Homeಮುಖಪುಟದಲಿತ ವಿದ್ಯಾರ್ಥಿಗೆ ಮೂತ್ರ ಕುಡಿಸಿದ ಸಹಪಾಠಿಗಳು: ಕಾನೂನು ವಿವಿಯಲ್ಲಿ ಅಮಾನವೀಯ ಘಟನೆ

ದಲಿತ ವಿದ್ಯಾರ್ಥಿಗೆ ಮೂತ್ರ ಕುಡಿಸಿದ ಸಹಪಾಠಿಗಳು: ಕಾನೂನು ವಿವಿಯಲ್ಲಿ ಅಮಾನವೀಯ ಘಟನೆ

- Advertisement -
- Advertisement -

ತಿರುಚ್ಚಿಯಲ್ಲಿರುವ ‘ತಮಿಳುನಾಡು ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯ’ (ಟಿಎನ್‌ಎನ್‌ಎಲ್‌ಯು) ನಲ್ಲಿ ಅಮಾನವೀಯ ಘಟನೆ ನಡೆದಿದ್ದು, 22 ವರ್ಷದ ದಲಿತ ವಿದ್ಯಾರ್ಥಿಯೋರ್ವನಿಗೆ ಸಹಪಾಠಿಗಳು ಮೋಸದಿಂದ ಮೂತ್ರ ಕುಡಿಸಿದ್ದಾರೆ.

ಮೂಲಗಳ ಪ್ರಕಾರ, ತಿರುಚ್ಚಿ-ದಿಂಡುಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ‘ತಮಿಳುನಾಡು ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯ’ದ ಆವರಣದಲ್ಲಿ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಗಳ ಕಾರ್ಯಕ್ರಮದ ಸಂದರ್ಭದಲ್ಲಿ ಜನವರಿ 6, 2024 ರಂದು ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ವಿದ್ಯಾರ್ಥಿಯ ದೂರಿನ ಮೇರೆಗೆ ಈ ಕುರಿತು ವಿವಿ ಸಮಿತಿ ತನಿಖೆಯನ್ನು ಆರಂಭಿಸಿದೆ.

ಅಂತಿಮ ವರ್ಷದ ದಲಿತ ವಿದ್ಯಾರ್ಥಿಯನ್ನು ಆತನ ಇಬ್ಬರು ಸಹಪಾಠಿಗಳು, ಅದರಲ್ಲಿ ಓರ್ವ ದಲಿತ ಸಮುದಾಯಕ್ಕೆ ಸೇರಿದವನಾಗಿದ್ದಾನೆ. ಇಬ್ಬರು ಸಹಪಾಠಿಗಳು ಆತನಿಗೆ ತಂಪು ಪಾನೀಯದ ಜೊತೆ ಮೂತ್ರವನ್ನು ಬೆರೆಸಿ ಕುಡಿಯುವಂತೆ ಕೊಟ್ಟಿದ್ದಾರೆ. ಮರುದಿನ ತಾನು ಮೋಸ ಹೋಗಿರುವುದು ತಿಳಿದ ವಿದ್ಯಾರ್ಥಿಯು ಅಧ್ಯಾಪಕರಿಗೆ ದೂರು ನೀಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ತಮಿಳುನಾಡು ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಎಸ್.ಎಂ. ಬಾಲಕೃಷ್ಣನ್ ಮಾತನಾಡಿದ್ದು, ದೂರನ್ನು ಗಂಭೀರವಾಗಿ ಪರಿಗಣಿಸಿದ ಸಂಸ್ಥೆಯು ಮುಂದಿನ ವಿಚಾರಣೆ ನಡೆಸಲು ಮೂವರು ಸಹಾಯಕ ಪ್ರಾಧ್ಯಾಪಕರನ್ನು ಒಳಗೊಂಡ ರ್ಯಾಗಿಂಗ್‌ ವಿರೋಧಿ ಸಮಿತಿಯನ್ನು ರಚಿಸಿದೆ. ಸಮಿತಿಯು ಜನವರಿ 18ರಂದು ತನ್ನ ವರದಿಯನ್ನು ಸಲ್ಲಿಸಲಿದೆ. ಆ ಬಳಿಕ ವರದಿಯ ಆಧಾರದಲ್ಲಿ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ರ್ಯಾಗಿಂಗ್‌ ವಿರೋಧಿ ಸಮಿತಿಯ ವರದಿಯ ಆಧಾರದ ಮೇಲೆ ಸಂಸ್ಥೆಯು ಮುಂದಿನ ಕ್ರಮವನ್ನು ತೆಗೆದುಕೊಳ್ಳುತ್ತದೆ ಎಂದು ರಿಜಿಸ್ಟ್ರಾರ್ ಹೇಳಿದ್ದು, ಆರೋಪಿತ ವಿದ್ಯಾರ್ಥಿಗಳು ತಪ್ಪಿತಸ್ಥರೆಂದು ಕಂಡುಬಂದರೆ, ವಿಶ್ವವಿದ್ಯಾಲಯವು ಅವರ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಳ್ಳಲಿದೆ ಮತ್ತು ಮುಂದಿನ ಕ್ರಮಕ್ಕೆ ಪೊಲೀಸರಿಗೆ ದೂರು ನೀಡಲಾಗುವುದು ಎಂದು ಹೇಳಿದ್ದಾರೆ.

