Homeಮುಖಪುಟಎನ್ನೋರ್ ಅನಿಲ ಸೋರಿಕೆ ದುಷ್ಪರಿಣಾಮ ಮುಚ್ಚಿಡಲು ಯತ್ನ? ಸಂತ್ರಸ್ತರು ಹೇಳುವುದೇನು?

ಎನ್ನೋರ್ ಅನಿಲ ಸೋರಿಕೆ ದುಷ್ಪರಿಣಾಮ ಮುಚ್ಚಿಡಲು ಯತ್ನ? ಸಂತ್ರಸ್ತರು ಹೇಳುವುದೇನು?

- Advertisement -
- Advertisement -

ತಮಿಳುನಾಡಿನ ಎನ್ನೂರಿನ ಕೋರಮಂಡಲ್ ಇಂಟರ್‌ನ್ಯಾಶನಲ್ ಲಿಮಿಟೆಡ್ (ಸಿಐಎಲ್)ನಲ್ಲಿ ಡಿಸೆಂಬರ್ 26ರ ರಾತ್ರಿ ಅಮೋನಿಯಾ ಗ್ಯಾಸ್ ಸೋರಿಕೆಯಾಗಿತ್ತು. ಸುಮಾರು 44 ಜನರು ಉಸಿರಾಟದ ತೊಂದರೆ, ವಾಕರಿಕೆ ಮತ್ತು ಮೂರ್ಛೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಘಟನೆಯ ಸಂತ್ರಸ್ತರು ಇದೀಗ ಖಾಸಗಿ ಆಸ್ಪತ್ರೆ ವಿರುದ್ಧ ಗಂಭೀರವಾದ ಆರೋಪವನ್ನು ಮಾಡಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳಲು ಕೂಡ ಸಮಯಾವಕಾಶ ನೀಡದೆ ತಮ್ಮನ್ನು ಡಿಸ್ಚಾರ್ಜ್‌ ಮಾಡಿ ಕಳುಹಿಸಿದ್ದಾರೆ. ನಾವು ಎಷ್ಟೇ ವಿನಂತಿ ಮಾಡಿದರೂ ಸ್ಕ್ಯಾನ್, ಎಕ್ಸ್-ರೇ ಮತ್ತು ಇತರ ಯಾವುದೇ ದಾಖೆಯನ್ನು ಹಸ್ತಾಂತರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಅನಿಲ ಸೋರಿಕೆ ಸಂಭವಿಸಿದಾಗ 44 ಜನರನ್ನು ಆಕಾಶ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದು ಪೆರಿಯಕುಪ್ಪಂನಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಖಾಸಗಿ ಆಸ್ಪತ್ರೆಯಾಗಿದೆ. ಅನಿಲ ಸೋರಿಕೆಯ ದುಷ್ಪರಿಣಾಮದಿಂದ ಜನರು ಬಳಲುತ್ತಿದ್ದರೂ ಆಸ್ಪತ್ರೆಯ ವೈದ್ಯರು ತರಾತುರಿಯಲ್ಲಿ ಡಿಸ್ಚಾರ್ಜ್ ಮಾಡಿದ್ದಾರೆ ಎಂದು ಪೆರಿಯಕುಪ್ಪಂನ ಹಲವಾರು ನಿವಾಸಿಗಳು ಆರೋಪಿಸಿದ್ದಾರೆ.

