Homeಮುಖಪುಟ'ಒಂದು ರಾಷ್ಟ್ರ, ಒಂದು ಚುನಾವಣೆ' ಪರಿಕಲ್ಪನೆ ಒಪ್ಪಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆ ಒಪ್ಪಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

- Advertisement -
- Advertisement -

‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯನ್ನು ವಿರೋಧಿಸಿರುವ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ಇದು ಸಂವಿಧಾನದ ಮೂಲ ರಚನೆಯನ್ನು ಬುಡಮೇಲು ಮಾಡುವ ವಿನ್ಯಾಸವಾಗಿದೆ’ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಗುರುವಾರ ಮಾತನಾಡಿರುವ ಅವರು, ‘ಪ್ರಜಾಪ್ರಭುತ್ವದಲ್ಲಿ ನಿರಂಕುಶ ಪ್ರಭುತ್ವವನ್ನು ಅನುಮತಿಸುವ ವ್ಯವಸ್ಥೆಯನ್ನು ರಚಿಸಿದ್ದಾರೆ. ಆದರೆ, ನಾನು ನಿರಂಕುಶಾಧಿಕಾರದ ವಿರುದ್ಧವಿದ್ದೇನೆ. ಒಂದು ರಾಷ್ಟ್ರ, ಒಂದು ಚುನಾವಣೆ ಕಲ್ಪನೆಯನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ತೀವ್ರವಾಗಿ ಟೀಸಿದ ಮಮತಾ ಬ್ಯಾನರ್ಜಿ, ‘ಅವರು ದೇಶದ ಒಕ್ಕೂಟ ರಚನೆಯನ್ನು ಬುಡಮೇಲು ಮಾಡಿದ್ದಾರೆ. ನೀವು ಕೆಲವು ರೀತಿಯ ಏಕಪಕ್ಷೀಯ ತೀರ್ಮಾನ ತೆಗೆದುಕೊಳ್ಳುವಂತೆ ತೋರುತ್ತಿದೆ. ಕೇಂದ್ರ ಸರ್ಕಾರವು ಈಗಾಗಲೇ ತೆಗೆದುಕೊಂಡಿರುವ ‘ನಿರ್ಧಾರ’ವು ನಿಜವಾದ ಪ್ರಜಾಸತ್ತಾತ್ಮಕ ಮತ್ತು ಒಕ್ಕೂಟ ಮನೋಭಾವಕ್ಕೆ ವಿರುದ್ಧವಾದ ರಚನೆಯನ್ನು ಹೇರುತ್ತದೆ’ ಎಂದು ಆರೋಪಿಸಿದ್ದಾರೆ.

ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಕಾರ್ಯದರ್ಶಿ ಡಾ. ನಿತೇನ್ ಚಂದ್ರ ಅವರಿಗೆ ಬರೆದ ವಿವರವಾದ ಪತ್ರದಲ್ಲಿ ‘ಕೇಂದ್ರ ಸರ್ಕಾರದ ಒಂದು ರಾಷ್ಟ್ರ, ಒಂದು ಚುನಾವಣೆ ತತ್ವದಲ್ಲಿರುವ ಮೂಲಭೂತ ಪರಿಕಲ್ಪನಾ ತೊಂದರೆಗಳ’ ಬಗ್ಗೆ ಪ್ರಶ್ನಿಸಿದ್ದಾರೆ.

‘ಒಂದು ರಾಷ್ಟ್ರ’ ಎಂಬ ಪದದ ಸಾಂವಿಧಾನಿಕ ಮತ್ತು ರಚನಾತ್ಮಕ ಪರಿಣಾಮಗಳ ಬಗ್ಗೆ ಹಾಗೂ ಅಸ್ತಿತ್ವದಲ್ಲಿರುವ ಸಂಸತ್ ಮತ್ತು ವಿಧಾನಸಭೆ ಚುನಾವಣೆಗಳ ಸಮಯದಲ್ಲಿ ಕುರಿತಾದ ಗೊಂದಲಗಳ ಬಗ್ಗೆ ಸ್ಪಷ್ಟನೆ ಕೇಳಿದ್ದಾರೆ.

‘1952 ರಲ್ಲಿ, ಮೊದಲ ಸಾರ್ವತ್ರಿಕ ಚುನಾವಣೆಯನ್ನು ಕೇಂದ್ರ ಮತ್ತು ರಾಜ್ಯಗಳಿಗೆ ಏಕಕಾಲದಲ್ಲಿ ನಡೆಸಲಾಯಿತು. ಕೆಲವು ವರ್ಷಗಳಿಂದ ಅಂತಹ ಏಕಕಾಲಿಕತೆ ಇತ್ತು. ಆದರೆ ನಂತರ ಈ ವ್ಯವಸ್ಥೆ ಛಿದ್ರಗೊಂಡಿದೆ. ವಿವಿಧ ರಾಜ್ಯಗಳು ಈಗ ವಿಭಿನ್ನ ಚುನಾವಣಾ ಕ್ಯಾಲೆಂಡರ್‌ಗಳನ್ನು ಹೊಂದಿವೆ. ಅವು ರಾಜಕೀಯ ಬೆಳವಣಿಗೆಗಳಿಂದಾಗಿ ಬದಲಾವಣೆಗಳಿಗೆ ಒಳಗಾಗುತ್ತವೆ. ಚುನಾವಣೆಗಳನ್ನು ನಿರೀಕ್ಷಿಸದ ರಾಜ್ಯಗಳು ಸಹಬಾಳ್ವೆಯ ಪರಿಚಯಕ್ಕಾಗಿ (ಅವುಗಳನ್ನು) ನಡೆಸುವಂತೆ ಒತ್ತಾಯಿಸಬಾರದು’ ಎಂದು ಅವರು ಒತ್ತಿ ಹೇಳಿದರು.

