Homeಮುಖಪುಟಪಕ್ಷ ತೊರೆದ ಕಾಂಗ್ರೆಸ್ ಹಿರಿಯ ನಾಯಕ ಮಿಲಿಂದ್ ದಿಯೋರಾ: ಶಿಂಧೆ ನೇತೃತ್ವದ ಶಿವಸೇನೆ ಸೇರುವ ಸಾಧ್ಯತೆ

ಪಕ್ಷ ತೊರೆದ ಕಾಂಗ್ರೆಸ್ ಹಿರಿಯ ನಾಯಕ ಮಿಲಿಂದ್ ದಿಯೋರಾ: ಶಿಂಧೆ ನೇತೃತ್ವದ ಶಿವಸೇನೆ ಸೇರುವ ಸಾಧ್ಯತೆ

- Advertisement -
- Advertisement -

‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಪ್ರಾರಂಭವಾಗುವ ಮುನ್ನವೇ ಮಹಾರಾಷ್ಟ್ರದ ಕಾಂಗ್ರೆಸ್ ಹಿರಿಯ ನಾಯಕ ಮಿಲಿಂದ್ ದಿಯೋರಾ ರಾಜೀನಾಮೆ ನೀಡಿದ್ದಾರೆ. ‘ಅವರು ಪಕ್ಷದಿಂದ ನಿರ್ಗಮಿಸುವ ಘೋಷಣೆಯ ಸಮಯವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಿರ್ಧರಿಸಿದ್ದಾರೆ’ ಎಂದು ಕಾಂಗ್ರೆಸ್ ಭಾನುವಾರ ಆರೋಪಿಸಿದೆ. ‘ಭಾರತ್ ಜೋಡೋ ಯಾತ್ರೆ ಮೇಲೆ ಇದು ಯಾವುದೇ ಪರಿಣಾಮ ಬೀರುವುದಿಲ್ಲ’ ಎಂದು ಪ್ರತಿಪಾದಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿಕೆ ನೀಡಿದ್ದು, ‘ಮಿಲಿಂದ್ ದಿಯೋರಾ ಅವರು ದೂರವಾಗುತ್ತಾರೆ. ಆದರೆ, ನಮ್ಮ ಸಂಘಟನೆ ಮತ್ತು ಸಿದ್ಧಾಂತವನ್ನು ನಂಬುವ ಲಕ್ಷಾಂತರ ಮಿಲಿಂದ್‌ಗಳು ಪಕ್ಷದಲ್ಲೆ ಉಳಿದಿದ್ದಾರೆ’ ಎಂದು ಹೇಳಿದರು.

ಕಳೆದ ಶುಕ್ರವಾರ ದಿಯೋರಾ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾಗಿ ರಮೇಶ್ ಹೇಳಿದರು. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ದಕ್ಷಿಣ ಮುಂಬೈ ಲೋಕಸಭಾ ಸ್ಥಾನಕ್ಕೆ ಹಕ್ಕು ಸಾಧಿಸುವ ಬಗ್ಗೆ ರಾಹುಲ್ ಗಾಂಧಿಯವರೊಂದಿಗೆ ಮಾತನಾಡಲಾಗುವುದು ಎಂದರು. ಮಿಲಿಂದ್ ದಿಯೋರಾ ಮತ್ತು ಅವರ ತಂದೆ ಮುರಳಿ ದಿಯೋರಾ ಇಬ್ಬರೂ ಮುಂಬೈ ದಕ್ಷಿಣದಿಂದ ಸಂಸದರಾಗಿ ಸೇವೆ ಸಲ್ಲಿಸಿದ್ದರು.

