Homeಅಂತರಾಷ್ಟ್ರೀಯ'ತೈವಾನ್‌' ಸ್ವಾತಂತ್ರ್ಯವನ್ನು 'ಅಮೆರಿಕ' ಬೆಂಬಲಿಸುವುದಿಲ್ಲ!

‘ತೈವಾನ್‌’ ಸ್ವಾತಂತ್ರ್ಯವನ್ನು ‘ಅಮೆರಿಕ’ ಬೆಂಬಲಿಸುವುದಿಲ್ಲ!

- Advertisement -
- Advertisement -

ತೈವಾನ್ ನೂತನ ಅಧ್ಯಕ್ಷರಾಗಿ ಡೆಮಾಕ್ರಟಿಕ್ ಪ್ರೋಗ್ರೆಸ್ಸೀವ್ ಪಕ್ಷದ ಲಾಯ್ ಚಿಂಗ್ ಟೆ ನಿನ್ನೆ ಆಯ್ಕೆಯಾಗಿದ್ದಾರೆ. ಚೀನಾದ ತೀವ್ರ ವಿರೋಧ, ಬೆದರಿಕೆ ಮಧ್ಯೆ ತೈವಾನ್ ಪ್ರಜಾಪ್ರಭುತ್ವದಲ್ಲಿ ಲಾಯ್ ಚಿಂಗ್ ಟೆ ಹೊಸ ಅಧ್ಯಾಯ ಬರೆದಿದ್ದಾರೆ. ಮತದಾನಕ್ಕೆ ಮುನ್ನ ಲಾಯ್ ಅವರನ್ನು ಸೋಲಿಸುವಂತೆ ತೈವಾನ್ ಜನರಿಗೆ ‘ಚೀನಾ’ ಕೇಳಿಕೊಂಡಿತ್ತು. ಆದರೆ ತೈವಾನ್‌ನ ಮತದಾರರು ಚೀನಾದ ಬೇಡಿಕೆಯನ್ನು ತಿರಸ್ಕರಿಸಿ ಆಡಳಿತ ಪಕ್ಷಕ್ಕೆ 3ನೇ ಬಾರಿಗೆ ಗೆಲುವನ್ನು ನೀಡಿದ್ದಾರೆ. ತೈವಾನ್‌ನ ಮತದಾರರು ಚೀನಾ ವಿರೋಧಿ ಸರ್ಕಾರವನ್ನು ಆಯ್ಕೆ ಮಾಡಿರುವುದು ‘ಯುಎಸ್‌’ನ ಗೆಲುವು ಎಂದು ಹೇಳಲಾಗುತ್ತಿದ್ದರೂ, ತೈವಾನ್‌ನ ಸ್ವಾತಂತ್ರ್ಯವನ್ನು ಯುಎಸ್ ಬೆಂಬಲಿಸುವುದಿಲ್ಲ ಎಂದು ಬಿಡೆನ್ ಹೇಳಿದ್ದಾರೆ.

ಚೀನಾದೊಂದಿಗೆ ವ್ಯಾಪಾರ ಮತ್ತು ರಾಜತಾಂತ್ರಿಕತೆಯನ್ನು ವಿಸ್ತರಿಸಲು ಪ್ರತಿಜ್ಞೆ ಮಾಡಿದ್ದ ತೈವಾನ್‌ನ ವಿರೋಧ ಪಕ್ಷವಾದ  ನ್ಯಾಶನಲಿಸ್ಟ್ ಪಾರ್ಟಿಯ ಹೌ ಯು-ಇಹ್ ಅವರು ಸೋತಿದ್ದಾರೆ. ಯುಎಸ್‌ನೊಂದಿಗೆ ನಿಕಟ ಸಂಬಂಧವನ್ನು ಇಟ್ಟುಕೊಂಡಿರುವ ಲಾಯ್ ಚುನಾವಣೆಯಲ್ಲಿ ಗೆಲುವನ್ನು ಸಾಧಿಸಿದ್ದಾರೆ.

