಗೆ ವಿವರಣೆ ನೀಡಿದರು. ಉತ್ತರದ ಗಡಿಯಲ್ಲಿ, ವಿಶೇಷವಾಗಿ ಲಡಾಖ್‌ನಲ್ಲಿ ಪರಿಸ್ಥಿತಿ ಸ್ಥಿರವಾಗಿದೆ; ಆದರೆ ಸೂಕ್ಷ್ಮವಾಗಿದೆ’ ಎಂದು ಹೇಳಿದರು.

‘ನಾವು ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಮಾತನಾಡುವುದನ್ನು ಮುಂದುವರಿಸುತ್ತೇವೆ, ಜಾರಿಯಲ್ಲಿರುವ ಪ್ರೋಟೋಕಾಲ್‌ಗಳು ಮತ್ತು ಕಾರ್ಯವಿಧಾನಗಳ ಪ್ರಕಾರ ಉಳಿದಿರುವ ಸಮಸ್ಯೆಗಳಿಗೆ ಸಮತೋಲನ ಪರಿಹಾರವನ್ನು ಕಂಡುಹಿಡಿಯುತ್ತೇವೆ’ ಎಂದು ಅವರು ಹೇಳಿದರು.

ವ್ಯಾಪಕವಾದ ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳ ನಂತರವೂ ಚೀನಾ ಮತ್ತು ಭಾರತದ ದೇಶಗಳ ನಡುವೆ ಪೂರ್ವ ಲಡಾಖ್‌ನಲ್ಲಿ ಕೆಲವು ಘರ್ಷಣೆ ಮುಂದುವರಿದಿದೆ. ‘ಸೇನಾ ಪಡೆಗಳ ದೃಢ, ಸಮತೋಲಿತ ನಿಯೋಜನೆಯೊಂದಿಗೆ ಕಾರ್ಯಾಚರಣೆಯ ಸನ್ನದ್ಧತೆಯು ಉನ್ನತ ಮಟ್ಟದಲ್ಲಿ ಮುಂದುವರಿಯುತ್ತದೆ’ ಎಂದು ಪಾಂಡೆ ಭರವಸೆ ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯ ಬಗ್ಗೆ ಮಾತನಾಡಿದ ಜನರಲ್ ಪಾಂಡೆ, ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಕದನ ವಿರಾಮ ಉಲ್ಲಂಘೆನಯಾಗುತ್ತಿರುವ ಬಗ್ಗೆ ಗಮನ ಸೆಳೆದರು. ‘ಒಳನುಸುಳುವಿಕೆ ಯತ್ನಗಳ ಹೊರತಾಗಿಯೂ, ಭಾರತೀಯ ಸೇನೆಯು ಅಂತಹ ಪ್ರಯತ್ನಗಳನ್ನು ಯಶಸ್ವಿಯಾಗಿ ವಿಫಲಗೊಳಿಸಿದೆ. ಶಸ್ತ್ರಾಸ್ತ್ರಗಳು ಮತ್ತು ಮಾದಕವಸ್ತುಗಳ ಕಳ್ಳಸಾಗಣೆಯನ್ನು ತಡೆಯಲು ಪ್ರಬಲವಾದ ಡ್ರೋನ್ ಕಾರ್ಯವಿಧಾನವು ಸೇನಾ ಯಶಸ್ಸಿಗೆ ಕಾರಣವಾಗಿದೆ’ ಎಂದು ಹೇಳಿದರು.

‘ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟಾರೆ ಹಿಂಸಾಚಾರದ ಘಟನೆಗಳು ಕಡಿಮೆಯಾಗಿವೆ. ಆದರೆ, ರಜೌರಿ-ಪೂಂಚ್ ವಲಯದಲ್ಲಿ ಇಂತಹ ಘಟನೆಗಳು ಹೆಚ್ಚಿವೆ’ ಎಂದು ಜನರಲ್ ಪಾಂಡೆ ಹೇಳಿದರು.

ಕಳೆದ 5-6 ತಿಂಗಳುಗಳಲ್ಲಿ ರಾಜೌರಿ ಮತ್ತು ಪೂಂಚ್‌ನಲ್ಲಿನ ಪರಿಸ್ಥಿತಿ ಮತ್ತು ಭಯೋತ್ಪಾದಕ ಚಟುವಟಿಕೆಗಳು ನಮಗೆ ಕಳವಳಕಾರಿ ವಿಷಯವಾಗಿದೆ. 2003ರ ಹೊತ್ತಿಗೆ, ಈ ಪ್ರದೇಶದಲ್ಲಿ ಭಯೋತ್ಪಾದನೆ ಸಂಪೂರ್ಣವಾಗಿ ಹರಡಿತು. 2017-18 ರವರೆಗೆ ಅಲ್ಲಿ ಶಾಂತಿ ಸ್ಥಾಪಿಸಲಾಯಿತು. ಕಣಿವೆಯಲ್ಲಿ ಶಾಂತಿ ನೆಲೆಸಿರುವ ಕಾರಣ, ನಮ್ಮ ವಿರೋಧಿಗಳು ಈ ಪ್ರದೇಶದಲ್ಲಿ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿದ್ದಾರೆ’ ಎಂದು ಜನರಲ್ ಪಾಂಡೆ ಹೇಳಿದರು.

