Homeಅಂತರಾಷ್ಟ್ರೀಯಭಾರತದ ಸೈನಿಕರು ಯಾಕೆ ಮಾಲ್ಡಿವ್ಸ್‌ನಲ್ಲಿದ್ದಾರೆ?

ಭಾರತದ ಸೈನಿಕರು ಯಾಕೆ ಮಾಲ್ಡಿವ್ಸ್‌ನಲ್ಲಿದ್ದಾರೆ?

- Advertisement -
- Advertisement -

ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಮಾ.15ರೊಳಗೆ ಭಾರತ ತನ್ನ ಮಿಲಿಟರಿ ಸಿಬ್ಬಂದಿಯನ್ನು ವಾಪಾಸ್ಸು ಕರೆಸಿಕೊಳ್ಳುವಂತೆ ಕೇಳಿಕೊಂಡಿದ್ದಾರೆ. ಭಾರತೀಯ ಸೇನಾ ಸಿಬ್ಬಂದಿ ಮಾಲ್ಡೀವ್ಸ್‌ನಲ್ಲಿ ಇರುವಂತಿಲ್ಲ. ಇದು ಅಧ್ಯಕ್ಷ ಡಾ.ಮೊಹಮ್ಮದ್ ಮುಯಿಝು ಮತ್ತು ಸರಕಾರದ ನೀತಿಯಾಗಿದೆ ಎಂದು ಅಧ್ಯಕ್ಷರ ಕಚೇರಿಯ ಸಾರ್ವಜನಿಕ ನೀತಿ ಕಾರ್ಯದರ್ಶಿ ಅಬ್ದುಲ್ಲಾ ನಜೀಮ್ ಇಬ್ರಾಹಿಂ ಹೇಳಿದ್ದಾರೆ.

ಮಾಲ್ಡೀವ್ಸ್ ಮತ್ತು ಭಾರತವು ಸೈನ್ಯವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಮಾತುಕತೆಗೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಿವೆ. ಭಾನುವಾರ ಬೆಳಗ್ಗೆ ಮಾಲ್ಡಿವ್ಸ್‌ನ ಮಾಲೆಯಲ್ಲಿರುವ ವಿದೇಶಾಂಗ ಸಚಿವಾಲಯದ ಪ್ರಧಾನ ಕಚೇರಿಯಲ್ಲಿ ಈ ಸಮಿತಿ ತನ್ನ ಮೊದಲ ಸಭೆಯನ್ನು ನಡೆಸಿದೆ. ಸಭೆಯಲ್ಲಿ ಭಾರತೀಯ ಹೈಕಮಿಷನರ್ ಮುನು ಮಹಾವರ್ ಕೂಡ ಭಾಗವಹಿಸಿದ್ದರು ಎಂದು ಮಾಲ್ಡೀವಿಯನ್ ಮಾದ್ಯಮ ವರದಿಗಳು ತಿಳಿಸಿವೆ. ಆದರೆ ತಕ್ಷಣಕ್ಕೆ ಈ ಬಗ್ಗೆ ಭಾರತೀಯ ಮಾದ್ಯಮಗಳು ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

ಮಾಲ್ಡೀವ್ಸ್‌ ದ್ವೀಪದಲ್ಲಿ ಭಾರತೀಯ ಸೈನಿಕರ ಯಾವುದೇ ದೊಡ್ಡ ತುಕಡಿ ಇರುವುದಿಲ್ಲ. ಇತ್ತೀಚಿನ ಸರ್ಕಾರಿ ಅಂಕಿಅಂಶಗಳ ಪ್ರಕಾರ ಮಾಲ್ಡೀವ್ಸ್‌ನಲ್ಲಿ 88 ಭಾರತೀಯ ಸೇನಾ ಸಿಬ್ಬಂದಿಗಳು ಇದ್ದಾರೆ. ಮಾಲ್ಡೀವ್ಸ್ ಸೈನಿಕರಿಗೆ ಯುದ್ಧ ತರಭೇತಿ ಮತ್ತು ರಕ್ಷಣಾತ್ಮಕ ಕಾರ್ಯಾಚರಣೆ ಬಗ್ಗೆ ತರಭೇತಿ ನೀಡಲು ಅವರನ್ನು ಕಳುಹಿಸಲಾಗಿದೆ. ಆದರೆ ಮಾಲ್ಡೀವಿಯನ್ ಕೆಲ ಪ್ರಜೆಗಳು, ರಾಜಕಾರಣಿಗಳು ಇದಕ್ಕೆ ವಿರೋಧವನ್ನು ವ್ಯಕ್ತಪಡಿಸುತ್ತಾ ಬಂದಿದ್ದಾರೆ. ‘ಇಂಡಿಯಾ ಔಟ್’ ಅಭಿಯಾನವು ಕೂಡ ನಡೆದಿದೆ. ಭಾರತದ ಸೈನಿಕರು ಮಾಲ್ಡಿವ್ಸ್‌ನಲ್ಲಿರುವುದು ದೇಶದ ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎಂದು ಮಾಲ್ಡೀವ್ಸ್‌ನ ಕೆಲ ವಿಶ್ಲೇಷಕರು ಕೂಡ ಹೇಳುತ್ತಾರೆ.

