Homeಕರ್ನಾಟಕಗೌರಿ ಲಂಕೇಶ್‌ ಹತ್ಯೆ ಪ್ರಕರಣ: ಜಾಮೀನಿನ ಮೇಲಿರುವ ಆರೋಪಿಗೆ ನೊಟೀಸ್‌ ನೀಡಿದ ಸುಪ್ರೀಂಕೋರ್ಟ್‌

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ಜಾಮೀನಿನ ಮೇಲಿರುವ ಆರೋಪಿಗೆ ನೊಟೀಸ್‌ ನೀಡಿದ ಸುಪ್ರೀಂಕೋರ್ಟ್‌

- Advertisement -
- Advertisement -

ಚಿಂತಕಿ, ವಿಚಾರವಾದಿ ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು ಮಂಜೂರು ಮಾಡಿರುವ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಆರೋಪಿಗೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಹತ್ಯೆಗೀಡಾದ ಪತ್ರಕರ್ತೆಯ ಸಹೋದರಿ ಕವಿತಾ ಲಂಕೇಶ್ ಅವರು ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿದೆ. ಅರ್ಜಿಯಲ್ಲಿ ಮೋಹನ್ ನಾಯಕ್‌ಗೆ ಜಾಮೀನು ರದ್ದುಗೊಳಿಸುವಂತೆ ಕವಿತಾ ಲಂಕೇಶ್ ಕೋರಿದ್ದರು.

ಗೌರಿ ಲಂಕೇಶ್‌ ಹತ್ಯೆ ಆರೋಪಿ ಮೋಹನ್ ನಾಯಕ್‌ಗೆ ಕರ್ನಾಟಕ ಹೈಕೋರ್ಟ್ ಡಿ.7, 2023ರಂದು ಜಾಮೀನು ನೀಡಿತ್ತು. ಮೋಹನ್ ನಾಯಕ್ ಪರ ಹೈಕೋರ್ಟ್‌ನಲ್ಲಿ ವಕೀಲ ಅಮರ್ ಕೊರಿಯಾ ವಾದ ಮಂಡಿಸಿದ್ದರು. ಗೌರಿ ಹತ್ಯೆಯ ಕ್ರಿಮಿನಲ್ ಪಿತೂರಿಯ ಭಾಗವಾಗಿರುವ ಮೋಹನ್ ನಾಯಕ್‌ಗೆ ನೀಡಲಾದ ಜಾಮೀನನ್ನು ರದ್ದುಗೊಳಿಸುವಂತೆ ನಿರ್ದೇಶನ ನೀಡುವಂತೆ ಕವಿತಾ ಅವರು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಆರೋಪಿಯು ಐದು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದಾನೆ ಮತ್ತು ವಿಚಾರಣೆಯಲ್ಲಿ ಅನಗತ್ಯ ವಿಳಂಬವನ್ನು ಉಲ್ಲೇಖಿಸಿ ಕರ್ನಾಟಕ ಹೈಕೋರ್ಟ್ ಕಳೆದ ವರ್ಷ ಡಿಸೆಂಬರ್‌ನಲ್ಲಿ ನಾಯಕ್‌ಗೆ ಜಾಮೀನು ಮಂಜೂರು ಮಾಡಿತ್ತು. ವಿಶೇಷ ತನಿಖಾ ತಂಡ(ಎಸ್‌ಐಟಿ) ಪ್ರಕರಣದ ತನಿಖೆ ನಡೆಸುತ್ತಿದೆ. ನಾಯಕ್ ಪ್ರಕರಣದಲ್ಲಿ 11ನೇ ಆರೋಪಿಯಾಗಿದ್ದು, ಒಟ್ಟು 17 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಗಮನಾರ್ಹವಾಗಿ 2021ರ ಅಕ್ಟೋಬರ್ 21ರಂದು ಸುಪ್ರೀಂಕೋರ್ಟ್ ಆರೋಪಿ ಮೋಹನ್ ನಾಯಕ್ ಎನ್ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆಯ (ಕೆಸಿಒಸಿಎ) ಅಡಿಯಲ್ಲಿ ಆರೋಪಗಳನ್ನು ರದ್ದುಗೊಳಿಸಿದ ಏಪ್ರಿಲ್ 22, 2021ರ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿದೆ. ಸಂಘಟಿತ ಅಪರಾಧಗಳಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕಠಿಣ ನಿಬಂಧನೆಗಳನ್ನು ಅನ್ವಯಿಸಬಹುದು ಎಂದು ಅದು ಹೇಳಿದೆ. ಗೌರಿ ಹತ್ಯೆಯ ಹೊರತಾಗಿ ಅನೇಕ ಸಂಘಟಿತ ಅಪರಾಧಗಳನ್ನು ಎಸಗಿರುವ ಅಮೋಲ್ ಕಾಳೆ ನೇತೃತ್ವದ ತಂಡದ ಭಾಗವಾಗಿ ನಾಯಕ್ ಇದ್ದ ಎನ್ನುವುದು ತನಿಖೆಯ ವೇಳೆ ಬಯಲಾಗಿತ್ತು.

