Homeಮುಖಪುಟಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಪುರಿ ಶಂಕರಾಚಾರ್ಯ

ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಪುರಿ ಶಂಕರಾಚಾರ್ಯ

- Advertisement -
- Advertisement -

ಧಾರ್ಮಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ ಮತ್ತು ಸಂವಿಧಾನವೂ ಇದನ್ನು ಅನುಮತಿಸುವುದಿಲ್ಲ ಎಂದು ಪುರಿಯ ಶಂಕರಾಚಾರ್ಯ ಮಠದ ನಿಶ್ಚಲಾನಂದ ಸರಸ್ವತಿ ಅವರು ಹೇಳಿದ್ದಾರೆ. ಈ ಹಿಂದೆ ರಾಮಮಂದಿರ ನಿರ್ಮಾಣ ಪೂರ್ಣವಾಗದೆ ಪ್ರಾಣ ಪ್ರತಿಷ್ಠಾಪನೆ ಶಾಸ್ತ್ರಗಳಿಗೆ ವಿರುದ್ಧ ಎಂದು ಶಂಕರಾಚಾರ್ಯ ಮಠದ ನಾಲ್ವರು ಮಠಾಧೀಶರು ವಿರೋಧವನ್ನು ವ್ಯಕ್ತಪಡಿಸಿದ್ದರು.

ಪಶ್ಚಿಮ ಬಂಗಾಳದ ಗಂಗಾ ಸಾಗರ ಮೇಳದಲ್ಲಿ ಮಾತನಾಡಿದ ಶಂಕರಾಚಾರ್ಯರು, ರಾಜಕಾರಣಿಗಳಿಗೆ ಅವರ ಮಿತಿಗಳಿವೆ ಮತ್ತು ಅವರಿಗೆ ಸಂವಿಧಾನದ ಅಡಿಯಲ್ಲಿ ಜವಾಬ್ದಾರಿ ಇದೆ. ಧಾರ್ಮಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರದಲ್ಲಿ ನಿಯಮಗಳು ಮತ್ತು ನಿರ್ಬಂಧಗಳಿವೆ ಮತ್ತು ಈ ನಿಯಮಗಳನ್ನು ಅನುಸರಿಸಬೇಕು. ಪ್ರತಿಯೊಂದು ಕ್ಷೇತ್ರಕ್ಕೂ ರಾಜಕಾರಣಿಗಳು ಹಸ್ತಕ್ಷೇಪ ಮಾಡುವುದು ಹುಚ್ಚುತನ. ಇದು ಸಂವಿಧಾನದ ಪ್ರಕಾರ ಘೋರ ಅಪರಾಧವೂ ಹೌದು ಎಂದು ಸರಸ್ವತಿ ಹೇಳಿದರು.

ಜನವರಿ 22 ರಂದು ನಡೆಯಲಿರುವ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ನಾಲ್ಕು ಪೀಠಗಳ ಶಂಕರಾಚಾರ್ಯರು ಈ ಮೊದಲು ಘೋಷಿಸಿದ್ದರು. ಉತ್ತರಾಖಂಡದ ಜೋಶಿಮಠ, ಗುಜರಾತ್‌ನ ದ್ವಾರಕಾ, ಒಡಿಶಾದ ಪುರಿ ಮತ್ತು ಕರ್ನಾಟಕದ ಶೃಂಗೇರಿಯಲ್ಲಿ ಈ ಮಠಗಳಿವೆ.

ಸಮಾರಂಭದಲ್ಲಿ ಶಾಸ್ತ್ರಗಳನ್ನು ಪಾಲಿಸದ ಕಾರಣ ಉದ್ಘಾಟನೆಗೆ ಬರುವುದಿಲ್ಲ. ಧರ್ಮಗ್ರಂಥಗಳ ಪ್ರಕಾರ ಪ್ರಾಣ ಪ್ರತಿಷ್ಟಾಪನೆಗೆ ನಿಯಮಗಳಿವೆ ಮತ್ತು ಪ್ರಧಾನ ಮಂತ್ರಿ ಅವುಗಳನ್ನು ಅನುಸರಿಸಬೇಕು. ಒಬ್ಬರ ಹೆಸರನ್ನು ಪ್ರಚಾರ ಮಾಡಲು ಈ ನಿಯಮಗಳನ್ನು ಮೀರುವುದು ವಿನಾಶದ ಹಾದಿಯಲ್ಲಿ ಹೋಗುವುದಾಗಿದೆ ಎಂದು ಶಂಕರಾಚಾರ್ಯರು ಹೇಳಿದ್ದಾರೆ.