ಪೆರಿಯಕುಪ್ಪಂ ನಿವಾಸಿ ದೇಸರಾಣಿ ಈ ಕುರಿತು ಮಾತನಾಡಿದ್ದು, ನಾನು ಇನ್ನೂ ದುರಂತದಿಂದ ಚೇತರಿಸಿಕೊಂಡಿಲ್ಲ. ಡಿಸೆಂಬರ್ 26ರಂದು ರಾತ್ರಿ 11.40ರ ಸುಮಾರಿಗೆ ನನಗೆ ಇದ್ದಕ್ಕಿದ್ದಂತೆ ಉಸಿರಾಟದ ಸಮಸ್ಯೆ ಉಂಟಾಗಿದೆ. ನನ್ನ ಮಕ್ಕಳು ನನ್ನನ್ನು ದ್ವಿಚಕ್ರ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದರು. ನಾನು ಮನೆಯಿಂದ ಹೊರಬಂದ ತಕ್ಷಣ ಪ್ರಜ್ಞೆ ತಪ್ಪಿದ್ದೆ. ನನ್ನನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಮೂರು ದಿನಗಳ ನಂತರ ವೈದ್ಯರು ಡಿಸ್ಚಾರ್ಜ್ ಮಾಡಿ ಕಳುಹಿಸಿದ್ದಾರೆ. ಆದರೆ ನಾನು ಉಸಿರಾಡಲು ಹೆಣಗಾಡುತ್ತಿದ್ದೆ. ನನಗೆ  ಚಿಕಿತ್ಸೆ ಮುಂದುವರಿಸಲು ಆಸ್ಪತ್ರೆ ನಿರಾಕರಿಸಿದೆ. ಮನೆಗೆ ಬಂದ ನಂತರ  ನಾನು ವಾಂತಿ ಮಾಡಲು ಪ್ರಾರಂಭಿಸಿದೆ ಮತ್ತು ಮತ್ತೆ ಮೂರ್ಛೆ ಹೋದೆ. ಆದ್ದರಿಂದ ನನ್ನನ್ನು ಮತ್ತೆ ಆಸ್ಪತ್ರೆಗೆ ಸೇರಿಸಲಾಯಿತು. ಆಸ್ಪತ್ರೆಯವರಿಗೆ ಡಿಸ್ಚಾರ್ಜ್‌ ಮಾಡಲು ಏನು ಆತುರ? ಅನಿಲ ಸೋರಿಕೆಯ ಪರಿಣಾಮಗಳು ಕಡಿಮೆ ಎಂದು ತೋರಿಸಲು ಆಸ್ಪತ್ರೆಗೆ ನಮ್ಮನ್ನು ಬಿಡುಗಡೆ ಮಾಡಲು ಒತ್ತಡ ಹಾಕಲಾಗಿತ್ತಾ? ಎಂದು ಪ್ರಶ್ನಿಸಿದ್ದಾರೆ.

ಪೆರಿಯಕುಪ್ಪಂ ಗ್ರಾಮದ ಕುಮಾರ್ ಅವರು ಈ ಬಗ್ಗೆ ಮಾತನಾಡಿದ್ದು, ದೇಸರಾಣಿ ಜೊತೆಗೆ 60 ವರ್ಷಕ್ಕಿಂತ ಮೇಲ್ಪಟ್ಟ ಇತರ ಮೂವರನ್ನು ಸರಿಯಾಗಿ ಚಕಿತ್ಸೆ ನೀಡದೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ.  ಇದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಅವರು ಸರ್ಕಾರಿ ಸ್ಟಾನ್ಲಿ ಆಸ್ಪತ್ರೆ ಸೇರಿದಂತೆ ಇತರ ಆಸ್ಪತ್ರೆಗಳಿಗೆ ಹೋಗಬೇಕಾಯಿತು ಎಂದು ಹೇಳಿದ್ದಾರೆ.

ಕುಮಾರ್ ಅವರು ಆಕಾಶ್ ಆಸ್ಪತ್ರೆಗೆ ಭೇಟಿ ನೀಡಿ  ತಮ್ಮ ಗ್ರಾಮದಿಂದ ಆಸ್ಪತ್ರೆಗೆ ದಾಖಲಾಗಿರುವ 39 ಜನರ ವೈದ್ಯಕೀಯ ವರದಿಯನ್ನು ನೀಡುವಂತೆ ಕೇಳಿದ್ದರು. ಆದರೆ ಆಸ್ಪತ್ರೆ ವರದಿಯನ್ನು ಅಧ್ಯಯನ ಮಾಡಲಿದೆ ಎಂದು ನೀಡಿಲ್ಲ. ರೋಗಿಗಳನ್ನು ಮನೆಗೆ ಕಳುಹಿಸಲಾಗಿದೆ. ಈಗ  ಅವರು ಏನು ಅಧ್ಯಯನ ಮಾಡುತ್ತಿದ್ದಾರೆ ಎಂಬುದು ನಮಗೆ ಅರ್ಥವಾಗುತ್ತಿಲ್ಲ. ಅವರು ಏನನ್ನೋ ಮುಚ್ಚಿಡುತ್ತಿದ್ದಾರೆ ಎಂದು ನಾವು ಹೆದರುತ್ತಿದ್ದೇವೆ ಎಂದು ಹೇಳಿದ್ದಾರೆ.

