Homeಮುಖಪುಟಸ್ಲಂ ತೆರವು ಕಾರ್ಯಾಚರಣೆ; 'ಘರ್ ಬಚಾವೋ, ಬಿಜೆಪಿ ಹಟಾವೋ' ಅಭಿಯಾನ ಆರಂಭಿಸಿದ ಎಎಪಿ

ಸ್ಲಂ ತೆರವು ಕಾರ್ಯಾಚರಣೆ; ‘ಘರ್ ಬಚಾವೋ, ಬಿಜೆಪಿ ಹಟಾವೋ’ ಅಭಿಯಾನ ಆರಂಭಿಸಿದ ಎಎಪಿ

- Advertisement -
- Advertisement -

ರಾಷ್ಟ್ರ ರಾಜಧಾನಿಯ ಸ್ಲಂ ಕ್ಲಸ್ಟರ್‌ಗಳಿಗೆ ಭೇಟಿ ನೀಡಿದ ಎಎಪಿ ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್, ‘ಕೊಳೆಗೇರಿ ನಿವಾಸಿಗಳನ್ನು ಒಕ್ಕಲೆಬ್ಬಿಸಲು ಬಿಜೆಪಿ ಪಿತೂರಿ ನಡೆಸುತ್ತಿದೆ’ ಎಂದು ಭಾನುವಾರ ಆರೋಪಿಸಿದ್ದಾರೆ.

ದೆಹಲಿಯ ಕೊಳೆಗೇರಿ ನಿವಾಸಿಗಳನ್ನು ನಿರಾಶ್ರಿತರನ್ನಾಗಿ ಮಾಡುವ ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಎಎಪಿಯ ‘ಘರ್ ಬಚಾವೋ, ಬಿಜೆಪಿ ಹಟಾವೋ’ ಅಭಿಯಾನವನ್ನು ಪ್ರಾರಂಭಿಸಿದೆ.
ಅತಿಶಿ ಅವರು ಬಿ ಆರ್ ಕ್ಯಾಂಪ್ ಕೊಳೆಗೇರಿಗೆ ಭೇಟಿ ನೀಡಿದಾಗ ಅವರ ಸಂಪುಟ ಸಹೋದ್ಯೋಗಿ ಭಾರದ್ವಾಜ್ ಅವರು ದಕ್ಷಿಣ ದೆಹಲಿಯ ಸಫ್ದರ್‌ಜಂಗ್ ಫ್ಲೈಯಿಂಗ್ ಕ್ಲಬ್ ಬಳಿಯ ಕೊಳೆಗೇರಿ ನಿವಾಸಿಗಳನ್ನು ಭೇಟಿ ಮಾಡಿದರು.

‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೆಹಲಿಯ ಕೊಳಚೆ ಪ್ರದೇಶಗಳನ್ನು ನೆಲಸಮ ಮಾಡಲು ಮತ್ತು ಅದರ ನಿವಾಸಿಗಳನ್ನು ಅವರ ಮನೆಗಳಿಂದ 40 ರಿಂದ 50 ಕಿಮೀ ದೂರಕ್ಕೆ ಸ್ಥಳಾಂತರಿಸಲು ಪಿತೂರಿ ನಡೆಸುತ್ತಿದೆ. ಎಎಪಿ ಮತ್ತು (ದೆಹಲಿ) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ (ಸ್ಲಂ ನಿವಾಸಿಗಳು) ನಿಂತಿದ್ದಾರೆ’ ಎಂದು ಅತಿಶಿ ಹೇಳಿದರು.

ಬಿಆರ್‌ ಕ್ಯಾಂಪ್‌ನ ಜನರಿಗೆ ಈಗಿರುವ ಮನೆಗಳಲ್ಲೇ ಫ್ಲಾಟ್‌ಗಳು ಸಿಗುವುದಿಲ್ಲವೋ ಅಲ್ಲಿಯವರೆಗೆ ಒಂದೇ ಒಂದು ಮನೆಯನ್ನು ಡಿಡಿಎ ಮುಟ್ಟಲು ಬಿಡುವುದಿಲ್ಲ ಎಂದು ಸಚಿವರು ಹೇಳಿದರು.

