Homeಮುಖಪುಟಆಹಾರದ ಹಣದುಬ್ಬರ ದರ 9.53%ಕ್ಕೆ ಏರಿಕೆ; ಕೈಗಾರಿಕಾ ಉತ್ಪಾದನೆಯಲ್ಲೂ ಕುಸಿತ

ಆಹಾರದ ಹಣದುಬ್ಬರ ದರ 9.53%ಕ್ಕೆ ಏರಿಕೆ; ಕೈಗಾರಿಕಾ ಉತ್ಪಾದನೆಯಲ್ಲೂ ಕುಸಿತ

- Advertisement -
- Advertisement -

ಭಾರತದಲ್ಲಿ ಚಿಲ್ಲರೆ ಆಹಾರದ ಹಣದುಬ್ಬರ ದರವು ಡಿಸೆಂಬರ್‌ನಲ್ಲಿ 9.53%ಕ್ಕೆ ಏರಿಕೆಯಾಗಿದ್ದು, ಗ್ರಾಹಕ ಆಹಾರ ಬೆಲೆ ಸೂಚ್ಯಂಕವು (CFPI) ಅದೇ ಅವಧಿಯಲ್ಲಿ 0.88% ರಷ್ಟು ಅನುಕ್ರಮ ಕುಸಿತವನ್ನು ಕಂಡಿದೆ. ಡಿಸೆಂಬರ್ 2022ರ ವಾರ್ಷಿಕ ಆಹಾರ ಹಣದುಬ್ಬರವು 4.19% ರಷ್ಟಿತ್ತು ಎಂದು ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಿನಬಳಕೆಯ ಆಹಾರ ಬುಟ್ಟಿಯಲ್ಲಿನ ಪದಾರ್ಥಗಳ ದರ ಏರಿಕೆಯಾಗುತ್ತಿದೆ. ಹಿಂದಿನ ವರ್ಷದ ಅಕ್ಟೋಬರ್‌ನಲ್ಲಿ ಆಹಾರ ಪದಾರ್ಥಗಳ ಬೆಲೆಯು ಶೇ 4.67ರಷ್ಟಿತ್ತು. ಪ್ರಸಕ್ತ ಸಾಲಿನ ಅಕ್ಟೋಬರ್‌ನಲ್ಲಿ ಶೇ 8.7ರಷ್ಟು ಏರಿಕೆಯಾಗಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿಯು (ಎನ್‌ಎಸ್‌ಒ) ತಿಳಿಸಿತ್ತು. ನವೆಂಬರ್‌ನಲ್ಲೂ ಚಿಲ್ಲರೆ ಆಹಾರದ ಹಣದುಬ್ಬರ ದರವು 8.7% ರಷ್ಟಿತ್ತು, ಅದು ಡಿಸೆಂಬರ್‌ನಲ್ಲಿ 9.53%ಕ್ಕೆ ಏರಿಕೆಯಾಗಿದೆ. ಕೈಗಾರಿಕಾ ಉತ್ಪಾದನೆಯ ಬೆಳವಣಿಗೆಯು ನವೆಂಬರ್‌ನಲ್ಲಿ ಎಂಟು ತಿಂಗಳ ಕನಿಷ್ಠ 2.4%ಗೆ ಕುಸಿದಿದೆ.

ತರಕಾರಿಗಳ ಹಣದುಬ್ಬರದಲ್ಲಿ ಗಮನಾರ್ಹ ಏರಿಕೆಯಾಗಿದೆ. ನವೆಂಬರ್‌ನಲ್ಲಿ ಶೇ. 17.7ರಷ್ಟಿದ್ದ ಹಣದುಬ್ಬರ, ಡಿಸೆಂಬರ್‌ನಲ್ಲಿ ಶೇ. 27.64ಕ್ಕೆ ಹೆಚ್ಚಳವಾಗಿದೆ. ಗ್ರಾಹಕರ ಆಹಾರ ಬೆಲೆ ಸೂಚ್ಯಂಕವು CFPI ಆಗಸ್ಟ್‌ನಲ್ಲಿ 9.94%ರಷ್ಟಿತ್ತು ಸೆಪ್ಟೆಂಬರ್‌ನಲ್ಲಿ 6.62%ಕ್ಕೆ ಇಳಿದಿದೆ, ಪ್ರಾಥಮಿಕವಾಗಿ ಇದು ಟೊಮೆಟೊ ಬೆಲೆಗಳಿಂದ ಪ್ರಭಾವಿತವಾಗಿದೆ ಎಂದು ವರದಿಯಾಗಿದೆ.

ಚಿಲ್ಲರೆ ಈರುಳ್ಳಿ ಹಣದುಬ್ಬರವು ಡಿಸೆಂಬರ್‌ನಲ್ಲಿ 74.17% ರಷ್ಟು ಏರಿಕೆಯಾಯಿತು, ಹಲವಾರು ನಗರಗಳಲ್ಲಿ ಈರುಳ್ಳಿ ಕೆಜಿಗೆ 90ರೂ.ಗೆ ತಲುಪಿತ್ತು. ಇದು ರಫ್ತು ನಿಷೇಧವನ್ನು ವಿಧಿಸಲು ಸರ್ಕಾರವನ್ನು ಪ್ರೇರೇಪಿಸಿತು.  ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಅಕಾಲಿಕ ಮಳೆ ಬೆಳೆಗಳ ಮೇಲೆ ಪರಿಣಾಮ ಬೀರಿದೆ. ಆದರೆ ಈ ತಿಂಗಳ ಆರಂಭದಿಂದ ಈರುಳ್ಳಿ ಬೆಲೆಗಳಲ್ಲಿ ಕಡಿತವಾಗಿದೆ ಮತ್ತು ಈ ಕುಸಿತವು ಜನವರಿ 2024ರ ಹಣದುಬ್ಬರ ಅಂಕಿಅಂಶಗಳ ಮೇಲೆ ಪ್ರಭಾವ ಬೀರುವ ನಿರೀಕ್ಷೆ ಇದೆ.

