Homeಅಂತರಾಷ್ಟ್ರೀಯಭಾರತದ ಸೈನಿಕರು ಯಾಕೆ ಮಾಲ್ಡಿವ್ಸ್‌ನಲ್ಲಿದ್ದಾರೆ?

ಭಾರತದ ಸೈನಿಕರು ಯಾಕೆ ಮಾಲ್ಡಿವ್ಸ್‌ನಲ್ಲಿದ್ದಾರೆ?

- Advertisement -
- Advertisement -

ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಮಾ.15ರೊಳಗೆ ಭಾರತ ತನ್ನ ಮಿಲಿಟರಿ ಸಿಬ್ಬಂದಿಯನ್ನು ವಾಪಾಸ್ಸು ಕರೆಸಿಕೊಳ್ಳುವಂತೆ ಕೇಳಿಕೊಂಡಿದ್ದಾರೆ. ಭಾರತೀಯ ಸೇನಾ ಸಿಬ್ಬಂದಿ ಮಾಲ್ಡೀವ್ಸ್‌ನಲ್ಲಿ ಇರುವಂತಿಲ್ಲ. ಇದು ಅಧ್ಯಕ್ಷ ಡಾ.ಮೊಹಮ್ಮದ್ ಮುಯಿಝು ಮತ್ತು ಸರಕಾರದ ನೀತಿಯಾಗಿದೆ ಎಂದು ಅಧ್ಯಕ್ಷರ ಕಚೇರಿಯ ಸಾರ್ವಜನಿಕ ನೀತಿ ಕಾರ್ಯದರ್ಶಿ ಅಬ್ದುಲ್ಲಾ ನಜೀಮ್ ಇಬ್ರಾಹಿಂ ಹೇಳಿದ್ದಾರೆ.

ಮಾಲ್ಡೀವ್ಸ್ ಮತ್ತು ಭಾರತವು ಸೈನ್ಯವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಮಾತುಕತೆಗೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಿವೆ. ಭಾನುವಾರ ಬೆಳಗ್ಗೆ ಮಾಲ್ಡಿವ್ಸ್‌ನ ಮಾಲೆಯಲ್ಲಿರುವ ವಿದೇಶಾಂಗ ಸಚಿವಾಲಯದ ಪ್ರಧಾನ ಕಚೇರಿಯಲ್ಲಿ ಈ ಸಮಿತಿ ತನ್ನ ಮೊದಲ ಸಭೆಯನ್ನು ನಡೆಸಿದೆ. ಸಭೆಯಲ್ಲಿ ಭಾರತೀಯ ಹೈಕಮಿಷನರ್ ಮುನು ಮಹಾವರ್ ಕೂಡ ಭಾಗವಹಿಸಿದ್ದರು ಎಂದು ಮಾಲ್ಡೀವಿಯನ್ ಮಾದ್ಯಮ ವರದಿಗಳು ತಿಳಿಸಿವೆ. ಆದರೆ ತಕ್ಷಣಕ್ಕೆ ಈ ಬಗ್ಗೆ ಭಾರತೀಯ ಮಾದ್ಯಮಗಳು ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

ಮಾಲ್ಡೀವ್ಸ್‌ ದ್ವೀಪದಲ್ಲಿ ಭಾರತೀಯ ಸೈನಿಕರ ಯಾವುದೇ ದೊಡ್ಡ ತುಕಡಿ ಇರುವುದಿಲ್ಲ. ಇತ್ತೀಚಿನ ಸರ್ಕಾರಿ ಅಂಕಿಅಂಶಗಳ ಪ್ರಕಾರ ಮಾಲ್ಡೀವ್ಸ್‌ನಲ್ಲಿ 88 ಭಾರತೀಯ ಸೇನಾ ಸಿಬ್ಬಂದಿಗಳು ಇದ್ದಾರೆ. ಮಾಲ್ಡೀವ್ಸ್ ಸೈನಿಕರಿಗೆ ಯುದ್ಧ ತರಭೇತಿ ಮತ್ತು ರಕ್ಷಣಾತ್ಮಕ ಕಾರ್ಯಾಚರಣೆ ಬಗ್ಗೆ ತರಭೇತಿ ನೀಡಲು ಅವರನ್ನು ಕಳುಹಿಸಲಾಗಿದೆ. ಆದರೆ ಮಾಲ್ಡೀವಿಯನ್ ಕೆಲ ಪ್ರಜೆಗಳು, ರಾಜಕಾರಣಿಗಳು ಇದಕ್ಕೆ ವಿರೋಧವನ್ನು ವ್ಯಕ್ತಪಡಿಸುತ್ತಾ ಬಂದಿದ್ದಾರೆ. ‘ಇಂಡಿಯಾ ಔಟ್’ ಅಭಿಯಾನವು ಕೂಡ ನಡೆದಿದೆ. ಭಾರತದ ಸೈನಿಕರು ಮಾಲ್ಡಿವ್ಸ್‌ನಲ್ಲಿರುವುದು ದೇಶದ ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎಂದು ಮಾಲ್ಡೀವ್ಸ್‌ನ ಕೆಲ ವಿಶ್ಲೇಷಕರು ಕೂಡ ಹೇಳುತ್ತಾರೆ.

