Homeಮುಖಪುಟ'ಒಬಿಸಿ' ಸಮುದಾಯವನ್ನು ಅವಮಾನಿಸಿದ ಬಾಬಾ ರಾಮ್‌ದೇವ್‌

‘ಒಬಿಸಿ’ ಸಮುದಾಯವನ್ನು ಅವಮಾನಿಸಿದ ಬಾಬಾ ರಾಮ್‌ದೇವ್‌

- Advertisement -
- Advertisement -

ಪತಂಜಲಿಯ ಸಂಸ್ಥಾಪಕ, ಯೋಗ ಗುರು ಬಾಬಾ ರಾಮ್‌ದೇವ್ ಹಿಂದುಳಿದ ವರ್ಗಗಳ (ಒಬಿಸಿ) ಬಗ್ಗೆ ಅವಮಾನಕಾರಿಯಾಗಿ ಹೇಳುವ ವಿಡಿಯೋ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಬಾಬಾ ರಾಮದೇವ್ ವೇದಿಕೆಯೊಂದರಲ್ಲಿ ಪೂಜೆಯೊಂದನ್ನು ಮಾಡುತ್ತಾ, ನನ್ನ ಮೂಲ ಗೋತ್ರ ಬ್ರಹ್ಮ ಗೋತ್ರ, ನಾನು ಅಗ್ನಿಹೋತ್ರಿ ಬ್ರಾಹ್ಮಣ, ಅವರು ಹೇಳುತ್ತಾರೆ ಬಾಬಾಜಿ ನೀವು ಒಬಿಸಿ ಎಂದು…ಒಬಿಸಿಗಳು ಆ ರೀತಿ ಹೇಳುತ್ತಾರೆ, ನಾನು ಅಗ್ನಿಹೋತ್ರಿ ಬ್ರಾಹ್ಮಣ, ನಾನು ವೇದಿ ಬ್ರಾಹ್ಮಣ, ದ್ವಿವೇದಿ ಬ್ರಾಹ್ಮಣ, ತ್ರಿವೇದಿ ಬ್ರಾಹ್ಮಣ, ಚತುರ್ವೇದಿ ಬ್ರಾಹ್ಮಣ. ನಾನು ನಾಲ್ಕು ವೇದಗಳನ್ನು ಓದಿದ್ದೇನೆ ಎಂದು ಹೇಳಿದ್ದಾರೆ.

ಬಾಬಾ ರಾಮ್‌ ದೇವ್‌ ವೀಡಿಯೊ ವೈರಲ್ ಆದ ಬೆನ್ನಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಅನೇಕರು ‘#ಬಹಿಷ್ಕಾರಪತಂಜಲಿ’ ಎಂದು ಹ್ಯಾಶ್‌ ಟ್ಯಾಗ್‌ ಬಳಸಿ ಪೋಸ್ಟ್‌ಗಳನ್ನು ಹಾಕಿದ್ದಾರೆ. ಹಿಂದುಳಿದ ಸಮುದಾಯಕ್ಕೆ ಮಾಡಿದ ಅವಮಾನಕ್ಕಾಗಿ ರಾಮ್‌ ದೇವ್‌ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ವಿವಾದವಾಗುತ್ತಿದ್ದಂತೆ ಉಲ್ಟಾ ಹೊಡೆದ ರಾಮ್‌ದೇವ್, ತಮ್ಮ ಹೇಳಿಕೆಗಳು ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಅವರನ್ನು ಉದ್ದೇಶಿಸಿವೆ ಮತ್ತು ಒಬಿಸಿ ಸಮುದಾಯವನ್ನು ಅವಮಾನಿಸುವ ಉದ್ದೇಶವನ್ನು ಹೊಂದಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ರಾಮ್‌ದೇವ್ ಅವರು ತಮ್ಮ ಬ್ರಾಹ್ಮಣ ಗುರುತನ್ನು ಪ್ರತಿಪಾದಿಸುವುದು ಮತ್ತು ಆ ಮೂಲಕ ಒಬಿಸಿ ಸಮುದಾಯವನ್ನು ಅವಮಾನಿಸಿದ್ದಾರೆ ಎಂದು ಸೂಚಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್‌ ಆಗಿತ್ತು.

