Homeಮುಖಪುಟ"ಕೃತಕ ಬುದ್ಧಿಮತ್ತೆ ಜಾಗತಿಕವಾಗಿ 40 ಶೇ. ಉದ್ಯೋಗದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ"

“ಕೃತಕ ಬುದ್ಧಿಮತ್ತೆ ಜಾಗತಿಕವಾಗಿ 40 ಶೇ. ಉದ್ಯೋಗದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ”

- Advertisement -
- Advertisement -

ಕೃತಕ ಬುದ್ಧಿಮತ್ತೆ (Artificial Intelligence) ಪ್ರಪಂಚದಾದ್ಯಂತ ಉದ್ಯೋಗ ಭದ್ರತೆಗೆ ದೊಡ್ಡ ಅಪಾಯವನ್ನುಂಟು ಮಾಡಲಿದೆ. ಆದರೆ, ಇದು ಉತ್ಪಾದನಾ ಮಟ್ಟವನ್ನು ಹೆಚ್ಚಿಸಲು ಮತ್ತು ಜಾಗತಿಕ ಬೆಳವಣಿಗೆಯನ್ನು ಉತ್ತೇಜಿಸಲು ಅವಕಾಶ ನೀಡಲಿದೆ ಎಂದು ಇಂಟರ್‌ನ್ಯಾಷನ್ ಮಾನಿಟರಿ ಫಂಡ್ (ಐಎಂಎಫ್‌) ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜಿವಾ ಹೇಳಿದ್ದಾರೆ.

ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ಆಯೋಜಿಸಿದ್ದ ವಾರ್ಷಿಕ ವಿಶ್ವ ಆರ್ಥಿಕ ಸಭೆಗೆ ಹೊರಡುವ ಮುನ್ನ ವಾಷಿಂಗ್ಟನ್‌ನಲ್ಲಿ ಸಂದರ್ಶನವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸುಧಾರಿತ ಆರ್ಥಿಕತೆಗಳಲ್ಲಿನ 60 ಪ್ರತಿಶತ ಉದ್ಯೋಗಗಳ ಮೇಲೆ ಎಐ ತಂತ್ರಜ್ಞಾನ ಪರಿಣಾಮ ಬೀರಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಎಐ ಕಡಿಮೆ ಪರಿಣಾಮ ಬೀರಲಿದೆ. ಆದರೆ, ಜಾಗತಿಕವಾಗಿ 40 ಪ್ರತಿಶತದಷ್ಟು ಉದ್ಯೋಗದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ” ಎಂದು ಹೊಸ ಐಎಂಎಫ್ ವರದಿಯನ್ನು ಉಲ್ಲೇಖಿಸಿ ಕ್ರಿಸ್ಟಲಿನಾ ಹೇಳಿದ್ದಾರೆ.

ಭಾನುವಾರ ಸಂಜೆ ಪ್ರಕಟಗೊಂಡ ಐಎಂಎಫ್ ವರದಿಯು, ಎಐ ತಂತ್ರಜ್ಞಾನ ಜಾಗತಿಕ ಉದ್ಯೋಗ ವಲಯದ ಮೇಲೆ ಅರ್ಧದಷ್ಟು ಮಾತ್ರ ಋಣಾತ್ಮಕ ಪರಿಣಾಮ ಬೀರಲಿದೆ. ಇನ್ನರ್ಧ ಎಐ ತಂತ್ರಜ್ಞಾನವನ್ನು ಬಳಸಿಕೊಂಡು ಉತ್ಪಾದನೆ ಹೆಚ್ಚಿಸಿಕೊಳ್ಳುವ ಮೂಲಕ ಲಾಭ ಪಡೆಯಲಿದೆ ಎಂದಿದೆ.

ಎಐ ತಂತ್ರಜ್ಞಾನ ಜಾಗತಿಕ ಉದ್ಯೋಗ ವಲಯದ ಮೇಲೆ ಸಂಪೂರ್ಣ ಋಣಾತ್ಮಕ ಪರಿಣಾಮ ಬೀರಬಹುದು ಅಥವಾ ಧನಾತ್ಮಕ ಪರಿಣಾಮ ಬೀರಬಹುದು. ಧನಾತ್ಮಕ ಪರಿಣಾಮ ಬೀರಿದರೆ ಉತ್ಪಾದನಾ ಮಟ್ಟ ಹೆಚ್ಚಳಗೊಂಡು ಆದಾಯದ ಮಟ್ಟವು ಹೆಚ್ಚಾಗಬಹುದು ಎಂದು ಜಾರ್ಜಿವಾ ಹೇಳಿದ್ದಾರೆ.

ಕಡಿಮೆ ಆದಾಯದ ದೇಶಗಳು ಕೃತಕ ಬುದ್ದಿಮತ್ತೆಯ ಲಾಭವನ್ನು ಪಡೆಯಲು ನಿರ್ದಿಷ್ಟ ಗುರಿ ತಲುಪಲು ನಾವು ಸಹಾಯ ಮಾಡಬೇಕು ಎಂದು ಜಾರ್ಜಿವಾ ತಿಳಿಸಿದ್ದಾರೆ.