2017ರ ಸೆಪ್ಟೆಂಬರ್ 05ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿನ ಮನೆಯ ಹೊರಗೆ ಪತ್ರಕರ್ತೆ ಮತ್ತು ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಲಾಗಿತ್ತು. ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದಂತೆ ಒಟ್ಟು 18 ಆರೋಪಿಗಳ ಪೈಕಿ 17 ಆರೋಪಿಗಳನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ವಿಕಾಸ್ ಪಾಟೀಲ್ ತಲೆಮರೆಸಿಕೊಂಡಿದ್ದಾನೆ. ಈ ಪ್ರಕರಣದ ಕುರಿತು ತನಿಖೆ ನಡೆಸಿದ ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ 1ನೇ ಸೆಷನ್ಸ್ ಕೋರ್ಟ್‌ಗೆ ಒಂದು ವರ್ಷದ ಬಳಿಕ 500ಕ್ಕೂ ಹೆಚ್ಚು ಸಾಕ್ಷಿಗಳು ಹಾಗೂ 1 ಸಾವಿರಕ್ಕೂ ಹೆಚ್ಚು ಪುರಾವೆಗಳನ್ನು ದಾಖಲಿಸಿರುವ ಸುಮಾರು 10 ಸಾವಿರ ಪುಟಕ್ಕೂ ಹೆಚ್ಚಿನ ಚಾರ್ಜ್‌ಶೀಟ್‌ನ್ನು ಸಲ್ಲಿಸಿದ್ದಾರೆ.

ಒಟ್ಟು 18 ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 302, 120ಬಿ, 114, 118, 109, 201, 203, 204 ಮತ್ತು 35, ಸಶಸ್ತ್ರ ಕಾಯ್ದೆಯ ಸೆಕ್ಷನ್ಗಳಾದ 25(1), 25(1ಃ), 27(1) ಮತ್ತು ಕೋಕಾ ಕಾಯ್ದೆಯ ಸೆಕ್ಷನ್ಗಳಾದ 3(1), 3(2), 3(3), 3(4)ರಡಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಅಮೋಲ್ ಕಾಳೆ, ಪರಶುರಾಮ್ ವಾಗ್ಮೊರೆ, ಗಣೇಶ್ ಮಿಸ್ಕಿನ್, ಅಮಿತ್ ಬಡ್ಡಿ, ಅಮಿತ್ ದೆಗ್ವೇಕರ್, ‘ರತ್ ಕುರ್ಣೇ, ಸುರೇಶ್ ಎಚ್.ಎಲ್, ರಾಜೇಶ್ ಬಂಗೇರ, ಸುನ್ವ ಗೊಂದಲೇಕರ್, ಶರದ್ ಕಾಲಸ್ಕರ್, ಮೋಹನ್ ನಾಯಕ್, ವಾಸುದೇವ ಸೂರ್ಯವಂಶಿ, ಸುಜಿತ್ ಕುಮಾರ್, ಮನೋಹರ್ ಎಡವೆ, ಶ್ರೀಕಾಂತ್ ಪಂಗರ್ಕರ್, ಕೆ.ಟಿ.ನವೀನ್ಕುಮಾರ್ ಹಾಗೂ ಹೃಷಿಕೇಶ್ ದೇವಡೇಕರ್ ಬಂಧನದಲ್ಲಿದ್ದಾರೆ. ಅಮೋಲ್ ಕಾಳೆಯನ್ನೂ ಒಳಗೊಂಡಂತೆ 7 ಆರೋಪಿಗಳು ಮಹಾರಾಷ್ಟ್ರದವರು, ಉಳಿದವರು ಕರ್ನಾಟಕ ರಾಜ್ಯದವರಾಗಿದ್ದಾರೆ.

ಈ ಎಲ್ಲ ಆರೋಪಿಗಳಿಗೂ ಸನಾತನ ಸಂಸ್ಥೆ ಮತ್ತು ‘ಹಿಂದೂ ಜನ ಜಾಗೃತಿ ಸಂಸ್ಥೆ’ಗಳೊಂದಿಗೆ ಪ್ರತ್ಯಕ್ಷ ಹಾಗೂ ಪರೋಕ್ಷ ಸಂಬಂಧಗಳಿವೆ ಎಂಬುವುದು ಪ್ರಾಸಿಕ್ಯೂಷನ್ ಪತ್ತೆ ಹಚ್ಚಿರುವ ಸಂಗತಿಯಾಗಿದ್ದು, ಸನಾತನ ಸಂಸ್ಥೆಯ ಸಿದ್ಧಾಂತ ಮತ್ತು ಗುರಿಗಳು ಈ ಆರೋಪಿಗಳನ್ನು ಹತ್ಯೆ ಮಾಡಲು ಪ್ರೇರೇಪಿಸಿದೆ ಎಂದು ಪ್ರಾಸಿಕ್ಯೂಷನ್ ಆರೋಪವಾಗಿದೆ. ಪ್ರಕರಣದ ಪ್ರಮುಖ ಆರೋಪಿ ಅಮೋಲ್ ಕಾಳೆ ತಂಡದವರೇ ಮಹಾರಾಷ್ಟ್ರದ ದಾಬೋಲ್ಕರ್, ಪನ್ಸಾರೆ ಹಾಗೂ ಕರ್ನಾಟಕದ ಸಂಶೋಧಕ ಪ್ರೊ.ಎಂ.ಎಂ.ಕಲಬುರ್ಗಿಯವರ ಹತ್ಯೆಯಲ್ಲೂ ಆರೋಪಿಗಳಾಗಿದ್ದಾರೆ ಎನ್ನಲಾಗಿದೆ. ಇವರಲ್ಲಿ ಕೆಲವರು ಮಹಾರಾಷ್ಟ್ರದ ಜೈಲಿನಲ್ಲಿದ್ದಾರೆ. ಉಳಿದವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...