ಮಾಲ್ಡೀವ್ಸ್‌ನಲ್ಲಿ ಇತ್ತೀಚೆಗೆ ನಡೆದ ಅಧ್ಯಕ್ಷೀಯ ಚುನಾವಣೆಯ ಸಂದರ್ಭದಲ್ಲಿ ಭಾರತ-ವಿರೋಧಿ ಬೆಳವಣಿಗೆಗಳು ಮತ್ತಷ್ಟು ಉಲ್ಬಣಗೊಂಡಿದ್ದವು. ಅಲ್ಲಿ ಭಾರತದ ವಿರುದ್ಧದ ಅಭಿಪ್ರಾಯ ಹೆಚ್ಚಳವಾಗಿತ್ತು. ಇಬ್ರಾಹಿಂ ಮೊಹಮ್ಮದ್ ಸೋಲಿಹ್ ನೇತೃತ್ವದ ಮಾಲ್ಡೀವಿಯನ್ ಡೆಮಾಕ್ರಟಿಕ್ ಪಕ್ಷವು ಭಾರತದ ಜೊತೆ ಆಪ್ತವಾಗಿತ್ತು.  ಪೀಪಲ್ಸ್ ನ್ಯಾಶನಲ್ ಕಾಂಗ್ರೆಸ್ ಮತ್ತು ಪ್ರೋಗ್ರೆಸ್ಸಿವ್ ಪಾರ್ಟಿ ಆಫ್ ಮಾಲ್ಡೀವ್ಸ್ ಪಕ್ಷದ ಒಕ್ಕೂಟವು 2023ರ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವನ್ನು ಕಂಡಿತ್ತು. ಮಾಲ್ಡಿವ್ಸ್‌ನ ಹಾಲಿ ಅಧ್ಯಕ್ಷ ಮುಯಿಝು ಚೀನಾ ಜೊತೆ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ. ಮಾಲ್ಡೀವ್ಸ್‌ನ ಹೊಸ ಸರ್ಕಾರ ಭಾರತದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ ಚೀನಾದತ್ತ ಒಲವು ತೋರಿಸಿದೆ. ಇತ್ತೀಚೆಗೆ ಭಾರತ ಮತ್ತು ಮಾಲ್ಡೀವ್ಸ್‌ ನಡುವೆ ಶೀತಲ ಸಮರ ನಡೆಯುತ್ತಿದ್ದಾಗಲೇ ಮಾಲ್ಡೀವ್ಸ್‌ ಅಧ್ಯಕ್ಷ ಮುಯಿಝು ಅವರು ಚೀನಾಗೆ ಭೇಟಿ ನೀಡಿದ್ದರು. ಈ ವೇಳೆ ಮಾಲ್ಡೀವ್ಸ್‌ ರಾಜಧಾನಿ ಮಾಲೆಯ ಅಭಿವೃದ್ಧಿಗೆ 130 ಮಿಲಿಯನ್ ಡಾಲರ್ ನೆರವು ನೀಡಲು ಚೀನಾ ಒಪ್ಪಿಕೊಂಡಿದೆ. ಉಭಯ ದೇಶಗಳು ಕೃಷಿ ಸಹಕಾರ ಒಪ್ಪಂದಕ್ಕೂ ಸಹಿ ಹಾಕಿವೆ.

ಭಾರತದ ಸೈನಿಕರು ಯಾಕೆ ಮಾಲ್ಡಿವ್ಸ್‌ನಲ್ಲಿದ್ದಾರೆ?