ಉದಯೋನ್ಮುಖ ಮಾರುಕಟ್ಟೆಗಳು ಮತ್ತು ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಗಳಲ್ಲಿನ ಕಾರ್ಮಿಕ ಮಾರುಕಟ್ಟೆಗಳು ಎಐನಿಂದ ಸಣ್ಣ ಆರಂಭಿಕ ಪರಿಣಾಮವನ್ನು ನೋಡಲಿದೆ. ಆದರೆ, ಕೆಲಸದ ಸ್ಥಳದಲ್ಲಿ ಅದರ ಏಕೀಕರಣದ ಮೂಲಕ ಉಂಟಾಗುವ ವರ್ಧಿತ ಉತ್ಪಾದಕತೆಯಿಂದ ಅವು ಕಡಿಮೆ ಲಾಭವನ್ನು ಪಡೆಯಲಿದೆ ಎಂದು ಐಎಂಎಫ್ ವರದಿ ಭವಿಷ್ಯ ನುಡಿದಿದೆ.

ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಉಂಟಾದ ಸಾಲದ ಹೊರೆಗಳನ್ನು ನಿಭಾಯಿಸಲು ಮತ್ತು ಖಾಲಿಯಾದ ಆರ್ಥಿಕ ವ್ಯವಸ್ಥೆಯನ್ನು ತುಂಬಲು ದೇಶಗಳು ಯೋಚಿಸುತ್ತಿರುವ ಹಿನ್ನೆಲೆ, ವಿಶ್ವದಾದ್ಯಂತ ಹಣಕಾಸಿನ ನೀತಿಗೆ 2024 “ಬಹಳ ಕಠಿಣ ವರ್ಷ” ಎಂದು ಜಾರ್ಜಿವಾ ಹೇಳಿದ್ದಾರೆ.

ಈ ವರ್ಷ ಜಾಗತಿಕವಾಗಿ ಶತಕೋಟಿ ಜನರು ಚುನಾವಣೆ ಎದುರಿಸಲಿದ್ದಾರೆ. ಜನಬೆಂಬಲವನ್ನು ಗಳಿಸಲು ವೆಚ್ಚ ಹೆಚ್ಚಿಸಲು ಮತ್ತು ತೆರಿಗೆ ಕಡಿತಗೊಳಿಸಲು ಇದು ಸರ್ಕಾರಗಳ ಮೇಲೆ ಒತ್ತಡ ಹೇರಬಹುದು. ಜಗತ್ತಿನ ಸುಮಾರು 80 ದೇಶಗಳಲ್ಲಿ ಚುನಾವಣೆ ನಡೆಯಲಿವೆ. ಚುನಾವಣೆಗಾಗಿ ಪಕ್ಷಗಳು ಮಾಡುವ ಖರ್ಚಿನಿಂದ ಉಂಟಾಗುವ ಒತ್ತಡ ಆರ್ಥಿಕತೆಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುವುದು ನಮಗೆ ಗೊತ್ತಿದೆ ಎಂದು ಜಾರ್ಜಿವಾ ತಿಳಿಸಿದ್ದಾರೆ.

ಪ್ರಪಂಚದಾದ್ಯಂತದ ಸರ್ಕಾರಗಳು ಈ ವರ್ಷ ದೊಡ್ಡ ಮೊತ್ತವನ್ನು ಚುನಾವಣೆಗಾಗಿ ಖರ್ಚು ಮಾಡಲಿವೆ. ಈ ಮೂಲಕ ಹೆಚ್ಚಿನ ಹಣದುಬ್ಬರದ ವಿರುದ್ಧದ ಹೋರಾಟದಲ್ಲಿ ಅವುಗಳು ಸಾಧಿಸಿದ ಕಠಿಣವಾದ ಪ್ರಗತಿಯನ್ನು ದುರ್ಬಲಗೊಳಿಸಲಿವೆ ಎಂದು ಜಾರ್ಜಿವಾ ಹೇಳಿದ್ದಾರೆ.

ಐಎಂಎಫ್‌ನ ಚುಕ್ಕಾಣಿ ಹಿಡಿದು ಜಾರ್ಜಿವಾ ಐದು ವರ್ಷಗಳ ಅವಧಿಯನ್ನು ಪೂರೈಸಿದ್ದು, ಈ ವರ್ಷ ಮತ್ತೊಮ್ಮೆ ಆಯ್ಕೆ ಬಯಸಿದ್ದಾರಾ? ಎಂಬುವುದಕ್ಕೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ.

ಇದನ್ನೂ ಓದಿ : ಭಾರತೀಯ ಸೇನೆ ವಾಪಸ್‌ಗೆ ಮಾರ್ಚ್‌ 15ರ ಗಡುವು ನೀಡಿದ ಮಾಲ್ಡೀವ್ಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...