ಈ ಕುರಿತು ಮಾದ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದ ರಾಮ್‌ದೇವ್, ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದು ವಿಚಿತ್ರವಾಗಿ ಸಮಜಾಯಿಸಿ ಕೊಟ್ಟಿದ್ದಾರೆ. ವಿಡಿಯೋದಲ್ಲಿ ಒಬಿಸಿ ಎಂದು ಹೇಳುವುದು ಸ್ಪಷ್ಟವಾಗಿ ದಾಖಲಾಗಿದ್ದರೂ, ನಾನು ಹೇಳಿದ್ದು ಓವೈಸಿಯೇ ಹೊರತು ಒಬಿಸಿ ಅಲ್ಲ. ಅವರ (ಒವೈಸಿ) ಪೂರ್ವಿಕರು ದೇಶವಿರೋಧಿಗಳಾಗಿದ್ದರು. ನಾನು ಅವರನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ರಾಮದೇವ್ ಹೇಳಿದ್ದಾರೆ.

ವೈರಲ್‌ ವೀಡಿಯೊವನ್ನು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗದಿದ್ದರೂ ವಿಡಿಯೋದಲ್ಲಿ ರಾಮ್‌ದೇವ್  ಬ್ರಾಹ್ಮಣ ಗುರುತನ್ನು ಘೋಷಿಸುವುದನ್ನು ತೋರಿಸುತ್ತದೆ ಮತ್ತು “ಅಗ್ನಿಹೋತ್ರಿ ಬ್ರಾಹ್ಮಣ” ಸೇರಿದಂತೆ ವಿವಿಧ ಬ್ರಾಹ್ಮಣ ಗೋತ್ರಗಳನ್ನು ಹೇಳುವುದು ಸೆರೆಯಾಗಿದೆ ಎಂದು ಎನ್‌ಡಿಟಿವಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಟ್ರೈಬಲ್ ಆರ್ಮಿ ಸಂಸ್ಥಾಪಕ ಹಂಸರಾಜ್ ಮೀನಾ, ರಾಮ್‌ದೇವ್, ನೀವು ಬ್ರಾಹ್ಮಣರಾಗಿ, ಠಾಕೂರ್ ಆಗಿರಿ, ವ್ಯಾಪಾರಿಯಾಗಿರಿ.. ನಮಗೆ ಪರವಾಗಿಲ್ಲ ಆದರೆ ನೀವು ಜಾತಿ ಶ್ರೇಷ್ಠತೆಯ ಬೂಟಾಟಿಕೆಯನ್ನು ಹೇಗೆ ವ್ಯಕ್ತಪಡಿಸುತ್ತೀರಿ ಮತ್ತು OBC ಸಮುದಾಯವನ್ನು ಹೇಗೆ ಅವಮಾನಿಸುತ್ತೀರಿ?ಒಬಿಸಿ ಸಮುದಾಯವು ಪತಂಜಲಿಯ ಸರಕುಗಳನ್ನು ಬಹಿಷ್ಕರಿಸುವ ದಿನ ಈ ಅಂಗಡಿಯನ್ನು ಮುಚ್ಚಲಾಗುತ್ತದೆ ಎಂಬುದನ್ನು ನೆನಪಿನಲ್ಲಿಡಿ ಎಂದು #BoycottPatanjali ಎಂಬ ಹ್ಯಾಶ್‌ಟ್ಯಾಗ್ ಸೇರಿಸಿ ಪೋಸ್ಟ್‌ ಮಾಡಿದ್ದಾರೆ.

ಇದನ್ನು ಓದಿ: ಬುಡಕಟ್ಟು ಕುಟುಂಬಗಳಿಗೆ ಬಹಿಷ್ಕಾರ ಹಾಕಿದ ಗ್ರಾಮದ ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...