ತೈವಾನ್ ದ್ವೀಪವು ತನ್ನ ಭೂಪ್ರದೇಶ ಎಂದು ಚೀನಾ ದೀರ್ಘಕಾಲ ಹೇಳಿಕೊಂಡಿದೆ ಮತ್ತು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಏಕೀಕರಣಕ್ಕಾಗಿ ಪ್ರತಿಪಾದಿಸಿದ್ದರು ಮತ್ತು ಮಿಲಿಟರಿ ಹಸ್ತಕ್ಷೇಪವನ್ನು ತಳ್ಳಿಹಾಕಲು ನಿರಾಕರಿಸಿದ್ದರು. 1949ರಲ್ಲಿ ಚೀನಾದಿಂದ ಬೇರ್ಪಟ್ಟ ತೈವಾನ್‌ ಬಳಿಕ ಚೀನಾವನ್ನು ಸೇರಿಕೊಂಡೇ ಇಲ್ಲ. ಆದರೆ ತೈವಾನ್ ಯಾವತ್ತಿದ್ದರೂ ತನ್ನ ಭಾಗವೇ ಎಂದು ಚೀನಾ ಹೇಳುತ್ತಿದೆ. ಯಾವುದೇ ರಾಷ್ಟ್ರ ತೈವಾನ್‌ನೊಂದಿಗೆ ದ್ವಿಪಕ್ಷೀಯ ಒಪ್ಪಂದ ಮಾಡಿಕೊಳ್ಳುವುದನ್ನು ತಾನು ಒಪ್ಪುವುದಿಲ್ಲ ಎಂದು ಚೀನಾ ಹೇಳಿಕೊಂಡಿತ್ತು.

ಯುಎಸ್ 1970 ರಿಂದ ‘ಒನ್ ಚೀನಾ ನೀತಿ’ಯನ್ನು ನಿರ್ವಹಿಸುತ್ತಿದೆ ಮತ್ತು ತೈವಾನ್‌ನ್ನು ಚೀನಾದ ಭಾಗವಾಗಿ ಗುರುತಿಸಿದೆ. ಆದರೆ ಅದೇ ಸಮಯದಲ್ಲಿ ಅವರು ತೈವಾನ್ ಜೊತೆಗೆ ಅನಧಿಕೃತ ಸಂಬಂಧವನ್ನು ಸಹ ಇಟ್ಟುಕೊಂಡಿದೆ. ಈ ಬೆಳವಣಿಗೆಯ ಉದ್ದೇಶ ಅಸ್ಪಷ್ಟವಾಗಿದೆ ಎಂದು ಹೇಳಲಾಗಿದೆ. ಚೀನಾ ತೈವಾನ್ ಮೇಲೆ ಆಕ್ರಮಣ ಮಾಡಿದರೆ ಯುಎಸ್ ಮಿಲಿಟರಿ ಮಧ್ಯಪ್ರವೇಶಿಸುತ್ತದೆ ಎಂಬ ಬಿಡೆನ್ ಅವರ ಹೇಳಿಕೆಗಳು ಯುಎಸ್ ಮತ್ತು ಬೀಜಿಂಗ್ ನಡುವಿನ ಸಂಬಂಧವನ್ನು ಹದಗೆಡಿಸಿವೆ. ತೈವಾನ್‌ ಮೇಲೆ ಯುಎಸ್‌ಗೆ ಇರುವ ಕಾಳಜಿಯನ್ನು ಬಹಿರಂಗಪಡಿಸುತ್ತದೆ.

ಈ ಚುನಾವಣೆಯು ತೈವಾನ್‌ನ ದೃಢವಾದ ಪ್ರಜಾಪ್ರಭುತ್ವ ವ್ಯವಸ್ಥೆಯ ಶಕ್ತಿಯನ್ನು ತೋರಿಸುತ್ತದೆ ಎಂದು ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಹೇಳಿದರು. ಯುಎಸ್ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಲು ಮತ್ತು ಬಲಾತ್ಕಾರ ಮತ್ತು ಒತ್ತಡದಿಂದ ಮುಕ್ತವಾಗಿ ಭಿನ್ನಾಭಿಪ್ರಾಯಗಳ ಬಗ್ಗೆ ಶಾಂತಿಯುತ ಪರಿಹಾರವನ್ನು ಕಾಪಾಡಿಕೊಳ್ಳಲು ಬದ್ಧವಾಗಿದೆ ಎಂದು ಪುನರುಚ್ಚರಿಸಿದರು. ಯುಎಸ್ ನ ಒನ್‌-ಚೀನಾ ನೀತಿಗೆ ಅನುಗುಣವಾಗಿ ನಮ್ಮ ದೀರ್ಘಕಾಲದ ಸಂಬಂಧವನ್ನು ಹೆಚ್ಚಿಸಲು ಲೈ ಮತ್ತು ತೈವಾನ್‌ನ ಎಲ್ಲಾ ಪಕ್ಷದ ನಾಯಕರೊಂದಿಗೆ ಯುಎಸ್ ಕೆಲಸ ಮಾಡುತ್ತದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತೈವಾನ್ ದ್ವೀಪ:

