Homeಮುಖಪುಟ"ಕೃತಕ ಬುದ್ಧಿಮತ್ತೆ ಜಾಗತಿಕವಾಗಿ 40 ಶೇ. ಉದ್ಯೋಗದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ"

“ಕೃತಕ ಬುದ್ಧಿಮತ್ತೆ ಜಾಗತಿಕವಾಗಿ 40 ಶೇ. ಉದ್ಯೋಗದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ”

- Advertisement -
- Advertisement -

ಕೃತಕ ಬುದ್ಧಿಮತ್ತೆ (Artificial Intelligence) ಪ್ರಪಂಚದಾದ್ಯಂತ ಉದ್ಯೋಗ ಭದ್ರತೆಗೆ ದೊಡ್ಡ ಅಪಾಯವನ್ನುಂಟು ಮಾಡಲಿದೆ. ಆದರೆ, ಇದು ಉತ್ಪಾದನಾ ಮಟ್ಟವನ್ನು ಹೆಚ್ಚಿಸಲು ಮತ್ತು ಜಾಗತಿಕ ಬೆಳವಣಿಗೆಯನ್ನು ಉತ್ತೇಜಿಸಲು ಅವಕಾಶ ನೀಡಲಿದೆ ಎಂದು ಇಂಟರ್‌ನ್ಯಾಷನ್ ಮಾನಿಟರಿ ಫಂಡ್ (ಐಎಂಎಫ್‌) ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜಿವಾ ಹೇಳಿದ್ದಾರೆ.

ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ಆಯೋಜಿಸಿದ್ದ ವಾರ್ಷಿಕ ವಿಶ್ವ ಆರ್ಥಿಕ ಸಭೆಗೆ ಹೊರಡುವ ಮುನ್ನ ವಾಷಿಂಗ್ಟನ್‌ನಲ್ಲಿ ಸಂದರ್ಶನವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸುಧಾರಿತ ಆರ್ಥಿಕತೆಗಳಲ್ಲಿನ 60 ಪ್ರತಿಶತ ಉದ್ಯೋಗಗಳ ಮೇಲೆ ಎಐ ತಂತ್ರಜ್ಞಾನ ಪರಿಣಾಮ ಬೀರಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಎಐ ಕಡಿಮೆ ಪರಿಣಾಮ ಬೀರಲಿದೆ. ಆದರೆ, ಜಾಗತಿಕವಾಗಿ 40 ಪ್ರತಿಶತದಷ್ಟು ಉದ್ಯೋಗದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ” ಎಂದು ಹೊಸ ಐಎಂಎಫ್ ವರದಿಯನ್ನು ಉಲ್ಲೇಖಿಸಿ ಕ್ರಿಸ್ಟಲಿನಾ ಹೇಳಿದ್ದಾರೆ.

ಭಾನುವಾರ ಸಂಜೆ ಪ್ರಕಟಗೊಂಡ ಐಎಂಎಫ್ ವರದಿಯು, ಎಐ ತಂತ್ರಜ್ಞಾನ ಜಾಗತಿಕ ಉದ್ಯೋಗ ವಲಯದ ಮೇಲೆ ಅರ್ಧದಷ್ಟು ಮಾತ್ರ ಋಣಾತ್ಮಕ ಪರಿಣಾಮ ಬೀರಲಿದೆ. ಇನ್ನರ್ಧ ಎಐ ತಂತ್ರಜ್ಞಾನವನ್ನು ಬಳಸಿಕೊಂಡು ಉತ್ಪಾದನೆ ಹೆಚ್ಚಿಸಿಕೊಳ್ಳುವ ಮೂಲಕ ಲಾಭ ಪಡೆಯಲಿದೆ ಎಂದಿದೆ.

ಎಐ ತಂತ್ರಜ್ಞಾನ ಜಾಗತಿಕ ಉದ್ಯೋಗ ವಲಯದ ಮೇಲೆ ಸಂಪೂರ್ಣ ಋಣಾತ್ಮಕ ಪರಿಣಾಮ ಬೀರಬಹುದು ಅಥವಾ ಧನಾತ್ಮಕ ಪರಿಣಾಮ ಬೀರಬಹುದು. ಧನಾತ್ಮಕ ಪರಿಣಾಮ ಬೀರಿದರೆ ಉತ್ಪಾದನಾ ಮಟ್ಟ ಹೆಚ್ಚಳಗೊಂಡು ಆದಾಯದ ಮಟ್ಟವು ಹೆಚ್ಚಾಗಬಹುದು ಎಂದು ಜಾರ್ಜಿವಾ ಹೇಳಿದ್ದಾರೆ.

ಕಡಿಮೆ ಆದಾಯದ ದೇಶಗಳು ಕೃತಕ ಬುದ್ದಿಮತ್ತೆಯ ಲಾಭವನ್ನು ಪಡೆಯಲು ನಿರ್ದಿಷ್ಟ ಗುರಿ ತಲುಪಲು ನಾವು ಸಹಾಯ ಮಾಡಬೇಕು ಎಂದು ಜಾರ್ಜಿವಾ ತಿಳಿಸಿದ್ದಾರೆ.

