Homeಮುಖಪುಟಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡುವುದಿಲ್ಲ ಎಂದ ಸಿಎಂ

ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡುವುದಿಲ್ಲ ಎಂದ ಸಿಎಂ

- Advertisement -
- Advertisement -

ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೂ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡುವುದಿಲ್ಲ’ ಎಂದು ಹಾವೇರಿಯಲ್ಲಿ ಇಂದು ಹೇಳಿದರು.

‘ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದು ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರದಲ್ಲಿ ಯಾರನ್ನೂ ಕಾನೂನು ಕೈಗೆತೆಗೆದುಕೊಳ್ಳಲು ಬಿಡುವುದಿಲ್ಲ. ಕಾನೂನಿನ ಪ್ರಕಾರ ಕ್ರಮ ಜರುಗಿಸುವ ಕೆಲಸ ಮಾಡುತ್ತೇವೆ. ಎಸ್.ಐ.ಟಿ ನಲ್ಲಿರುವವವರೂ ಪೊಲೀಸರೇ. ಪ್ರಕರಣದ ತನಿಖೆ ನಡೆಯುತ್ತಿದ್ದು, ಪ್ರಾಥಮಿಕ ವರದಿ ಬಂದ ನಂತರ ತೀರ್ಮಾನಿಸಲಾಗುವುದು’ ಎಂದರು.

‘ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆ ಮೇಲೆ ದೌರ್ಜನ್ಯ ನಡೆದಾಗ ಗೃಹ ಸಚಿವರು ಭೇಟಿ ನೀಡಿದ್ದರು. ಭೇಟಿ ನೀಡುವಂತೆ ನಾನೇ ಸೂಚನೆ ನೀಡಿದ್ದೆ. ಇಲ್ಲಿ ಗೃಹ ಸಚಿವರು ಇರಲಿಲ್ಲ. ಕೇಂದ್ರದ ಮಾಜಿ ಸಚಿವ ಶಿವಣ್ಣ ಭೇಟಿ ನೀಡಿದ್ದಾರೆ. ಸಂತ್ರಸ್ತೆಯನ್ನು ಭೇಟಿ ಮಾಡಿ ಸಾಂತ್ವನ ಹೇಳುವುದು ಒಂದು ಭಾಗವಾದರೆ, ಕಾನೂನಿನ ರೀತಿ ಕ್ರಮ ತೆಗೆದುಕೊಳ್ಳುವುದು ಮತ್ತೊಂದು ಭಾಗ; ಎರಡನ್ನೂ ಮಾಡಿದ್ದೇವೆ’ ಎಂದು ಹೇಳಿದರು.

‘ಮಾರ್ಚ್ ಮೊದಲ ವಾರದೊಳಗೆ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವುದರಿಂದ ಫೆಬ್ರವರಿ ತಿಂಗಳಲ್ಲಿಯೇ ಬಜೆಟ್ ಮಂಡಿಸಲಾಗುವುದು. ರೈತರರಿಗೆ ಪರಿಹಾರ ನೀಡಿಲ್ಲವೆಂದು ಪ್ರತಿಭಟನೆ ಮಾಡುತ್ತಿದ್ದಾರೆ. ರೈತರಿಗೆ 2,000 ರೂ.ಗಳ ತಾತ್ಕಾಲಿಕ ಪರಿಹಾರವನ್ನು ನೀಡುತ್ತಿದ್ದು ಕೇಂದ್ರ ಸರ್ಕಾರದಿಂದ ಎನ್.ಡಿ.ಆರ್.ಎಫ್ ನಡಿ ಬರ ಪರಿಹಾರ ಬಂದ ನಂತರ ಪುನಃ ನಿಯಮಾವಳಿಗಳ ಪ್ರಕಾರ ಪರಿಹಾರ ನೀಡಲಾಗುವುದು’ ಎಂದರು.

