Homeಮುಖಪುಟಸ್ಲಂ ತೆರವು ಕಾರ್ಯಾಚರಣೆ; 'ಘರ್ ಬಚಾವೋ, ಬಿಜೆಪಿ ಹಟಾವೋ' ಅಭಿಯಾನ ಆರಂಭಿಸಿದ ಎಎಪಿ

ಸ್ಲಂ ತೆರವು ಕಾರ್ಯಾಚರಣೆ; ‘ಘರ್ ಬಚಾವೋ, ಬಿಜೆಪಿ ಹಟಾವೋ’ ಅಭಿಯಾನ ಆರಂಭಿಸಿದ ಎಎಪಿ

- Advertisement -
- Advertisement -

ರಾಷ್ಟ್ರ ರಾಜಧಾನಿಯ ಸ್ಲಂ ಕ್ಲಸ್ಟರ್‌ಗಳಿಗೆ ಭೇಟಿ ನೀಡಿದ ಎಎಪಿ ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್, ‘ಕೊಳೆಗೇರಿ ನಿವಾಸಿಗಳನ್ನು ಒಕ್ಕಲೆಬ್ಬಿಸಲು ಬಿಜೆಪಿ ಪಿತೂರಿ ನಡೆಸುತ್ತಿದೆ’ ಎಂದು ಭಾನುವಾರ ಆರೋಪಿಸಿದ್ದಾರೆ.

ದೆಹಲಿಯ ಕೊಳೆಗೇರಿ ನಿವಾಸಿಗಳನ್ನು ನಿರಾಶ್ರಿತರನ್ನಾಗಿ ಮಾಡುವ ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಎಎಪಿಯ ‘ಘರ್ ಬಚಾವೋ, ಬಿಜೆಪಿ ಹಟಾವೋ’ ಅಭಿಯಾನವನ್ನು ಪ್ರಾರಂಭಿಸಿದೆ.
ಅತಿಶಿ ಅವರು ಬಿ ಆರ್ ಕ್ಯಾಂಪ್ ಕೊಳೆಗೇರಿಗೆ ಭೇಟಿ ನೀಡಿದಾಗ ಅವರ ಸಂಪುಟ ಸಹೋದ್ಯೋಗಿ ಭಾರದ್ವಾಜ್ ಅವರು ದಕ್ಷಿಣ ದೆಹಲಿಯ ಸಫ್ದರ್‌ಜಂಗ್ ಫ್ಲೈಯಿಂಗ್ ಕ್ಲಬ್ ಬಳಿಯ ಕೊಳೆಗೇರಿ ನಿವಾಸಿಗಳನ್ನು ಭೇಟಿ ಮಾಡಿದರು.

‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೆಹಲಿಯ ಕೊಳಚೆ ಪ್ರದೇಶಗಳನ್ನು ನೆಲಸಮ ಮಾಡಲು ಮತ್ತು ಅದರ ನಿವಾಸಿಗಳನ್ನು ಅವರ ಮನೆಗಳಿಂದ 40 ರಿಂದ 50 ಕಿಮೀ ದೂರಕ್ಕೆ ಸ್ಥಳಾಂತರಿಸಲು ಪಿತೂರಿ ನಡೆಸುತ್ತಿದೆ. ಎಎಪಿ ಮತ್ತು (ದೆಹಲಿ) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ (ಸ್ಲಂ ನಿವಾಸಿಗಳು) ನಿಂತಿದ್ದಾರೆ’ ಎಂದು ಅತಿಶಿ ಹೇಳಿದರು.

ಬಿಆರ್‌ ಕ್ಯಾಂಪ್‌ನ ಜನರಿಗೆ ಈಗಿರುವ ಮನೆಗಳಲ್ಲೇ ಫ್ಲಾಟ್‌ಗಳು ಸಿಗುವುದಿಲ್ಲವೋ ಅಲ್ಲಿಯವರೆಗೆ ಒಂದೇ ಒಂದು ಮನೆಯನ್ನು ಡಿಡಿಎ ಮುಟ್ಟಲು ಬಿಡುವುದಿಲ್ಲ ಎಂದು ಸಚಿವರು ಹೇಳಿದರು.

