Homeಮುಖಪುಟಚುನಾವಣೆ ಮುಗಿದ ನಂತರ ರಾಮನ ಮಹತ್ವ ಮಸುಕಾಗುತ್ತದೆ: ತೇಜ್ ಪ್ರತಾಪ್ ಯಾದವ್

ಚುನಾವಣೆ ಮುಗಿದ ನಂತರ ರಾಮನ ಮಹತ್ವ ಮಸುಕಾಗುತ್ತದೆ: ತೇಜ್ ಪ್ರತಾಪ್ ಯಾದವ್

- Advertisement -
- Advertisement -

‘ಚುನಾವಣೆಗಳು ಮುಗಿದ ನಂತರ ರಾಮನ ಮಹತ್ವವು ಮಸುಕಾಗುತ್ತದೆ’ ಎಂದು ಬಿಹಾರದ ಸಚಿವ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜ್ ಪ್ರತಾಪ್ ಯಾದವ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಗವಾನ್ ರಾಮನು ರಾತ್ರಿ ಕನಸಿನಲ್ಲಿ ನನ್ನೊಂದಿಗೆ ಮಾತನಾಡಿದ್ದು, ಅಂದು ರಾಮ ಅಯೋಧ್ಯೆಗೆ ಬರುವುದಿಲ್ಲ ಎಂದು ಹೇಳಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಶ್ರೀರಾಮ ಜನವರಿ 22 ರಂದು ಮಾತ್ರ ಅಯೋಧ್ಯೆಗೆ ಬರುವುದು ಅಗತ್ಯವೇ? ನಾನು ಕನಸು ಕಂಡಿದ್ದೇನೆ, ಅವನು ಬರುವುದಿಲ್ಲ … ಭಗವಾನ್ ರಾಮ ನನ್ನ ಕನಸಿಗೆ ಬಂದು, ಅವರು (ಬಿಜೆಪಿ) ನಟಿಸುತ್ತಿದ್ದಾರೆ ಮತ್ತು ನಾಟಕ ಮಾಡುತ್ತಿದ್ದಾರೆ ಎಂದು ಹೇಳಿದರು. ಆ ದಿನ ನಾನು ಅಯೋಧ್ಯೆಗೆ ಬರುವುದಿಲ್ಲ ಎಂದು ಅವರು ಹೇಳಿದ್ದಾರೆ ಎಂದು ಯಾದವ್ ವಿಡಿಯೋದಲ್ಲಿ ಹೇಳುತ್ತಿರುವುದು ಕಂಡುಬಂದಿದೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಬಣ ಗೆದ್ದ ನಂತರವೇ ಭಗವಾನ್ ರಾಮ ಮನೆಗೆ ಬರುತ್ತಾರೆ ಎಂದು ಹೇಳಿಕೆ ನೀಡಿದ್ದ ತೇಜ್ ಪ್ರತಾಪ್ ವಿವಾದವನ್ನು ಹುಟ್ಟು ಹಾಕಿದ್ದರು. “ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟದ ಧ್ವಜವನ್ನು ಹಾರಿಸಿದ ನಂತರವೇ ರಾಮನು ಮನೆಗೆ ಬರುತ್ತಾನೆ” ಎಂದು ಅವರು ಜನವರಿ 1ರಂದು ಮಾಧ್ಯಮಗಳಿಗೆ ತಿಳಿಸಿದರು; ಇದು ಬಿಜೆಪಿಯನ್ನು ಪ್ರಚೋದಿಸಿತು.

ಜನವರಿ 22 ರಂದು ರಾಮ ಮಂದಿರದ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದ್ದು, ಜನವರಿ 16 ರಂದು ಕಾರ್ಯಕ್ರಮದ ವಿಧಿವಿಧಾನಗಳು ಆರಂಭವಾಗಲಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ಭವ್ಯ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಗಣ್ಯರು, ಸಂತರು ಸೇರಿದಂತೆ ಸಾವಿರಾರು ಜನರು ಮತ್ತು ರಾಜಕಾರಣಿಗಳನ್ನು ಆಹ್ವಾನಿಸಲಾಗಿದೆ.

ಆದರೆ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಚೌಧರಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಿಪಿಐ(ಎಂ) ನಾಯಕ ಸೀತಾರಾಂ ಯೆಚೂರಿ ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರು ಇದು ರಾಜಕೀಯ ಯೋಜನೆ ಎಂದು ಹೇಳುವ ಮೂಲಕ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಆಹ್ವಾನವನ್ನು ತಿರಸ್ಕರಿಸಿದ್ದಾರೆ.

ಈ ನಾಯಕರ ಹೊರತಾಗಿ, ‘ಶಂಕರಾಚಾರ್ಯರು’ ಎಂದು ಕರೆಯಲ್ಪಡುವ ಪ್ರಮುಖ ನಾಲ್ಕು ಸನಾತನ ಹಿಂದೂ ಧರ್ಮದ ಆಧ್ಯಾತ್ಮಿಕ ನಾಯಕರು ಕೂಡ ವಿವಾದಾತ್ಮಕ ಸಮಾರಂಭದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ. ಆದರೂ ಅವರಲ್ಲಿ ಇಬ್ಬರು ಕಾರ್ಯಕ್ರಮವನ್ನು ಬೆಂಬಲಿಸಿ ಹೇಳಿಕೆ ನೀಡಿದ್ದಾರೆ. ಉತ್ತರಾಖಂಡದ ಜ್ಯೋತಿಷ್ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ, ದೇವಾಲಯದ ನಿರ್ಮಾಣವು ಸನಾತನ ಧರ್ಮದ ವಿಜಯವನ್ನು ಸೂಚಿಸುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ; ಸ್ಲಂ ತೆರವು ಕಾರ್ಯಾಚರಣೆ; ‘ಘರ್ ಬಚಾವೋ, ಬಿಜೆಪಿ ಹಟಾವೋ’ ಅಭಿಯಾನ ಆರಂಭಿಸಿದ ಎಎಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...