‘ಅನಂತಕುಮಾರ್ ಹೆಗಡೆಯವರು ಮುಖ್ಯಮಂತ್ರಿ ಹುದ್ದೆಯಲ್ಲಿರುವ ವ್ಯಕ್ತಿಗೆ ಏಕವಚನದಲ್ಲಿ ಮಾತನಾಡುವುದನ್ನು ಸಮರ್ಥಿಸಿಕೊಂಡಿದ್ದಾರೆ. ಹೆಗಡೆ ಅವರು ಇವತ್ತಿನವರೆಗೆ ನಾಪತ್ತೆಯಾಗಿದ್ದರು. ಚುನಾವಣೆ ಹತ್ತಿರ ಬಂದಂತೆ ಕಾಣಿಸಿಕೊಂಡು ಹೇಳಿಕೆ ನೀಡಿದ್ದಾರೆ. ಸಂಸದರಾಗಿ, ಮಾಜಿ ಮಂತ್ರಿಯಾಗಿ ಕ್ಷೇತ್ರಕ್ಕೆ ಏನಾದರೂ ಮಾಡಿದ್ದಾರೆಯೇ? ಇಂದಿನವರೆಗೆ ಬಡವರ ಸಮಸ್ಯೆ ಕೇಳಿದ್ದಾರೆಯೇ? ಸಂಸ್ಕೃತಿ ಎಂದರೆ ಮನುಷ್ಯತ್ವ. ಮೊದಲು ಮನುಷ್ಯ ತ್ವ ಇರಬೇಕು’ ಎಂದು ತಮ್ಮ ವಿರುದ್ಧದ ಏಕವಚನ ಹೇಳಿಕೆಗೆ ತಿರುಗೇಟು ಕೊಟ್ಟರು.

ಇದನ್ನೂ ಓದಿ; ಭಾರತದ ಸೈನಿಕರು ಯಾಕೆ ಮಾಲ್ಡಿವ್ಸ್‌ನಲ್ಲಿದ್ದಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ದಲಿತ ಯುವಕನ ಲಾಕಪ್ ಡೆತ್ ಪ್ರಕರಣ; ಆರು ಜನ ಪೊಲೀಸರ ವಿರುದ್ಧ ಪ್ರಕರಣ ದಾಖಲು

ಕಲೆದ ಮಾರ್ಚ್‌ನಲ್ಲಿ ತಮಿಳುನಾಡಿನ ಶಿವಗಂಗೈ ಜಿಲ್ಲೆಯಲ್ಲಿ ನಡೆಸಿದ್ದ 26 ವರ್ಷದ ದಲಿತ ಯುವಕ ಆಕಾಶ್ ಡೆಲಿಸನ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿ-ಸಿಐಡಿ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ (ಚಾರ್ಜ್‌ಶೀಟ್), ಆರೋಪಿಗಳಾದ ಆರು ಮಂದಿ...

Karnataka SIR | ಡಿಲೀಟ್ ಪಟ್ಟಿಯಲ್ಲಿ ಅಂದಾಜು 52 ಲಕ್ಷ ಅರ್ಹ ಮತದಾರರಿದ್ದಾರೆ : ನಾಗರಿಕ ಸಂಘಟನೆಗಳಿಂದ ಗಂಭೀರ ಆರೋಪ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ ಮತದಾರರ ಪಟ್ಟಿಯಿಂದ ಈಗಾಗಲೇ ಹೊರಗಿಟ್ಟಿರುವ 1.08 ಕೋಟಿ (1,07,96,415) ಮತದಾರರ ಪೈಕಿ ಅಂದಾಜು 52 ಲಕ್ಷ ಮಂದಿ ಅರ್ಹರಿದ್ದಾರೆ ಎಂದು ನಾಗರಿಕ ಸಂಘಟನೆಗಳು ಗಂಭೀರ...

ನೇಪಾಳದಲ್ಲಿ ಜಲಪ್ರಳಯ: 300 ಭಾರತೀಯರು ಸೇರಿ 1,500 ಮಂದಿ ನಾಪತ್ತೆ, ಸಾವಿನ ಸಂಖ್ಯೆ 165ಕ್ಕೆ ಏರಿಕೆ

ನೇಪಾಳ ಮತ್ತು ಟಿಬೆಟ್‌ನಲ್ಲಿ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತದ ನಂತರ ಸುಮಾರು 1,500 ಜನರು ಕಾಣೆಯಾಗಿದ್ದಾರೆ. ಈ ಪ್ರವಾಹದಲ್ಲಿ 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್...

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...