‘ಲೋಕಸಭೆ ಅಥವಾ ವಿಧಾನಸಭೆಯು ಅಕಾಲಿಕ ವಿಸರ್ಜನೆಗೆ ಒಳಪಟ್ಟರೆ ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯಲ್ಲಿ ಮೂಡುವ ಸಂಭಾವ್ಯ ಬಿರುಕುಗಳನ್ನು ಸಹ ಸಹ ಬ್ಯಾನರ್ಜಿ ಗುರುತಿಸಿದ್ದಾರೆ. ‘ಕೇಂದ್ರ ಸರ್ಕಾರದ ಅಸ್ಥಿರತೆಯು ರಾಜ್ಯ ಶಾಸಕಾಂಗಗಳನ್ನು ಅಸ್ಥಿರಗೊಳಿಸಬಾರದು’ ಅವರು ಎಚ್ಚರಿಸಿದರು.

‘ಸಹಬಾಳ್ವೆಯ ಪರಿಚಯದ ಈ ಮೂಲಭೂತ ಸಮಸ್ಯೆಯನ್ನು ನಿಮ್ಮ ಗೌರವಾನ್ವಿತ ಸಮಿತಿಯು ಹೇಗೆ ಪರಿಹರಿಸಲಿದೆ ಎಂಬುದು ಸ್ಪಷ್ಟವಾಗಿಲ್ಲ’ ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿರುವ ಅವರು, ಸಾಮಾನ್ಯ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಸೇರಿದಂತೆ ಹಲವಾರು ಸಣ್ಣ ಆಕ್ಷೇಪಣೆಗಳನ್ನು ಸಹ ಅವರು ಗುರುತಿಸಿದ್ದಾರೆ. ಜತೆಗೆ, ಸಮಿತಿಯಲ್ಲಿ ರಾಜ್ಯದ ಮುಖ್ಯಮಂತ್ರಿಗಳನ್ನು ಸೇರಿಸುವಲ್ಲಿ ಅವರು ವಿಫಲವಾಗಿದ್ದಾರೆ ಎಂದು ಟೀಕಿಸಿದ್ದಾರೆ.

‘ನಿಮ್ಮ ಪತ್ರವ್ಯವಹಾರದ ಅವಧಿ ಮತ್ತು ನೀವು ಅರೆಬೆಂದ ಊಹೆಗಳನ್ನು ಸತ್ಯವೆಂದು ಒಪ್ಪಿಕೊಳ್ಳುವ ವಿಧಾನದಿಂದ, ಪ್ರಕರಣದ ನ್ಯೂನತೆಗಳನ್ನು ವಿಶ್ಲೇಷಿಸಲು ಸಮಿತಿಯು ಗಂಭೀರವಾಗಿ ಆಸಕ್ತಿ ಹೊಂದಿದೆಯೇ ಎಂದು ನಾವು ಅನುಮಾನಿಸಬೇಕಾಗುತ್ತದೆ. ಈ ಸನ್ನಿವೇಶದಲ್ಲಿ, ನೀವು ರೂಪಿಸಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಯನ್ನು ನಾನು ಒಪ್ಪಲು ಸಾಧ್ಯವಿಲ್ಲ. ನಿಮ್ಮ ಸೂತ್ರೀಕರಣ ಮತ್ತು ಪ್ರಸ್ತಾಪವನ್ನು ನಾವು ಒಪ್ಪುವುದಿಲ್ಲ’ ಎಂದು ಒತ್ತಿ ಹೇಳಿದ್ದಾರೆ.

‘1967 ರವರೆಗೆ, ಚುನಾವಣೆಗಳು ಏಕಕಾಲದಲ್ಲಿ ನಡೆಯುತ್ತಿದ್ದವು; ಅಂತಹ ನಾಲ್ಕು ಚುನಾವಣೆಗಳು ರೀತಿಯಲ್ಲಿ ನಡೆಯಿತು. 1970ರಲ್ಲಿ ಲೋಕಸಭೆಯಂತೆಯೇ ಕೆಲವು ರಾಜ್ಯಗಳ ಅಸೆಂಬ್ಲಿಗಳು ಅವಧಿಗೆ ಮುನ್ನವೇ ವಿಸರ್ಜನೆಯಾದ ನಂತರ 1968-69ರಲ್ಲಿ ಈ ಪದ್ಧತಿಯನ್ನು ನಿಲ್ಲಿಸಲಾಯಿತು.

ಇದನ್ನೂ ಓದಿ; ರಾಜೌರಿ-ಪೂಂಚ್‌ನಲ್ಲಿ ಭಯೋತ್ಪಾದನೆ ಹೆಚ್ಚಳ; ಕಳವಳ ವ್ಯಕ್ತಪಡಿಸಿದ ಸೇನಾ ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...