‘ನಾವು ಬುಲ್ಡೋಜರ್‌ಗಳ ಮುಂದೆ ನಿಲ್ಲಬೇಕೇ ಅಥವಾ ನ್ಯಾಯಾಲಯದಿಂದ ಆದೇಶವನ್ನು ಪಡೆಯಬೇಕೇ, ಆಮ್ ಆದ್ಮಿ ಪಕ್ಷವು ಬಿಆರ್ ಕ್ಯಾಂಪ್‌ನ ಸ್ಲಂಗಳಲ್ಲಿ ವಾಸಿಸುವ ಜನರನ್ನು ನಿರಾಶ್ರಿತರಾಗಲು ಬಿಡುವುದಿಲ್ಲ. ಸ್ಲಂ ನಿವಾಸಿಗಳ ಬಗ್ಗೆ ಬಿಜೆಪಿ ನಾಚಿಕೆಪಡುತ್ತದೆ, ಅದಕ್ಕಾಗಿಯೇ ಅವರು ಬುಲ್ಡೋಜರ್ ಬಳಸುತ್ತಿದ್ದಾರೆ’ ಎಂದು ಅವರು ವಾಗ್ದಾಳಿ ನಡೆಸಿದರು.

ಬಿಜೆಪಿ ನೇತೃತ್ವದ ಡಿಡಿಎ, ಸ್ಲಂ ನಿವಾಸಿಗಳನ್ನು ನರೇಲಾ ಮತ್ತು ಕಾಕ್ರೋಲಾದಲ್ಲಿ 50 ಕಿ.ಮೀ ದೂರಕ್ಕೆ ಸ್ಥಳಾಂತರಿಸಲು ಒತ್ತಾಯಿಸುತ್ತಿದೆ. ಅವರ ಉದ್ಯೋಗಗಳು ಮತ್ತು ಅವರ ಮಕ್ಕಳ ಶಾಲೆಗಳಿಂದ ಅವರನ್ನು ಮೈಲುಗಳಷ್ಟು ದೂರ ತಳ್ಳುತ್ತಿದೆ ಎಂದು ಅವರು ಹೇಳಿದರು.

ಇದೇ ರೀತಿಯ ಮಾತನಾಡಿದ ಭಾರದ್ವಾಜ್, ಇಲ್ಲಿನ ನಿವಾಸಿಗಳು ಚಾಲಕರು, ಸೇವಕರು, ಅಡುಗೆ ಸೇರಿದಂತೆ ಇತ್ಯಾದಿ ಕೆಲಸಗಳನ್ನು ಮಾಡುತ್ತಾ ದೆಹಲಿಯ ಜೆಜೆ ಕ್ಲಸ್ಟರ್‌ಗಳಲ್ಲಿ ತಮ್ಮ ಕುಟುಂಬಗಳೊಂದಿಗೆ ವಾಸಿಸುತ್ತಿದ್ದಾರೆ ಎಂದು ಹೇಳಿದರು.

‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಈ ಜನರನ್ನು (ಸ್ಲಂ ನಿವಾಸಿಗಳನ್ನು) ಅವರ ಮನೆಗಳಿಂದ ಹೊರಹಾಕಲು ಅವರ ವಿರುದ್ಧ ಪಿತೂರಿ ನಡೆಸುತ್ತಿದೆ. ಕಾನೂನಿನ ಪ್ರಕಾರ, ಅಧಿಕಾರಿಗಳು ಅವರಿಗೆ ಸರಿಯಾದ ಮನೆಗಳನ್ನು ನೀಡದೆ, ಪಟ್ಟಿ ಮಾಡಲಾದ ಕ್ಲಸ್ಟರ್ ಅನ್ನು ಕೆಡವಲು ಸಾಧ್ಯವಿಲ್ಲ. ಬಿಜೆಪಿ ಮಾಡುತ್ತಿರುವುದು ಕಾನೂನುಬಾಹಿರ ಮತ್ತು ಅಮಾನವೀಯ’ ಎಂದು ಆರೋಪಿಸಿದರು.