ಗ್ಯಾಸ್ ಸೋರಿಕೆ ಸಂತ್ರಸ್ತರಾದ ಸೆಲ್ಚಾ ಅವರು ಮಾತನಾಡಿದ್ದು, ಆಕಾಶ್ ಆಸ್ಪತ್ರೆ ಇನ್ನೂ ನನ್ನ ಸ್ಕ್ಯಾನ್ ಮತ್ತು ಎಕ್ಸ್-ರೇಗಳನ್ನು ಹಸ್ತಾಂತರಿಸಿಲ್ಲ. ಅವರು ನನಗೆ ಪ್ರಿಸ್ಕ್ರಿಪ್ಷನ್  ಮಾತ್ರ ನೀಡಿದ್ದಾರೆ. ನನಗೆ ಉಸಿರಾಡಲು  ಕಷ್ಟವಾಗುತ್ತಿದ್ದರಿಂದ ಬೇರೆ ವೈದ್ಯರನ್ನು ಸಂಪರ್ಕಿಸಲು ಬಯಸಿದ್ದೆವು. ನನ್ನ ಪತಿ ಸ್ಕ್ಯಾನ್ ಮತ್ತು ಎಕ್ಸ್-ರೇಯನ್ನು ಸಂಗ್ರಹಿಸಲು ಆಕಾಶ್ ಆಸ್ಪತ್ರೆಗೆ ತೆರಳಿದ್ದರು. ಅವರು ಮೂರು ದಿನಗಳಲ್ಲಿ ನೀಡುವುದಾಗಿ ನನ್ನ ಪತಿಗೆ ಹೇಳಿದ್ದರು, ಆದರೆ ಹತ್ತು ದಿನಗಳು ಕಳೆದರು ಕೊಟ್ಟಿಲ್ಲ ಎಂದು ಹೇಳಿದ್ದಾರೆ.

ಡಿಸೆಂಬರ್ 26 ರಂದು ರಾತ್ರಿ 11.45ರ ಸುಮಾರಿಗೆ ಉತ್ತರ ಚೆನ್ನೈನ ಕಡಲತೀರದಲ್ಲಿರುವ ರಸಗೊಬ್ಬರ ತಯಾರಿಕಾ ಘಟಕಕ್ಕೆ ಜೋಡಿಸಲಾದ ಸಬ್‌ಸೀ ಪೈಪ್‌ಲೈನ್‌ನಿಂದ ಅಮೋನಿಯಾ ಅನಿಲ ಸೋರಿಕೆಯಾಗಿದೆ. ಬಳಿಕ ಕಾರ್ಮಿಕರು ಬಾಯಿ ಮಾತಿನ ಮೂಲಕ ನಿವಾಸಿಗಳನ್ನು ಎಚ್ಚರಿಸಿದರು, ನಂತರ ಜನರು ತಮ್ಮ ಮನೆಗಳನ್ನು ಖಾಲಿ ಮಾಡಿದ್ದಾರೆ. ಹಲವರು ಉಸಿರಾಟದ ತೊಂದರೆ, ವಾಕರಿಕೆಯಿಂದ ಅಸ್ವಸ್ಥಗೊಂಡಿದ್ದರು.

ಇದನ್ನು ಓದಿ: ‘ಅನ್ನಪೂರಣಿ’ ಸಿನಿಮಾವನ್ನು ತೆಗೆದುಹಾಕಿದ ನೆಟ್‌ಫ್ಲಿಕ್ಸ್ , ವಿಹೆಚ್‌ಪಿಗೆ ಕ್ಷಮಾಪನಾ ಪತ್ರ ಬರೆದ ಝೀ ಸ್ಟುಡಿಯೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...