Homeಮುಖಪುಟ"ಕೃತಕ ಬುದ್ಧಿಮತ್ತೆ ಜಾಗತಿಕವಾಗಿ 40 ಶೇ. ಉದ್ಯೋಗದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ"

“ಕೃತಕ ಬುದ್ಧಿಮತ್ತೆ ಜಾಗತಿಕವಾಗಿ 40 ಶೇ. ಉದ್ಯೋಗದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ”

- Advertisement -
- Advertisement -

ಕೃತಕ ಬುದ್ಧಿಮತ್ತೆ (Artificial Intelligence) ಪ್ರಪಂಚದಾದ್ಯಂತ ಉದ್ಯೋಗ ಭದ್ರತೆಗೆ ದೊಡ್ಡ ಅಪಾಯವನ್ನುಂಟು ಮಾಡಲಿದೆ. ಆದರೆ, ಇದು ಉತ್ಪಾದನಾ ಮಟ್ಟವನ್ನು ಹೆಚ್ಚಿಸಲು ಮತ್ತು ಜಾಗತಿಕ ಬೆಳವಣಿಗೆಯನ್ನು ಉತ್ತೇಜಿಸಲು ಅವಕಾಶ ನೀಡಲಿದೆ ಎಂದು ಇಂಟರ್‌ನ್ಯಾಷನ್ ಮಾನಿಟರಿ ಫಂಡ್ (ಐಎಂಎಫ್‌) ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜಿವಾ ಹೇಳಿದ್ದಾರೆ.

ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ಆಯೋಜಿಸಿದ್ದ ವಾರ್ಷಿಕ ವಿಶ್ವ ಆರ್ಥಿಕ ಸಭೆಗೆ ಹೊರಡುವ ಮುನ್ನ ವಾಷಿಂಗ್ಟನ್‌ನಲ್ಲಿ ಸಂದರ್ಶನವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸುಧಾರಿತ ಆರ್ಥಿಕತೆಗಳಲ್ಲಿನ 60 ಪ್ರತಿಶತ ಉದ್ಯೋಗಗಳ ಮೇಲೆ ಎಐ ತಂತ್ರಜ್ಞಾನ ಪರಿಣಾಮ ಬೀರಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಎಐ ಕಡಿಮೆ ಪರಿಣಾಮ ಬೀರಲಿದೆ. ಆದರೆ, ಜಾಗತಿಕವಾಗಿ 40 ಪ್ರತಿಶತದಷ್ಟು ಉದ್ಯೋಗದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ” ಎಂದು ಹೊಸ ಐಎಂಎಫ್ ವರದಿಯನ್ನು ಉಲ್ಲೇಖಿಸಿ ಕ್ರಿಸ್ಟಲಿನಾ ಹೇಳಿದ್ದಾರೆ.

ಭಾನುವಾರ ಸಂಜೆ ಪ್ರಕಟಗೊಂಡ ಐಎಂಎಫ್ ವರದಿಯು, ಎಐ ತಂತ್ರಜ್ಞಾನ ಜಾಗತಿಕ ಉದ್ಯೋಗ ವಲಯದ ಮೇಲೆ ಅರ್ಧದಷ್ಟು ಮಾತ್ರ ಋಣಾತ್ಮಕ ಪರಿಣಾಮ ಬೀರಲಿದೆ. ಇನ್ನರ್ಧ ಎಐ ತಂತ್ರಜ್ಞಾನವನ್ನು ಬಳಸಿಕೊಂಡು ಉತ್ಪಾದನೆ ಹೆಚ್ಚಿಸಿಕೊಳ್ಳುವ ಮೂಲಕ ಲಾಭ ಪಡೆಯಲಿದೆ ಎಂದಿದೆ.

ಎಐ ತಂತ್ರಜ್ಞಾನ ಜಾಗತಿಕ ಉದ್ಯೋಗ ವಲಯದ ಮೇಲೆ ಸಂಪೂರ್ಣ ಋಣಾತ್ಮಕ ಪರಿಣಾಮ ಬೀರಬಹುದು ಅಥವಾ ಧನಾತ್ಮಕ ಪರಿಣಾಮ ಬೀರಬಹುದು. ಧನಾತ್ಮಕ ಪರಿಣಾಮ ಬೀರಿದರೆ ಉತ್ಪಾದನಾ ಮಟ್ಟ ಹೆಚ್ಚಳಗೊಂಡು ಆದಾಯದ ಮಟ್ಟವು ಹೆಚ್ಚಾಗಬಹುದು ಎಂದು ಜಾರ್ಜಿವಾ ಹೇಳಿದ್ದಾರೆ.

ಕಡಿಮೆ ಆದಾಯದ ದೇಶಗಳು ಕೃತಕ ಬುದ್ದಿಮತ್ತೆಯ ಲಾಭವನ್ನು ಪಡೆಯಲು ನಿರ್ದಿಷ್ಟ ಗುರಿ ತಲುಪಲು ನಾವು ಸಹಾಯ ಮಾಡಬೇಕು ಎಂದು ಜಾರ್ಜಿವಾ ತಿಳಿಸಿದ್ದಾರೆ.

