Homeಮುಖಪುಟಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗವಹಿಸಿದ ಬಿಎಸ್ಪಿಯಿಂದ ಉಚ್ಛಾಟಿತ ಡ್ಯಾನಿಶ್ ಅಲಿ

ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗವಹಿಸಿದ ಬಿಎಸ್ಪಿಯಿಂದ ಉಚ್ಛಾಟಿತ ಡ್ಯಾನಿಶ್ ಅಲಿ

- Advertisement -
- Advertisement -

ಬಹುಜನ ಸಮಾಜ ಪಕ್ಷದಿಂದ (ಬಿಎಸ್‌ಪಿ) ಅಮಾನತುಗೊಂಡಿರುವ ಲೋಕಸಭಾ ಸಂಸದ ಡ್ಯಾನಿಶ್ ಅಲಿ ಅವರು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗವಹಿಸುವುದಾಗಿ  ಪ್ರಕಟಿಸಿದ್ದು, ಏಕತೆ ಮತ್ತು ನ್ಯಾಯಕ್ಕಾಗಿರುವ ಅತಿದೊಡ್ಡ ಯಾತ್ರೆಯಲ್ಲಿ ಭಾಗವಹಿಸದಿದ್ದರೆ ರಾಜಕಾರಣಿಯಾಗಿ ತಮ್ಮ ಕರ್ತವ್ಯದಲ್ಲಿ ವಿಫಲನಾಗುತ್ತೇನೆ ಎಂದು ಹೇಳಿದ್ದಾರೆ.

ಕಳೆದ ತಿಂಗಳು ‘ಪಕ್ಷ ವಿರೋಧಿ’ ಚಟುವಟಿಕೆ ಹಿನ್ನೆಲೆ ಬಿಎಸ್‌ಪಿ ಪಕ್ಷದಿಂದ ಡ್ಯಾನಿಶ್‌ ಅಲಿ ಅವರನ್ನು ಅಮಾನತುಗೊಳಿಸಿತ್ತು. ಮಾಯಾವತಿ ನೇತೃತ್ವದ ಬಿಎಸ್‌ಪಿಯು, ಆಡಳಿತಾರೂಢ ಮೈತ್ರಿಕೂಟ ಎನ್‌ಡಿಎ ಮತ್ತು ವಿರೋಧ ಪಕ್ಷವಾದ INDIA ಮೈತ್ರಿಕೂಟದಿಂದ ಅಂತರವನ್ನು ಕಾಯ್ದುಕೊಂಡಿತ್ತು. ಆದರೆ ಬಿಜೆಪಿ ವಿರುದ್ಧದ ಹೋರಾಟದಲ್ಲಿ ಡ್ಯಾನಿಶ್‌ ಅಲಿ ವಿರೋಧ ಪಕ್ಷಗಳ ಜೊತೆ ಸಕ್ರಿಯರಾಗಿದ್ದರು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಡ್ಯಾನಿಶ್ ಅಲಿ,  ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಸೇರಲು ನಿರ್ಧರಿಸಿದ್ದೇನೆ. ಇದು ನನಗೆ ಬಹಳ ಮುಖ್ಯವಾದ ಕ್ಷಣವಾಗಿದೆ. ನಾನು ಸಾಕಷ್ಟು ಆತ್ಮಾವಲೋಕನದ ನಂತರ ಇಲ್ಲಿಗೆ ಬಂದಿದ್ದೇನೆ. ನನ್ನ ಮುಂದೆ ಎರಡು ಆಯ್ಕೆಯಿತ್ತು. ಒಂದು ಯಥಾಸ್ಥಿತಿಯನ್ನು ಒಪ್ಪಿಕೊಳ್ಳುವುದು ಅಥವಾ ದಲಿತರು, ಹಿಂದುಳಿದವರು, ಬುಡಕಟ್ಟುಗಳು, ಅಲ್ಪಸಂಖ್ಯಾತರು ಮತ್ತು ಇತರ ಅಂಚಿನಲ್ಲಿರುವ ಮತ್ತು ಬಡ ವರ್ಗಗಳ ಶೋಷಣೆಯನ್ನು ನಿರ್ಲಕ್ಷಿಸುವುದು. ಎರಡನೆಯದಾಗಿ ದೇಶದಲ್ಲಿರವ ಈ ಭಯ, ದ್ವೇಷ, ಶೋಷಣೆ ಮತ್ತು ಆಳವಾಗುತ್ತಿರುವ ವಿಭಜನೆಯ ವಾತಾವರಣದ ವಿರುದ್ಧ ಸರ್ವಾಂಗೀಣ ಅಭಿಯಾನವನ್ನು ಪ್ರಾರಂಭಿಸುವುದಾಗಿದೆ. ನನ್ನ ಆತ್ಮಸಾಕ್ಷಿಯು ಎರಡನೇ ಆಯ್ಕೆಯನ್ನು ಆಯ್ದುಕೊಳ್ಳಲು ನನ್ನನ್ನು ಪ್ರೇರೇಪಿಸಿದೆ ಎಂದು ಹೇಳಿದ್ದಾರೆ.

