Homeಮುಖಪುಟಶಿಂಧೆ ಬಣವೇ ನಿಜವಾದ ಶಿವಸೇನೆ ಎಂದ ಮಹಾರಾಷ್ಟ್ರ ಸ್ಪೀಕರ್ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ...

ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದ ಮಹಾರಾಷ್ಟ್ರ ಸ್ಪೀಕರ್ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಉದ್ಧವ್ ಠಾಕ್ರೆ ಬಣ

- Advertisement -
- Advertisement -

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವನ್ನು ‘ನಿಜವಾದ ಶಿವಸೇನೆ’ ಎಂದು ಗುರುತಿಸಿರುವ ಸ್ಪೀಕರ್ ರಾಹುಲ್ ನಾರ್ವೇಕರ್ ಅವರ ಆದೇಶದ ವಿರುದ್ಧ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ), ಸ್ಪೀಕರ್ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಬೇಕು, ಸಿಎಂ ಶಿಂಧೆ ಬಣದ ಶಾಸಕರು ವಿಧಾನಸಭೆ ಪ್ರವೇಶಿಸುವುದಕ್ಕೆ ನಿರ್ಬಂಧ ವಿಧಿಸಿ ಮಧ್ಯಂತರ ಆದೇಶ ನೀಡಬೇಕು ಹಾಗೂ ಶಿಂಧೆ ಬಣದ ಶಾಸಕರ ಸದಸ್ಯತ್ವವನ್ನು ಅಮಾನತು ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ನ್ನು ಕೋರಿದೆ.

ಶಿಂಧೆ ಬಣದ ಪರ ಸ್ಪೀಕರ್ ನೀಡಿರುವ ಆದೇಶ ಸಂಪೂರ್ಣವಾಗಿ ಕಾನೂನು ಬಾಹಿರವಾಗಿದೆ. ಇದು ಸಂವಿಧಾನದ ಹತ್ತನೇ ಶೆಡ್ಯೂಲ್ (ಪಕ್ಷಾಂತರ ವಿರೋಧಿ ಕಾಯ್ದೆ) ಗೆ ವಿರುದ್ದವಾಗಿದೆ. ಶಿಂಧೆ ಬಣ ಪ್ರತ್ಯೇಕವಾಗಿ ಸರ್ಕಾರ ರಚಿಸಿರುವುದು ಶಿವಸೇನೆಯ ಸಂವಿಧಾನದ ಉಲ್ಲಂಘಣೆಯಲ್ಲ ಎಂದು ಸ್ಪೀಕರ್‌ ಹೇಳಿರುವುದು ಸಂಪೂರ್ಣ ತಪ್ಪು ಎಂದು ಠಾಕ್ರೆ ಬಣ ಆರೋಪಿಸಿದೆ.

ಬಿಜೆಪಿಯ ಬೆಂಬಲದೊಂದಿಗೆ ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿದ್ದಾರೆ. ಅವರ ಬಣದ ಶಾಸಕರು ಬಿಜೆಪಿಯೊಂದಿಗೆ ಒಡನಾಟ ಹೊಂದಿರುವುದು ಸ್ಪಷ್ಟವಾಗಿದೆ. ಇದನ್ನು ಸ್ಪೀಕರ್ ಪರಿಗಣಿಸಿಲ್ಲ ಎಂದು ಠಾಕ್ರೆ ಬಣ ಆಪಾದಿಸಿದೆ.

ಮಹಾರಾಷ್ಟ್ರದ ಮಹಾ ಅಘಾಡಿ ಸರ್ಕಾರದ ಭಾಗವಾಗಿದ್ದ ಶಿವಸೇನೆಯಿಂದ ಬಂಡಾಯವೆದಿದ್ದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣ, ಬಿಜೆಪಿ ಜೊತೆ ಸೇರಿ ಪ್ರತ್ಯೇಕ ಸರ್ಕಾರ ರಚಿಸಿತ್ತು. ಸಿಎಂ ಶಿಂಧೆ ಸೇರಿದಂತೆ ಪಕ್ಷದ ವಿರುದ್ದ ತೊಡೆ ತಟ್ಟಿದ್ದ ಶಾಸಕರನ್ನು ಅಮಾನತುಗೊಳಿಸುವಂತೆ ಉದ್ದವ್ ಠಾಕ್ರೆ ಬಣ ಕೋರಿತ್ತು. ಆದರೆ, ಸ್ಪೀಕರ್ ಈ ಕುರಿತು ಯಾವುದೇ ಆದೇಶ ನೀಡದೆ ವಿಳಂಬ ಮಾಡಿದ್ದರು.

ಸುಪ್ರೀಂ ಕೋರ್ಟ್‌ ಚಾಟಿ ಬೀಸಿದ ಬಳಿಕ, ಜನವರಿ 10 ರಂದು ಏಕನಾಥ್ ಶಿಂಧೆ ಬಣದ ಪರ ಸ್ಪೀಕರ್ ತೀರ್ಪು ನೀಡಿದ್ದರು. ಶಿಂಧೆ ನೇತೃತ್ವದ ಶಿವಸೇನೆ ಬಣವು ಬಹುಪಾಲು ಪಕ್ಷದ ಶಾಸಕರ ಬೆಂಬಲವನ್ನು ಹೊಂದಿರುವುದರಿಂದ ಕಾನೂನುಬದ್ಧವಾಗಿದೆ ಎಂದು ಹೇಳಿದ್ದರು.

ಇದನ್ನೂ ಓದಿ : ಮೋದಿ ಮಣಿಪುರಕ್ಕೆ ಯಾಕೆ ಭೇಟಿ ನೀಡಿಲ್ಲ ಎಂದು ಜನ ನಮ್ಮನ್ನು ಕೇಳ್ತಿದ್ದಾರೆ: ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...