Homeಮುಖಪುಟಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಪುರಿ ಶಂಕರಾಚಾರ್ಯ

ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಪುರಿ ಶಂಕರಾಚಾರ್ಯ

- Advertisement -
- Advertisement -

ಧಾರ್ಮಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ ಮತ್ತು ಸಂವಿಧಾನವೂ ಇದನ್ನು ಅನುಮತಿಸುವುದಿಲ್ಲ ಎಂದು ಪುರಿಯ ಶಂಕರಾಚಾರ್ಯ ಮಠದ ನಿಶ್ಚಲಾನಂದ ಸರಸ್ವತಿ ಅವರು ಹೇಳಿದ್ದಾರೆ. ಈ ಹಿಂದೆ ರಾಮಮಂದಿರ ನಿರ್ಮಾಣ ಪೂರ್ಣವಾಗದೆ ಪ್ರಾಣ ಪ್ರತಿಷ್ಠಾಪನೆ ಶಾಸ್ತ್ರಗಳಿಗೆ ವಿರುದ್ಧ ಎಂದು ಶಂಕರಾಚಾರ್ಯ ಮಠದ ನಾಲ್ವರು ಮಠಾಧೀಶರು ವಿರೋಧವನ್ನು ವ್ಯಕ್ತಪಡಿಸಿದ್ದರು.

ಪಶ್ಚಿಮ ಬಂಗಾಳದ ಗಂಗಾ ಸಾಗರ ಮೇಳದಲ್ಲಿ ಮಾತನಾಡಿದ ಶಂಕರಾಚಾರ್ಯರು, ರಾಜಕಾರಣಿಗಳಿಗೆ ಅವರ ಮಿತಿಗಳಿವೆ ಮತ್ತು ಅವರಿಗೆ ಸಂವಿಧಾನದ ಅಡಿಯಲ್ಲಿ ಜವಾಬ್ದಾರಿ ಇದೆ. ಧಾರ್ಮಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರದಲ್ಲಿ ನಿಯಮಗಳು ಮತ್ತು ನಿರ್ಬಂಧಗಳಿವೆ ಮತ್ತು ಈ ನಿಯಮಗಳನ್ನು ಅನುಸರಿಸಬೇಕು. ಪ್ರತಿಯೊಂದು ಕ್ಷೇತ್ರಕ್ಕೂ ರಾಜಕಾರಣಿಗಳು ಹಸ್ತಕ್ಷೇಪ ಮಾಡುವುದು ಹುಚ್ಚುತನ. ಇದು ಸಂವಿಧಾನದ ಪ್ರಕಾರ ಘೋರ ಅಪರಾಧವೂ ಹೌದು ಎಂದು ಸರಸ್ವತಿ ಹೇಳಿದರು.

ಜನವರಿ 22 ರಂದು ನಡೆಯಲಿರುವ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ನಾಲ್ಕು ಪೀಠಗಳ ಶಂಕರಾಚಾರ್ಯರು ಈ ಮೊದಲು ಘೋಷಿಸಿದ್ದರು. ಉತ್ತರಾಖಂಡದ ಜೋಶಿಮಠ, ಗುಜರಾತ್‌ನ ದ್ವಾರಕಾ, ಒಡಿಶಾದ ಪುರಿ ಮತ್ತು ಕರ್ನಾಟಕದ ಶೃಂಗೇರಿಯಲ್ಲಿ ಈ ಮಠಗಳಿವೆ.

ಸಮಾರಂಭದಲ್ಲಿ ಶಾಸ್ತ್ರಗಳನ್ನು ಪಾಲಿಸದ ಕಾರಣ ಉದ್ಘಾಟನೆಗೆ ಬರುವುದಿಲ್ಲ. ಧರ್ಮಗ್ರಂಥಗಳ ಪ್ರಕಾರ ಪ್ರಾಣ ಪ್ರತಿಷ್ಟಾಪನೆಗೆ ನಿಯಮಗಳಿವೆ ಮತ್ತು ಪ್ರಧಾನ ಮಂತ್ರಿ ಅವುಗಳನ್ನು ಅನುಸರಿಸಬೇಕು. ಒಬ್ಬರ ಹೆಸರನ್ನು ಪ್ರಚಾರ ಮಾಡಲು ಈ ನಿಯಮಗಳನ್ನು ಮೀರುವುದು ವಿನಾಶದ ಹಾದಿಯಲ್ಲಿ ಹೋಗುವುದಾಗಿದೆ ಎಂದು ಶಂಕರಾಚಾರ್ಯರು ಹೇಳಿದ್ದಾರೆ.

