Homeಕರ್ನಾಟಕಕಲಬುರಗಿ: ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಪ್ರಕರಣ; ಮುಖ್ಯ ಶಿಕ್ಷಕಿ ವಿರುದ್ಧ ಎಫ್‌ಐಆರ್‌

ಕಲಬುರಗಿ: ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಪ್ರಕರಣ; ಮುಖ್ಯ ಶಿಕ್ಷಕಿ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಕಲಬುರಗಿಯ ಮೌಲಾನಾ ಆಝಾದ್ ಮಾದರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ ಮತ್ತು ಮುಖ್ಯಶಿಕ್ಷಕಿ ನಿವಾಸದಲ್ಲಿ ತೋಟಗಾರಿಕೆ ಕೆಲಸವವನ್ನು ಮಾಡಲು ವಿದ್ಯಾರ್ಥಿಗಳ ಬಳಕೆ ಆರೋಪ ಕೇಳಿ ಬಂದಿತ್ತು, ಇದೀಗ ಶಾಲಾ ಮುಖ್ಯ ಶಿಕ್ಷಕಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಲಾ ವಿದ್ಯಾರ್ಥಿಯೋರ್ವನ ಪೋಷಕರ ದೂರಿನ ಮೇರೆಗೆ ಮೌಲಾನಾ ಆಜಾದ್ ಮಾದರಿ ಇಂಗ್ಲಿಷ್ ಮಾದ್ಯಮ  ಶಾಲೆಯ ಮುಖ್ಯೋಪಾಧ್ಯಾಯಿನಿ ಜೋಹರ್ ಜಬೀನಾ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಮುಖ್ಯೋಪಾಧ್ಯಾಯಿನಿ ವಿದ್ಯಾರ್ಥಿಗಳಲ್ಲಿ ಶಾಲೆಯ ಶೌಚಾಲಯಗಳನ್ನು ಶುಚಿ ಮಾಡಿಸುತ್ತಿದ್ದರು ಮತ್ತು ಪ್ರಾಂಶುಪಾಲೆಯ ನಿವಾಸದ ತೋಟದಲ್ಲಿ ಕೆಲಸ ಮಾಡಿಸುತ್ತಿದ್ದರು. ಮನೆಕೆಲಸಕ್ಕೆ ವಿದ್ಯಾರ್ಥಿಗಳನ್ನು ಬಳಸಿಕೊಳ್ಳದಂತೆ ಮುಖ್ಯಶಿಕ್ಷಕಿಗೆ ಎಚ್ಚರಿಕೆ ನೀಡಿದರೂ ಸುಧಾರಿಸಲಿಲ್ಲ ಎಂದು ದೂರುದಾರ ಮಹಮ್ಮದ್ ಜಮೀರ್ ದೂರಿನಲ್ಲಿ ಉಲ್ಲೇಖಿಸಿದ್ದರು.

ಜಮೀರ್ ನೀಡಿದ ದೂರಿನ ಮೇರೆಗೆ ನಾವು ಐಪಿಸಿ ಸೆಕ್ಷನ್ 506 ಮತ್ತು ಕರ್ನಾಟಕ ಮ್ಯಾನುಯಲ್ ಸ್ಕ್ಯಾವೆಂಜರ್ಸ್ ಮತ್ತು ಪುನರ್ವಸತಿ ಕಾಯಿದೆ 2013ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ ಎಂದು ರೋಜಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಅನೀಸ್ ಮುಜಾವರ್ ತಿಳಿಸಿದ್ದಾರೆ. ಈ ಬಗ್ಗೆ ಶಾಲೆಗೆ ಭೇಟಿ ನೀಡಿ ಇತರೆ ವಿದ್ಯಾರ್ಥಿಗಳು  ಶೌಚಾಲಯ ಸ್ವಚ್ಛಗೊಳಿಸುತ್ತಿದ್ದರಾ ಅಥವಾ ಪ್ರಾಂಶುಪಾಲರ ಮನೆಯಲ್ಲಿ ಕೆಲಸ ಮಾಡುತ್ತಿದ್ದಾರಾ ಎಂಬ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

