Homeಮುಖಪುಟಪ್ರತಿಭಟನೆ ನಡೆಸುತ್ತಿದ್ದ ಭಾರತೀಯ ಕಾರ್ಮಿಕರನ್ನು ಥಳಿಸಿದ ಜೋರ್ಡಾನ್ ಪೊಲೀಸರು

ಪ್ರತಿಭಟನೆ ನಡೆಸುತ್ತಿದ್ದ ಭಾರತೀಯ ಕಾರ್ಮಿಕರನ್ನು ಥಳಿಸಿದ ಜೋರ್ಡಾನ್ ಪೊಲೀಸರು

- Advertisement -
- Advertisement -

ಜೋರ್ಡಾನ್‌ನಲ್ಲಿ ಕೆಲಸ ನೀಡಿರುವ ಅಸೀಲ್ ಯೂನಿವರ್ಸಲ್ ಗಾರ್ಮೆಂಟ್ಸ್‌ನಿಂದ ಅಕ್ರಮವಾಗಿ ಇರಿಸಲ್ಪಟ್ಟಿದ್ದಾರೆ ಎನ್ನಲಾದ ಕಾರ್ಮಿಕರು ನ್ಯಾಯಾಲಯದ ಹೊರಗೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾಗ ಜೋರ್ಡನ್ ಪೊಲೀಸರು ಅಮಾನವೀಯವಾಗಿ ಥಳಿದ್ದಾರೆ ಎಂದು ‘ದಿ ನ್ಯೂಸ್ ಮಿನಿಟ್’ ವರದಿ ಮಾಡಿದೆ.

ಜ 8ರಂದು ಅವರಿಗೆ ಬರಬೇಕಾದ ಬಾಕಿ ವೇತನ ನೀಡುವಂತೆ ಒತ್ತಾಯಿಸಿ ಹಾಗೂ ಆಯಾ ದೇಶಗಳಿಗೆ ವಾಪಸ್ ಕಳುಹಿಸುವಂತೆ ಒತ್ತಾಯಿಸುತ್ತಿದ್ದರು. ಪೊಲೀಸರು ಮಾತುಕತೆ ನಡೆಸದೆ ಗುಂಪನ್ನು ಚದುರಿಸಲು ಪ್ರಯತ್ನಿಸಿದಾಗ, ಪರಿಸ್ಥಿತಿ ಉಲ್ಬಣಗೊಂಡಿದೆ. ಅವರು ಅಂತಿಮವಾಗಿ ಪ್ರತಿಭಟನಾಕಾರರ ಮೇಲೆ ಚಾರ್ಜ್ ಮಾಡಿದ್ದಾರೆ. ಈ ಘಟನೆಯಲ್ಲಿ ಏಳು ಭಾರತೀಯರು ಸೇರಿದಂತೆ, ಇತರ ದೇಶಗಳ 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಅಸೀಲ್ ಯೂನಿವರ್ಸಲ್ ಗಾರ್ಮೆಂಟ್ಸ್ ತಿಂಗಳಿನಿಂದ ಹಲವಾರು ಕಾರ್ಮಿಕರಿಗೆ ವೇತನ ನೀಡದೆ, ಕಾರ್ಮಿಕರನ್ನು ಕೆಲಸದ ಪರವಾನಗಿ ಮತ್ತು ವೀಸಾ ಕಸಿದುಕೊಂಡಿದೆ. ಭಾರತೀಯ ಪ್ರಜೆಗಳು ನವೆಂಬರ್‌ನಲ್ಲಿ ಜೋರ್ಡಾನ್‌ನ ಕಾರ್ಮಿಕ ನ್ಯಾಯಾಲಯದಲ್ಲಿ ಅಸೀಲ್ ವಿರುದ್ಧ ಪ್ರಕರಣವನ್ನು ದಾಖಲಿಸಿ ಗೆದ್ದಿದ್ದರು. ಎಲ್ಲ ಬಾಕಿಗಳನ್ನು ಪಾವತಿಸಲು ಮತ್ತು ಕಾರ್ಮಿಕರನ್ನು ಅವರ ದೇಶಗಳಿಗೆ ಕಳುಹಿಸುವಂತೆ ನ್ಯಾಯಾಲಯವು ಕಂಪನಿಗೆ ಆದೇಶಿಸಿದೆ. ಆದರೆ, ಕಂಪನಿ ಆದೇಶವನ್ನು ಪಾಲಿಸಿಲ್ಲ ಎನ್ನಲಾಗಿದೆ. ಕಾರ್ಮಿಕರಿಗೆ ನೀಡಿರುವ ವಸತಿ ಹಾಸ್ಟೆಲ್‌ಗಳಲ್ಲಿ ಆಹಾರ ಮತ್ತು ನೀರನ್ನು ನಿರಾಕರಿಸಲಾಗಿದೆ ಎಂದು ವರದಿಯಾಗಿದ್ದು, ರೊಚ್ಚಿಗೆದ್ದ ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು.