‘ಅವರು ಶುಕ್ರವಾರದಂದು 8:52 ಬೆಳಿಗ್ಗೆ ನನಗೆ ಸಂದೇಶ ಕಳುಹಿಸಿದರು. ನಂತರ ಮಧ್ಯಾಹ್ನ 2:47 ಕ್ಕೆ ನಾನು, ‘ನೀವು ಸ್ವಿಚ್ ಅನ್ನು ಯೋಜಿಸುತ್ತಿದ್ದೀರಾ?’ ಎಂದು ಉತ್ತರಿಸಿದೆ. 2:48ಕ್ಕೆ ಅವರು ಪ್ರತಿಕ್ರಿಯಿಸಿ, ‘ನಿಮ್ಮೊಂದಿಗೆ ಮಾತನಾಡುವುದು ಸಾಧ್ಯವಿಲ್ಲವೇ?’ ನಾನು ನಿಮಗೆ ಕರೆ ಮಾಡುತ್ತೇನೆ ಎಂದು ಹೇಳಿದರು. ನಂತರ, 3:40ಕ್ಕೆ ನಾನು ಅವರೊಂದಿಗೆ ಮಾತನಾಡಿದೆ’ ಎಂದು ವಿವರಿಸಿದರು.

‘ಇದು ಶಿವಸೇನೆಯ ಹಾಲಿ ಕ್ಷೇತ್ರ ಎಂದು ಅವರು (ದೇವರಾ) ಕಳವಳ ವ್ಯಕ್ತಪಡಿಸಿದ್ದಾರೆ. ಅವರು ರಾಹುಲ್ ಗಾಂಧಿಯನ್ನು ಭೇಟಿಯಾಗಿ, ತಮ್ಮ ಸೀಟಿನ ಬಗ್ಗೆ ಅವರಿಗೆ ವಿವರಿಸಲು ಬಯಸಿದ್ದರು. ನಾನು ಅದರ ಬಗ್ಗೆ ಗಾಂಧಿ ಅವರೊಂದಿಗೆ ಮಾತನಾಡಲು ಬಯಸುತ್ತೇನೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೇಳಿದರು.

’ನಿಸ್ಸಂಶಯವಾಗಿ ಇದೆಲ್ಲವೂ ಪ್ರಹಸನವಾಗಿದೆ; ಅವರು ಪಕ್ಷ ಬಿಡಲು ಮನಸ್ಸು ಮಾಡಿದ್ದರು. ಅವರ ನಿರ್ಗಮನದ ಘೋಷಣೆಯ ಸಮಯವನ್ನು ಪಿಎಂ ಸ್ಪಷ್ಟವಾಗಿ ನಿರ್ಧರಿಸಿದ್ದಾರೆ. ಇದನ್ನೆಲ್ಲಾ ಪ್ರಧಾನಿ ನಿರ್ಧರಿಸಿದ್ದಾರೆ, ದೇವರಾ “ಕೇವಲ ಕೈಗೊಂಬೆ” ಎಂದು ಆರೋಪಿಸಿದರು.

“ಭಾರತ್ ಜೋಡೋ ನ್ಯಾಯ್ ಯಾತ್ರೆಯು ಎಲ್ಲಾ ಪತ್ರಿಕೆಗಳಲ್ಲಿ, ಟಿವಿಯಲ್ಲಿ, ಎಲ್ಲೆಡೆ ಇದೆ. ಪ್ರಧಾನಮಂತ್ರಿಗಳು ಹೆಡ್‌ಲೈನ್ ಮ್ಯಾನೇಜ್‌ಮೆಂಟ್‌ನ ಗುರು. ಆದ್ದರಿಂದ, ‘ಮಿಲಿಂದ್ ದಿಯೋರಾ ಕಾಂಗ್ರೆಸ್ ತೊರೆದರು’ ಎಂಬ ಶೀರ್ಷಿಕೆಯನ್ನು ನೀಡಿದ್ದಾರೆ. ಆದರೆ, ಇದು ಯಾವುದೇ ಪರಿಣಾಮ ಬೀರುವುದಿಲ್ಲ” ಎಂದು ತಿಳಿಸಿದರು.