ಮಾಲ್ಡೀವ್ಸ್‌ನಲ್ಲಿ ಇತ್ತೀಚೆಗೆ ನಡೆದ ಅಧ್ಯಕ್ಷೀಯ ಚುನಾವಣೆಯ ಸಂದರ್ಭದಲ್ಲಿ ಭಾರತ-ವಿರೋಧಿ ಬೆಳವಣಿಗೆಗಳು ಮತ್ತಷ್ಟು ಉಲ್ಬಣಗೊಂಡಿದ್ದವು. ಅಲ್ಲಿ ಭಾರತದ ವಿರುದ್ಧದ ಅಭಿಪ್ರಾಯ ಹೆಚ್ಚಳವಾಗಿತ್ತು. ಇಬ್ರಾಹಿಂ ಮೊಹಮ್ಮದ್ ಸೋಲಿಹ್ ನೇತೃತ್ವದ ಮಾಲ್ಡೀವಿಯನ್ ಡೆಮಾಕ್ರಟಿಕ್ ಪಕ್ಷವು ಭಾರತದ ಜೊತೆ ಆಪ್ತವಾಗಿತ್ತು.  ಪೀಪಲ್ಸ್ ನ್ಯಾಶನಲ್ ಕಾಂಗ್ರೆಸ್ ಮತ್ತು ಪ್ರೋಗ್ರೆಸ್ಸಿವ್ ಪಾರ್ಟಿ ಆಫ್ ಮಾಲ್ಡೀವ್ಸ್ ಪಕ್ಷದ ಒಕ್ಕೂಟವು 2023ರ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವನ್ನು ಕಂಡಿತ್ತು. ಮಾಲ್ಡಿವ್ಸ್‌ನ ಹಾಲಿ ಅಧ್ಯಕ್ಷ ಮುಯಿಝು ಚೀನಾ ಜೊತೆ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ. ಮಾಲ್ಡೀವ್ಸ್‌ನ ಹೊಸ ಸರ್ಕಾರ ಭಾರತದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ ಚೀನಾದತ್ತ ಒಲವು ತೋರಿಸಿದೆ. ಇತ್ತೀಚೆಗೆ ಭಾರತ ಮತ್ತು ಮಾಲ್ಡೀವ್ಸ್‌ ನಡುವೆ ಶೀತಲ ಸಮರ ನಡೆಯುತ್ತಿದ್ದಾಗಲೇ ಮಾಲ್ಡೀವ್ಸ್‌ ಅಧ್ಯಕ್ಷ ಮುಯಿಝು ಅವರು ಚೀನಾಗೆ ಭೇಟಿ ನೀಡಿದ್ದರು. ಈ ವೇಳೆ ಮಾಲ್ಡೀವ್ಸ್‌ ರಾಜಧಾನಿ ಮಾಲೆಯ ಅಭಿವೃದ್ಧಿಗೆ 130 ಮಿಲಿಯನ್ ಡಾಲರ್ ನೆರವು ನೀಡಲು ಚೀನಾ ಒಪ್ಪಿಕೊಂಡಿದೆ. ಉಭಯ ದೇಶಗಳು ಕೃಷಿ ಸಹಕಾರ ಒಪ್ಪಂದಕ್ಕೂ ಸಹಿ ಹಾಕಿವೆ.

ಭಾರತದ ಸೈನಿಕರು ಯಾಕೆ ಮಾಲ್ಡಿವ್ಸ್‌ನಲ್ಲಿದ್ದಾರೆ?

