Homeಕರ್ನಾಟಕಉಪಚುನಾವಣೆ - ಬಿಜೆಪಿ ಉಪೇಕ್ಷೆ: ಬಂದ್ರೆ ಬೆಟ್ಟ..... ಹೋದ್ರೆ....

ಉಪಚುನಾವಣೆ – ಬಿಜೆಪಿ ಉಪೇಕ್ಷೆ: ಬಂದ್ರೆ ಬೆಟ್ಟ….. ಹೋದ್ರೆ….

- Advertisement -
- Advertisement -

ಅನರ್ಹ ಶಾಸಕರ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ, ಪ್ರಚಾರಕ್ಕೆ ಅಣಿಯಾಗುತ್ತಿದ್ದರೆ ಬಿಜೆಪಿ ಪಾಳೆಯದಲ್ಲಿ ಸದ್ದೇ ಇಲ್ಲ. ಅದರಲ್ಲೂ ಬೆಳಗಾವಿಯಲ್ಲಿ (ಈ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಬೇಕಿದೆ) ಬೃಹತ್ ಪ್ರತಿಭಟನೆ ಮತ್ತು ಹೊಸಕೋಟೆಯಲ್ಲಿ ಸಮಾವೇಶ ಮಾಡಿರುವ ಕಾಂಗ್ರೆಸ್ ‘ಇವರನ್ನು ಸೋಲಿಸಿಯೇ ಸಿದ್ಧ’ ಎಂದು ಪಣ ತೊಟ್ಟಂತಿದೆ. ಕೆಪಿಸಿಸಿ ಕಚೇರಿಯಲ್ಲಿ ಸಭೆಗಳ ಮೇಲೆ ಸಭೆಗಳು ನಡೆಯುತ್ತಿದ್ದು, ಪ್ರತಿ ಕ್ಷೇತ್ರಕ್ಕೂ ವೀಕ್ಷಕರ ನೇಮಕಾತಿಯಾಗಿಯೇ ಒಂದು ತಿಂಗಳಾಗಿದೆ. ಜೆಡಿಎಸ್ ಸಹಾ ಅದರ ಸಾರಥಿಗಳ ನೇತೃತ್ವದಲ್ಲಿ ಸಭೆಗಳನ್ನು ನಡೆಸಿದೆ. ಯಡಿಯೂರಪ್ಪನವರು ಮತ್ತು ಅನರ್ಹ ಶಾಸಕರು ಭೇಟಿ ಮಾಡಿ ಚರ್ಚಿಸಿದ್ದಾರಾದರೂ, ಬಿಜೆಪಿ ಕಚೇರಿ ಹಾಗೂ ಸಂಘಟನೆಗೂ ಈ ಉಪಚುನಾವಣೆಗೂ ಯಾವುದೇ ಸಂಬಂಧವಿಲ್ಲದಂತೆ ಇವೆ.

ಈ ಉಪಚುನಾವಣೆ ಏನಿದ್ದರೂ ಆಯಾ ಅನರ್ಹ ಶಾಸಕರು ಮತ್ತು ಯಡಿಯೂರಪ್ಪನವರಿಗೆ ಸಂಬಂಧಿಸಿದ್ದು ಎಂಬಂತೆ ಬಿಜೆಪಿಯು ವರ್ತಿಸುತ್ತಿದೆ. ಬಿಜೆಪಿ ಯಾವಾಗಲೂ ಗೆಲ್ಲುತ್ತಾ ಬಂದಿರುವುದು ಮತದಾರರು ತಮ್ಮಂತೆ ತಾವೇ ಆ ಪಕ್ಷದ ಜೊತೆಗೆ ಇದ್ದಾರೆ ಎಂಬ ಕಾರಣಕ್ಕಲ್ಲ. ಸಂಘಪರಿವಾರದ ಸಂಘಟನೆಗಳು ಮತ್ತು ಚುನಾವಣಾ ಯಂತ್ರಾಂಗ ವ್ಯವಸ್ಥಿತವಾಗಿ ಫೀಲ್ಡಿಗಿಳಿಯುತ್ತಾರೆ. ಈ ಸಾರಿ ಆ ರೀತಿ ಆಗಲಿಕ್ಕಿಲ್ಲ ಎಂಬ ಸ್ಪಷ್ಟ ಸೂಚನೆಗಳು ಈಗಾಗಲೇ ಸಂಭವಿಸಿವೆ.