ಭಾರತ, ದ್ವೀಪ ರಾಷ್ಟ್ರವಾದ ಮಾಲ್ಡೀವ್ಸ್‌ಗೆ ರಕ್ಷಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸುದೀರ್ಘ ಕಾಲದಿಂದ ಸಹಾಯವನ್ನು ಮಾಡುತ್ತಾ ಬಂದಿದೆ. ಭಾರತದ ಸೈನಿಕರು ನಿಜವಾದ ಮಿಲಿಟರಿ ಕಾರ್ಯಾಚರಣೆಗಾಗಿ ದ್ವೀಪವನ್ನು ಪ್ರವೇಶಿಸಿದ್ದು ನವೆಂಬರ್ 1988ರಲ್ಲಿ. ಆಗಿನ ಅಧ್ಯಕ್ಷ ಮೌಮೂನ್ ಅಬ್ದುಲ್ ಗಯೂಮ್ ಅವರ ಸರ್ಕಾರದ ಕೋರಿಕೆಯ ಮೇರೆಗೆ ದಂಗೆಯನ್ನು ವಿಫಲಗೊಳಿಸಲು ಭಾರತದ ಮಿಲಿಟರಿ ಪಡೆಯು ದ್ವೀಪವನ್ನು ಪ್ರವೇಶಿಸಿತ್ತು. ತ್ವರಿತ ಕಾರ್ಯಾಚರಣೆ ನಡೆಸಿ ಭಾರತೀಯ ಪಡೆಗಳು ಅಧ್ಯಕ್ಷರನ್ನು ರಕ್ಷಿಸಲು ಮತ್ತು ಬಂಡುಕೋರರನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದವು.

ಮಾಲ್ಡಿವ್ಸ್‌ನಲ್ಲಿ ‘ಇಂಡಿಯಾ ಔಟ್’ ಅಭಿಯಾನವು 2020ರ ನಂತರ ಪ್ರಾರಂಭವಾಗಿತ್ತು. ಚೀನಾ ಪರ ಒಲವನ್ನು ಹೊಂದಿರುವ ಪ್ರಗತಿಶೀಲ ಪಕ್ಷದ (ಪಿಪಿಎಂ) ಅಬ್ದುಲ್ಲಾ ಯಮೀನ್ ಅಬ್ದುಲ್ ಗಯೂಮ್ ಅವರು 2013ರಲ್ಲಿ ಅಧ್ಯಕ್ಷರಾದಾಗಿನಿಂದಲೂ ಭಾರತದ ವಿರುದ್ಧ ಮಾಲ್ಡಿವ್ಸ್‌ನಲ್ಲಿ ಅಸಮಾಧಾನವು ಭುಗಿಲೆದ್ದಿತ್ತು.

ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಒಪ್ಪಂದಗಳ ನಿಯಮಗಳ ಪ್ರಕಾರ, ಮಾಲ್ಡೀವ್ಸ್ ರಾಷ್ಟ್ರೀಯ ರಕ್ಷಣಾ ಪಡೆಗೆ ತರಬೇತಿ ನೀಡಲು ಭಾರತೀಯ ಅಧಿಕಾರಿಗಳನ್ನು ಮಾಲ್ಡೀವ್ಸ್‌ಗೆ ಕಳುಹಿಸಲಾಗಿದೆ. ಅವರ ನೇತೃತ್ವದಲ್ಲಿ ಈ ಹೆಲಿಕಾಪ್ಟರ್‌ಗಳು ಕಾರ್ಯನಿರ್ವಹಿಸುತ್ತವೆ. ಭಾರತ ಮತ್ತು ಮಾಲ್ಡಿವ್ಸ್‌ ನಡುವೆ ವಿವಿಧ ವಿಚಾರಗಳಲ್ಲಿ ರಾಜತಾಂತ್ರಿಕ ಒಪ್ಪಂದವು ನಡೆಯುತ್ತಿದೆ.

ಪ್ರಧಾನಿ ಮೋದಿ ಇತ್ತೀಚೆಗೆ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದ ಫೋಟೋಗಳನ್ನು ಹಂಚಿಕೊಂಡಿದ್ದರು. ಇದಕ್ಕೆ ಮಾಲ್ಡೀವ್ಸ್‌ ಸಚಿವರು ಟೀಕೆ ವ್ಯಕ್ತಪಡಿಸಿದ್ದರು. ಈ ವಿಚಾರ ಭಾರತ ಮತ್ತು ಮಾಲ್ಡೀವ್ಸ್ ನಡುವೆ ರಾಜತಾಂತ್ರಿಕ ಸಂಬಂಧ ಹದೆಗೆಡುವಂತೆ ಮಾಡಿತ್ತು. ಪ್ರಧಾನಿ ಮೋದಿಯನ್ನು ಟೀಕಿಸಿದ ಮೂವರು ಸಚಿವರನ್ನು ಮಾಲ್ಡೀವ್ಸ್‌ ಸರ್ಕಾರ ಸಂಪುಟದಿಂದ ವಜಾ ಮಾಡಿತ್ತು.

ಇದನ್ನು ಓದಿ: ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಪುರಿ ಶಂಕರಾಚಾರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...