Homeಮುಖಪುಟ100ನೇ ದಿನಕ್ಕೆ ಕಾಲಿಟ್ಟ ಯುದ್ಧ: ನೆತನ್ಯಾಹು ಪ್ರತಿಜ್ಞೆ

100ನೇ ದಿನಕ್ಕೆ ಕಾಲಿಟ್ಟ ಯುದ್ಧ: ನೆತನ್ಯಾಹು ಪ್ರತಿಜ್ಞೆ

- Advertisement -
- Advertisement -

ಗಾಝಾ ಮೇಲೆ ಇಸ್ರೇಲ್‌ ಬಾಂಬ್‌ ದಾಳಿ 100ನೇ ದಿನಕ್ಕೆ ಕಾಲಿಟ್ಟಿದೆ. ಗಾಝಾ ಪಟ್ಟಿಯಲ್ಲಿ ಅಪಾರ ಜೀವಹಾನಿ ಮತ್ತು ಭಯದ ಬಗ್ಗೆ ಅಂತರಾಷ್ಟ್ರೀಯ ಸಮುದಾಯದ ಎಚ್ಚರಿಕೆ, ಪ್ರಾದೇಶಿಕ ಘರ್ಷಣೆಯ ಭೀತಿ ಮಧ್ಯೆ ಇದೀಗ ಯುದ್ಧವನ್ನು ಮತ್ತೆ ಮುಂದುವರಿಸುವುದಾಗಿ ಇಸ್ರೇಲ್‌ ಪ್ರತಿಜ್ಞೆ ಮಾಡಿದೆ.

ಗಾಝಾ ಮೇಲಿನ ಮಿಲಿಟರಿಯ ಆಕ್ರಮಣದ ವಿರುದ್ಧ ತಡೆಯಾಜ್ಞೆಯ ಕುರಿತು ಅಂತರಾಷ್ಟ್ರೀಯ ನ್ಯಾಯಾಲಯದ ಆದೇಶಕ್ಕೆ ಎದುರು ನೋಡುತ್ತಿರುವಾಗ ಇಸ್ರೇಲ್‌ ಒಟ್ಟು ವಿಜಯದವರೆಗೆ ಯುದ್ಧ ಮುಂದುವರಿಸುವ ಪ್ರತಿಜ್ಞೆಯನ್ನು ಮಾಡಿದೆ.

ಅ.7ರಂದು ಇಸ್ರೇಲ್‌ ಯುದ್ಧ ಘೋಷಿಸಿ ಗಾಝಾ ಮೇಲೆ ದಾಳಿಯನ್ನು ಪ್ರಾರಂಭಿಸಿದ ಬಳಿಕ 23,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯನ್ನರನ್ನು ಹತ್ಯೆ ಮಾಡಿದೆ. ಅವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಗಾಝಾ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ನಾವು ಸಂಪೂರ್ಣ ವಿಜಯದವರೆಗೆ, ನಾವು ನಮ್ಮ ಎಲ್ಲಾ ಗುರಿಗಳನ್ನು ಸಾಧಿಸುವವರೆಗೆ ಯುದ್ಧವನ್ನು ಮುಂದುವರೆಸುತ್ತೇವೆ ಎಂದು ನೆತನ್ಯಾಹು ದೂರದರ್ಶನದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಹಮಾಸ್‌ನ್ನು ನಿರ್ಮೂಲನೆ ಮಾಡುವುದು, ನಮ್ಮ ಎಲ್ಲಾ ಒತ್ತೆಯಾಳುಗಳನ್ನು ವಾಪಾಸ್ಸು ಕರೆಸಿಕೊಳ್ಳುವುದು ಮತ್ತು ಗಾಝಾ ಮೇಲೆ ಎಂದಿಗೂ ಮತ್ತೆ ಇಸ್ರೇಲ್‌ ದಾಳಿ ನಡೆಸದಂತೆ ಖಾತ್ರಿಪಡಿಸಿಕೊಳ್ಳುವುದು ನಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ.

