Homeಅಂತರಾಷ್ಟ್ರೀಯ'ತೈವಾನ್‌' ಸ್ವಾತಂತ್ರ್ಯವನ್ನು 'ಅಮೆರಿಕ' ಬೆಂಬಲಿಸುವುದಿಲ್ಲ!

‘ತೈವಾನ್‌’ ಸ್ವಾತಂತ್ರ್ಯವನ್ನು ‘ಅಮೆರಿಕ’ ಬೆಂಬಲಿಸುವುದಿಲ್ಲ!

- Advertisement -
- Advertisement -

ತೈವಾನ್ ನೂತನ ಅಧ್ಯಕ್ಷರಾಗಿ ಡೆಮಾಕ್ರಟಿಕ್ ಪ್ರೋಗ್ರೆಸ್ಸೀವ್ ಪಕ್ಷದ ಲಾಯ್ ಚಿಂಗ್ ಟೆ ನಿನ್ನೆ ಆಯ್ಕೆಯಾಗಿದ್ದಾರೆ. ಚೀನಾದ ತೀವ್ರ ವಿರೋಧ, ಬೆದರಿಕೆ ಮಧ್ಯೆ ತೈವಾನ್ ಪ್ರಜಾಪ್ರಭುತ್ವದಲ್ಲಿ ಲಾಯ್ ಚಿಂಗ್ ಟೆ ಹೊಸ ಅಧ್ಯಾಯ ಬರೆದಿದ್ದಾರೆ. ಮತದಾನಕ್ಕೆ ಮುನ್ನ ಲಾಯ್ ಅವರನ್ನು ಸೋಲಿಸುವಂತೆ ತೈವಾನ್ ಜನರಿಗೆ ‘ಚೀನಾ’ ಕೇಳಿಕೊಂಡಿತ್ತು. ಆದರೆ ತೈವಾನ್‌ನ ಮತದಾರರು ಚೀನಾದ ಬೇಡಿಕೆಯನ್ನು ತಿರಸ್ಕರಿಸಿ ಆಡಳಿತ ಪಕ್ಷಕ್ಕೆ 3ನೇ ಬಾರಿಗೆ ಗೆಲುವನ್ನು ನೀಡಿದ್ದಾರೆ. ತೈವಾನ್‌ನ ಮತದಾರರು ಚೀನಾ ವಿರೋಧಿ ಸರ್ಕಾರವನ್ನು ಆಯ್ಕೆ ಮಾಡಿರುವುದು ‘ಯುಎಸ್‌’ನ ಗೆಲುವು ಎಂದು ಹೇಳಲಾಗುತ್ತಿದ್ದರೂ, ತೈವಾನ್‌ನ ಸ್ವಾತಂತ್ರ್ಯವನ್ನು ಯುಎಸ್ ಬೆಂಬಲಿಸುವುದಿಲ್ಲ ಎಂದು ಬಿಡೆನ್ ಹೇಳಿದ್ದಾರೆ.

ಚೀನಾದೊಂದಿಗೆ ವ್ಯಾಪಾರ ಮತ್ತು ರಾಜತಾಂತ್ರಿಕತೆಯನ್ನು ವಿಸ್ತರಿಸಲು ಪ್ರತಿಜ್ಞೆ ಮಾಡಿದ್ದ ತೈವಾನ್‌ನ ವಿರೋಧ ಪಕ್ಷವಾದ  ನ್ಯಾಶನಲಿಸ್ಟ್ ಪಾರ್ಟಿಯ ಹೌ ಯು-ಇಹ್ ಅವರು ಸೋತಿದ್ದಾರೆ. ಯುಎಸ್‌ನೊಂದಿಗೆ ನಿಕಟ ಸಂಬಂಧವನ್ನು ಇಟ್ಟುಕೊಂಡಿರುವ ಲಾಯ್ ಚುನಾವಣೆಯಲ್ಲಿ ಗೆಲುವನ್ನು ಸಾಧಿಸಿದ್ದಾರೆ.

