Homeಮುಖಪುಟಗಾಝಾದಲ್ಲಿ ಇಸ್ರೇಲ್‌ನಿಂದ ನರಮೇಧ: ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದ ಮಂಡಿಸಿದ ದ.ಆಫ್ರಿಕಾ

ಗಾಝಾದಲ್ಲಿ ಇಸ್ರೇಲ್‌ನಿಂದ ನರಮೇಧ: ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದ ಮಂಡಿಸಿದ ದ.ಆಫ್ರಿಕಾ

- Advertisement -
- Advertisement -

ಗಾಝಾ ಮೇಲಿನ ಇಸ್ರೇಲ್‌ ದಾಳಿಯನ್ನು ‘ನರಮೇಧ’ ಎಂದು ಬಣ್ಣಿಸಿರುವ ದಕ್ಷಿಣ ಆಫ್ರಿಕಾ ಅಂತಾರಾಷ್ಟ್ರೀಯ ನ್ಯಾಯಾಲಯ (ಇಂಟರ್‌ ನ್ಯಾಷನಲ್‌ ಕೋರ್ಟ್‌ ಆಫ್ ಜಸ್ಟೀಸ್‌) ಕ್ಕೆ ಅರ್ಜಿ ಸಲ್ಲಿಸಿದೆ. ಈ ಅರ್ಜಿಯ ವಿಚಾರಣೆ ಗುರುವಾರ ಪ್ರಾರಂಭಗೊಂಡಿದೆ.

ಡಿಸೆಂಬರ್ 29ರಂದು ವಿಶ್ವಸಂಸ್ಥೆಯ ಭಾಗವಾಗಿರುವ ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಇಸ್ರೇಲ್ ವಿರುದ್ಧ ದಕ್ಷಿಣ ಆಫ್ರಿಕಾ ಅರ್ಜಿ ಸಲ್ಲಿಸಿದೆ. ಈ ಅರ್ಜಿಯಲ್ಲಿ, ಇಸ್ರೇಲ್ 1948ರ ನರಮೇಧ ತಡೆ ಸಮಾವೇಶ (ಜಿನೋಸೈಡ್ ಕನ್ವೆನ್ಷನ್) ನ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಆಫ್ರಿಕಾ ಆರೋಪಿಸಿದ್ದು, ಗಾಝಾದ ಮೇಲಿನ ದಾಳಿಯನ್ನು ತಕ್ಷಣ ನಿಲ್ಲಿಸಲು ಇಸ್ರೇಲ್‌ಗೆ ಸೂಚಿಸುವಂತೆ ಕೋರಿದೆ.

ದಕ್ಷಿಣ ಆಫ್ರಿಕಾದ ವಾದವನ್ನು ಇಸ್ರೇಲ್ ತಳ್ಳಿ ಹಾಕಿದ್ದು, ನರಮೇಧ ಆರೋಪ ವಾಸ್ತವಕ್ಕೆ ದೂರವಾಗಿದೆ. ದಕ್ಷಿಣ ಆಫ್ರಿಕಾದ ಅರ್ಜಿಗೆ ಕಾನೂನು ಆಧಾರವಿಲ್ಲ. ದಕ್ಷಿಣ ಆಫ್ರಿಕಾ ಭಯೋತ್ಪಾದಕ ಸಂಘಟನೆಗಳಿಗೆ ಇಸ್ರೇಲ್‌ ಮೇಲೆ ದಾಳಿ ಮಾಡುವಂತೆ ಪ್ರೇರೇಪಿಸುತ್ತಿದೆ. ಹಾಗಾಗಿ, ಆ ಅರ್ಜಿಯನ್ನು ಪರಿಗಣಿಸಬಾರದು ಎಂದು ಹೇಳಿದೆ.

ವರ್ಲ್ಡ್ ಕೋರ್ಟ್ ಎಂದೂ ಕರೆಯಲ್ಪಡುವ ಹೇಗ್‌ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯ ಈ ವಾರ ಎರಡು ದಿನಗಳ ಕಾಲ ದಕ್ಷಿಣ ಆಫ್ರಿಕಾದಾ ಅರ್ಜಿಯ ವಿಚಾತರಣೆ ನಡೆಸಲಿದೆ. ಈ ಪ್ರಕರಣ ಇತ್ಯರ್ಥವಾಗಲು ವರ್ಷಗಳ ಸಮಯ ತೆಗೆದುಕೊಳ್ಳುವ ನಿರೀಕ್ಷೆಯಿದೆ.

