Homeಮುಖಪುಟಮಾನವ ಕಳ್ಳಸಾಗಾಣಿಕೆ ಆರೋಪ: 14 ಟ್ರಾವೆಲ್ ಏಜೆಂಟ್‌ಗಳ ವಿರುದ್ಧ ಎಫ್‌ಐಆರ್ ದಾಖಲು

ಮಾನವ ಕಳ್ಳಸಾಗಾಣಿಕೆ ಆರೋಪ: 14 ಟ್ರಾವೆಲ್ ಏಜೆಂಟ್‌ಗಳ ವಿರುದ್ಧ ಎಫ್‌ಐಆರ್ ದಾಖಲು

- Advertisement -
ಯುಎಯಿಂದ ನಿಕರಾಗುವಾಕ್ಕೆ 303 ಭಾರತೀಯರನ್ನು ಹೊತ್ತು ಸಾಗುತ್ತಿದ್ದ ವಿಮಾನವನ್ನು ಪ್ಯಾರಿಸ್‌ನಲ್ಲಿ ತಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ, 14 ಟ್ರಾವೆಲ್ ಏಜೆಂಟ್‌ಗಳ ವಿರುದ್ದ ಮಾನವ ಕಳ್ಳಸಾಗಣಿಕೆ ಆರೋಪದ ಮೇಲೆ ಗುಜರಾತ್ ಪೊಲೀಸರ ಅಪರಾಧ ತನಿಖಾ ವಿಭಾಗ(ಸಿಐಡಿ) ಎಫ್‌ಐಆರ್‌ ದಾಖಲಿಸಿದೆ.
ಡಿಸೆಂಬರ್ 22, 2023ರಂದು ಮಾನವ ಕಳ್ಳಸಾಗಾಣಿಕೆ ಶಂಕೆ ಮೇಲೆ ಯುಎಯಿಂದ ಹೊರಟ್ಟಿದ್ದ ವಿಮಾನವನ್ನು ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಎರಡು ದಿನಗಳ ಕಾಲ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಕೂಲಂಕುಶವಾಗಿ ಪರಿಶೀಲನೆ ನಡೆಸಿದ ಬಳಿಕ 275 ಮಂದಿಯನ್ನು ವಾಪಸ್ ಭಾರತಕ್ಕೆ ಕಳುಹಿಸಿಕೊಡಲಾಗಿತ್ತು.
ಒಟ್ಟು ಪ್ರಯಾಣಿಕರ ಪೈಕಿ ಗುಜರಾತ್‌ನ ನಿವಾಸಿಗಳಾದ 66 ಮಂದಿಯನ್ನು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೂಡಲೇ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು.
ದಿ ಹಿಂದೂ ವರದಿ ಪ್ರಕಾರ, ಪ್ರಸ್ತುತ ಪೊಲೀಸರು ಎಫ್‌ಐಆರ್‌ ದಾಖಲಿಸಿರುವ ಟ್ರಾವೆಲ್ ಏಜೆಂಟ್‌ಗಳು ಗುಜರಾತ್, ಮುಂಬೈ ಮತ್ತು ನವದೆಹಲಿ ಮೂಲದವರು. ಇವರು ಪಂಜಾಬ್ ಮತ್ತು ಗುಜರಾತ್‌ನ ಪ್ರಯಾಣಿಕರಿಂದ 60-70 ಲಕ್ಷ ರೂ. ಹಣ ಪಡೆದು ಅಮೆರಿಕಾಗೆ ಅಕ್ರಮ ಪ್ರವೇಶ ಕಲ್ಪಿಸಲು ಕರೆದುಕೊಂಡು ಹೋಗುತ್ತಿದ್ದರು.
ಪ್ರಯಾಣಿಕರನ್ನು ಯುಎಯಿಂದ ಮಧ್ಯ ಅಮೆರಿಕದ ನಿಕರಾಗುವಾಕ್ಕೆ ಕರೆದೊಯ್ದು,ಅಲ್ಲಿಂದ ಮೆಕ್ಸಿಕೋ ಮೂಲಕ ಗಡಿ ದಾಟಿಸುವ ಯೋಜನೆ ರೂಪಿಸಲಾಗಿತ್ತು. ಅಮೆರಿಕ ತಲುಪುವ ಜನರಿಗೆ ಭಾರತೀಯರು ನಡೆಸುವ ವ್ಯವಹಾರಗಳಲ್ಲಿ ಉದ್ಯೋಗಗಳನ್ನು ಹುಡುಕಲು ಏಜೆಂಟರು ಸಹಾಯ ಮಾಡುವ ಭರವಸೆ ನೀಡಿದ್ದರು ಎಂದು ಆರೋಪಿಸಲಾಗಿದೆ.