ಲೆಬನಾನ್‌ನ ಹಿಜ್ಬುಲ್ಲಾ ಮತ್ತು ಯೆಮೆನ್‌ನ ಹೌತಿಗಳು ಪ್ಯಾಲೆಸ್ತೀನಿಯನ್ನರಿಗೆ ಬೆಂಬಲಿಸಿರುವುದು ವ್ಯಾಪಕ ಸಂಘರ್ಷದ ಭೀತಿಯನ್ನು ಹೆಚ್ಚಿಸಿವೆ. ಕೆಂಪು ಸಮುದ್ರದಲ್ಲಿ ವಾಣಿಜ್ಯ ಹಡಗುಗಳ ಮೇಲೆ ಹೌತಿ ದಾಳಿಗಳಿಗೆ ಪ್ರತಿಯಾಗಿ ಯೆಮೆನ್‌ನಲ್ಲಿನ ಹೌತಿ ಕೇಂದ್ರಿತ ಪ್ರದೇಶಗಳ ಮೇಲೆ ಅಮೆರಿಕ ಗುರುವಾರ ಮತ್ತು ಶುಕ್ರವಾರ ವೈಮಾನಿಕ ದಾಳಿಗಳನ್ನು ನಡೆಸಿದೆ. ಇದೇ ವೇಳೆ ಇಸ್ರೇಲ್-ಲೆಬನಾನ್ ಗಡಿಯಾದ್ಯಂತ ಘರ್ಷಣೆಗಳು ಮುಂದುವರಿದಿದೆ.

ಭಾನುವಾರ ಲೆಬನಾನ್‌ನಿಂದ ಉಡಾವಣೆಯಾದ ಕ್ಷಿಪಣಿಯು ಉತ್ತರ ಇಸ್ರೇಲ್‌ನ ಮನೆಯೊಂದಕ್ಕೆ ಬಡಿದಿದೆ. ಘಟನೆಯಲ್ಲಿ ಇಬ್ಬರ ಹತ್ಯೆ ನಡೆದಿದೆ. ಲೆಬನಾನ್‌ನಲ್ಲಿನ ಹೆಜ್ಬೊಲ್ಲಾ ಕೇಂದ್ರಗಳ ಮೇಲೆ ತನ್ನ ಫೈಟರ್ ಜೆಟ್‌ಗಳು ದಾಳಿ ಮಾಡಿದೆ ಮತ್ತು ಗುಂಡಿನ ಚಕಮಕಿ ನಡೆದಿದೆ ಎಂದು ಇಸ್ರೇಲ್‌ ಮಿಲಿಟರಿ ಹೇಳಿದೆ.

ಉತ್ತರದ ಗಡಿ ಪ್ರದೇಶಗಳಿಂದ ಸಾವಿರಾರು ಇಸ್ರೇಲ್‌ ನಾಗರಿಕರನ್ನು ಸ್ಥಳಾಂತರಿಸಲಾಗಿದ್ದು, ಗಡಿ ಪ್ರದೇಶದಿಂದ ಸಾವಿರಾರು ಲೆಬನಾನಿನ ನಾಗರಿಕರು ಕೂಡ ನಿವೇಶನಗಳನ್ನು ಬಿಟ್ಟು ತೆರಳಿದ್ದಾರೆ. ಭಾನುವಾರ ಹಿಜ್ಬುಲ್ಲಾದ ನಾಯಕ ಹಸನ್ ನಸ್ರಲ್ಲಾ ಅವರು ಗಾಝಾ ಮೇಲೆ ಇಸ್ರೇಲ್‌ ಯುದ್ಧ 99 ದಿನಕ್ಕೆ ಕಾಲಿಡುತ್ತಿದ್ದಂತೆ ನಾವು ಯುದ್ಧಕ್ಕೆ ಸಿದ್ಧರಿದ್ದೇವೆ. ನಾವು ಅದಕ್ಕೆ ಹೆದರುವುದಿಲ್ಲ ಎಂದು ಹೇಳಿಕೆಯನ್ನು ಕೂಡ ನೀಡಿದ್ದಾರೆ. ಇಸ್ರೇಲ್‌ ಗಾಝಾ ಯುದ್ಧ ಇದೀಗ ನಿಧಾನವಾಗಿ ಪ್ರಾದೇಶಿಕ ಘರ್ಷಣೆಯಾಗಿ ಮಾರ್ಪಟ್ಟಿದೆ.

ಇದನ್ನು ಓದಿ: ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಪುರಿ ಶಂಕರಾಚಾರ್ಯ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...