Homeಮುಖಪುಟಮಾನವ ಕಳ್ಳಸಾಗಾಣಿಕೆ ಆರೋಪ: 14 ಟ್ರಾವೆಲ್ ಏಜೆಂಟ್‌ಗಳ ವಿರುದ್ಧ ಎಫ್‌ಐಆರ್ ದಾಖಲು

ಮಾನವ ಕಳ್ಳಸಾಗಾಣಿಕೆ ಆರೋಪ: 14 ಟ್ರಾವೆಲ್ ಏಜೆಂಟ್‌ಗಳ ವಿರುದ್ಧ ಎಫ್‌ಐಆರ್ ದಾಖಲು

- Advertisement -
ಯುಎಯಿಂದ ನಿಕರಾಗುವಾಕ್ಕೆ 303 ಭಾರತೀಯರನ್ನು ಹೊತ್ತು ಸಾಗುತ್ತಿದ್ದ ವಿಮಾನವನ್ನು ಪ್ಯಾರಿಸ್‌ನಲ್ಲಿ ತಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ, 14 ಟ್ರಾವೆಲ್ ಏಜೆಂಟ್‌ಗಳ ವಿರುದ್ದ ಮಾನವ ಕಳ್ಳಸಾಗಣಿಕೆ ಆರೋಪದ ಮೇಲೆ ಗುಜರಾತ್ ಪೊಲೀಸರ ಅಪರಾಧ ತನಿಖಾ ವಿಭಾಗ(ಸಿಐಡಿ) ಎಫ್‌ಐಆರ್‌ ದಾಖಲಿಸಿದೆ.
ಡಿಸೆಂಬರ್ 22, 2023ರಂದು ಮಾನವ ಕಳ್ಳಸಾಗಾಣಿಕೆ ಶಂಕೆ ಮೇಲೆ ಯುಎಯಿಂದ ಹೊರಟ್ಟಿದ್ದ ವಿಮಾನವನ್ನು ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಎರಡು ದಿನಗಳ ಕಾಲ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಕೂಲಂಕುಶವಾಗಿ ಪರಿಶೀಲನೆ ನಡೆಸಿದ ಬಳಿಕ 275 ಮಂದಿಯನ್ನು ವಾಪಸ್ ಭಾರತಕ್ಕೆ ಕಳುಹಿಸಿಕೊಡಲಾಗಿತ್ತು.
ಒಟ್ಟು ಪ್ರಯಾಣಿಕರ ಪೈಕಿ ಗುಜರಾತ್‌ನ ನಿವಾಸಿಗಳಾದ 66 ಮಂದಿಯನ್ನು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೂಡಲೇ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು.
ದಿ ಹಿಂದೂ ವರದಿ ಪ್ರಕಾರ, ಪ್ರಸ್ತುತ ಪೊಲೀಸರು ಎಫ್‌ಐಆರ್‌ ದಾಖಲಿಸಿರುವ ಟ್ರಾವೆಲ್ ಏಜೆಂಟ್‌ಗಳು ಗುಜರಾತ್, ಮುಂಬೈ ಮತ್ತು ನವದೆಹಲಿ ಮೂಲದವರು. ಇವರು ಪಂಜಾಬ್ ಮತ್ತು ಗುಜರಾತ್‌ನ ಪ್ರಯಾಣಿಕರಿಂದ 60-70 ಲಕ್ಷ ರೂ. ಹಣ ಪಡೆದು ಅಮೆರಿಕಾಗೆ ಅಕ್ರಮ ಪ್ರವೇಶ ಕಲ್ಪಿಸಲು ಕರೆದುಕೊಂಡು ಹೋಗುತ್ತಿದ್ದರು.
ಪ್ರಯಾಣಿಕರನ್ನು ಯುಎಯಿಂದ ಮಧ್ಯ ಅಮೆರಿಕದ ನಿಕರಾಗುವಾಕ್ಕೆ ಕರೆದೊಯ್ದು,ಅಲ್ಲಿಂದ ಮೆಕ್ಸಿಕೋ ಮೂಲಕ ಗಡಿ ದಾಟಿಸುವ ಯೋಜನೆ ರೂಪಿಸಲಾಗಿತ್ತು. ಅಮೆರಿಕ ತಲುಪುವ ಜನರಿಗೆ ಭಾರತೀಯರು ನಡೆಸುವ ವ್ಯವಹಾರಗಳಲ್ಲಿ ಉದ್ಯೋಗಗಳನ್ನು ಹುಡುಕಲು ಏಜೆಂಟರು ಸಹಾಯ ಮಾಡುವ ಭರವಸೆ ನೀಡಿದ್ದರು ಎಂದು ಆರೋಪಿಸಲಾಗಿದೆ.