ಜನವರಿ 8ರಂದು ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಜೋರ್ಡಾನ್ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಪ್ರತಿಭಟನಾಕಾರರ ಮೇಲೆ ಚಾರ್ಜ್ ಮಾಡಿ, ಹಲವಾರು ಜನರು ಗಾಯಗೊಂಡರು. ಗಾಯಗೊಂಡವರಲ್ಲಿ ಏಳು ಮಂದಿ ಭಾರತೀಯರು. ರಾಜೂಕುಮಾರ್, ವಿಲ್ಸನ್, ಅಮೀರ್, ಮೊಹಮ್ಮದ್ ಸಮೀಮ್, ಸಂಜಯ್, ಮುನ್ನಾ ಮತ್ತು ಸಂತೋಷ್ ಎಂದು ತಮಿಳುನಾಡಿನ ಅರಿಯಲೂರು ಮೂಲದ ಪವೇಂದನ್ ರಾಜವೇಲ್ ಅವರು ಟಿಎನ್ಎಮ್‌ಗೆ ಹೇಳಿದ್ದಾರೆ.

‘ನಾವು ಶಾಂತಿಯುತವಾಗಿ ಪ್ರತಿಭಟಿಸುತ್ತೇವೆ ಎಂದು ನಾವು ಪೊಲೀಸರೊಂದಿಗೆ ವಾದಿಸುತ್ತಿದ್ದೆವು. ಕೂಡಲೇ ಅವರು ನಮ್ಮ ಮೇಲೆ ಚಾರ್ಜ್ ಮಾಡಿ, ಅಶ್ರುವಾಯು ಹಾರಿಸಿದರು. ಶ್ರೀಲಂಕಾ ಮತ್ತು ಬಾಂಗ್ಲಾದೇಶದ ಅನೇಕ ಮಹಿಳೆಯರು ತೀವ್ರವಾಗಿ ಗಾಯಗೊಂಡಿದ್ದಾರೆ. ಉಳಿದವರು ಪ್ರಾಣ ರಕ್ಷಣೆಗಾಗಿ ಓಡಿದೆವು. ನಂತರ ನಾವು ಸಾಧ್ಯವಾದಷ್ಟು ಗಾಯಾಳುಗಳನ್ನು ಹೊತ್ತುಕೊಂಡು ಆಸ್ಪತ್ರೆಗೆ ದಾಖಲಿಸಿದೆವು’ ಎಂದು ಘಟನೆ ಬಗ್ಗೆ ವಿವರಿಸಿದ್ದಾರೆ.

