Homeಮುಖಪುಟಗಾಝಾದಲ್ಲಿ ಇಸ್ರೇಲ್‌ನಿಂದ ನರಮೇಧ: ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದ ಮಂಡಿಸಿದ ದ.ಆಫ್ರಿಕಾ

ಗಾಝಾದಲ್ಲಿ ಇಸ್ರೇಲ್‌ನಿಂದ ನರಮೇಧ: ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದ ಮಂಡಿಸಿದ ದ.ಆಫ್ರಿಕಾ

- Advertisement -
- Advertisement -

ಗಾಝಾ ಮೇಲಿನ ಇಸ್ರೇಲ್‌ ದಾಳಿಯನ್ನು ‘ನರಮೇಧ’ ಎಂದು ಬಣ್ಣಿಸಿರುವ ದಕ್ಷಿಣ ಆಫ್ರಿಕಾ ಅಂತಾರಾಷ್ಟ್ರೀಯ ನ್ಯಾಯಾಲಯ (ಇಂಟರ್‌ ನ್ಯಾಷನಲ್‌ ಕೋರ್ಟ್‌ ಆಫ್ ಜಸ್ಟೀಸ್‌) ಕ್ಕೆ ಅರ್ಜಿ ಸಲ್ಲಿಸಿದೆ. ಈ ಅರ್ಜಿಯ ವಿಚಾರಣೆ ಗುರುವಾರ ಪ್ರಾರಂಭಗೊಂಡಿದೆ.

ಡಿಸೆಂಬರ್ 29ರಂದು ವಿಶ್ವಸಂಸ್ಥೆಯ ಭಾಗವಾಗಿರುವ ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಇಸ್ರೇಲ್ ವಿರುದ್ಧ ದಕ್ಷಿಣ ಆಫ್ರಿಕಾ ಅರ್ಜಿ ಸಲ್ಲಿಸಿದೆ. ಈ ಅರ್ಜಿಯಲ್ಲಿ, ಇಸ್ರೇಲ್ 1948ರ ನರಮೇಧ ತಡೆ ಸಮಾವೇಶ (ಜಿನೋಸೈಡ್ ಕನ್ವೆನ್ಷನ್) ನ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಆಫ್ರಿಕಾ ಆರೋಪಿಸಿದ್ದು, ಗಾಝಾದ ಮೇಲಿನ ದಾಳಿಯನ್ನು ತಕ್ಷಣ ನಿಲ್ಲಿಸಲು ಇಸ್ರೇಲ್‌ಗೆ ಸೂಚಿಸುವಂತೆ ಕೋರಿದೆ.

ದಕ್ಷಿಣ ಆಫ್ರಿಕಾದ ವಾದವನ್ನು ಇಸ್ರೇಲ್ ತಳ್ಳಿ ಹಾಕಿದ್ದು, ನರಮೇಧ ಆರೋಪ ವಾಸ್ತವಕ್ಕೆ ದೂರವಾಗಿದೆ. ದಕ್ಷಿಣ ಆಫ್ರಿಕಾದ ಅರ್ಜಿಗೆ ಕಾನೂನು ಆಧಾರವಿಲ್ಲ. ದಕ್ಷಿಣ ಆಫ್ರಿಕಾ ಭಯೋತ್ಪಾದಕ ಸಂಘಟನೆಗಳಿಗೆ ಇಸ್ರೇಲ್‌ ಮೇಲೆ ದಾಳಿ ಮಾಡುವಂತೆ ಪ್ರೇರೇಪಿಸುತ್ತಿದೆ. ಹಾಗಾಗಿ, ಆ ಅರ್ಜಿಯನ್ನು ಪರಿಗಣಿಸಬಾರದು ಎಂದು ಹೇಳಿದೆ.

ವರ್ಲ್ಡ್ ಕೋರ್ಟ್ ಎಂದೂ ಕರೆಯಲ್ಪಡುವ ಹೇಗ್‌ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯ ಈ ವಾರ ಎರಡು ದಿನಗಳ ಕಾಲ ದಕ್ಷಿಣ ಆಫ್ರಿಕಾದಾ ಅರ್ಜಿಯ ವಿಚಾತರಣೆ ನಡೆಸಲಿದೆ. ಈ ಪ್ರಕರಣ ಇತ್ಯರ್ಥವಾಗಲು ವರ್ಷಗಳ ಸಮಯ ತೆಗೆದುಕೊಳ್ಳುವ ನಿರೀಕ್ಷೆಯಿದೆ.