‘ನಾವು ಬುಲ್ಡೋಜರ್‌ಗಳ ಮುಂದೆ ನಿಲ್ಲಬೇಕೇ ಅಥವಾ ನ್ಯಾಯಾಲಯದಿಂದ ಆದೇಶವನ್ನು ಪಡೆಯಬೇಕೇ, ಆಮ್ ಆದ್ಮಿ ಪಕ್ಷವು ಬಿಆರ್ ಕ್ಯಾಂಪ್‌ನ ಸ್ಲಂಗಳಲ್ಲಿ ವಾಸಿಸುವ ಜನರನ್ನು ನಿರಾಶ್ರಿತರಾಗಲು ಬಿಡುವುದಿಲ್ಲ. ಸ್ಲಂ ನಿವಾಸಿಗಳ ಬಗ್ಗೆ ಬಿಜೆಪಿ ನಾಚಿಕೆಪಡುತ್ತದೆ, ಅದಕ್ಕಾಗಿಯೇ ಅವರು ಬುಲ್ಡೋಜರ್ ಬಳಸುತ್ತಿದ್ದಾರೆ’ ಎಂದು ಅವರು ವಾಗ್ದಾಳಿ ನಡೆಸಿದರು.

ಬಿಜೆಪಿ ನೇತೃತ್ವದ ಡಿಡಿಎ, ಸ್ಲಂ ನಿವಾಸಿಗಳನ್ನು ನರೇಲಾ ಮತ್ತು ಕಾಕ್ರೋಲಾದಲ್ಲಿ 50 ಕಿ.ಮೀ ದೂರಕ್ಕೆ ಸ್ಥಳಾಂತರಿಸಲು ಒತ್ತಾಯಿಸುತ್ತಿದೆ. ಅವರ ಉದ್ಯೋಗಗಳು ಮತ್ತು ಅವರ ಮಕ್ಕಳ ಶಾಲೆಗಳಿಂದ ಅವರನ್ನು ಮೈಲುಗಳಷ್ಟು ದೂರ ತಳ್ಳುತ್ತಿದೆ ಎಂದು ಅವರು ಹೇಳಿದರು.

ಇದೇ ರೀತಿಯ ಮಾತನಾಡಿದ ಭಾರದ್ವಾಜ್, ಇಲ್ಲಿನ ನಿವಾಸಿಗಳು ಚಾಲಕರು, ಸೇವಕರು, ಅಡುಗೆ ಸೇರಿದಂತೆ ಇತ್ಯಾದಿ ಕೆಲಸಗಳನ್ನು ಮಾಡುತ್ತಾ ದೆಹಲಿಯ ಜೆಜೆ ಕ್ಲಸ್ಟರ್‌ಗಳಲ್ಲಿ ತಮ್ಮ ಕುಟುಂಬಗಳೊಂದಿಗೆ ವಾಸಿಸುತ್ತಿದ್ದಾರೆ ಎಂದು ಹೇಳಿದರು.

‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಈ ಜನರನ್ನು (ಸ್ಲಂ ನಿವಾಸಿಗಳನ್ನು) ಅವರ ಮನೆಗಳಿಂದ ಹೊರಹಾಕಲು ಅವರ ವಿರುದ್ಧ ಪಿತೂರಿ ನಡೆಸುತ್ತಿದೆ. ಕಾನೂನಿನ ಪ್ರಕಾರ, ಅಧಿಕಾರಿಗಳು ಅವರಿಗೆ ಸರಿಯಾದ ಮನೆಗಳನ್ನು ನೀಡದೆ, ಪಟ್ಟಿ ಮಾಡಲಾದ ಕ್ಲಸ್ಟರ್ ಅನ್ನು ಕೆಡವಲು ಸಾಧ್ಯವಿಲ್ಲ. ಬಿಜೆಪಿ ಮಾಡುತ್ತಿರುವುದು ಕಾನೂನುಬಾಹಿರ ಮತ್ತು ಅಮಾನವೀಯ’ ಎಂದು ಆರೋಪಿಸಿದರು.

