Homeಮುಖಪುಟಪತ್ರಿಕೆ ಕಚೇರಿ ಬಳಿ ಮೈಕ್‌ನಲ್ಲಿ ಪತ್ರಕರ್ತರನ್ನು ನಿಂದಿಸಲು 2 ಗಂಟೆ ಅವಕಾಶ ಕೊಡಿ: ಮ್ಯಾಜಿಸ್ಟ್ರೇಟ್‌ ಮೊರೆ...

ಪತ್ರಿಕೆ ಕಚೇರಿ ಬಳಿ ಮೈಕ್‌ನಲ್ಲಿ ಪತ್ರಕರ್ತರನ್ನು ನಿಂದಿಸಲು 2 ಗಂಟೆ ಅವಕಾಶ ಕೊಡಿ: ಮ್ಯಾಜಿಸ್ಟ್ರೇಟ್‌ ಮೊರೆ ಹೋದ ವ್ಯಕ್ತಿ!

- Advertisement -
- Advertisement -

ಇತ್ತೀಚಿನ ದಿನಗಳಲ್ಲಿ ಸುಳ್ಳುಸುದ್ದಿಗಳು ವ್ಯಾಪಕವಾಗಿ ಹೆಚ್ಚಳವಾಗಿದೆ. ಸಾಮಾಜಿಕ ಮಾದ್ಯಮಗಳಲ್ಲಿ ಯಾರ್ಯಾರೋ ಸುಳ್ಳು ಸುದ್ದಿಗಳನ್ನು ಹಬ್ಬುತ್ತಾರೆ, ಆದರೆ ಸಮಾಜದ ಮೇಲೆ ಜವಾಬ್ಧಾರಿ ಇರುವ ಪತ್ರಿಕೆ, ಟಿವಿ, ವೆಬ್‌ ಮಾದ್ಯಮಗಳಲ್ಲೂ ಇತ್ತೀಚೆಗೆ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುವುದು, ಪ್ರಕಟಿಸುವುದು, ಸಣ್ಣ ಸುದ್ದಿಗೆ ವಿಭಿನ್ನ ಬಣ್ಣ ಹಚ್ಚಿ ವೈಭವೀಕರಿಸುವುದು ಕಂಡು ಬರುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ ಉತ್ತಪ್ರದೇಶದಲ್ಲಿ ಘಟನೆಯೊಂದು ನಡೆದಿದ್ದು, ವ್ಯಕ್ತಿಯೋರ್ವ ‘ನನ್ನ ಬಗ್ಗೆ ಸುಳ್ಳು ಸುದ್ದಿ ಪ್ರಕಟಿಸಿದ ಮಾದ್ಯಮವನ್ನು ನಿಂದಿಸಲು 2 ಗಂಟೆ ಅವಕಾಶ ಕೊಡಿ’ ಎಂದು ಮ್ಯಾಜಿಸ್ಟ್ರೇಟ್‌ ಮೊರೆ ಹೋಗಿದ್ದಾರೆ.

ತನ್ನ ವಿರುದ್ಧ ಮಾನಹಾನಿಕಾರಕ ಮತ್ತು ಸುಳ್ಳು ಸುದ್ದಿಯನ್ನು ಪ್ರಕಟಿಸಿದ್ದಾರೆ ಎಂದು ಆರೋಪಿಸಿದ ಉತ್ತರಪ್ರದೇಶದ ಪ್ರತಾಪ್‌ಗಢದ ನಿವಾಸಿ ಪ್ರತೀಕ್ ಸಿನ್ಹಾ, ಪತ್ರಿಕೆಯೊಂದರ  ಕಚೇರಿಯ ಮುಂದೆ ಮೈಕ್‌ ಮೂಲಕ ನಿಂದಿಸಲು ಅನುಮತಿ ಕೊಡಿ ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ಗೆ ಪತ್ರ ಬರೆದಿದ್ದಾರೆ.

ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ಗೆ ಬರೆದ ಪತ್ರದಲ್ಲಿ, ಜನವರಿ 15ರಂದು ಮಧ್ಯಾಹ್ನ 12 ಗಂಟೆಗೆ ಪತ್ರಿಕೆ ಕಚೇರಿಯ ಹೊರಗಡೆ ಪತ್ರಿಕೆಯ ಬ್ಯೂರೋ ಮುಖ್ಯಸ್ಥ ಮತ್ತು ವರದಿಗಾರರನ್ನು ಎರಡು ಗಂಟೆಗಳ ಕಾಲ ನಿಂದಿಸಲು ಅನುಮತಿ ಕೇಳುತ್ತೇನೆ ಎಂದು ಪತ್ರದಲ್ಲಿ ಬರೆಯಲಾಗಿದೆ. ಉತ್ತರಪ್ರದೇಶದ ಇತಿಹಾಸದಲ್ಲಿ ವ್ಯಕ್ತಿಯೋರ್ವರು ಮೊದಲ ಬಾರಿಗೆ ತನ್ನ ವಿರುದ್ಧ ಪತ್ರಿಕೆ ಮಾಡಿರುವ ವರದಿಯೊಂದರ ವಿರುದ್ಧ ಈ ರೀತಿ ಪ್ರತಿಭಟಿಸಲು ಅವಕಾಶವನ್ನು ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ.

ದಿನಪತ್ರಿಕೆಯೊಂದರ ಲೇಖನವು ಪ್ರತೀಕ್ ಸಿನ್ಹಾ ಅವರನ್ನು ಭೂಕಬಳಿಕೆಯಲ್ಲಿ ತೊಡಗಿದೆ ಎಂದು ಆರೋಪಿಸಿದೆ. ನಿಂದನೆಗೆ ಅವಕಾಶ ಕೋರುವ ಮೊದಲು ಅವರು ಪತ್ರಿಕಾ ಕಚೇರಿಗೆ ಮಾನನಷ್ಟದ ಕುರಿತು ನೊಟೀಸ್‌ನ್ನು ಕೂಡ ಕಳುಹಿಸಿದ್ದಾರೆ.

ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ, ಯಾವುದೇ ಕಾರಣವಿಲ್ಲದೆ ಜನವರಿ 9ರಂದು ತನ್ನ ಜಮೀನಿನಲ್ಲಿ ಬುಲ್ಡೋಜರ್ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರತೀಕ್ ಸಿನ್ಹಾ ಉಲ್ಲೇಖಿಸಿದ್ದಾರೆ. ಇದನ್ನು ಉಲ್ಲೇಖಿಸಿ ಪತ್ರಿಕೆ ಅವನನ್ನು “ಮಾಫಿಯಾ” ಎಂದು ಕರೆದಿದೆ. ಪತ್ರಿಕೆಯಲ್ಲಿ ಬಂದಿರುವ ಲೇಖನ ಸಾಕ್ಷ್ಯಾಧಾರಗಳ ಕೊರತೆಯಿಂದ ಕೂಡಿದೆ ಮತ್ತು ತನ್ನ ಪ್ರತಿಷ್ಠೆಗೆ ಧಕ್ಕೆ ತಂದಿದೆ. ಪತ್ರಿಕೆಯ ಬ್ಯೂರೋ ಮುಖ್ಯಸ್ಥ ಮತ್ತು ವರದಿಗಾರರನ್ನು ಎರಡು ಗಂಟೆಗಳ ಕಾಲ ನಿಂದಿಸಲು ಅನುಮತಿ ಕೊಡಿ. ನಾನು ಬೇರೆ ಯಾವುದೇ ರೀತಿಯ ಹಿಂಸಾಚಾರ ನಡೆಸುವುದಿಲ್ಲ ಎಂದು ನಾನು ನಿಮಗೆ ಭರವಸೆ ನೀಡಲು ಬಯಸುತ್ತೇನೆ ಎಂದು ವಿನಂತಿ ಪತ್ರದಲ್ಲಿ ಪ್ರತೀಕ್ ಸಿನ್ಹಾ ಹೇಳಿದ್ದಾರೆ.

 

ಇದನ್ನು ಓದಿ:‘ತೈವಾನ್‌’ ಸ್ವಾತಂತ್ರ್ಯವನ್ನು ‘ಅಮೆರಿಕ’ ಬೆಂಬಲಿಸುವುದಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...