“ಇದು ಗುಜರಾತ್ ಸೇರಿದಂತೆ ಭಾರತದ ವಿವಿಧ ಭಾಗಗಳಿಂದ ಯುಎಸ್‌ಗೆ ಮಾನವ ಕಳ್ಳಸಾಗಾಣಿಕೆ ಮಾಡುವ ಅಂತಾರಾಷ್ಟ್ರೀಯ ಏಜೆಂಟ್‌ಗಳೂ ಒಳಗೊಂಡಿರುವ ಬಹು ದೊಡ್ಡ ದಂಧೆಯಾಗಿದೆ. ಭಾರತದಿಂದ ಯುಎಸ್‌ಗೆ ಕಳ್ಳದಾರಿಯ ಮೂಲಕ ಜನರನ್ನು ಕರೆಯೊಯ್ಯವ ಸಂಘಟಿತ ಜಾಲವಾಗಿದೆ” ಎಂದು ಗುಜರಾತ್‌ನ ಅಪರಾಧ ತನಿಖಾ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕ ಎಸ್ ಪಾಂಡಿಯಾ ರಾಜ್‌ಕುಮಾರ್ ತಿಳಿಸಿದ್ದಾರೆ.
ಭಾರತೀಯರು ಮಾತ್ರವಲ್ಲದೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಯುನೈಟೆಡ್ ಸ್ಟೇಟ್ಸ್(ಯುಎಸ್‌) ಮೆಕ್ಸಿಕೊ ಮತ್ತು ನಿಕರಾಗುವಾ ಮೂಲದ ಜನರೂ ಈ ಜಾಲದಲ್ಲಿ ಒಳಗೊಂಡಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಈ ರೀತಿಯ ಮೂರು ವಿಮಾನಗಳು ಜನರನ್ನು ಮಧ್ಯ ಅಮೆರಿಕಕ್ಕೆ ಯಶಸ್ವಿಯಾಗಿ ಕರೆದೊಯ್ದಿವೆ ಎಂದು ಪಾಂಡಿಯಾ ರಾಜ್‌ಕುಮಾರ್ ಮಾಹಿತಿ ನೀಡಿದ್ದಾರೆ.
ಗಡಿ ದಾಟುವಾಗ ಸಿಕ್ಕಿ ಬಿದ್ದರೆ ಏನಾದರು ಸಬೂಬು ಹೇಳಲು ಏಜೆಂಟ್‌ಗಳು ಪ್ರಯಾಣಿಕರಿಗೆ ಮೊದಲೇ ಹೇಳಿ ಕೊಡುತ್ತಿದ್ದರು. ಉದಾಹರಣೆಗೆ ಪಂಜಾಬ್‌ನವರು ಸಿಕ್ಕಿ ಬಿದ್ದರೆ ಖಲಿಸ್ತಾನಿಗಳು ಎಂದು ಹೇಳುತ್ತಿದ್ದರು ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.
ಪ್ಯಾರಿಸ್‌ನಿಂದ ಗುಜರಾತ್‌ಗೆ ಬಂದಿಳಿದ 66 ಪ್ರಯಾಣಿಕರು ಅಹಮದಾಬಾದ್, ಮುಂಬೈ ಮತ್ತು ದೆಹಲಿಯಿಂದ ಡಿಸೆಂಬರ್ 10 ಮತ್ತು ಡಿಸೆಂಬರ್ 20ರ ನಡುವೆ ಮಾನ್ಯ ಪ್ರವಾಸಿ ವೀಸಾದಲ್ಲಿ ದುಬೈ ತಲುಪಿದ್ದರು. ಡಿಸೆಂಬರ್ 21 ರಂದು  ಯುಎಇಯ ಫುಜೈರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೊಮೇನಿಯನ್ ಚಾರ್ಟರ್ ಕಂಪನಿ ಲೆಜೆಂಡ್ ಏರ್‌ಲೈನ್ಸ್ ನಿರ್ವಹಿಸುವ ನಿಕರಾಗುವಾಗೆ ಹೋಗುವ ವಿಮಾನವನ್ನು ಹತ್ತಿದ್ದರು ತಿಳಿದು ಬಂದಿದೆ.
14 ಟ್ರಾವೆಲ್‌ ಏಜೆಂಟ್‌ಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 370 (ಮಾನವ ಕಳ್ಳಸಾಗಣೆ), 201 (ಸಾಕ್ಷ್ಯ ನಾಶಪಡಿಸುವುದು) ಮತ್ತು 120-ಬಿ (ಅಪರಾಧ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...