ಸಂಸತ್ತಿನಲ್ಲಿ ಆಡಳಿತ ಪಕ್ಷದ ಸದಸ್ಯರು ನನ್ನ ಮತ್ತು ನನ್ನ ಧರ್ಮದ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದರು. 2023ರ ಸೆಪ್ಟೆಂಬರ್‌ನಲ್ಲಿ ಬಿಜೆಪಿ ಸಂಸದ ರಮೇಶ್ ಬಿಧುರಿ ಸಂಸತ್ತಿನಲ್ಲಿ ಅತ್ಯಂತ ಅವಹೇಳನಕಾರಿ ಮತ್ತು ಇಸ್ಲಾಮೋಫೋಬಿಕ್ ಭಾಷೆಯನ್ನು ಬಳಸಿದಾಗ ಅಲಿ ರಾಷ್ಟ್ರದ ಗಮನ ಸೆಳೆದಿದ್ದರು. ಈ ವಿಷಯವನ್ನು ಸಂಸದೀಯ ಸಮಿತಿ ಮುಂದಿಡಲಾಗಿತ್ತು ಮತ್ತು ಬಿಜೆಪಿ ಸಂಸದರು ಕ್ಷಮೆಯಾಚಿಸಿದ್ದರು. ಈ ಬಗ್ಗೆ ಆರೋಪಿತ ಸಂಸದರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಡ್ಯಾನಿಶ್‌ ಅಲಿ ಹೇಳಿದ್ದರು.

ನನ್ನನ್ನು ಅವಹೇಳನ ಮಾಡಿದವನಿಗೆ ಶಿಕ್ಷಿಸುವ ಬದಲು ಆಡಳಿತ ಮಂಡಳಿಯು ಅವನಿಗೆ ಬಹುಮಾನ ನೀಡಿದೆ. ನನ್ನ ಮೇಲಿನ ದಾಳಿಯು ದೇಶದಲ್ಲಿ ಭಯ ಮತ್ತು ದ್ವೇಷದ ವಾತಾವರಣವನ್ನು ಸೃಷ್ಟಿಸುವ ದೊಡ್ಡ ಯೋಜನೆಯ ಭಾಗವಾಗಿದೆ ಎಂದು ನಾನು ಅರಿತುಕೊಂಡೆ ಎಂದು ಅಲಿ ಆರೋಪಿಸಿದ್ದರು. ಆ ಸಂಕಟದ ಸಮಯದಲ್ಲಿ ನನ್ನೊಂದಿಗೆ ಒಗ್ಗಟ್ಟು ವ್ಯಕ್ತಪಡಿಸಿದ ಮತ್ತು ನನ್ನ ಮತ್ತು ನನ್ನ ಕುಟುಂಬದ ಪರವಾಗಿ ನಿಂತ ಮೊದಲ ನಾಯಕ ರಾಹುಲ್ ಗಾಂಧಿ ಎಂದು ಹೇಳಿದ್ದರು.

ರಾಹುಲ್ ಗಾಂಧಿ ಅವರ ಯಾತ್ರೆಯ ಉದ್ದೇಶವು ಅಂಚಿನಲ್ಲಿರುವವರಿಗೆ ಮತ್ತು ಶೋಷಿತ ವರ್ಗಗಳಿಗೆ ನ್ಯಾಯ ದೊರಕಿಸುವುದಾಗಿದೆ. ಈ ಯಾತ್ರೆಯು ನಮ್ಮ ದೇಶದ ಜನರನ್ನು ಭಯ, ದ್ವೇಷ, ಶೋಷಣೆ ಮತ್ತು ವಿಭಜನೆಯ ವಿರುದ್ಧ ಒಗ್ಗೂಡಿಸುವ ಒಂದು ಕಾರ್ಯದ ಭಾಗವಾಗಿದೆ. ನಾನು ಈ ಯಾತ್ರೆಯಲ್ಲಿ ಸೇರಲು ನಿರ್ಧರಿಸಿದೆ ಏಕೆಂದರೆ ನಾನು ಏಕತೆ ಮತ್ತು ನ್ಯಾಯಕ್ಕಾಗಿರುವ ಈ ಯಾತ್ರೆಯಲ್ಲಿ ಭಾಗವಹಿಸದಿದ್ದರೆ ರಾಜಕಾರಣಿ ಮತ್ತು ಸಮಾಜ ಸೇವಕನಾಗಿ ನನ್ನ ಕರ್ತವ್ಯ ಪೂರ್ಣಗೊಳಿಸಲು ವಿಫಲನಾಗುತ್ತೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಒಬಿಸಿ’ ಸಮುದಾಯವನ್ನು ಅವಮಾನಿಸಿದ ಬಾಬಾ ರಾಮ್‌ದೇವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...