Homeಮುಖಪುಟಭಾರತೀಯ ಸೇನೆ ವಾಪಸ್‌ಗೆ ಮಾರ್ಚ್‌ 15ರ ಗಡುವು ನೀಡಿದ ಮಾಲ್ಡೀವ್ಸ್‌

ಭಾರತೀಯ ಸೇನೆ ವಾಪಸ್‌ಗೆ ಮಾರ್ಚ್‌ 15ರ ಗಡುವು ನೀಡಿದ ಮಾಲ್ಡೀವ್ಸ್‌

- Advertisement -
- Advertisement -

ಮಾರ್ಚ್ 15ರೊಳಗೆ ತಮ್ಮ ಸೇನೆಯನ್ನು ವಾಪಸ್ ತೆಗೆದುಕೊಳ್ಳುವಂತೆ ಭಾರತಕ್ಕೆ ಮಾಲ್ಡೀವ್ಸ್ ಗಡುವು ನೀಡಿದೆ ಎಂದು ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಉನ್ನತ ಸಹಾಯಕ ಅಬ್ದುಲ್ಲಾ ನಾಝಿಮ್ ಇಬ್ರಾಹಿಂ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

“ಭಾರತೀಯ ಸೇನೆ ಮಾಲ್ಡೀವ್ಸ್‌ನಲ್ಲಿ ಇರಬಾರದು ಎಂಬುವುದು ಅಧ್ಯಕ್ಷ ಮುಯಿಝು ಅವರ ಆಶಯವಾಗಿದೆ. ಕೆಲ ತಿಂಗಳುಗಳಿಂದ ನಾವು ಈ ಬಗ್ಗೆ ಭಾರತದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಮಾಲ್ಡೀವ್ಸ್‌ನಲ್ಲಿರುವ ಭಾರತೀಯ ಹೈಕಮಿಷನರ್ ಭಾನುವಾರ ಮಾಲ್ಡೀವ್ಸ್ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ” ಎಂದು ನಾಝಿಮ್ ಇಬ್ರಾಹಿಂ ತಿಳಿಸಿದ್ದಾರೆ.

ಮಾಲ್ಡೀವ್ಸ್‌ನ ಹೊಸ ಸರ್ಕಾರ ಭಾರತದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ ಚೀನಾದತ್ತ ಒಲವು ತೋರಿಸಿದೆ. ಇತ್ತೀಚೆಗೆ ಭಾರತ ಮತ್ತು ಮಾಲ್ಡೀವ್ಸ್‌ ನಡುವೆ ಶೀತಲ ಸಮರ ನಡೆಯುತ್ತಿದ್ದಾಗಲೇ, ಮಾಲ್ಡೀವ್ಸ್‌ ಅಧ್ಯಕ್ಷ ಮುಯಿಝು ಅವರು ಚೀನಾಗೆ ಭೇಟಿ ನೀಡಿದ್ದರು. ಈ ವೇಳೆ ಮಾಲ್ಡೀವ್ಸ್‌ ರಾಜಧಾನಿ ಮಾಲೆಯ ಅಭಿವೃದ್ಧಿಗೆ 130 ಮಿಲಿಯನ್ ಡಾಲರ್ ನೆರವು ನೀಡಲು ಚೀನಾ ಒಪ್ಪಿಕೊಂಡಿದೆ. ಉಭಯ ದೇಶಗಳು ಕೃಷಿ ಸಹಕಾರ ಒಪ್ಪಂದಕ್ಕೂ ಸಹಿ ಹಾಕಿವೆ.

“ಅಕ್ಕಿ, ಸಕ್ಕರೆ ಮತ್ತು ಹಿಟ್ಟಿನಂತಹ ಆಮದು ಮಾಡಿಕೊಳ್ಳುವ ಪ್ರಧಾನ ಆಹಾರಗಳಿಗಾಗಿ ಒಂದು ದೇಶದ ಮೇಲಿನ ಅವಲಂಬನೆಯನ್ನು ನಮ್ಮ ಸರ್ಕಾರ ಕೊನೆಗೊಳಿಸಲಿದೆ” ಎಂದು ಅಧ್ಯಕ್ಷ ಮುಯಿಝು ಅವರ ಕಚೇರಿಯು ಇತ್ತೀಚೆಗೆ ಪರೋಕ್ಷವಾಗಿ ಭಾರತಕ್ಕೆ ತಿರುಗೇಟು ನೀಡಿತ್ತು.

ಮುಯಿಝು ಅವರು ಚೀನಾವನ್ನು ‘ಮಾಲ್ಡೀವ್ಸ್‌ನ ಆತ್ಮೀಯ ಮಿತ್ರ ರಾಷ್ಟ್ರಗಳಲ್ಲಿ ಒಂದು’ ಎಂದು ಹೇಳಿದ್ದರು. ಚೀನಾ ಭೇಟಿಯ ಬಳಿಕ ಭಾರತವನ್ನು ಗುರಿಯಾಗಿಸಿ ಟೀಕೆ ವ್ಯಕ್ತಪಡಿಸಿದ್ದರು.

“ನಾವು ಚಿಕ್ಕವರಾಗಿರಬಹುದು, ಆದರೆ, ನಮ್ಮನ್ನು ಬೆದರಿಸುವುದಕ್ಕೆ ನಿಮಗೆ ಪರವಾನಗಿ ನೀಡುವುದಿಲ್ಲ. ನಾವು ಯಾರ ಹಿತ್ತಲಿನಲ್ಲಿಲ್ಲ. ನಾವು ಸ್ವತಂತ್ರ ಮತ್ತು ಸಾರ್ವಭೌಮ ರಾಷ್ಟ್ರ” ಎಂದು ಮಾಲ್ಡೀವಿಯನ್ ಮಾಧ್ಯಮದ ಮುಂದೆ ಮುಯಿಝು ಹೇಳಿದ್ದರು.

ಪ್ರಧಾನಿ ಮೋದಿಯವರು ಇತ್ತೀಚೆಗೆ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದ ಫೋಟೋಗಳನ್ನು ಹಂಚಿಕೊಂಡಿದ್ದರು. ಇದಕ್ಕೆ ಮಾಲ್ಡೀವ್ಸ್‌ ಸಚಿವರು ಟೀಕೆ ವ್ಯಕ್ತಪಡಿಸಿದ್ದರು. ಈ ವಿಚಾರ ಭಾರತ ಮತ್ತು ಮಾಲ್ಡೀವ್ಸ್ ನಡುವೆ ರಾಜತಾಂತ್ರಿಕ ಸಂಬಂಧ ಹದೆಗೆಡುವಂತೆ ಮಾಡಿದೆ. ಪ್ರಧಾನಿ ಮೋದಿಯನ್ನು ಟೀಕಿಸಿದ ಮೂವರು ಸಚಿವರನ್ನು ಮಾಲ್ಡೀವ್ಸ್‌ ಸರ್ಕಾರ ಸಂಪುಟದಿಂದ ವಜಾ ಮಾಡಿದೆ. ಆದರೂ, ಮಾಲ್ಡೀವ್ಸ್‌ನ ಹೊಸ ಸರ್ಕಾರ ಭಾರತಕ್ಕಿಂತ ಚೀನಾದ ಕಡೆ ಹೆಚ್ಚಿನ ಒಲವು ತೋರಿಸುತ್ತಿದೆ.

ಇದನ್ನೂ ಓದಿ: 100ನೇ ದಿನಕ್ಕೆ ಕಾಲಿಟ್ಟ ಯುದ್ಧ: ನೆತನ್ಯಾಹು ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...