ಚೀನಾದ ಆಗ್ನೇಯ ಕರಾವಳಿಯಿಂದ ಸುಮಾರು 160 ಕಿಮೀ ದೂರದಲ್ಲಿ ತೈವಾನ್ ದ್ವೀಪವಿದೆ, ಅದರ ಮುಂದೆ ಚೀನಾದ ಫುಝೌ, ಕ್ವಾಝೌ ಮತ್ತು ಕ್ಸಿಯಾಮೆನ್ ನಗರಗಳಿವೆ. ಇಲ್ಲಿ ಮೊದಲು ರಾಜವಂಶದ ಸಾಮ್ರಾಜ್ಯವಿತ್ತು, ಆದರೆ 1895ರಲ್ಲಿ ಅದು ಜಪಾನ್‌ನ ಆಕ್ರಮಣಕ್ಕೆ ಒಳಗಾಯಿತು. ಎರಡನೆಯ ಮಹಾಯುದ್ಧದಲ್ಲಿ ಚೀನಾ ಜಪಾನ್‌ನ್ನು ಸೋಲಿಸಿದ ನಂತರ ಈ ದ್ವೀಪದ ನಿಯಂತ್ರಣವು ಚೀನಾದ ಕೈಗೆ ಬಂದಿತ್ತು. ಇದರ ನಂತರ ಕಮ್ಯುನಿಸ್ಟ್ ನಾಯಕ ಮಾವೋ ಝೆಡಾಂಗ್ ಚೀನಾದ ಮೇನ್‌ಲ್ಯಾಂಡ್‌ನಲ್ಲಿ ಅಂತರ್ಯುದ್ಧವನ್ನು ಗೆದ್ದರು, ಈ ಸಮಯದಲ್ಲಿ ನ್ಯಾಶನಲಿಸ್ಟ್ ಕೌಮಿಂಟಾಂಗ್ ಪಕ್ಷದ ನಾಯಕ ಚಿಯಾಂಗ್ ಕೈ-ಶೆಕ್ 1949ರಲ್ಲಿ ತೈವಾನ್‌ಗೆ ಪಲಾಯನಗೈದಿದ್ದರು.

ಚಿಯಾಂಗ್ ಕೈ-ಶೇಕ್ ಈ ದ್ವೀಪದಲ್ಲಿ ಚೀನಾ ಗಣರಾಜ್ಯದ ಸರ್ಕಾರವನ್ನು ಸ್ಥಾಪಿಸಿದರು ಮತ್ತು 1975ರವರೆಗೆ ಅದರ ಅಧ್ಯಕ್ಷರಾಗಿದ್ದರು. ಬೀಜಿಂಗ್ ತೈವಾನ್‌ನ್ನು ಸ್ವತಂತ್ರ ದೇಶವೆಂದು ಎಂದಿಗೂ ಒಪ್ಪಿಕೊಂಡಿಲ್ಲ ಮತ್ತು ಅದನ್ನು ಯಾವಾಗಲೂ ಚೀನಾದ ಅವಿಭಾಜ್ಯ ಅಂಗವೆಂದೇ ಹೇಳಿಕೊಂಡು ಬಂದಿದೆ. ಮತ್ತೊಂದೆಡೆ ತೈವಾನ್ ಆಧುನಿಕ ಚೀನೀ ರಾಜ್ಯವು 1911ರ ಕ್ರಾಂತಿಯ ನಂತರ ಅಸ್ತಿತ್ವಕ್ಕೆ ಬಂದಿತು. ತೈವಾನ್ ಕಮ್ಯುನಿಸ್ಟ್ ಕ್ರಾಂತಿಯ ನಂತರ ಸ್ಥಾಪಿತವಾದ ರಾಜ್ಯ, ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಭಾಗವಾಗಿರಲಿಲ್ಲ ಎಂದು ವಾದಿಸುತ್ತದೆ. ಅಂದಿನಿಂದ ಈ ರಾಜಕೀಯ ಉದ್ವಿಗ್ನತೆ ಮುಂದುವರಿದಿದೆ, ಚೀನಾ ಮತ್ತು ತೈವಾನ್ ನಡುವೆ ಆರ್ಥಿಕ ಸಂಬಂಧಗಳು ಸಹ ಇದ್ದವು. ಅನೇಕ ತೈವಾನ್‌  ವಲಸಿಗರು ಚೀನಾದಲ್ಲಿ ಕೆಲಸ ಮಾಡುತ್ತಾರೆ ಮತ್ತು ಚೀನಾ ಕೂಡ ತೈವಾನ್‌ನಲ್ಲಿ ಹೂಡಿಕೆ ಮಾಡಿದೆ.