ತೈವಾನ್ ದ್ವೀಪವು ತನ್ನ ಭೂಪ್ರದೇಶ ಎಂದು ಚೀನಾ ದೀರ್ಘಕಾಲ ಹೇಳಿಕೊಂಡಿದೆ ಮತ್ತು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಏಕೀಕರಣಕ್ಕಾಗಿ ಪ್ರತಿಪಾದಿಸಿದ್ದರು ಮತ್ತು ಮಿಲಿಟರಿ ಹಸ್ತಕ್ಷೇಪವನ್ನು ತಳ್ಳಿಹಾಕಲು ನಿರಾಕರಿಸಿದ್ದರು. 1949ರಲ್ಲಿ ಚೀನಾದಿಂದ ಬೇರ್ಪಟ್ಟ ತೈವಾನ್‌ ಬಳಿಕ ಚೀನಾವನ್ನು ಸೇರಿಕೊಂಡೇ ಇಲ್ಲ. ಆದರೆ ತೈವಾನ್ ಯಾವತ್ತಿದ್ದರೂ ತನ್ನ ಭಾಗವೇ ಎಂದು ಚೀನಾ ಹೇಳುತ್ತಿದೆ. ಯಾವುದೇ ರಾಷ್ಟ್ರ ತೈವಾನ್‌ನೊಂದಿಗೆ ದ್ವಿಪಕ್ಷೀಯ ಒಪ್ಪಂದ ಮಾಡಿಕೊಳ್ಳುವುದನ್ನು ತಾನು ಒಪ್ಪುವುದಿಲ್ಲ ಎಂದು ಚೀನಾ ಹೇಳಿಕೊಂಡಿತ್ತು.

ಯುಎಸ್ 1970 ರಿಂದ ‘ಒನ್ ಚೀನಾ ನೀತಿ’ಯನ್ನು ನಿರ್ವಹಿಸುತ್ತಿದೆ ಮತ್ತು ತೈವಾನ್‌ನ್ನು ಚೀನಾದ ಭಾಗವಾಗಿ ಗುರುತಿಸಿದೆ. ಆದರೆ ಅದೇ ಸಮಯದಲ್ಲಿ ಅವರು ತೈವಾನ್ ಜೊತೆಗೆ ಅನಧಿಕೃತ ಸಂಬಂಧವನ್ನು ಸಹ ಇಟ್ಟುಕೊಂಡಿದೆ. ಈ ಬೆಳವಣಿಗೆಯ ಉದ್ದೇಶ ಅಸ್ಪಷ್ಟವಾಗಿದೆ ಎಂದು ಹೇಳಲಾಗಿದೆ. ಚೀನಾ ತೈವಾನ್ ಮೇಲೆ ಆಕ್ರಮಣ ಮಾಡಿದರೆ ಯುಎಸ್ ಮಿಲಿಟರಿ ಮಧ್ಯಪ್ರವೇಶಿಸುತ್ತದೆ ಎಂಬ ಬಿಡೆನ್ ಅವರ ಹೇಳಿಕೆಗಳು ಯುಎಸ್ ಮತ್ತು ಬೀಜಿಂಗ್ ನಡುವಿನ ಸಂಬಂಧವನ್ನು ಹದಗೆಡಿಸಿವೆ. ತೈವಾನ್‌ ಮೇಲೆ ಯುಎಸ್‌ಗೆ ಇರುವ ಕಾಳಜಿಯನ್ನು ಬಹಿರಂಗಪಡಿಸುತ್ತದೆ.

ಈ ಚುನಾವಣೆಯು ತೈವಾನ್‌ನ ದೃಢವಾದ ಪ್ರಜಾಪ್ರಭುತ್ವ ವ್ಯವಸ್ಥೆಯ ಶಕ್ತಿಯನ್ನು ತೋರಿಸುತ್ತದೆ ಎಂದು ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಹೇಳಿದರು. ಯುಎಸ್ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಲು ಮತ್ತು ಬಲಾತ್ಕಾರ ಮತ್ತು ಒತ್ತಡದಿಂದ ಮುಕ್ತವಾಗಿ ಭಿನ್ನಾಭಿಪ್ರಾಯಗಳ ಬಗ್ಗೆ ಶಾಂತಿಯುತ ಪರಿಹಾರವನ್ನು ಕಾಪಾಡಿಕೊಳ್ಳಲು ಬದ್ಧವಾಗಿದೆ ಎಂದು ಪುನರುಚ್ಚರಿಸಿದರು. ಯುಎಸ್ ನ ಒನ್‌-ಚೀನಾ ನೀತಿಗೆ ಅನುಗುಣವಾಗಿ ನಮ್ಮ ದೀರ್ಘಕಾಲದ ಸಂಬಂಧವನ್ನು ಹೆಚ್ಚಿಸಲು ಲೈ ಮತ್ತು ತೈವಾನ್‌ನ ಎಲ್ಲಾ ಪಕ್ಷದ ನಾಯಕರೊಂದಿಗೆ ಯುಎಸ್ ಕೆಲಸ ಮಾಡುತ್ತದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತೈವಾನ್ ದ್ವೀಪ:

