Homeಮುಖಪುಟಪತ್ರಿಕೆ ಕಚೇರಿ ಬಳಿ ಮೈಕ್‌ನಲ್ಲಿ ಪತ್ರಕರ್ತರನ್ನು ನಿಂದಿಸಲು 2 ಗಂಟೆ ಅವಕಾಶ ಕೊಡಿ: ಮ್ಯಾಜಿಸ್ಟ್ರೇಟ್‌ ಮೊರೆ...

ಪತ್ರಿಕೆ ಕಚೇರಿ ಬಳಿ ಮೈಕ್‌ನಲ್ಲಿ ಪತ್ರಕರ್ತರನ್ನು ನಿಂದಿಸಲು 2 ಗಂಟೆ ಅವಕಾಶ ಕೊಡಿ: ಮ್ಯಾಜಿಸ್ಟ್ರೇಟ್‌ ಮೊರೆ ಹೋದ ವ್ಯಕ್ತಿ!

- Advertisement -
- Advertisement -

ಇತ್ತೀಚಿನ ದಿನಗಳಲ್ಲಿ ಸುಳ್ಳುಸುದ್ದಿಗಳು ವ್ಯಾಪಕವಾಗಿ ಹೆಚ್ಚಳವಾಗಿದೆ. ಸಾಮಾಜಿಕ ಮಾದ್ಯಮಗಳಲ್ಲಿ ಯಾರ್ಯಾರೋ ಸುಳ್ಳು ಸುದ್ದಿಗಳನ್ನು ಹಬ್ಬುತ್ತಾರೆ, ಆದರೆ ಸಮಾಜದ ಮೇಲೆ ಜವಾಬ್ಧಾರಿ ಇರುವ ಪತ್ರಿಕೆ, ಟಿವಿ, ವೆಬ್‌ ಮಾದ್ಯಮಗಳಲ್ಲೂ ಇತ್ತೀಚೆಗೆ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುವುದು, ಪ್ರಕಟಿಸುವುದು, ಸಣ್ಣ ಸುದ್ದಿಗೆ ವಿಭಿನ್ನ ಬಣ್ಣ ಹಚ್ಚಿ ವೈಭವೀಕರಿಸುವುದು ಕಂಡು ಬರುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ ಉತ್ತಪ್ರದೇಶದಲ್ಲಿ ಘಟನೆಯೊಂದು ನಡೆದಿದ್ದು, ವ್ಯಕ್ತಿಯೋರ್ವ ‘ನನ್ನ ಬಗ್ಗೆ ಸುಳ್ಳು ಸುದ್ದಿ ಪ್ರಕಟಿಸಿದ ಮಾದ್ಯಮವನ್ನು ನಿಂದಿಸಲು 2 ಗಂಟೆ ಅವಕಾಶ ಕೊಡಿ’ ಎಂದು ಮ್ಯಾಜಿಸ್ಟ್ರೇಟ್‌ ಮೊರೆ ಹೋಗಿದ್ದಾರೆ.

ತನ್ನ ವಿರುದ್ಧ ಮಾನಹಾನಿಕಾರಕ ಮತ್ತು ಸುಳ್ಳು ಸುದ್ದಿಯನ್ನು ಪ್ರಕಟಿಸಿದ್ದಾರೆ ಎಂದು ಆರೋಪಿಸಿದ ಉತ್ತರಪ್ರದೇಶದ ಪ್ರತಾಪ್‌ಗಢದ ನಿವಾಸಿ ಪ್ರತೀಕ್ ಸಿನ್ಹಾ, ಪತ್ರಿಕೆಯೊಂದರ  ಕಚೇರಿಯ ಮುಂದೆ ಮೈಕ್‌ ಮೂಲಕ ನಿಂದಿಸಲು ಅನುಮತಿ ಕೊಡಿ ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ಗೆ ಪತ್ರ ಬರೆದಿದ್ದಾರೆ.

ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ಗೆ ಬರೆದ ಪತ್ರದಲ್ಲಿ, ಜನವರಿ 15ರಂದು ಮಧ್ಯಾಹ್ನ 12 ಗಂಟೆಗೆ ಪತ್ರಿಕೆ ಕಚೇರಿಯ ಹೊರಗಡೆ ಪತ್ರಿಕೆಯ ಬ್ಯೂರೋ ಮುಖ್ಯಸ್ಥ ಮತ್ತು ವರದಿಗಾರರನ್ನು ಎರಡು ಗಂಟೆಗಳ ಕಾಲ ನಿಂದಿಸಲು ಅನುಮತಿ ಕೇಳುತ್ತೇನೆ ಎಂದು ಪತ್ರದಲ್ಲಿ ಬರೆಯಲಾಗಿದೆ. ಉತ್ತರಪ್ರದೇಶದ ಇತಿಹಾಸದಲ್ಲಿ ವ್ಯಕ್ತಿಯೋರ್ವರು ಮೊದಲ ಬಾರಿಗೆ ತನ್ನ ವಿರುದ್ಧ ಪತ್ರಿಕೆ ಮಾಡಿರುವ ವರದಿಯೊಂದರ ವಿರುದ್ಧ ಈ ರೀತಿ ಪ್ರತಿಭಟಿಸಲು ಅವಕಾಶವನ್ನು ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ.

ದಿನಪತ್ರಿಕೆಯೊಂದರ ಲೇಖನವು ಪ್ರತೀಕ್ ಸಿನ್ಹಾ ಅವರನ್ನು ಭೂಕಬಳಿಕೆಯಲ್ಲಿ ತೊಡಗಿದೆ ಎಂದು ಆರೋಪಿಸಿದೆ. ನಿಂದನೆಗೆ ಅವಕಾಶ ಕೋರುವ ಮೊದಲು ಅವರು ಪತ್ರಿಕಾ ಕಚೇರಿಗೆ ಮಾನನಷ್ಟದ ಕುರಿತು ನೊಟೀಸ್‌ನ್ನು ಕೂಡ ಕಳುಹಿಸಿದ್ದಾರೆ.

ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ, ಯಾವುದೇ ಕಾರಣವಿಲ್ಲದೆ ಜನವರಿ 9ರಂದು ತನ್ನ ಜಮೀನಿನಲ್ಲಿ ಬುಲ್ಡೋಜರ್ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರತೀಕ್ ಸಿನ್ಹಾ ಉಲ್ಲೇಖಿಸಿದ್ದಾರೆ. ಇದನ್ನು ಉಲ್ಲೇಖಿಸಿ ಪತ್ರಿಕೆ ಅವನನ್ನು “ಮಾಫಿಯಾ” ಎಂದು ಕರೆದಿದೆ. ಪತ್ರಿಕೆಯಲ್ಲಿ ಬಂದಿರುವ ಲೇಖನ ಸಾಕ್ಷ್ಯಾಧಾರಗಳ ಕೊರತೆಯಿಂದ ಕೂಡಿದೆ ಮತ್ತು ತನ್ನ ಪ್ರತಿಷ್ಠೆಗೆ ಧಕ್ಕೆ ತಂದಿದೆ. ಪತ್ರಿಕೆಯ ಬ್ಯೂರೋ ಮುಖ್ಯಸ್ಥ ಮತ್ತು ವರದಿಗಾರರನ್ನು ಎರಡು ಗಂಟೆಗಳ ಕಾಲ ನಿಂದಿಸಲು ಅನುಮತಿ ಕೊಡಿ. ನಾನು ಬೇರೆ ಯಾವುದೇ ರೀತಿಯ ಹಿಂಸಾಚಾರ ನಡೆಸುವುದಿಲ್ಲ ಎಂದು ನಾನು ನಿಮಗೆ ಭರವಸೆ ನೀಡಲು ಬಯಸುತ್ತೇನೆ ಎಂದು ವಿನಂತಿ ಪತ್ರದಲ್ಲಿ ಪ್ರತೀಕ್ ಸಿನ್ಹಾ ಹೇಳಿದ್ದಾರೆ.

 

ಇದನ್ನು ಓದಿ:‘ತೈವಾನ್‌’ ಸ್ವಾತಂತ್ರ್ಯವನ್ನು ‘ಅಮೆರಿಕ’ ಬೆಂಬಲಿಸುವುದಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...