ಭಾರತ, ದ್ವೀಪ ರಾಷ್ಟ್ರವಾದ ಮಾಲ್ಡೀವ್ಸ್‌ಗೆ ರಕ್ಷಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸುದೀರ್ಘ ಕಾಲದಿಂದ ಸಹಾಯವನ್ನು ಮಾಡುತ್ತಾ ಬಂದಿದೆ. ಭಾರತದ ಸೈನಿಕರು ನಿಜವಾದ ಮಿಲಿಟರಿ ಕಾರ್ಯಾಚರಣೆಗಾಗಿ ದ್ವೀಪವನ್ನು ಪ್ರವೇಶಿಸಿದ್ದು ನವೆಂಬರ್ 1988ರಲ್ಲಿ. ಆಗಿನ ಅಧ್ಯಕ್ಷ ಮೌಮೂನ್ ಅಬ್ದುಲ್ ಗಯೂಮ್ ಅವರ ಸರ್ಕಾರದ ಕೋರಿಕೆಯ ಮೇರೆಗೆ ದಂಗೆಯನ್ನು ವಿಫಲಗೊಳಿಸಲು ಭಾರತದ ಮಿಲಿಟರಿ ಪಡೆಯು ದ್ವೀಪವನ್ನು ಪ್ರವೇಶಿಸಿತ್ತು. ತ್ವರಿತ ಕಾರ್ಯಾಚರಣೆ ನಡೆಸಿ ಭಾರತೀಯ ಪಡೆಗಳು ಅಧ್ಯಕ್ಷರನ್ನು ರಕ್ಷಿಸಲು ಮತ್ತು ಬಂಡುಕೋರರನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದವು.

ಮಾಲ್ಡಿವ್ಸ್‌ನಲ್ಲಿ ‘ಇಂಡಿಯಾ ಔಟ್’ ಅಭಿಯಾನವು 2020ರ ನಂತರ ಪ್ರಾರಂಭವಾಗಿತ್ತು. ಚೀನಾ ಪರ ಒಲವನ್ನು ಹೊಂದಿರುವ ಪ್ರಗತಿಶೀಲ ಪಕ್ಷದ (ಪಿಪಿಎಂ) ಅಬ್ದುಲ್ಲಾ ಯಮೀನ್ ಅಬ್ದುಲ್ ಗಯೂಮ್ ಅವರು 2013ರಲ್ಲಿ ಅಧ್ಯಕ್ಷರಾದಾಗಿನಿಂದಲೂ ಭಾರತದ ವಿರುದ್ಧ ಮಾಲ್ಡಿವ್ಸ್‌ನಲ್ಲಿ ಅಸಮಾಧಾನವು ಭುಗಿಲೆದ್ದಿತ್ತು.

ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಒಪ್ಪಂದಗಳ ನಿಯಮಗಳ ಪ್ರಕಾರ, ಮಾಲ್ಡೀವ್ಸ್ ರಾಷ್ಟ್ರೀಯ ರಕ್ಷಣಾ ಪಡೆಗೆ ತರಬೇತಿ ನೀಡಲು ಭಾರತೀಯ ಅಧಿಕಾರಿಗಳನ್ನು ಮಾಲ್ಡೀವ್ಸ್‌ಗೆ ಕಳುಹಿಸಲಾಗಿದೆ. ಅವರ ನೇತೃತ್ವದಲ್ಲಿ ಈ ಹೆಲಿಕಾಪ್ಟರ್‌ಗಳು ಕಾರ್ಯನಿರ್ವಹಿಸುತ್ತವೆ. ಭಾರತ ಮತ್ತು ಮಾಲ್ಡಿವ್ಸ್‌ ನಡುವೆ ವಿವಿಧ ವಿಚಾರಗಳಲ್ಲಿ ರಾಜತಾಂತ್ರಿಕ ಒಪ್ಪಂದವು ನಡೆಯುತ್ತಿದೆ.

ಪ್ರಧಾನಿ ಮೋದಿ ಇತ್ತೀಚೆಗೆ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದ ಫೋಟೋಗಳನ್ನು ಹಂಚಿಕೊಂಡಿದ್ದರು. ಇದಕ್ಕೆ ಮಾಲ್ಡೀವ್ಸ್‌ ಸಚಿವರು ಟೀಕೆ ವ್ಯಕ್ತಪಡಿಸಿದ್ದರು. ಈ ವಿಚಾರ ಭಾರತ ಮತ್ತು ಮಾಲ್ಡೀವ್ಸ್ ನಡುವೆ ರಾಜತಾಂತ್ರಿಕ ಸಂಬಂಧ ಹದೆಗೆಡುವಂತೆ ಮಾಡಿತ್ತು. ಪ್ರಧಾನಿ ಮೋದಿಯನ್ನು ಟೀಕಿಸಿದ ಮೂವರು ಸಚಿವರನ್ನು ಮಾಲ್ಡೀವ್ಸ್‌ ಸರ್ಕಾರ ಸಂಪುಟದಿಂದ ವಜಾ ಮಾಡಿತ್ತು.

ಇದನ್ನು ಓದಿ: ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಪುರಿ ಶಂಕರಾಚಾರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...