ಶನಿವಾರ ಎಲ್ಲಾ ವಿದ್ಯಾರ್ಥಿಗಳು ತಮ್ಮ ಮನೆಗಳನ್ನು ತಲುಪಿದರೂ ನನ್ನ ಮಗ ಮಧ್ಯಾಹ್ನ ಮನೆಗೆ ಬಂದಿಲ್ಲ. ನಾನು ನನ್ನ ಮಗನನ್ನು ಹುಡುಕಿಕೊಂಡು ಶಾಲೆಗೆ ಹೋಗಿದ್ದೆ, ಆದರೆ ಅವನು ಶಾಲೆಯ ಮುಖ್ಯೋಪಾಧ್ಯಾಯಿನಿಯೊಂದಿಗೆ ಹೋಗಿದ್ದಾನೆ ಎಂದು ಬೇರೆಯವರು ನನಗೆ ಹೇಳಿದರು. ಅವರ ಮನೆಗೆ ಹೋಗಿ ನೋಡಿದಾಗ ನನ್ನ ಮಗ ಮುಖ್ಯೋಪಾಧ್ಯಾಯಿನಿ ಜೊಹರಾ ಜಬೀನ್ ಅವರ ಮನೆಯ ತೋಟದಲ್ಲಿ ಕೆಲಸ ಮಾಡುತ್ತಿದ್ದುದನ್ನು ನಾನು ಕಂಡುಕೊಂಡೆ. ಈ ಬಗ್ಗೆ ನಾನು ತಕ್ಷಣ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು  ದೂರುದಾರ ಜಮೀರ್ ಹೇಳಿದ್ದಾರೆ.

ಶಿಕ್ಷಣ ಇಲಾಖೆ ಡಿಸೆಂಬರ್‌ನಲ್ಲಿ ಈ ಕುರಿತು ಆದೇಶವನ್ನು ಹೊರಡಿಸಿದ್ದು, ವಿದ್ಯಾರ್ಥಿಗಳ ಕೈಯ್ಯಲ್ಲಿ  ಶೌಚಾಲಯ ಸ್ವಚ್ಛಗೊಳಿಸುವುದನ್ನು ನಿಷೇಧಿಸಿದೆ. ಶಿಕ್ಷಣ ಇಲಾಖೆ ಆಯುಕ್ತರಾದ ಬಿ.ಬಿ.ಕಾವೇರಿ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯ ಸ್ವಚ್ಛತೆಗೆ ಬಳಸಿಕೊಳ್ಳುವಂತಿಲ್ಲ. ಶೌಚಾಲಯ ಸ್ವಚ್ಛತೆಗೆ ಬಳಸಿದರೆ ಎಫ್‍ಐಆರ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದರು.

ಇದಕ್ಕೂ ಮೊದಲು ಕೋಲಾರದ ಮಾಲೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರಲ್ಲಿ ಈ ಮೊದಲು ಶಾಲಾ ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿಸಲಾಗಿತ್ತು. ಘಟನೆಯ ಪೋಟೋ ವೈರಲ್‌ ಆಗುತ್ತಿದ್ದಂತೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಪ್ರಾಂಶುಪಾಲೆ ಭಾರತಮ್ಮ, ಸಹ ಶಿಕ್ಷಕ ಮುನಿಯಪ್ಪ ಅವರನ್ನು ಕೋಲಾರ ಪೊಲೀಸರು ಬಂಧಿಸಿದ್ದರು.

ಇದರ ಬೆನ್ನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಮುಖ್ಯ ಶಿಕ್ಷಕ ಶಂಕರಪ್ಪ ಹಾಗೂ ಇತರ ಶಿಕ್ಷಕರು ವಿದ್ಯಾರ್ಥಿಗಳಿಂದ ಶೌಚಾಲಯಗಳನ್ನು ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಇದಲ್ಲದೆ ಬೆಂಗಳೂರು ಉತ್ತರದ ಅಂದ್ರಹಳ್ಳಿಯ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛತೆ ಮಾಡುವ ವಿಡಿಯೋ ವೈರಲ್‌ ಆಗಿತ್ತು. ಘಟನೆಗೆ ಸಂಬಂಧಿಸಿ ಬಿಇಓ ಆಂಜನಪ್ಪ ಅವರ ದೂರಿನ ಮೇರೆಗೆ ಬ್ಯಾಡರಹಳ್ಳಿ ಠಾಣೆ ಪೊಲೀಸರು ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಅವರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಿದ್ದರು.

ಇದನ್ನು ಓದಿ: ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ: ಭಾರತದಲ್ಲಿ ಮುಸ್ಲಿಮ್‌ ವಿರೋಧಿ ಪ್ರಚಾರಕ್ಕೆ ಸಾಮಾಜಿಕ ಮಾದ್ಯಮವನ್ನು ಹೇಗೆ ಬಳಸಲಾಗಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...