ಚೀನಾದ ಆಗ್ನೇಯ ಕರಾವಳಿಯಿಂದ ಸುಮಾರು 160 ಕಿಮೀ ದೂರದಲ್ಲಿ ತೈವಾನ್ ದ್ವೀಪವಿದೆ, ಅದರ ಮುಂದೆ ಚೀನಾದ ಫುಝೌ, ಕ್ವಾಝೌ ಮತ್ತು ಕ್ಸಿಯಾಮೆನ್ ನಗರಗಳಿವೆ. ಇಲ್ಲಿ ಮೊದಲು ರಾಜವಂಶದ ಸಾಮ್ರಾಜ್ಯವಿತ್ತು, ಆದರೆ 1895ರಲ್ಲಿ ಅದು ಜಪಾನ್‌ನ ಆಕ್ರಮಣಕ್ಕೆ ಒಳಗಾಯಿತು. ಎರಡನೆಯ ಮಹಾಯುದ್ಧದಲ್ಲಿ ಚೀನಾ ಜಪಾನ್‌ನ್ನು ಸೋಲಿಸಿದ ನಂತರ ಈ ದ್ವೀಪದ ನಿಯಂತ್ರಣವು ಚೀನಾದ ಕೈಗೆ ಬಂದಿತ್ತು. ಇದರ ನಂತರ ಕಮ್ಯುನಿಸ್ಟ್ ನಾಯಕ ಮಾವೋ ಝೆಡಾಂಗ್ ಚೀನಾದ ಮೇನ್‌ಲ್ಯಾಂಡ್‌ನಲ್ಲಿ ಅಂತರ್ಯುದ್ಧವನ್ನು ಗೆದ್ದರು, ಈ ಸಮಯದಲ್ಲಿ ನ್ಯಾಶನಲಿಸ್ಟ್ ಕೌಮಿಂಟಾಂಗ್ ಪಕ್ಷದ ನಾಯಕ ಚಿಯಾಂಗ್ ಕೈ-ಶೆಕ್ 1949ರಲ್ಲಿ ತೈವಾನ್‌ಗೆ ಪಲಾಯನಗೈದಿದ್ದರು.

ಚಿಯಾಂಗ್ ಕೈ-ಶೇಕ್ ಈ ದ್ವೀಪದಲ್ಲಿ ಚೀನಾ ಗಣರಾಜ್ಯದ ಸರ್ಕಾರವನ್ನು ಸ್ಥಾಪಿಸಿದರು ಮತ್ತು 1975ರವರೆಗೆ ಅದರ ಅಧ್ಯಕ್ಷರಾಗಿದ್ದರು. ಬೀಜಿಂಗ್ ತೈವಾನ್‌ನ್ನು ಸ್ವತಂತ್ರ ದೇಶವೆಂದು ಎಂದಿಗೂ ಒಪ್ಪಿಕೊಂಡಿಲ್ಲ ಮತ್ತು ಅದನ್ನು ಯಾವಾಗಲೂ ಚೀನಾದ ಅವಿಭಾಜ್ಯ ಅಂಗವೆಂದೇ ಹೇಳಿಕೊಂಡು ಬಂದಿದೆ. ಮತ್ತೊಂದೆಡೆ ತೈವಾನ್ ಆಧುನಿಕ ಚೀನೀ ರಾಜ್ಯವು 1911ರ ಕ್ರಾಂತಿಯ ನಂತರ ಅಸ್ತಿತ್ವಕ್ಕೆ ಬಂದಿತು. ತೈವಾನ್ ಕಮ್ಯುನಿಸ್ಟ್ ಕ್ರಾಂತಿಯ ನಂತರ ಸ್ಥಾಪಿತವಾದ ರಾಜ್ಯ, ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಭಾಗವಾಗಿರಲಿಲ್ಲ ಎಂದು ವಾದಿಸುತ್ತದೆ. ಅಂದಿನಿಂದ ಈ ರಾಜಕೀಯ ಉದ್ವಿಗ್ನತೆ ಮುಂದುವರಿದಿದೆ, ಚೀನಾ ಮತ್ತು ತೈವಾನ್ ನಡುವೆ ಆರ್ಥಿಕ ಸಂಬಂಧಗಳು ಸಹ ಇದ್ದವು. ಅನೇಕ ತೈವಾನ್‌  ವಲಸಿಗರು ಚೀನಾದಲ್ಲಿ ಕೆಲಸ ಮಾಡುತ್ತಾರೆ ಮತ್ತು ಚೀನಾ ಕೂಡ ತೈವಾನ್‌ನಲ್ಲಿ ಹೂಡಿಕೆ ಮಾಡಿದೆ.

