Homeಮುಖಪುಟ2 ತಿಂಗಳ ಅವಧಿಯಲ್ಲಿ UAPAಯಡಿ 9 ಮುಸ್ಲಿಂ ಯುವಕರನ್ನು ಬಂಧಿಸಿದ ಉತ್ತರಪ್ರದೇಶದ ಎಟಿಎಸ್‌!

2 ತಿಂಗಳ ಅವಧಿಯಲ್ಲಿ UAPAಯಡಿ 9 ಮುಸ್ಲಿಂ ಯುವಕರನ್ನು ಬಂಧಿಸಿದ ಉತ್ತರಪ್ರದೇಶದ ಎಟಿಎಸ್‌!

- Advertisement -
- Advertisement -

“ಐಸಿಸ್ ಮಾಡ್ಯೂಲ್” ನೆಪದಲ್ಲಿ ಉತ್ತರಪ್ರದೇಶದ ಪೊಲೀಸರು ಮುಸ್ಲಿಂ ಯುವಕರ ಬಂಧನವನ್ನು ಮುಂದುವರಿಸಿದ್ದು, ಕಳೆದ ಎರಡು ತಿಂಗಳಲ್ಲಿ ರಾಜ್ಯದ ಒಳಗೆ ಮತ್ತು ಹೊರಗೆ ಭಯೋತ್ಪಾದನಾ ಆರೋಪದ ಮೇಲೆ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ಹಾಲಿ ಮತ್ತು ಮಾಜಿ ಸೇರಿ 9 ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

2023ರ ನ.23ರಂದು ಲಕ್ನೋದಲ್ಲಿ ಉತ್ತರಪ್ರದೇಶದ ಭಯೋತ್ಪಾದನಾ ನಿಗ್ರಹ ದಳವು ದಾಖಲಿಸಿದ ಎಫ್‌ಐಆರ್ ಬಳಿಕ ವಿದ್ಯಾರ್ಥಿಗಳ ಬಂಧನಗಳು ನಡೆದಿವೆ. ಎಫ್‌ಐಆರ್‌ನಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 121 ಎ ಮತ್ತು 122 ಜೊತೆಗೆ ಕಠಿಣ ಕಾನೂನು ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ ಯುಎಪಿಎಯ ಸೆಕ್ಷನ್ 13, 18, 18 ಬಿ ಮತ್ತು 38ನ್ನು ವಿಧಿಸಲಾಗಿದೆ.

ರಾಜ್ಯದ ವಿರುದ್ಧದ ಅಪರಾಧಕ್ಕೆ  ಪಿತೂರಿ, ಭಾರತ ಸರ್ಕಾರದ ವಿರುದ್ಧ ಯುದ್ಧ ಮಾಡುವ ಉದ್ದೇಶದಿಂದ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸುವುದು, ಭಯೋತ್ಪಾದಕ ಕೃತ್ಯವನ್ನು ಎಸಗಲು ಪ್ರಯತ್ನಿಸುವುದು, ಭಯೋತ್ಪಾದಕ ಕೃತ್ಯಗಳಿಗೆ ಜನರನ್ನು ನೇಮಿಸಿಕೊಳ್ಳವ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಂಧಿತರು ಉತ್ತರಪ್ರದೇಶದಲ್ಲಿ ಅಥವಾ ದೇಶದ ಇತರ ಭಾಗಗಳಲ್ಲಿ ದೊಡ್ಡ ಭಯೋತ್ಪಾದಕ ಕೃತ್ಯವನ್ನು ನಡೆಸಲು ಯೋಚಿಸಿಸಿದ್ದರು ಎಂದು ಉತ್ತರಪ್ರದೇಶದ ಎಟಿಎಸ್ ಆರೋಪಿಸಿದೆ.