ದ್ವಿದಳ ಧಾನ್ಯಗಳ ಹಣದುಬ್ಬರವು ಡಿಸೆಂಬರ್‌ನಲ್ಲಿ 20.73% ಕ್ಕೆ ಏರಿಕೆಯಾಗಿದೆ. ಇದು ನವೆಂಬರ್‌ನಲ್ಲಿ 20.23% ರಷ್ಟಿತ್ತು. ಮಸಾಲೆ ಪದಾರ್ಥಗಳ ಹಣದುಬ್ಬರ ಶೇ. 19.69ರಷ್ಟಿದೆ. ಆದರೆ ತೈಲ ಮತ್ತು ಫ್ಯಾಟ್‌ ದರಗಳು ಶೇ. 14.96ರಷ್ಟು ಕಡಿಮೆಯಾಗಿದೆ. ಇಳಿಮುಖವಾಗುತ್ತಿರುವ ಉತ್ಪಾದನೆ ಮತ್ತು ಬೇಳೆಕಾಳುಗಳ ಬೇಡಿಕೆಯು ಹಣದುಬ್ಬರ ಏರಿಕೆಗೆ ಪ್ರಮುಖ ಅಂಶಗಳಾಗಿವೆ. ಒಟ್ಟಾರೆ ಧಾನ್ಯಗಳ ಹಣದುಬ್ಬರವು ನವೆಂಬರ್ 2023ರಲ್ಲಿ 10.27% ರಿಂದ ಡಿಸೆಂಬರ್‌ನಲ್ಲಿ 9.93% ಕ್ಕೆ ಇಳಿದಿದೆ. ಇದಕ್ಕೆ ಕಾರಣ ಗೋಧಿ ಬೆಲೆಯಲ್ಲಿ ಸ್ವಲ್ಪ ಇಳಿಮಖವಾಗಿರುವುದಾಗಿದೆ.

ಚಿಲ್ಲರೆ ಅಕ್ಕಿ ಬೆಲೆಗಳು ನವೆಂಬರ್‌ನಲ್ಲಿ 11.81%ಕ್ಕೆ ಹೋಲಿಕೆ ಮಾಡಿದರೆ ಡಿಸೆಂಬರ್‌ನಲ್ಲಿ 12.33% ರಷ್ಟು ಏರಿಕೆಯಾಗಿದೆ. ಬಿಳಿ ಅಕ್ಕಿ ರಫ್ತುಗಳನ್ನು ನಿಷೇಧ ಮತ್ತು ಪಾರ್-ಬಾಯ್ಲ್ಡ್ ರೈಸ್ ಮೇಲೆ 20% ರಫ್ತು ಸುಂಕವನ್ನು ವಿಧಿಸುವ ಸರ್ಕಾರದ ಕ್ರಮಗಳು ಈ ಹೆಚ್ಚಳಕ್ಕೆ ಕಾರಣವಾಗಿವೆ. ಇಂಧನ ಹಣದುಬ್ಬರವು ನವೆಂಬರ್‌ನಲ್ಲಿ ಶೇ. 0.77ರಷ್ಟು ಕಡಿಮೆಯಾಗಿತ್ತು. ಡಿಸೆಂಬರ್‌ನಲ್ಲಿ ಇದು ಶೇ. 0.99ರಷ್ಟು ತಗ್ಗಿದೆ.

ಅಕ್ಕಿ, ಗೋಧಿ ಮತ್ತು ಬೇಳೆಕಾಳುಗಳಂತಹ ಕೆಲವು ವಸ್ತುಗಳ ಹಣದುಬ್ಬರ ಸ್ವಲ್ಪಮಟ್ಟಿಗೆ ನಿಧಾನವಾಗಿರುತ್ತದೆ. ಡಿಸೆಂಬರ್‌ 2023ರಲ್ಲಿ ಚಿಲ್ಲರೆ ಹಣದುಬ್ಬರ ಏರಿಕೆಗೆ ಆಹಾರ ಮತ್ತು ಪಾನೀಯಗಳ ದರ ಹೆಚ್ಚಳ ಪ್ರಮುಖ ಕಾರಣವಾಗಿದೆ. ಆಹಾರ ವಿಭಾಗದಲ್ಲಿ ತರಕಾರಿಗಳ ದರ ಹೆಚ್ಚಳ ಗಮನಾರ್ಹವಾಗಿದೆ ಎಂದು ಐಸಿಆರ್‌ಎ ಮುಖ್ಯ ಅರ್ಥಶಾಸ್ತ್ರಜ್ಞೆ ಅದಿತಿ ನಾಯರ್‌ ಹೇಳಿದ್ದಾರೆ.

ಇದನ್ನು ಓದಿ: ‘ಒಬಿಸಿ’ ಸಮುದಾಯವನ್ನು ಅವಮಾನಿಸಿದ ಬಾಬಾ ರಾಮ್‌ದೇವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...