ಕಾನೂನಿನ ಪ್ರಕಾರ ಕೊಳೆಗೇರಿ ನಿವಾಸಿಗಳಿಗೆ ಇನ್-ಸಿಟು ಹೌಸ್ ಒದಗಿಸುವವರೆಗೆ ದೆಹಲಿಯಲ್ಲಿ ಯಾವುದೇ ಜೆಜೆ ಕ್ಲಸ್ಟರ್ ಅನ್ನು ಕೆಡವಲು ಆದೇಶ ನೀಡದಂತೆ ಭಾರದ್ವಾಜ್ ಅವರು ನ್ಯಾಯಾಂಗವನ್ನು ಒತ್ತಾಯಿಸಿದರು. ತಮ್ಮ ಕಳವಳವನ್ನು ವ್ಯಕ್ತಪಡಿಸಿದ ಸಚಿವರು, ಸಫ್ದರ್‌ಜಂಗ್ ಫ್ಲೈಯಿಂಗ್ ಕ್ಲಬ್‌ನ ಸ್ಲಂ ಕ್ಲಸ್ಟರ್‌ ಜನಗಳಿಗೆ ನೋಟಿಸ್ ನೀಡಿರುವ ರೈಲ್ವೇ, ಜನರು ತಾವಾಗಿಯೇ ಸ್ಥಳಾಂತರಿಸಬೇಕು ಎಂದು ಹೇಳಿದೆ. ಆದರೆಮ ಅವರ ಪುನರ್ವಸತಿ ಜವಾಬ್ದಾರಿ ಕೇಂದ್ರ ಸರ್ಕಾರದ್ದಾಗಿದೆ’ ಎಂದರು.

‘ಸುಂದರ್ ನರ್ಸರಿ, ತುಘಲಕಾಬಾದ್, ಮೆಹ್ರೌಲಿ, ವಸಂತ್ ವಿಹಾರ್ ಮತ್ತು ಪ್ರಿಯಾಂಕಾ ಕಾಲೋನಿಯಲ್ಲಿ ಕೇಂದ್ರ ಸರ್ಕಾರದ ಏಜೆನ್ಸಿಗಳು ಅಸಂಖ್ಯಾತ ಜನರನ್ನು ನಿರಾಶ್ರಿತರನ್ನಾಗಿ ಮಾಡಿದೆ’ ಎಂದು ಭಾರದ್ವಾಜ್ ಹೇಳಿದರು.

ಕಳೆದ ಕೆಲವು ತಿಂಗಳುಗಳಿಂದ ಬಿಜೆಪಿ ಆಡಳಿತದಲ್ಲಿರುವ ಕೇಂದ್ರ ಸರ್ಕಾರದ ಸಂಸ್ಥೆಗಳಾದ ಎಎಸ್ಐ, ರೈಲ್ವೇ, ಡಿಡಿಎ, ಭೂ ಮತ್ತು ಅಭಿವೃದ್ಧಿ ಸಂಸ್ಥೆಗಳು ತಮ್ಮ ಸ್ವಾಮ್ಯದ ಜಮೀನುಗಳಲ್ಲಿರುವ ಜೆಜೆ ಕ್ಲಸ್ಟರ್‌ಗಳನ್ನು ಕೆಡವಲು ‘ಸಂಚು’ ನಡೆಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ಆರೋಪಿಸಿದರು.

‘ಈ ಜನರು ತಮ್ಮ ಚಿಕ್ಕ ಮಕ್ಕಳೊಂದಿಗೆ ಇಲ್ಲಿ ವಾಸಿಸುತ್ತಿದ್ದಾರೆ, ಆ ಮಕ್ಕಳು ಹತ್ತಿರದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿತ್ತಾರೆ. ಆ ಮಹಿಳೆಯರು ಹತ್ತಿರದ ಮನೆಗಳಲ್ಲಿ ಕೆಲಸ ಮಾಡುತ್ತಾರೆ, ಪುರುಷರು ಹತ್ತಿರದ ಮಾರುಕಟ್ಟೆಗಳಲ್ಲಿ ಕೆಲಸ ಮಾಡುತ್ತಾರೆ. ಈ ಜನರು ಈಗ ಎಲ್ಲಿಗೆ ಹೋಗುತ್ತಾರೆ’ ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ; ಐದು ವರ್ಷಗಳಲ್ಲಿ ಕಾಂಗ್ರೆಸ್ ತೊರೆದ ಪ್ರಮುಖ ನಾಯಕರು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...