ಉದಯೋನ್ಮುಖ ಮಾರುಕಟ್ಟೆಗಳು ಮತ್ತು ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಗಳಲ್ಲಿನ ಕಾರ್ಮಿಕ ಮಾರುಕಟ್ಟೆಗಳು ಎಐನಿಂದ ಸಣ್ಣ ಆರಂಭಿಕ ಪರಿಣಾಮವನ್ನು ನೋಡಲಿದೆ. ಆದರೆ, ಕೆಲಸದ ಸ್ಥಳದಲ್ಲಿ ಅದರ ಏಕೀಕರಣದ ಮೂಲಕ ಉಂಟಾಗುವ ವರ್ಧಿತ ಉತ್ಪಾದಕತೆಯಿಂದ ಅವು ಕಡಿಮೆ ಲಾಭವನ್ನು ಪಡೆಯಲಿದೆ ಎಂದು ಐಎಂಎಫ್ ವರದಿ ಭವಿಷ್ಯ ನುಡಿದಿದೆ.

ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಉಂಟಾದ ಸಾಲದ ಹೊರೆಗಳನ್ನು ನಿಭಾಯಿಸಲು ಮತ್ತು ಖಾಲಿಯಾದ ಆರ್ಥಿಕ ವ್ಯವಸ್ಥೆಯನ್ನು ತುಂಬಲು ದೇಶಗಳು ಯೋಚಿಸುತ್ತಿರುವ ಹಿನ್ನೆಲೆ, ವಿಶ್ವದಾದ್ಯಂತ ಹಣಕಾಸಿನ ನೀತಿಗೆ 2024 “ಬಹಳ ಕಠಿಣ ವರ್ಷ” ಎಂದು ಜಾರ್ಜಿವಾ ಹೇಳಿದ್ದಾರೆ.

ಈ ವರ್ಷ ಜಾಗತಿಕವಾಗಿ ಶತಕೋಟಿ ಜನರು ಚುನಾವಣೆ ಎದುರಿಸಲಿದ್ದಾರೆ. ಜನಬೆಂಬಲವನ್ನು ಗಳಿಸಲು ವೆಚ್ಚ ಹೆಚ್ಚಿಸಲು ಮತ್ತು ತೆರಿಗೆ ಕಡಿತಗೊಳಿಸಲು ಇದು ಸರ್ಕಾರಗಳ ಮೇಲೆ ಒತ್ತಡ ಹೇರಬಹುದು. ಜಗತ್ತಿನ ಸುಮಾರು 80 ದೇಶಗಳಲ್ಲಿ ಚುನಾವಣೆ ನಡೆಯಲಿವೆ. ಚುನಾವಣೆಗಾಗಿ ಪಕ್ಷಗಳು ಮಾಡುವ ಖರ್ಚಿನಿಂದ ಉಂಟಾಗುವ ಒತ್ತಡ ಆರ್ಥಿಕತೆಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುವುದು ನಮಗೆ ಗೊತ್ತಿದೆ ಎಂದು ಜಾರ್ಜಿವಾ ತಿಳಿಸಿದ್ದಾರೆ.

ಪ್ರಪಂಚದಾದ್ಯಂತದ ಸರ್ಕಾರಗಳು ಈ ವರ್ಷ ದೊಡ್ಡ ಮೊತ್ತವನ್ನು ಚುನಾವಣೆಗಾಗಿ ಖರ್ಚು ಮಾಡಲಿವೆ. ಈ ಮೂಲಕ ಹೆಚ್ಚಿನ ಹಣದುಬ್ಬರದ ವಿರುದ್ಧದ ಹೋರಾಟದಲ್ಲಿ ಅವುಗಳು ಸಾಧಿಸಿದ ಕಠಿಣವಾದ ಪ್ರಗತಿಯನ್ನು ದುರ್ಬಲಗೊಳಿಸಲಿವೆ ಎಂದು ಜಾರ್ಜಿವಾ ಹೇಳಿದ್ದಾರೆ.

ಐಎಂಎಫ್‌ನ ಚುಕ್ಕಾಣಿ ಹಿಡಿದು ಜಾರ್ಜಿವಾ ಐದು ವರ್ಷಗಳ ಅವಧಿಯನ್ನು ಪೂರೈಸಿದ್ದು, ಈ ವರ್ಷ ಮತ್ತೊಮ್ಮೆ ಆಯ್ಕೆ ಬಯಸಿದ್ದಾರಾ? ಎಂಬುವುದಕ್ಕೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ.

ಇದನ್ನೂ ಓದಿ : ಭಾರತೀಯ ಸೇನೆ ವಾಪಸ್‌ಗೆ ಮಾರ್ಚ್‌ 15ರ ಗಡುವು ನೀಡಿದ ಮಾಲ್ಡೀವ್ಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...