ಜರ್ಮನಿಯ ನಾಝಿಗಳು ಯಹೂದಿಗಳ ನರಮೇಧ ನಡೆಸಿದ ಬಳಿಕ ನಡೆದ ಒಪ್ಪಂದದ ನಿಯಮಗಳನ್ನು ಇಸ್ರೇಲ್ ಸಂಪೂರ್ಣವಾಗಿ ಉಲ್ಲಂಘಿಸಿದೆ ಎಂದು ದಕ್ಷಿಣ ಆಫ್ರಿಕಾ ಆರೋಪಿಸಿದೆ.

ದಕ್ಷಿಣ ಆಫ್ರಿಕಾ ಹೇಳಿದ್ದೇನು?

ಇಸ್ರೇಲ್‌ ಗಾಝಾದಲ್ಲಿ ನರಮೇಧ ನಡೆಸುತ್ತಿದೆ ಎಂದು ದಕ್ಷಿಣ ಆಫ್ರಿಕಾ ಆರೋಪಿಸಿದ್ದು, ತಕ್ಷಣ ದಾಳಿ ನಿಲ್ಲಿಸಲು ಇಸ್ರೇಲ್‌ಗೆ ಸೂಚಿಸಬೇಕು ಎಂದು ಆಗ್ರಹಿಸಿದೆ. ಇಸ್ರೇಲ್‌ ಜಿನಿವಾ ನರಮೇಧ ತಡೆ ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದೆ.

ದಕ್ಷಿಣ ಆಫ್ರಿಕಾದ ಆಡಳಿತಾರೂಡ ಆಫ್ರಿಕನ್ ನ್ಯಾಷನಲ್ ಕಾಂಗ್ರೆಸ್ ಪಕ್ಷವು, ಗಾಝಾ ಮತ್ತು ದಕ್ಷಿಣ ದಂಡೆಯಲ್ಲಿ ಇಸ್ರೇಲ್‌ ನಡೆಸುತ್ತಿರುವ ಆಕ್ರಮಣವನ್ನು ತನ್ನದೇ ವರ್ಣಬೇಧ ನೀತಿಯ ಇತಿಹಾಸಕ್ಕೆ ಹೋಲಿಸಿದೆ. ಯಾಸರ್ ಅರಾಫತ್‌ನ ಪ್ಯಾಲೆಸ್ತೀನ್ ಲಿಬರೇಶನ್ ಆರ್ಗನೈಸೇಶನ್ (ಪಿಎಲ್‌ಒ) ಅನ್ನು ಆಫ್ರಿಕಾ ಸಮರ್ಥಿಸಿಕೊಂಡಿದೆ.

ಅಕ್ಟೋಬರ್ 7,2023ರಂದು ಪ್ರಾರಂಭಗೊಂಡ ಇಸ್ರೇಲ್‌-ಹಮಾಸ್ ಸಂಘರ್ಷದಲ್ಲಿ ಇದುವರೆಗ ಮೃತಪಟ್ಟ ಅಮಾಯಕ ಪ್ಯಾಲೆಸ್ತೀನಿಯರ ಸಂಖ್ಯೆ 23 ಸಾವಿರಕ್ಕೆ ತಲುಪಿದೆ. ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ದಾಳಿ ನಡೆಸಿದ್ದ ಗಾಝಾದ ಹಮಾಸ್ ಗುಂಪು ಸುಮಾರು 1,200 ಜನರನ್ನು ಹತ್ಯೆ ಮಾಡಿತ್ತು. 2ರಷ್ಟು ಜನರನ್ನು ಒತ್ತೆಯಾಳುಗಳಾಗಿ ಇಟ್ಟುಕೊಂಡಿತ್ತು. ಬಳಿಕ ಪ್ರಾರಂಭಗೊಂಡ ಇಸ್ರೇಲ್ ಆಕ್ರಮಣಕ್ಕೆ ಇದುವರೆಗೆ 23 ಸಾವಿರ ಜನರು ಬಲಿಯಾಗಿದ್ದಾರೆ.

ಇದನ್ನೂ ಓದಿ : ಅತ್ಯಾಚಾರ ಆರೋಪ: ನೇಪಾಳದ ವಿವಾದಾತ್ಮಕ ಧರ್ಮಗುರು ‘ಬುದ್ಧ ಬಾಲಕ’ನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...