ಉದಯೋನ್ಮುಖ ಮಾರುಕಟ್ಟೆಗಳು ಮತ್ತು ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಗಳಲ್ಲಿನ ಕಾರ್ಮಿಕ ಮಾರುಕಟ್ಟೆಗಳು ಎಐನಿಂದ ಸಣ್ಣ ಆರಂಭಿಕ ಪರಿಣಾಮವನ್ನು ನೋಡಲಿದೆ. ಆದರೆ, ಕೆಲಸದ ಸ್ಥಳದಲ್ಲಿ ಅದರ ಏಕೀಕರಣದ ಮೂಲಕ ಉಂಟಾಗುವ ವರ್ಧಿತ ಉತ್ಪಾದಕತೆಯಿಂದ ಅವು ಕಡಿಮೆ ಲಾಭವನ್ನು ಪಡೆಯಲಿದೆ ಎಂದು ಐಎಂಎಫ್ ವರದಿ ಭವಿಷ್ಯ ನುಡಿದಿದೆ.

ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಉಂಟಾದ ಸಾಲದ ಹೊರೆಗಳನ್ನು ನಿಭಾಯಿಸಲು ಮತ್ತು ಖಾಲಿಯಾದ ಆರ್ಥಿಕ ವ್ಯವಸ್ಥೆಯನ್ನು ತುಂಬಲು ದೇಶಗಳು ಯೋಚಿಸುತ್ತಿರುವ ಹಿನ್ನೆಲೆ, ವಿಶ್ವದಾದ್ಯಂತ ಹಣಕಾಸಿನ ನೀತಿಗೆ 2024 “ಬಹಳ ಕಠಿಣ ವರ್ಷ” ಎಂದು ಜಾರ್ಜಿವಾ ಹೇಳಿದ್ದಾರೆ.

ಈ ವರ್ಷ ಜಾಗತಿಕವಾಗಿ ಶತಕೋಟಿ ಜನರು ಚುನಾವಣೆ ಎದುರಿಸಲಿದ್ದಾರೆ. ಜನಬೆಂಬಲವನ್ನು ಗಳಿಸಲು ವೆಚ್ಚ ಹೆಚ್ಚಿಸಲು ಮತ್ತು ತೆರಿಗೆ ಕಡಿತಗೊಳಿಸಲು ಇದು ಸರ್ಕಾರಗಳ ಮೇಲೆ ಒತ್ತಡ ಹೇರಬಹುದು. ಜಗತ್ತಿನ ಸುಮಾರು 80 ದೇಶಗಳಲ್ಲಿ ಚುನಾವಣೆ ನಡೆಯಲಿವೆ. ಚುನಾವಣೆಗಾಗಿ ಪಕ್ಷಗಳು ಮಾಡುವ ಖರ್ಚಿನಿಂದ ಉಂಟಾಗುವ ಒತ್ತಡ ಆರ್ಥಿಕತೆಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುವುದು ನಮಗೆ ಗೊತ್ತಿದೆ ಎಂದು ಜಾರ್ಜಿವಾ ತಿಳಿಸಿದ್ದಾರೆ.

ಪ್ರಪಂಚದಾದ್ಯಂತದ ಸರ್ಕಾರಗಳು ಈ ವರ್ಷ ದೊಡ್ಡ ಮೊತ್ತವನ್ನು ಚುನಾವಣೆಗಾಗಿ ಖರ್ಚು ಮಾಡಲಿವೆ. ಈ ಮೂಲಕ ಹೆಚ್ಚಿನ ಹಣದುಬ್ಬರದ ವಿರುದ್ಧದ ಹೋರಾಟದಲ್ಲಿ ಅವುಗಳು ಸಾಧಿಸಿದ ಕಠಿಣವಾದ ಪ್ರಗತಿಯನ್ನು ದುರ್ಬಲಗೊಳಿಸಲಿವೆ ಎಂದು ಜಾರ್ಜಿವಾ ಹೇಳಿದ್ದಾರೆ.

ಐಎಂಎಫ್‌ನ ಚುಕ್ಕಾಣಿ ಹಿಡಿದು ಜಾರ್ಜಿವಾ ಐದು ವರ್ಷಗಳ ಅವಧಿಯನ್ನು ಪೂರೈಸಿದ್ದು, ಈ ವರ್ಷ ಮತ್ತೊಮ್ಮೆ ಆಯ್ಕೆ ಬಯಸಿದ್ದಾರಾ? ಎಂಬುವುದಕ್ಕೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ.

ಇದನ್ನೂ ಓದಿ : ಭಾರತೀಯ ಸೇನೆ ವಾಪಸ್‌ಗೆ ಮಾರ್ಚ್‌ 15ರ ಗಡುವು ನೀಡಿದ ಮಾಲ್ಡೀವ್ಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...