ಅಲಿಘರ್ ಮುಸ್ಲಿಂ ವಿವಿಯ “ಐಸಿಸ್ ಮಾಡ್ಯೂಲ್” ಆರೋಪಿಸಿ ನವೆಂಬರ್ ಮೊದಲ ವಾರದಲ್ಲಿ ಈ ಕುರಿತ ಮೊದಲ ಬಂಧನ ನಡೆದಿದೆ. ಜನವರಿ 8, 2024ರಂದು ಎಟಿಎಸ್ ಅಮಾಸ್ ಅಹ್ಮದ್‌ನನ್ನು ಅಲಿಘರ್‌ನಲ್ಲಿ ಬಂಧಿಸಿತ್ತು. ಸಂಭಾಲ್‌ನ ಅಬ್ದುಲ್ ಸಮದ್ ಮಲಿಕ್ (25) ಸ್ಥಳೀಯ ನ್ಯಾಯಾಲಯದಲ್ಲಿ ಶರಣಾಗಿದ್ದಾನೆ. ಅಹ್ಮದ್ 2022ರಲ್ಲಿ AMUನಿಂದ ಮನೋವಿಜ್ಞಾನದಲ್ಲಿ ತಮ್ಮ ಪದವಿಯನ್ನು ಪೂರ್ಣಗೊಳಿಸಿದ್ದರು. ಸಮದ್ ಮಲಿಕ್ ಸಮಾಜಕಾರ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದಾರೆ. ಈ ಪ್ರಕರಣದಲ್ಲಿ ಈ ಹಿಂದೆ ಬಂಧಿತರಾಗಿದ್ದ ಏಳು ಮಂದಿಯೊಂದಿಗೆ ಈ ಇಬ್ಬರು ವ್ಯಕ್ತಿಗಳು ಎಎಂಯುನಲ್ಲಿ ಐಸಿಸ್ ಮಾಡ್ಯೂಲ್‌ನ್ನು ಸಿದ್ಧಪಡಿಸುತ್ತಿದ್ದಾರೆ ಮತ್ತು ಅದಕ್ಕೆ ಇತರರನ್ನು ನೇಮಿಸಿಕೊಳ್ಳುತ್ತಿದ್ದಾರೆ ಎಂದು ಯುಪಿ ಎಟಿಎಸ್ ಆರೋಪಿಸಿದೆ. ಬಂಧಿತರೆಲ್ಲರೂ ಐಸಿಸ್‌ಗೆ ನಿಷ್ಠೆಯ ಪ್ರತಿಜ್ಞೆಯನ್ನು ತೆಗೆದುಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ನವೆಂಬರ್ 5 ರಂದು ಇಬ್ಬರು ಮಾಜಿ ಎಎಮ್‌ಯು ವಿದ್ಯಾರ್ಥಿಗಳಾದ ಅಬ್ದುಲ್ಲಾ ಅರ್ಸಲಾನ್ ಮತ್ತು ಮಾಜ್ ಬಿನ್ ತಾರಿಕ್ ಅವರನ್ನು ಬಂಧಿಸಲಾಗಿತ್ತು. ಎರಡು ದಿನಗಳ ನಂತರ ಯುಪಿ ಎಟಿಎಸ್ ಛತ್ತೀಸ್‌ಗಢದ ದುರ್ಗ್‌ನಿಂದ ಎಎಮ್‌ಯುನಿಂದ ಪಿಎಚ್‌ಡಿ ಪೂರ್ಣಗೊಳಿಸಿದ್ದ ವಜಿಹುದ್ದೀನ್ ಎಂಬ ಮೂರನೇ ವ್ಯಕ್ತಿಯನ್ನು ಬಂಧಿಸಿದೆ. ಕಳೆದ ನವೆಂಬರ್ 11ರಂದು ಎಟಿಎಸ್, ರಖೀಬ್ ಇಮಾಮ್,  ನಾವೇದ್ ಸಿದ್ದಿಕಿ, ಮೊಹಮ್ಮದ್ ನೋಮನ್, ಮೊಹಮ್ಮದ್ ನಜೀಮ್ ಅವರನ್ನು ಬಂಧಿಸಿತ್ತು. ನೋಮನ್, ನಾಜಿಮ್ ಮತ್ತು ಸಿದ್ದಿಕಿ ಅವರನ್ನು ಅವರ ಹುಟ್ಟೂರಾದ ಸಂಭಾಲ್ ಜಿಲ್ಲೆಯಿಂದ ಬಂಧಿಸಲಾಗಿದ್ದು, ಇಮಾಮ್ ಅವರನ್ನು ಅಲಿಘರ್‌ನಲ್ಲಿ  ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳು ಹಿಂಸಾತ್ಮಕ ಜಿಹಾದ್ ಮೂಲಕ ಸರ್ಕಾರವನ್ನು ಉರುಳಿಸಲು ಮತ್ತು ಷರಿಯಾ ಕಾನೂನನ್ನು ಹೇರಲು ಯೋಜಿಸುತ್ತಿದ್ದರು ಎಂದು ಎಟಿಎಸ್ ಆರೋಪಿಸಿದೆ. ನಾಲ್ವರು ಐಸಿಸ್ ಸಾಹಿತ್ಯವನ್ನು ಸಮಾನ ಮನಸ್ಸಿನ ವ್ಯಕ್ತಿಗಳಿಗೆ ಹಂಚುತ್ತಿದ್ದರು, ರಹಸ್ಯ ಸಭೆಗಳನ್ನು ಸೇರುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಬಂಧಿತ ಯುವಕರೆಲ್ಲರೂ SAMU ಎಂಬ ಅಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಸಂಘಟನೆ ಜೊತೆ ಸಂಬಂಧ ಹೊಂದಿದ್ದರು. ಈ ಸಂಘಟನೆ ಕ್ಯಾಂಪಸ್‌ನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿತ್ತು. ಇದು ವಿದ್ಯಾರ್ಥಿಗಳ ಸಂಘಟನೆಯಾಗಿದೆ. ಅಂತಹ ಯಾವುದೇ ಚಟುವಟಿಕೆಗಳು ನಡೆಯುತ್ತಿಲ್ಲ. ಆರಂಭಿಕ ಹಂತದಲ್ಲಿ ಸರಿಯಾದ ಪುರಾವೆಗಳಿಲ್ಲದೆ ದೊಡ್ಡ ಆರೋಪ ಹೊರಿಸುತ್ತಿರುವ ತನಿಖೆಯ ಬಗ್ಗೆ ಅನೇಕ ವಿದ್ಯಾರ್ಥಿಗಳು  ಮಾತನಾಡುತ್ತಾ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಆಲಿಗಢ್ ಮುಸ್ಲಿಂ ವಿವಿಯ ಅಧಿಕಾರಿಯೊಬ್ಬರು ಮಾತನಾಡುತ್ತಾ, ಪೊಲೀಸರ ನಿರೂಪಣೆಯು “ಆಧಾರರಹಿತ”, ಎಟಿಎಸ್ ಹೇಳಿರುವ ಆರೋಪಗಳು ಇನ್ನೂ ಸಾಬೀತಾಗಿಲ್ಲ, ಅಂತಹ ನಡವಳಿಕೆ ವಿರುದ್ಧ ವಿಶ್ವವಿದ್ಯಾಲಯವು “ಶೂನ್ಯ ಸಹಿಷ್ಣುತೆ” ನೀತಿಯನ್ನು ಹೊಂದಿದೆ. ಆ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಮತ್ತು ವಿಶ್ವವಿದ್ಯಾನಿಲಯವು ತನಿಖೆಗೆ ಸಹಕರಿಸಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ವಿಶ್ವವಿದ್ಯಾನಿಲಯದ ಕೆಲವು ಮಾಜಿ ಮತ್ತು ಹಾಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ತಿಳಿದಿದ್ದರೂ, ಯಾವುದೇ ಸಂಸ್ಥೆಗಳು ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ ಎಂದು AMUನ ವಾಸಿಂ ಅಲಿ ಹೇಳಿದ್ದಾರೆ. ಈ ಆರೋಪಗಳ ಕುರಿತ ಸತ್ಯ ಮತ್ತು ಅವುಗಳನ್ನು ಯಾವ ಆಧಾರದ ಮೇಲೆ ಮಾಡಲಾಗಿದೆ ಎಂದು ತನಿಖೆಯ ಮೂಲಕ ತಿಳಿಯಲಾಗುವುದು ಅಥವಾ ನ್ಯಾಯಾಲಯದಲ್ಲಿ ನಿರ್ಧರಿಸಲಾಗುವುದು ಎಂದು ಅಲಿ ಹೇಳಿದ್ದಾರೆ.