ಯುಎಸ್-ತೈವಾನ್:

ಯುಎಸ್ ತೈವಾನ್ ಅನ್ನು ಪ್ರತ್ಯೇಕ ದೇಶವೆಂದು ಗುರುತಿಸುವುದಿಲ್ಲ. ವಿಶ್ವದ ಕೇವಲ 13 ದೇಶಗಳು ತೈವಾನ್ ಅನ್ನು ಒಂದು ದೇಶವೆಂದು ಗುರುತಿಸುತ್ತಿವೆ. ಇದರಲ್ಲಿ ಮುಖ್ಯವಾಗಿ ದಕ್ಷಿಣ ಅಮೇರಿಕಾ, ಕೆರಿಬಿಯನ್, ಓಷಿಯಾನಿಯಾ ಮತ್ತು ವ್ಯಾಟಿಕನ್ ದೇಶಗಳು ಸೇರಿವೆ. ಈ ವಿಷಯದಲ್ಲಿ ಅಮೆರಿಕ ಯಾವಾಗಲೂ ತನ್ನ ಕಾರ್ಯತಂತ್ರವನ್ನು ಅಸ್ಪಷ್ಟವಾಗಿ ಇರಿಸಿದೆ. ಜೂನ್‌ನಲ್ಲಿ ಅಧ್ಯಕ್ಷ ಬೈಡೆನ್ ಅವರು ತೈವಾನ್‌ನ ಮೇಲೆ ದಾಳಿಯಾದರೆ ಅದನ್ನು ಯುಎಸ್ ರಕ್ಷಿಸುತ್ತದೆ ಎಂದು ಹೇಳಿದ್ದರು. ಆದರೆ ತೈವಾನ್‌ನ ಸ್ವಾತಂತ್ರ್ಯವನ್ನು ಯುಎಸ್ ಬೆಂಬಲಿಸುವುದಿಲ್ಲ ಎಂದು ಹೇಳಿದ್ದರು. ತೈವಾನ್ ಜೊತೆ US ಯಾವುದೇ ಔಪಚಾರಿಕ ಸಂಬಂಧವನ್ನು ಹೊಂದಿಲ್ಲ. ಯುಎಸ್‌ ಅಂತಾರಾಷ್ಟ್ರೀಯವಾಗಿ ತೈವಾನ್‌ಗೆ  ಬೆಂಬಲಿಸುತ್ತದೆ ಮತ್ತು ಶಸ್ತ್ರಾಸ್ತ್ರಗಳ ಪೂರೈಕೆಯನ್ನು ಮಾಡುತ್ತದೆ.

ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಈ ಹಿಂದೆ ತೈವಾನ್‌ಗೆ ತೆರಳಿದ್ದರು. ತೈವಾನ್‌ನಲ್ಲಿ ಅಮೆರಿಕದ ಹಿರಿಯ ವ್ಯಕ್ತಿಯ ಉಪಸ್ಥಿತಿಯು ಯುಎಸ್ ತನ್ನ ಸ್ವಾತಂತ್ರ್ಯಕ್ಕಾಗಿ ತೈವಾನ್‌ನ್ನು ಬೆಂಬಲಿಸುತ್ತದೆ ಎಂದು ಸ್ಪಷ್ಟವಾಗಿ ಸೂಚಿಸುತ್ತದೆ ಎಂದು ಚೀನಾ ಭಾವಿಸಿತ್ತು.

ಇದನ್ನು ಓದಿ: ‘ಒಬಿಸಿ’ ಸಮುದಾಯವನ್ನು ಅವಮಾನಿಸಿದ ಬಾಬಾ ರಾಮ್‌ದೇವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...