ಇಂತದ್ದೇ ಪ್ರಕರಣ 2018ರ ಆಗಸ್ಟ್‌ನಲ್ಲಿ ಪಂಜಾಬ್‌ನ ಜಲಂಧರ್‌ನಲ್ಲಿ ನಡೆದಿತ್ತು. 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಸಹಪಾಠಿಗಳು ಮೋಸದಿಂದ ಮೂತ್ರ ಕುಡಿಸಿದ್ದರು. ಈ ಬಗ್ಗೆ ವಿದ್ಯಾರ್ಥಿ ಶಿಕ್ಷಕರ ಬಳಿ ದೂರು ನೀಡಲು ಹೋದಾಗ ಶಿಕ್ಷಕಿ ಬಾಲಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಇದರಿಂದ ನೊಂದ ಬಾಲಕ ಮನೆಯ ಮೇಲ್ಛಾವಣೆಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ. 12 ವರ್ಷದ ಬಾಲಕನಿಗೆ ಜಾತಿ ನಿಂದನೆ ಮತ್ತು ಹಲ್ಲೆ ನಡೆಸಿದ ಆರೋಪದ ಮೇಲೆ ಶಿಕ್ಷಕಿ ಶ್ರೀಕಿ ಶರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಈ ಕುರಿತು ಬಾಲಕನ ತಾಯಿಯು ಪೊಲೀಸರಿಗೆ ದೂರು ನೀಡಿದ್ದರು. ಮಗನ ಕೆಲವು ಸಹಪಾಠಿಗಳು ಅವನ ನೀರಿನ ಬಾಟಲಿಗೆ ಮೂತ್ರ ವಿಸರ್ಜನೆ ಮಾಡಿದರು ಮತ್ತು ಅವನು ಬಾಟಲಿಯ ನೀರು ಕುಡಿದ ನಂತರ ಅವನನ್ನು ಹೀಯಾಳಿಸಿದ್ದಾರೆ. ಅವನು ತನ್ನ ತರಗತಿಯ ಶಿಕ್ಷಕರಿಗೆ ದೂರು ನೀಡಿದಾಗ ಶರ್ಮಾ ಅವನಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನು ಓದಿ: ಬುಡಕಟ್ಟು ಕುಟುಂಬಗಳಿಗೆ ಬಹಿಷ್ಕಾರ ಹಾಕಿದ ಗ್ರಾಮದ ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...