Homeಮುಖಪುಟಪ್ರವಾಸಿಗರ ಹರಿವು ತಡೆದುಕೊಳ್ಳುವ ಶಕ್ತಿ ಲಕ್ಷದ್ವೀಪಕ್ಕೆ ಇಲ್ಲ: ವಸ್ತುಸ್ಥಿತಿ ಬಿಚ್ಚಿಟ್ಟ ಸಂಸದ ಫೈಝಲ್

ಪ್ರವಾಸಿಗರ ಹರಿವು ತಡೆದುಕೊಳ್ಳುವ ಶಕ್ತಿ ಲಕ್ಷದ್ವೀಪಕ್ಕೆ ಇಲ್ಲ: ವಸ್ತುಸ್ಥಿತಿ ಬಿಚ್ಚಿಟ್ಟ ಸಂಸದ ಫೈಝಲ್

- Advertisement -
- Advertisement -

ಮಾಲ್ಡೀವ್ಸ್‌ ವಿರೋಧಿ ಅಲೆ ಭಾರತದಲ್ಲಿ ಹೆಚ್ಚಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ, ಪ್ರವಾಸಿಗರು ಮಾಲ್ಡೀವ್ಸ್‌ ಬದಲು ನಮ್ಮದೇ ಭಾರತದ ಲಕ್ಷದ್ವೀಪಕ್ಕೆ ತೆರಳಿ ಎಂಬ ಅಭಿಯಾನವೇ ಆರಂಭವಾಗಿದೆ. ‘ಚಲೋ ಲಕ್ಷದ್ವೀಪ್’ ಎಂಬ ಹ್ಯಾಷ್‌ಟ್ಯಾಗ್‌ನಲ್ಲಿ ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕಿದ್ದಾರೆ.

ಈ ನಡುವೆ ಲಕ್ಷದ್ವೀಪದ ಏಕೈಕ ಸಂಸದ ಮೊಹಮ್ಮದ್ ಫೈಝಲ್ ಅವರು ಲಕ್ಷದ್ವೀಪದ ವಸ್ತುಸ್ಥಿತಿಯನ್ನು ತೆರದಿಟ್ಟಿದ್ದು, ಸೀಮಿತ ವಿಮಾನಗಳು ಮತ್ತು ಕೇವಲ 150 ಹೋಟೆಲ್ ಕೊಠಡಿಗಳಿರುವ ದ್ವೀಪಕ್ಕೆ ಹೆಚ್ಚಿನ ಪ್ರವಾಸಿಗರು ಬರುವುದು ಮತ್ತು ತಂಗುವುದು ಆಸಾಧ್ಯ ಎಂದಿದ್ದಾರೆ.

“ಲಕ್ಷದ್ವೀಪ ಹವಳದಿಂದ ರಚಿಸಲ್ಪಟ್ಟಿದೆ. ಇದು ಅತ್ಯಂತ ಸೂಕ್ಷ್ಮ ಮತ್ತು ಪರಿಸರದ ವಿಷಯದಲ್ಲಿ ಬಹಳ ದುರ್ಬಲವಾಗಿದೆ”. ಹೆಚ್ಚಿನ ಪ್ರವಾಸಿಗರು ಬಂದರೆ ತಡೆದುಕೊಳ್ಳುವ ಶಕ್ತಿ ಈ ದ್ವೀಪಗಳಿಗೆ ಇಲ್ಲ
ಎಂದು ಎನ್‌ಡಿ ಟಿವಿ ಜೊತೆ ಮಾತನಾಡುವ ವೇಳೆ ಫೈಝಲ್ ಕಳವಳ ವ್ಯಕ್ತಪಡಿಸಿದ್ದಾರೆ.

“ಲಕ್ಷದ್ವೀಪದ ಸಾಮಾರ್ಥ್ಯದ ಬಗ್ಗೆ ತಿಳಿದುಕೊಳ್ಳಲು ಸುಪ್ರೀಂ ಕೋರ್ಟ್‌ನಿಂದ ನೇಮಕಗೊಂಡ ನ್ಯಾಯಮೂರ್ತಿ ರವೀಂದ್ರನ್ ಆಯೋಗವು “ಸಮಗ್ರ ದ್ವೀಪ ನಿರ್ವಹಣಾ ಯೋಜನೆ” ಯನ್ನು ರೂಪಿಸಿದೆ. ದ್ವೀಪದಲ್ಲಿ ರಸ್ತೆ, ಜೆಟ್ಟಿಗಳು ಸೇರಿದಂತೆ ಇತರ ಮೂಲಸೌಕರ್ಯ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಇದು ಒಂದು ಮೂಲ ‘ಅಭಿವೃದ್ಧಿ ಬೈಬಲ್’ (ಮೂಲ ರೂಪುರೇಷೆ) ಆಗಿದೆ. ರವೀಂದ್ರನ್ ಆಯೋಗದ ವರದಿಯು ಪ್ರವಾಸಿಗರನ್ನು ಸ್ವೀಕರಿಸಬಹುದಾದ ದ್ವೀಪದ ಸಾಮಾರ್ಥ್ಯದ ಬಗ್ಗೆ ಸ್ಪಷ್ಟವಾಗಿ ತಿಳಿಸಿದೆ ಎಂದು ಫೈಝಲ್ ತಿಳಿಸಿದ್ದಾರೆ.

ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮ ಅಭಿವೃದ್ದಿಪಡಿಸುವುದಾದರೂ, ಅದಕ್ಕೊಂದು ನಿಯಂತ್ರಣ ವ್ಯವಸ್ಥೆ ಬೇಕಿದೆ. ಅತ್ಯಂತ ನಿಯಂತ್ರಿತ ಪ್ರವಾಸೋದ್ಯಮದಿಂದ ಗರಿಷ್ಠ ಆದಾಯವನ್ನು ಸಂಗ್ರಹಿಸಲು ಯೋಜನೆ ರೂಪಿಸಬೇಕಿದೆ. ಬರುವ ಪ್ರವಾಸಿಗರು ಕೂಡ ಪರಿಸರದ ಬಗ್ಗೆ ಸಂಪೂರ್ಣ ಕಾಳಜಿ ಹೊಂದಿರಬೇಕು ಎಂದು ಫೈಝಲ್ ಹೇಳಿದ್ದಾರೆ.

ಮಾಲ್ಡೀವ್ಸ್‌ ಅನ್ನು ವಿರೋಧಿಸುವ ಭರದಲ್ಲಿ ಎಲ್ಲರೂ ಲಕ್ಷದ್ವೀಪದ ಕಡೆ ಬೊಟ್ಟು ಮಾಡುತ್ತಿದ್ದಾರೆ. ಜನರಿಗೆ ಲಕ್ಷದ್ವೀಪದ ಮೇಲಿನ ಪ್ರೀತಿ ಉಕ್ಕಿ ಬಂದಿದೆ. ಆದರೆ, ಲಕ್ಷದ್ವೀಪಗಳ ಒಟ್ಟು 36 ದ್ವೀಪಗಳಲ್ಲಿ ಕೇವಲ 10 ದ್ವೀಪಗಳಲ್ಲಿ ಮಾತ್ರ ಜನವಸತಿ ಇದೆ. ಪ್ರವಾಸಿಗರು ಬಂದರೂ ಈ ದ್ವೀಪಗಳಿಗೇ ಬರಬೇಕು. ಪ್ರಸ್ತುತ ಲಕ್ಷದ್ವೀಪದ ಜನಸಂಖ್ಯೆಯ ಶೇಕಡಾ 8-10ರಷ್ಟು ಜನರು ಮಾತ್ರ ಪ್ರವಾಸೋದ್ಯಮವನ್ನು ಅವಲಂಬಿಸಿದ್ದಾರೆ ಎಂದು ಫೈಝಲ್ ತಿಳಿಸಿದ್ದಾರೆ.

ಮಾಲ್ಡೀವ್ಸ್‌ ಸಚಿವರು ಪ್ರಧಾನಿ ಮೋದಿಯವರನ್ನು ಟೀಕಿಸಿದ್ದಾರೆ ಎಂಬ ಕಾರಣಕ್ಕೆ ಭಾರತದ ರಾಜಕಾರಣಿಗಳು, ಸೆಲೆಬ್ರೆಟಿಗಳು ಮತ್ತು ಸಾಮಾನ್ಯ ಜನರಿಗೆ ಒಂದೇ ಸಮನೆ ಲಕ್ಷದ್ವೀಪದ ಮೇಲಿನ ಪ್ರೀತಿ ಒಂದೇ ಸಮನೆ ಉಕ್ಕಿ ಬಂದಿದೆ. ಆದರೆ, ಇವರು ಯಾರಿಗೂ ದ್ವೀಪದ ವಸ್ತುಸ್ಥಿತಿ ಗೊತ್ತಿಲ್ಲ. ಪ್ರವಾಸೋಧ್ಯಮ ಅಭಿವೃದ್ದಿ ಎಂದು ಹೇಳುವಾಗ ದ್ವೀಪದ ಜನರು ಭಯಪಡುತ್ತಿದ್ದಾರೆ ಎಂದು ಸಂಸದ ಫೈಝಲ್ ತನ್ನ ಊರಿನ ಕುರಿತು ಹೇಳಿದ್ದಾರೆ.

ಇದನ್ನೂ ಓದಿ: ಭಾರತೀಯ ಸೇನೆ ವಾಪಸ್‌ಗೆ ಮಾರ್ಚ್‌ 15ರ ಗಡುವು ನೀಡಿದ ಮಾಲ್ಡೀವ್ಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Lakshadweep is eco sensitive Island. Any mindless development in order to get tourists in to the island may wreck havoc to the otherwise pristine islands. Hope people at power will weigh all pros and cons before taking drastic measures.

  2. This is actual reality check ,to develop Lakshadweep, it requires nearly 10 years,
    Since the infrastructure and connectivity of Lakshadweep with other parts of India is to developed on war footing basis,then only our goal will be reached.

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...