‘ಒಬ್ಬ ಮಿಲಿಂದ್ ದಿಯೋರಾ ದೂರವಾಗುತ್ತಾರೆ, ನಮ್ಮ ಸಂಘಟನೆ ಮತ್ತು ಸಿದ್ಧಾಂತದಲ್ಲಿ ನಂಬಿಕೆಯಿರುವ ಲಕ್ಷಾಂತರ ಮಿಲಿಂದ್‌ಗಳು ಉಳಿದುಕೊಂಡಿದ್ದಾರೆ. ಅವರು ಟಿಕೆಟ್ ಪಡೆದರೂ ಪರವಾಗಿಲ್ಲ, ಅವರು ಕೆಲವು ಗಂಟೆಗಳ ಕಾಲ ನಿರಾಶೆಗೊಳ್ಳುತ್ತಾರೆ. ನಂತರ ಮತ್ತೆ ಪಕ್ಷದ ಕೆಲಸಕ್ಕೆ ಮರಳುತ್ತಾರೆ. ಪ್ರಧಾನಿ ಮೋದಿವರು ಮಿಲಿಂದ್ ದಿಯೋರಾ ಅವರ ತಲೆಬರಹ ಬರೆದಿದ್ದಾರೆ. ಆದರೆ, ಇದು ನಮ್ಮ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ’ ಎಂದು ಅವರು ಪ್ರತಿಪಾದಿಸಿದರು.

ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಕೇಂದ್ರದ ಮಾಜಿ ಸಚಿವ, ದಕ್ಷಿಣ ಮುಂಬೈ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ದಿಯೋರಾ ಭಾನುವಾರ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಹೇಳಿದ್ದಾರೆ. ‘ಇಂದು ನನ್ನ ರಾಜಕೀಯ ಪ್ರಯಾಣದಲ್ಲಿ ಮಹತ್ವದ ಅಧ್ಯಾಯದ ಮುಕ್ತಾಯವನ್ನು ಸೂಚಿಸುತ್ತದೆ. ನಾನು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್ ಜತೆಗಿನ ನನ್ನ ಕುಟುಂಬದ 55 ವರ್ಷಗಳ ಸಂಬಂಧವನ್ನು ಕೊನೆಗೊಳಿಸಿದ್ದೇನೆ. ಇಷ್ಟು ವರ್ಷಗಳ ಬೆಂಬಲಕ್ಕಾಗಿ ನಾನು ಎಲ್ಲಾ ನಾಯಕರು, ಸಹೋದ್ಯೋಗಿಗಳು ಮತ್ತು ಕಾರ್ಯಕರ್ತರಿಗೆ ಕೃತಜ್ಞನಾಗಿದ್ದೇನೆ’ ಎಂದು ಹೇಳಿದ್ದಾರೆ.

ಇತ್ತೀಚೆಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಜಂಟಿ ಖಜಾಂಚಿಯಾಗಿ ನೇಮಕಗೊಂಡ ದಿಯೋರಾ ಅವರು, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ದಕ್ಷಿಣ ಮುಂಬೈ ಲೋಕಸಭಾ ಸ್ಥಾನಕ್ಕೆ ಹಕ್ಕು ಸಾಧಿಸಲು ಮುಂದಾಗಿದ್ದಕ್ಕೆ ಅಸಮ್ಮತಿ ವ್ಯಕ್ತಪಡಿಸಿದ್ದರು.

ಮುಂಜಾನೆ ಕಾಂಗ್ರೆಸ್ ತೊರೆದು ಶಿವಸೇನೆ ಸೇರುವ ಕೇಂದ್ರದ ಮಾಜಿ ಸಚಿವ ಮಿಲಿಂದ್ ದಿಯೋರಾ ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸ್ವಾಗತಿಸಿದ್ದಾರೆ. “ನಾನು ಅವರ ನಡೆಯ ಬಗ್ಗೆ ಕೇಳಿದ್ದೇನೆ. ಅವರು ಪಕ್ಷಕ್ಕೆ ಸೇರುತ್ತಿದ್ದರೆ, ನಾನು ಅವರನ್ನು ಸ್ವಾಗತಿಸುತ್ತೇನೆ” ಎಂದು ಶಿಂಧೆ ಹೇಳಿದರು.

ಇದನ್ನೂ ಓದಿ; ಸೋನಿಯಾ ಗಾಂಧಿ ಬಗ್ಗೆ ಸುಳ್ಳು ಆರೋಪ: ಆಂಧ್ರ ಡಿಸಿಎಂ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...