ಜರ್ಮನಿಯ ನಾಝಿಗಳು ಯಹೂದಿಗಳ ನರಮೇಧ ನಡೆಸಿದ ಬಳಿಕ ನಡೆದ ಒಪ್ಪಂದದ ನಿಯಮಗಳನ್ನು ಇಸ್ರೇಲ್ ಸಂಪೂರ್ಣವಾಗಿ ಉಲ್ಲಂಘಿಸಿದೆ ಎಂದು ದಕ್ಷಿಣ ಆಫ್ರಿಕಾ ಆರೋಪಿಸಿದೆ.

ದಕ್ಷಿಣ ಆಫ್ರಿಕಾ ಹೇಳಿದ್ದೇನು?

ಇಸ್ರೇಲ್‌ ಗಾಝಾದಲ್ಲಿ ನರಮೇಧ ನಡೆಸುತ್ತಿದೆ ಎಂದು ದಕ್ಷಿಣ ಆಫ್ರಿಕಾ ಆರೋಪಿಸಿದ್ದು, ತಕ್ಷಣ ದಾಳಿ ನಿಲ್ಲಿಸಲು ಇಸ್ರೇಲ್‌ಗೆ ಸೂಚಿಸಬೇಕು ಎಂದು ಆಗ್ರಹಿಸಿದೆ. ಇಸ್ರೇಲ್‌ ಜಿನಿವಾ ನರಮೇಧ ತಡೆ ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದೆ.

ದಕ್ಷಿಣ ಆಫ್ರಿಕಾದ ಆಡಳಿತಾರೂಡ ಆಫ್ರಿಕನ್ ನ್ಯಾಷನಲ್ ಕಾಂಗ್ರೆಸ್ ಪಕ್ಷವು, ಗಾಝಾ ಮತ್ತು ದಕ್ಷಿಣ ದಂಡೆಯಲ್ಲಿ ಇಸ್ರೇಲ್‌ ನಡೆಸುತ್ತಿರುವ ಆಕ್ರಮಣವನ್ನು ತನ್ನದೇ ವರ್ಣಬೇಧ ನೀತಿಯ ಇತಿಹಾಸಕ್ಕೆ ಹೋಲಿಸಿದೆ. ಯಾಸರ್ ಅರಾಫತ್‌ನ ಪ್ಯಾಲೆಸ್ತೀನ್ ಲಿಬರೇಶನ್ ಆರ್ಗನೈಸೇಶನ್ (ಪಿಎಲ್‌ಒ) ಅನ್ನು ಆಫ್ರಿಕಾ ಸಮರ್ಥಿಸಿಕೊಂಡಿದೆ.

ಅಕ್ಟೋಬರ್ 7,2023ರಂದು ಪ್ರಾರಂಭಗೊಂಡ ಇಸ್ರೇಲ್‌-ಹಮಾಸ್ ಸಂಘರ್ಷದಲ್ಲಿ ಇದುವರೆಗ ಮೃತಪಟ್ಟ ಅಮಾಯಕ ಪ್ಯಾಲೆಸ್ತೀನಿಯರ ಸಂಖ್ಯೆ 23 ಸಾವಿರಕ್ಕೆ ತಲುಪಿದೆ. ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ದಾಳಿ ನಡೆಸಿದ್ದ ಗಾಝಾದ ಹಮಾಸ್ ಗುಂಪು ಸುಮಾರು 1,200 ಜನರನ್ನು ಹತ್ಯೆ ಮಾಡಿತ್ತು. 2ರಷ್ಟು ಜನರನ್ನು ಒತ್ತೆಯಾಳುಗಳಾಗಿ ಇಟ್ಟುಕೊಂಡಿತ್ತು. ಬಳಿಕ ಪ್ರಾರಂಭಗೊಂಡ ಇಸ್ರೇಲ್ ಆಕ್ರಮಣಕ್ಕೆ ಇದುವರೆಗೆ 23 ಸಾವಿರ ಜನರು ಬಲಿಯಾಗಿದ್ದಾರೆ.

ಇದನ್ನೂ ಓದಿ : ಅತ್ಯಾಚಾರ ಆರೋಪ: ನೇಪಾಳದ ವಿವಾದಾತ್ಮಕ ಧರ್ಮಗುರು ‘ಬುದ್ಧ ಬಾಲಕ’ನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...