ಇದಕ್ಕೆ ಕಾರಣಗಳು ಮೂರು. ಒಂದು, ಸದರಿ ಅನರ್ಹ ಶಾಸಕರು ಸಂಘಪರಿವಾರದ ಮೂಲದವರಲ್ಲ. ಬಹಳ ಕೆಟ್ಟ ರೀತಿಯಲ್ಲಿ ಆಮಿಷಕ್ಕೊಳಗಾಗಿ ಬಿಜೆಪಿಯ ಕಡೆಗೆ ಬಂದವರು. ಹಾಗಾಗಿ ಮುಂದೆಯೂ ಇವರ ನಿಷ್ಠೆ ಸಂಶಯಾಸ್ಪದ. ಎರಡು, ಇವರು ಗೆದ್ದ ಬಂದರೆ ಬಿಜೆಪಿ ಪ್ರಬಲವಾಗುತ್ತದೆ ಎಂಬುದಕ್ಕಿಂತ ಯಡಿಯೂರಪ್ಪನವರು ಪ್ರಬಲರಾಗುತ್ತಾರೆ; ಇದು ಬಿಜೆಪಿಯ ತ್ರೈಕಮ್ಯಾಂಡ್‍ಗೆ (ಮೋದಿ, ಶಾ, ಸಂತೋಷ್) ಬೇಕಿಲ್ಲ.

ಮೂರನೆಯದ್ದೇ ಮುಖ್ಯವಾದುದು. ಪ್ರತಿ ಕ್ಷೇತ್ರದಲ್ಲಿರುವ ಬಿಜೆಪಿಯ ಹಳೆಯ ಕಾರ್ಯಕರ್ತರು, ಪಕ್ಷವನ್ನು ಈ ಪಕ್ಷಾಂತರಿಗಳ ಗೆಲುವಿಗೆ ದುಡಿಸಿದರೆ ಮುಂದೆ ಅದರಿಂದ ಬಿಜೆಪಿಗೆ ಅನುಕೂಲವಾಗುತ್ತದೋ ಇಲ್ಲವೋ ಹೇಳಲು ಬರುವುದಿಲ್ಲ. ಇವರುಗಳು ಸೋಲಲೂಬಹುದು. ಅಂತಹ ಸಂದರ್ಭದಲ್ಲಿ ಸರ್ಕಾರವೇ ಬಿದ್ದು ಹೋಗಿ, ಅನರ್ಹ ಶಾಸಕರೂ ಬಿಜೆಪಿಯಲ್ಲಿ ಉಳಿಯದೇ, ಹಳೆಯ ಕಾರ್ಯಕರ್ತರೂ ಮುನಿಸಿಕೊಂಡರೆ ಪಕ್ಷಕ್ಕೆ ಡ್ಯಾಮೇಜು. ಅದರ ಬದಲಿಗೆ, ನಮ್ಮ ಸಂಘಟನೆ ನಾವು ಉಳಿಸಿಕೊಂಡರೆ ಮುಂದಿನ ಚುನಾವಣೆಯಲ್ಲಾದರೂ ಅನುಕೂಲವಾಗುತ್ತದೆ. ಸರ್ಕಾರ ಬಿದ್ದು ಹೋದರೆ ಒಳ್ಳೆಯದೇ. ಮಧ್ಯಂತರ ಚುನಾವಣೆಯಲ್ಲಿ ಗೆದ್ದು ಬರೋಣ ಎಂಬುದು ಬಿಜೆಪಿ ಪಕ್ಷದ ಇರಾದೆ.

ಒಂದು ವೇಳೆ ಹೆಚ್ಚಿನ ಬಿಜೆಪಿ ಅಭ್ಯರ್ಥಿಗಳು ಗೆದ್ದು ಬಂದರೆ ಅದೂ ಒಳ್ಳೆಯದೇ. ಸರ್ಕಾರ ಉಳಿದುಕೊಳ್ಳುತ್ತದೆ. ಮೂವರು ಉಪಮುಖ್ಯಮಂತ್ರಿಗಳ ಮೂಲಕ ಯಡಿಯೂರಪ್ಪನವರನ್ನು ನಿಯಂತ್ರಿಸುತ್ತಾ, ಪಕ್ಷವನ್ನು ಬೆಳೆಸಿಕೊಳ್ಳೋಣ. ನಂತರ ನೋಡೋಣ ಎಂದು ಬಿಜೆಪಿಯು ಭಾವಿಸಿದೆ. ಹಾಗಾಗಿಯೇ ತಳಮಟ್ಟದಲ್ಲಾಗಲೀ, ಮೇಲ್ಮಟ್ಟದಲ್ಲಾಗಲೀ ಬಿಜೆಪಿ ಪಕ್ಷವು ಯಾವ ತಯಾರಿಯನ್ನೂ ನಡೆಸದೇ ಸುಮ್ಮನೇ ಕುಳಿತಿದೆ. ಹಾಗಾಗಿಯೇ ಅವರ ಮಟ್ಟಿಗೆ ಇದೊಂಥರಾ ಬಂದ್ರೆ ಬೆಟ್ಟ, ಹೋದ್ರೆ . .. .. ಎಂಬಂತಿದೆ ಎಂಬುದು ಬಿಜೆಪಿಯ ವಲಯಗಳಲ್ಲಿ ಕೇಳಿ ಬರುತ್ತಿರುವ ಮಾತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...