ಕಾನೂನಿನ ಪ್ರಕಾರ ಕೊಳೆಗೇರಿ ನಿವಾಸಿಗಳಿಗೆ ಇನ್-ಸಿಟು ಹೌಸ್ ಒದಗಿಸುವವರೆಗೆ ದೆಹಲಿಯಲ್ಲಿ ಯಾವುದೇ ಜೆಜೆ ಕ್ಲಸ್ಟರ್ ಅನ್ನು ಕೆಡವಲು ಆದೇಶ ನೀಡದಂತೆ ಭಾರದ್ವಾಜ್ ಅವರು ನ್ಯಾಯಾಂಗವನ್ನು ಒತ್ತಾಯಿಸಿದರು. ತಮ್ಮ ಕಳವಳವನ್ನು ವ್ಯಕ್ತಪಡಿಸಿದ ಸಚಿವರು, ಸಫ್ದರ್‌ಜಂಗ್ ಫ್ಲೈಯಿಂಗ್ ಕ್ಲಬ್‌ನ ಸ್ಲಂ ಕ್ಲಸ್ಟರ್‌ ಜನಗಳಿಗೆ ನೋಟಿಸ್ ನೀಡಿರುವ ರೈಲ್ವೇ, ಜನರು ತಾವಾಗಿಯೇ ಸ್ಥಳಾಂತರಿಸಬೇಕು ಎಂದು ಹೇಳಿದೆ. ಆದರೆಮ ಅವರ ಪುನರ್ವಸತಿ ಜವಾಬ್ದಾರಿ ಕೇಂದ್ರ ಸರ್ಕಾರದ್ದಾಗಿದೆ’ ಎಂದರು.

‘ಸುಂದರ್ ನರ್ಸರಿ, ತುಘಲಕಾಬಾದ್, ಮೆಹ್ರೌಲಿ, ವಸಂತ್ ವಿಹಾರ್ ಮತ್ತು ಪ್ರಿಯಾಂಕಾ ಕಾಲೋನಿಯಲ್ಲಿ ಕೇಂದ್ರ ಸರ್ಕಾರದ ಏಜೆನ್ಸಿಗಳು ಅಸಂಖ್ಯಾತ ಜನರನ್ನು ನಿರಾಶ್ರಿತರನ್ನಾಗಿ ಮಾಡಿದೆ’ ಎಂದು ಭಾರದ್ವಾಜ್ ಹೇಳಿದರು.

ಕಳೆದ ಕೆಲವು ತಿಂಗಳುಗಳಿಂದ ಬಿಜೆಪಿ ಆಡಳಿತದಲ್ಲಿರುವ ಕೇಂದ್ರ ಸರ್ಕಾರದ ಸಂಸ್ಥೆಗಳಾದ ಎಎಸ್ಐ, ರೈಲ್ವೇ, ಡಿಡಿಎ, ಭೂ ಮತ್ತು ಅಭಿವೃದ್ಧಿ ಸಂಸ್ಥೆಗಳು ತಮ್ಮ ಸ್ವಾಮ್ಯದ ಜಮೀನುಗಳಲ್ಲಿರುವ ಜೆಜೆ ಕ್ಲಸ್ಟರ್‌ಗಳನ್ನು ಕೆಡವಲು ‘ಸಂಚು’ ನಡೆಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ಆರೋಪಿಸಿದರು.

‘ಈ ಜನರು ತಮ್ಮ ಚಿಕ್ಕ ಮಕ್ಕಳೊಂದಿಗೆ ಇಲ್ಲಿ ವಾಸಿಸುತ್ತಿದ್ದಾರೆ, ಆ ಮಕ್ಕಳು ಹತ್ತಿರದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿತ್ತಾರೆ. ಆ ಮಹಿಳೆಯರು ಹತ್ತಿರದ ಮನೆಗಳಲ್ಲಿ ಕೆಲಸ ಮಾಡುತ್ತಾರೆ, ಪುರುಷರು ಹತ್ತಿರದ ಮಾರುಕಟ್ಟೆಗಳಲ್ಲಿ ಕೆಲಸ ಮಾಡುತ್ತಾರೆ. ಈ ಜನರು ಈಗ ಎಲ್ಲಿಗೆ ಹೋಗುತ್ತಾರೆ’ ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ; ಐದು ವರ್ಷಗಳಲ್ಲಿ ಕಾಂಗ್ರೆಸ್ ತೊರೆದ ಪ್ರಮುಖ ನಾಯಕರು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...