ತಾನು ಅಯೋಧ್ಯೆಗೆ ಹೋಗುತ್ತೇನೆ ಆದರೆ ರಾಮ ಮಂದಿರದ ಪ್ರಾಣ ಪ್ರತಿಷ್ಟಾಪನೆಯಲ್ಲಿ ಭಾಗವಹಿಸುವುದಿಲ್ಲ. ಸಮಾರಂಭದಲ್ಲಿ ಪಾಲ್ಗೊಳ್ಳುವುದಕ್ಕೆ ನಾನು ಯಾರನ್ನೂ ತಡೆಯುವುದಿಲ್ಲ ಮತ್ತು ಕೇಂದ್ರ ಸರ್ಕಾರದ ಮೇಲೆ ಕೋಪವಿಲ್ಲ. ಓರ್ವ ಸಹಾಯಕನೊಂದಿಗೆ ಮಾತ್ರ ಕಾರ್ಯಕ್ರಮಕ್ಕೆ ಹಾಜರಾಗುವಂತೆ ಆಹ್ವಾನ ಪತ್ರದಲ್ಲಿ ತಿಳಿಸಿರುವುದಕ್ಕಾಗಿ ವಿಷಾದವಿದೆ. ಶಂಕರಾಚಾರ್ಯರ ಧಾರ್ಮಿಕ ಮತ್ತು ಆಧ್ಯಾತ್ಮಿಕ ಶ್ರೇಷ್ಠತೆಯ ಹೊರತಾಗಿಯೂ ಅವರಿಗೆ ರಾಮ ಮಂದಿರದ ಗರ್ಭಗುಡಿಯಲ್ಲಿ ಸ್ಥಾನವನ್ನು ಕಲ್ಪಿಸಲಾಗಿಲ್ಲ ಮತ್ತು ಹೊರಗಡೆಯೇ ಇರುವಂತೆ ಸೂಚಿಸಲಾಗಿದೆ. ಇದು ಸ್ವೀಕಾರಾರ್ಹವಲ್ಲ. ಕಾರ್ಯಕ್ರಮದಲ್ಲಿ ಕುಳಿತುಕೊಂಡು ರಾಮ ಮಂದಿರ ಉದ್ಘಾಟನೆಯನ್ನು ನೋಡುವುದು ಮತ್ತು ಚಪ್ಪಾಳೆ ತಟ್ಟುವುದು ನನಗೆ ಇಷ್ಟವಿಲ್ಲ ಎಂದು ಪುರಿ ಶಂಕರಾಚಾರ್ಯರು ಹೇಳಿದ್ದಾರೆ.

ಜ.4ರಂದು ಸುದ್ದಿಗಾರರ ಜೊತೆ ಮಾತನಾಡಿದ್ದ ಪುರಿ ಶಂಕರಾಚಾರ್ಯರು, ನನಗೆ ನನ್ನ ಸ್ಥಾನದ ಘನತೆಯ ಅರಿವಿದೆ. ಹೀಗಾಗಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರದಲ್ಲಿ ಭಾಗವಹಿಸುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ರಾಮ ಮಂದಿರವನ್ನು ಉದ್ಘಾಟಿಸುತ್ತಾರೆ. ಅವರು ವಿಗ್ರಹವನ್ನು ಸ್ಪರ್ಶಿಸುತ್ತಾರೆ. ಆಗ ನಾನು ಏನು ಮಾಡಬೇಕು? ನಿಂತುಕೊಂಡು ಚಪ್ಪಾಳೆ ಹೊಡೆಯಬೇಕೇ ಎಂದು ಪ್ರಶ್ನಿಸಿದ್ದರು.

ಇದನ್ನು ಓದಿ: ಪ್ರಚೋದನಾಕಾರಿ ಹೇಳಿಕೆ: ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...