ಗಾಯಗೊಂಡ ಭಾರತೀಯರಲ್ಲಿ ಒಬ್ಬರಾದ ಬಿಹಾರ ಮೂಲದ ಮುನ್ನಾ ಮಾತನಾಡಿ, ‘ಪೊಲೀಸರು ಪದೇ ಪದೇ ತನ್ನ ತಲೆಗೆ ಹೊಡೆದಿದ್ದಾರೆ. ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದೆವು. ಪೊಲೀಸರು ಬಂದು ಮೊದಲು ನಮ್ಮ ಪ್ಯಾಂಟ್ ಪಾಕೆಟ್‌ಗಳನ್ನು ಪರಿಶೀಲಿಸಿದರು. ನಂತರ ಬಂದು ನಮ್ಮನ್ನು ಎಳೆದುಕೊಂಡು ಹೋಗಿ ಥಳಿಸಿದ್ದಾರೆ. ಅವರು ನೇರವಾಗಿ 30 ನಿಮಿಷಗಳ ಕಾಲ ನನ್ನನ್ನು ಹೊಡೆದರು. ಅವರು ಪದೇಪದೇ ನನ್ನ ತಲೆಗೆ ಹೊಡೆದರು ಮತ್ತು ನಾವು ಮತ್ತೆ ಪ್ರತಿಭಟನೆ ಮಾಡುವ ಧೈರ್ಯ ಮಾಡಬಾರದು ಎಂದು ಹೇಳುತ್ತಲೇ ಇದ್ದರು’ ಎಂದು ಅವರು ಹೇಳಿದರು.

ಹಲವಾರು ತಿಂಗಳಿನಿಂದ ಕಾರ್ಮಿಕರಿಗೆ ಸಂಬಳ ಸಿಗದ ಕಾರಣ ಅವರಲ್ಲಿ ಹಲವರಿಗೆ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿಲ್ಲ. ‘ಇತರ ಕಾರ್ಖಾನೆಗಳಲ್ಲಿ ಮತ್ತು ಹತ್ತಿರದ ಹೋಟೆಲ್‌ಗಳಲ್ಲಿ ಕೆಲಸ ಮಾಡುವ ಕೆಲವು ಭಾರತೀಯರು ಬಂದು ನಮಗೆ ಸಹಾಯ ಮಾಡಿದರು. ಅವರು ನಮಗೆ ಆಹಾರವನ್ನು ಕೊಟ್ಟು, ಆಸ್ಪತ್ರೆ ಬಿಲ್ಲುಗಳನ್ನು ಪಾವತಿಸಲು ನಮಗೆ ಸಹಾಯ ಮಾಡಿದರು. ನಾವು ಭಾರತೀಯ ರಾಯಭಾರ ಕಚೇರಿಗೆ ಮಾಹಿತಿ ನೀಡಿ ಸಹಾಯ ಮಾಡುವಂತೆ ಕೇಳಿಕೊಂಡೆವು. ಅವರು ಸಹಾಯ ಮಾಡುವುದಾಗಿ ಹೇಳಿದರು. ಆದರೆ, ನಾಲ್ಕು ದಿನಗಳು ಕಳೆದಿವೆ; ಅವರು ನಮ್ಮ ರಕ್ಷಣೆಗೆ ಬಂದಿಲ್ಲ’ ಎಂದು ಪಾವೇಂದನ್ ಎನ್ನುವವರು ಅಸಮಾಧಾನ ಹೊರಹಾಕಿದ್ದಾರೆ.

120 ಭಾರತೀಯ ಕಾರ್ಮಿಕರಲ್ಲಿ, ನಾಲ್ವರು ತಮಿಳುನಾಡಿಗೆ ಸೇರಿದವರಾಗಿದ್ದು, ಹೆಚ್ಚಿನವರು ಬಿಹಾರ ಮತ್ತು ಉತ್ತರ ಪ್ರದೇಶಕ್ಕೆ ಸೇರಿದವರು.

ಇದನ್ನೂ ಓದಿ; ತಮಿಳುನಾಡು: ದಲಿತ ಯುವಕನನ್ನು ಮದುವೆಯಾದ ಯುವತಿ; ಪೋಷಕರಿಂದ ಮಾರ್ಯಾದೆಗೇಡು ಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...