ಇಂಡೋ-ಮ್ಯಾನ್ಮಾರ್ ಗಡಿಯಲ್ಲಿನ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಜನರಲ್ ಪಾಂಡೆ, ಮ್ಯಾನ್ಮಾರ್ ಸೇನೆ ಮತ್ತು ಜನಾಂಗೀಯ ಸಶಸ್ತ್ರ ಸಂಘಟನೆಗಳ ಚಟುವಟಿಕೆಗಳ ಪ್ರಭಾವವನ್ನು ಎತ್ತಿ ತೋರಿಸಿದರು. ಮ್ಯಾನ್ಮಾರ್ ಸೇನೆಯ ಸಿಬ್ಬಂದಿ ಮತ್ತು ಭೂತಾನ್ ನಾಗರಿಕರು ಭಾರತೀಯ ಪ್ರದೇಶಗಳಲ್ಲಿ ಆಶ್ರಯ ಪಡೆಯುವ ನಿದರ್ಶನಗಳನ್ನು ಅವರು ಗುರುತಿಸಿದ್ದಾರೆ.

‘ನಮ್ಮಲ್ಲಿ ಕೆಲವು ಬಂಡುಕೋರ ಗುಂಪುಗಳಿವೆ, ಅವರು ಒತ್ತಡವನ್ನು ಅನುಭವಿಸುತ್ತಿದ್ದಾರೆ ಮತ್ತು ಅವರು ಈಗ ಮಣಿಪುರ ರಾಜ್ಯದ ಗಡಿಯ ನಮ್ಮ ಭಾಗಕ್ಕೆ ಬರಲು ಪ್ರಯತ್ನಿಸಿದ್ದಾರೆ. ಅದು ಮಣಿಪುರದ ಪರಿಸ್ಥಿತಿಯೊಂದಿಗೆ ಸೇರಿಕೊಳ್ಳುವುದನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ನಾವು ಸುಮಾರು 20 ಅಸ್ಸಾಂ ರೈಫಲ್ ಬೆಟಾಲಿಯನ್‌ಗಳನ್ನು ಹೊಂದಿದ್ದೇವೆ. ಇವುಗಳನ್ನು ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ನಿಯೋಜಿಸಲಾಗಿದೆ. ಗಡಿಯಲ್ಲಿ ನಮ್ಮ ಬೇಲಿಯನ್ನು ಮತ್ತಷ್ಟು ಬಲಪಡಿಸುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ’ ಎಂದು ವಿವರಿಸಿದರು.

‘ತುರ್ತು ನಿಬಂಧನೆಗಳ ಭಾಗವಾಗಿ, ನಾವು ಕೆಲವು ಹೊಸ ತಂತ್ರಜ್ಞಾನಗಳನ್ನು ಸೇರಿಸಲು ಮತ್ತು ಯುದ್ಧದ ಡೊಮೇನ್‌ಗಳನ್ನು ಪರಿಹರಿಸಲು ಸಮರ್ಥರಾಗಿದ್ದೇವೆ. ನಾವು ಉತ್ತಮ ವಾಹನಗಳು, ಡ್ರೋನ್‌ಗಳು ಮತ್ತು ಕೌಂಟರ್-ಡ್ರೋನ್ ವ್ಯವಸ್ಥೆಗಳನ್ನು ಸಿದ್ದಪಡಿಸಿಕೊಂಡಿದ್ದೇವೆ. ನಾವು ಭೂಪ್ರದೇಶ-ನಿರ್ದಿಷ್ಟ ಎಲೆಕ್ಟ್ರಾನಿಕ್ ವಾರ್ಫೇರ್ ಸಿಸ್ಟಮ್‌ಗಳನ್ನು ಹೊಂದಿದ್ದೇವೆ’ ಎಂದು ಜನರಲ್ ಪಾಂಡೆ ಹೇಳಿದರು.

‘ನಾವು ನಮ್ಮ ಫಿರಂಗಿ ಘಟಕಗಳನ್ನು ಪುನರ್ ರಚಿಸಿದ್ದೇವೆ. ಎಲೆಕ್ಟ್ರಾನಿಕ್ ವಾರ್ ಫೇರ್ ಮತ್ತು ಎಲೆಕ್ಟ್ರಾನಿಕ್ ಇಂಟೆಲಿಜೆನ್ಸ್‌ನ್ನು ಪುನರ್ ರಚಿಸಿದ ಘಟಕಗಳನ್ನು ಸಹ ಹೊಂದಿದ್ದೇವೆ. ನಮ್ಮ ಪ್ರಾಣಿ ಘಟಕಗಳಲ್ಲಿ ಪ್ರಾಣಿಗಳನ್ನು ಕಡಿಮೆ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ; ಅವುಗಳನ್ನು ಡ್ರೋನ್‌ಗಳಾಗಿ ಬದಲಾಯಿಸಲಾಗುತ್ತಿದೆ. ನಾವು ಹಲವು ಯೋಜನೆಯನ್ನು ಮಾಡಿದ್ದು, ಗಮನಾರ್ಹವಾಗಿ ನಮ್ಮ ಶಕ್ತಿಯನ್ನು ಉತ್ತಮಗೊಳಿಸಿದ್ದೇವೆ. 2027ರ ವೇಳೆಗೆ ನಾವು 1 ಲಕ್ಷ ಸಂಖ್ಯೆಗಳ ಆಪ್ಟಿಮೈಸೇಶನ್ ಅನ್ನು ಸಾಧಿಸುತ್ತೇವೆ. ಈ ಪ್ರಸ್ತಾವನೆಯನ್ನು ಸರ್ಕಾರಕ್ಕೆ ನೀಡಿದ್ದೇವೆ’ ಎಂದರು.

ಇದನ್ನೂ ಓದಿ; ಪ್ರಜಾಪ್ರಭುತ್ವಕ್ಕೆ ‘ಶ್ರದ್ಧಾಂಜಲಿ’ ಸಲ್ಲಿಸಿದ ಶಿವಸೇನೆ ಸಂಸದ ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...