“ಇದು ಗುಜರಾತ್ ಸೇರಿದಂತೆ ಭಾರತದ ವಿವಿಧ ಭಾಗಗಳಿಂದ ಯುಎಸ್‌ಗೆ ಮಾನವ ಕಳ್ಳಸಾಗಾಣಿಕೆ ಮಾಡುವ ಅಂತಾರಾಷ್ಟ್ರೀಯ ಏಜೆಂಟ್‌ಗಳೂ ಒಳಗೊಂಡಿರುವ ಬಹು ದೊಡ್ಡ ದಂಧೆಯಾಗಿದೆ. ಭಾರತದಿಂದ ಯುಎಸ್‌ಗೆ ಕಳ್ಳದಾರಿಯ ಮೂಲಕ ಜನರನ್ನು ಕರೆಯೊಯ್ಯವ ಸಂಘಟಿತ ಜಾಲವಾಗಿದೆ” ಎಂದು ಗುಜರಾತ್‌ನ ಅಪರಾಧ ತನಿಖಾ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕ ಎಸ್ ಪಾಂಡಿಯಾ ರಾಜ್‌ಕುಮಾರ್ ತಿಳಿಸಿದ್ದಾರೆ.
ಭಾರತೀಯರು ಮಾತ್ರವಲ್ಲದೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಯುನೈಟೆಡ್ ಸ್ಟೇಟ್ಸ್(ಯುಎಸ್‌) ಮೆಕ್ಸಿಕೊ ಮತ್ತು ನಿಕರಾಗುವಾ ಮೂಲದ ಜನರೂ ಈ ಜಾಲದಲ್ಲಿ ಒಳಗೊಂಡಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಈ ರೀತಿಯ ಮೂರು ವಿಮಾನಗಳು ಜನರನ್ನು ಮಧ್ಯ ಅಮೆರಿಕಕ್ಕೆ ಯಶಸ್ವಿಯಾಗಿ ಕರೆದೊಯ್ದಿವೆ ಎಂದು ಪಾಂಡಿಯಾ ರಾಜ್‌ಕುಮಾರ್ ಮಾಹಿತಿ ನೀಡಿದ್ದಾರೆ.
ಗಡಿ ದಾಟುವಾಗ ಸಿಕ್ಕಿ ಬಿದ್ದರೆ ಏನಾದರು ಸಬೂಬು ಹೇಳಲು ಏಜೆಂಟ್‌ಗಳು ಪ್ರಯಾಣಿಕರಿಗೆ ಮೊದಲೇ ಹೇಳಿ ಕೊಡುತ್ತಿದ್ದರು. ಉದಾಹರಣೆಗೆ ಪಂಜಾಬ್‌ನವರು ಸಿಕ್ಕಿ ಬಿದ್ದರೆ ಖಲಿಸ್ತಾನಿಗಳು ಎಂದು ಹೇಳುತ್ತಿದ್ದರು ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.
ಪ್ಯಾರಿಸ್‌ನಿಂದ ಗುಜರಾತ್‌ಗೆ ಬಂದಿಳಿದ 66 ಪ್ರಯಾಣಿಕರು ಅಹಮದಾಬಾದ್, ಮುಂಬೈ ಮತ್ತು ದೆಹಲಿಯಿಂದ ಡಿಸೆಂಬರ್ 10 ಮತ್ತು ಡಿಸೆಂಬರ್ 20ರ ನಡುವೆ ಮಾನ್ಯ ಪ್ರವಾಸಿ ವೀಸಾದಲ್ಲಿ ದುಬೈ ತಲುಪಿದ್ದರು. ಡಿಸೆಂಬರ್ 21 ರಂದು  ಯುಎಇಯ ಫುಜೈರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೊಮೇನಿಯನ್ ಚಾರ್ಟರ್ ಕಂಪನಿ ಲೆಜೆಂಡ್ ಏರ್‌ಲೈನ್ಸ್ ನಿರ್ವಹಿಸುವ ನಿಕರಾಗುವಾಗೆ ಹೋಗುವ ವಿಮಾನವನ್ನು ಹತ್ತಿದ್ದರು ತಿಳಿದು ಬಂದಿದೆ.
14 ಟ್ರಾವೆಲ್‌ ಏಜೆಂಟ್‌ಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 370 (ಮಾನವ ಕಳ್ಳಸಾಗಣೆ), 201 (ಸಾಕ್ಷ್ಯ ನಾಶಪಡಿಸುವುದು) ಮತ್ತು 120-ಬಿ (ಅಪರಾಧ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...