ಈ ಬಂಧನಗಳು ಮತ್ತು ಯುಪಿ ಪೊಲೀಸರು ಆಪಾದಿಸಿದ ಐಸಿಸ್ ಮಾಡ್ಯೂಲ್ ಜೊತೆ ಕೇಂದ್ರೀಯ ವಿಶ್ವವಿದ್ಯಾನಿಲಯಕ್ಕೆ ಸಂಬಂಧ ಕಲ್ಪಿಸುವುದು ಎಎಂಯು ಮೇಲೆ ಆಳವಾಗಿ ಪರಿಣಾಮ ಬೀರುವುದಿಲ್ಲ ಎಂದು ಅಲಿ ಹೇಳಿದರು. ವಿಶ್ವವಿದ್ಯಾನಿಲಯದಲ್ಲಿ 25,000 ವಿದ್ಯಾರ್ಥಿಗಳಿದ್ದಾರೆ. ಪ್ರತಿ ವರ್ಷ ಸಾವಿರಾರು ಮಂದಿ ಬಂದು ಹೋಗುತ್ತಾರೆ. ಈ ಪೈಕಿ 3-4 ವಿದ್ಯಾರ್ಥಿಗಳು, ಅವರಲ್ಲಿ ಹೆಚ್ಚಿನವರು ಮಾಜಿ ವಿದ್ಯಾರ್ಥಿಗಳು, ಅಂತಹ ಆರೋಪಗಳನ್ನು ಎದುರಿಸಿದರೆ, ಅದು ವಿಶ್ವವಿದ್ಯಾಲಯದ ಇಮೇಜ್ ಮೇಲೆ ಪರಿಣಾಮ ಬೀರುತ್ತದೆ ಎಂದು ನಾನು ಭಾವಿಸುವುದಿಲ್ಲ ಎಂದು ಆಲಿಗಢ್ ಮುಸ್ಲಿಂ ವಿವಿಯ ವಾಸಿಂ ಅಲಿ ಹೇಳಿದ್ದಾರೆ.

ಇದನ್ನು ಓದಿ: ಮುಜಾಫರ್‌ನಗರ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ: ಯುಪಿ ಸರಕಾರಕ್ಕೆ ಸುಪ್ರೀಂಕೋರ್ಟ್‌ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...