ಯುಎಸ್-ತೈವಾನ್:

ಯುಎಸ್ ತೈವಾನ್ ಅನ್ನು ಪ್ರತ್ಯೇಕ ದೇಶವೆಂದು ಗುರುತಿಸುವುದಿಲ್ಲ. ವಿಶ್ವದ ಕೇವಲ 13 ದೇಶಗಳು ತೈವಾನ್ ಅನ್ನು ಒಂದು ದೇಶವೆಂದು ಗುರುತಿಸುತ್ತಿವೆ. ಇದರಲ್ಲಿ ಮುಖ್ಯವಾಗಿ ದಕ್ಷಿಣ ಅಮೇರಿಕಾ, ಕೆರಿಬಿಯನ್, ಓಷಿಯಾನಿಯಾ ಮತ್ತು ವ್ಯಾಟಿಕನ್ ದೇಶಗಳು ಸೇರಿವೆ. ಈ ವಿಷಯದಲ್ಲಿ ಅಮೆರಿಕ ಯಾವಾಗಲೂ ತನ್ನ ಕಾರ್ಯತಂತ್ರವನ್ನು ಅಸ್ಪಷ್ಟವಾಗಿ ಇರಿಸಿದೆ. ಜೂನ್‌ನಲ್ಲಿ ಅಧ್ಯಕ್ಷ ಬೈಡೆನ್ ಅವರು ತೈವಾನ್‌ನ ಮೇಲೆ ದಾಳಿಯಾದರೆ ಅದನ್ನು ಯುಎಸ್ ರಕ್ಷಿಸುತ್ತದೆ ಎಂದು ಹೇಳಿದ್ದರು. ಆದರೆ ತೈವಾನ್‌ನ ಸ್ವಾತಂತ್ರ್ಯವನ್ನು ಯುಎಸ್ ಬೆಂಬಲಿಸುವುದಿಲ್ಲ ಎಂದು ಹೇಳಿದ್ದರು. ತೈವಾನ್ ಜೊತೆ US ಯಾವುದೇ ಔಪಚಾರಿಕ ಸಂಬಂಧವನ್ನು ಹೊಂದಿಲ್ಲ. ಯುಎಸ್‌ ಅಂತಾರಾಷ್ಟ್ರೀಯವಾಗಿ ತೈವಾನ್‌ಗೆ  ಬೆಂಬಲಿಸುತ್ತದೆ ಮತ್ತು ಶಸ್ತ್ರಾಸ್ತ್ರಗಳ ಪೂರೈಕೆಯನ್ನು ಮಾಡುತ್ತದೆ.

ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಈ ಹಿಂದೆ ತೈವಾನ್‌ಗೆ ತೆರಳಿದ್ದರು. ತೈವಾನ್‌ನಲ್ಲಿ ಅಮೆರಿಕದ ಹಿರಿಯ ವ್ಯಕ್ತಿಯ ಉಪಸ್ಥಿತಿಯು ಯುಎಸ್ ತನ್ನ ಸ್ವಾತಂತ್ರ್ಯಕ್ಕಾಗಿ ತೈವಾನ್‌ನ್ನು ಬೆಂಬಲಿಸುತ್ತದೆ ಎಂದು ಸ್ಪಷ್ಟವಾಗಿ ಸೂಚಿಸುತ್ತದೆ ಎಂದು ಚೀನಾ ಭಾವಿಸಿತ್ತು.

ಇದನ್ನು ಓದಿ: ‘ಒಬಿಸಿ’ ಸಮುದಾಯವನ್ನು ಅವಮಾನಿಸಿದ ಬಾಬಾ ರಾಮ್‌ದೇವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...