ತಾನು ಅಯೋಧ್ಯೆಗೆ ಹೋಗುತ್ತೇನೆ ಆದರೆ ರಾಮ ಮಂದಿರದ ಪ್ರಾಣ ಪ್ರತಿಷ್ಟಾಪನೆಯಲ್ಲಿ ಭಾಗವಹಿಸುವುದಿಲ್ಲ. ಸಮಾರಂಭದಲ್ಲಿ ಪಾಲ್ಗೊಳ್ಳುವುದಕ್ಕೆ ನಾನು ಯಾರನ್ನೂ ತಡೆಯುವುದಿಲ್ಲ ಮತ್ತು ಕೇಂದ್ರ ಸರ್ಕಾರದ ಮೇಲೆ ಕೋಪವಿಲ್ಲ. ಓರ್ವ ಸಹಾಯಕನೊಂದಿಗೆ ಮಾತ್ರ ಕಾರ್ಯಕ್ರಮಕ್ಕೆ ಹಾಜರಾಗುವಂತೆ ಆಹ್ವಾನ ಪತ್ರದಲ್ಲಿ ತಿಳಿಸಿರುವುದಕ್ಕಾಗಿ ವಿಷಾದವಿದೆ. ಶಂಕರಾಚಾರ್ಯರ ಧಾರ್ಮಿಕ ಮತ್ತು ಆಧ್ಯಾತ್ಮಿಕ ಶ್ರೇಷ್ಠತೆಯ ಹೊರತಾಗಿಯೂ ಅವರಿಗೆ ರಾಮ ಮಂದಿರದ ಗರ್ಭಗುಡಿಯಲ್ಲಿ ಸ್ಥಾನವನ್ನು ಕಲ್ಪಿಸಲಾಗಿಲ್ಲ ಮತ್ತು ಹೊರಗಡೆಯೇ ಇರುವಂತೆ ಸೂಚಿಸಲಾಗಿದೆ. ಇದು ಸ್ವೀಕಾರಾರ್ಹವಲ್ಲ. ಕಾರ್ಯಕ್ರಮದಲ್ಲಿ ಕುಳಿತುಕೊಂಡು ರಾಮ ಮಂದಿರ ಉದ್ಘಾಟನೆಯನ್ನು ನೋಡುವುದು ಮತ್ತು ಚಪ್ಪಾಳೆ ತಟ್ಟುವುದು ನನಗೆ ಇಷ್ಟವಿಲ್ಲ ಎಂದು ಪುರಿ ಶಂಕರಾಚಾರ್ಯರು ಹೇಳಿದ್ದಾರೆ.

ಜ.4ರಂದು ಸುದ್ದಿಗಾರರ ಜೊತೆ ಮಾತನಾಡಿದ್ದ ಪುರಿ ಶಂಕರಾಚಾರ್ಯರು, ನನಗೆ ನನ್ನ ಸ್ಥಾನದ ಘನತೆಯ ಅರಿವಿದೆ. ಹೀಗಾಗಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರದಲ್ಲಿ ಭಾಗವಹಿಸುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ರಾಮ ಮಂದಿರವನ್ನು ಉದ್ಘಾಟಿಸುತ್ತಾರೆ. ಅವರು ವಿಗ್ರಹವನ್ನು ಸ್ಪರ್ಶಿಸುತ್ತಾರೆ. ಆಗ ನಾನು ಏನು ಮಾಡಬೇಕು? ನಿಂತುಕೊಂಡು ಚಪ್ಪಾಳೆ ಹೊಡೆಯಬೇಕೇ ಎಂದು ಪ್ರಶ್ನಿಸಿದ್ದರು.

ಇದನ್ನು ಓದಿ: ಪ್ರಚೋದನಾಕಾರಿ ಹೇಳಿಕೆ: ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...