Homeಮುಖಪುಟ'ಚುನಾವಣಾ ಆಯುಕ್ತರ ಕಾಯ್ದೆ' ಜಾರಿಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

‘ಚುನಾವಣಾ ಆಯುಕ್ತರ ಕಾಯ್ದೆ’ ಜಾರಿಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

- Advertisement -
- Advertisement -

ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಕಛೇರಿಯ ಅವಧಿ) ಕಾಯಿದೆ-2023ರ ಸೆಕ್ಷನ್ 7 ಮತ್ತು 8ರ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಇಂದು (ಜ12) ಸಮ್ಮತಿಸಿದೆ. ಆದರೆ, ಕಾನೂನಿಗೆ ತಕ್ಷಣ ತಡೆ ನೀಡಲು ನಿರಾಕರಿಸಿದೆ.

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆಗೊಂಡು, ಕಳೆದ ಡಿಸೆಂಬರ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹಿ ಹಾಕುವ ಮೂಲಕ ಚುನಾವಣಾ ಆಯುಕ್ತರ ನೇಮಕಾತಿ, ನಿಯಂತ್ರಣ ಕಾಯ್ದೆ ಜಾರಿಗೆ ಬಂದಿದೆ.

ಇದರ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಸಂವಿಧಾನದ 32ನೇ ವಿಧಿ ಅಡಿಯಲ್ಲಿ ಮಧ್ಯಪ್ರದೇಶದ ಮಹಿಳಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಜಯಾ ಠಾಕೂರ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ವಿಚಾರಣೆ ನಡೆಸುತ್ತಿದೆ.

ನೂತನ ಕಾನೂನು, ಶಾಸಕಾಂಗ ಕ್ರಮದ ಮೂಲಕ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರನ್ನು ನೇಮಿಸುವ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಕೈಬಿಟ್ಟಿದೆ.

ಅರ್ಜಿ ವಿಚಾರಣೆ ವೇಳೆ, ಠಾಕೂರ್ ಪರ ವಾದ ಮಂಡಿಸಿದ ಹಿರಿಯ ವಕೀಲ ವಿಕಾಸ್ ಸಿಂಗ್, ಈ ಕಾಯಿದೆಯು ನಮ್ಮ ಸಂವಿಧಾನದ ಮೂಲ ರಚನೆಯಾದ ಅಧಿಕಾರಗಳ ಪ್ರತ್ಯೇಕತೆಯ ಸಿದ್ಧಾಂತದ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ. ಹೊಸ ಕಾನೂನು ಸಂವಿಧಾನದ 14, 21, 50 ಮತ್ತು 324 ನೇ ವಿಧಿಗಳನ್ನು ಉಲ್ಲಂಘಿಸುತ್ತದೆ ಎಂದು ಜಯಾ ಠಾಕೂರ್ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ.

ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸಲು ಸ್ವತಂತ್ರ, ನಿಷ್ಪಕ್ಷಪಾತ ಆಯ್ಕೆ ಸಮಿತಿಯ ಅಗತ್ಯತೆಯಿದೆ. ಅದನ್ನು ರಚಿಸಲು ಮತ್ತು ನಿಯಂತ್ರಿಸಲು ಸಂಸತ್ ಕಾನೂನು ಜಾರಿಗೊಳಿಸುವವರೆಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಲ್ಲಿ ಇರಲಿದ್ದಾರೆ ಎಂದು 2023ರ ಮಾರ್ಚ್‌ನಲ್ಲಿ ನ್ಯಾಯಮೂರ್ತಿ ಅನೂಪ್ ಬರನ್ವಾಲ್ ಹೇಳಿದ್ದರು.

ಈ ಹಿನ್ನೆಲೆ ಡಿಸೆಂಬರ್‌ನಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಚುನಾವಣಾ ಆಯುಕ್ತರ ನೇಮಕಾತಿ, ಸೇವಾ ಷರತ್ತುಗಳು ಮತ್ತು ಕಛೇರಿಯ ಅವಧಿ ಮಸೂದೆ- 2023ರನ್ನು ಕೇಂದ್ರ ಸರ್ಕಾರ ಮಂಡಿಸಿ ಅನುಮೋದನೆ ಪಡೆದಿತ್ತು. ಇದಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಹಾಕಿದ್ದು, ಕಾನೂನು ಜಾರಿಯಾಗಿದೆ.

ಇದನ್ನೂ ಓದಿ: ಹೆಣ್ಣು ಹೆತ್ತಿದ್ದಕ್ಕೆ ಮಹಿಳೆ ಹೊಣೆಯಲ್ಲ, ಜನರಿಗೆ ಜಾಗೃತಿ ಮೂಡಿಸುವ ಅಗತ್ಯವಿದೆ: ದೆಹಲಿ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...