Homeಮುಖಪುಟಸ್ಪೀಕರ್‌ ನಿಲುವಿಗೆ ಶಿವಸೇನೆಯ ಎರಡು ಬಣಗಳಿಂದ ಆಕ್ಷೇಪ: ಸುಪ್ರೀಂ ಕದ ತಟ್ಟಿದ ಉದ್ಧವ್‌, ಹೈಕೋರ್ಟ್‌ ಮೆಟ್ಟಿಲೇರಿದ...

ಸ್ಪೀಕರ್‌ ನಿಲುವಿಗೆ ಶಿವಸೇನೆಯ ಎರಡು ಬಣಗಳಿಂದ ಆಕ್ಷೇಪ: ಸುಪ್ರೀಂ ಕದ ತಟ್ಟಿದ ಉದ್ಧವ್‌, ಹೈಕೋರ್ಟ್‌ ಮೆಟ್ಟಿಲೇರಿದ ಶಿಂಧೆ ಬಣ

- Advertisement -
- Advertisement -

ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಬಣವೇ ನಿಜವಾದ ಶಿವಸೇನೆ ಎಂಬ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ ರಾಹುಲ್‌ ನಾರ್ವೇಕರ್‌ ಅವರ ನಿಲುವು ಮತ್ತು ಸಿಎಂ ಶಿಂಧೆ ಸೇರಿದಂತೆ ಅವರ ಬಣದ 38 ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳನ್ನು ವಜಾಗೊಳಿಸಿದ್ದನ್ನು ಪ್ರಶ್ನಿಸಿ ಉದ್ಧವ್‌ ಠಾಕ್ರೆ ಬಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಈ ಬೆನ್ನಲ್ಲೇ ಶಿಂಧೆ ಬಣ ಕೂಡ ಬಾಂಬೆ ಹೈಕೋರ್ಟ್‌ ಮೆಟ್ಟಿಲೇರಿದ್ದು, ಉದ್ಧವ್‌ ಬಣದ 14 ಶಾಸಕರನ್ನು ಅನರ್ಹಗೊಳಿಸದಿರುವ ಸ್ಪೀಕರ್ ನಿರ್ಧಾರವನ್ನು ಪ್ರಶ್ನಿಸಿದೆ.

ಉದ್ಧವ್ ಬಣಕ್ಕೆ ಸೇರಿದ ಹದಿನಾಲ್ಕು ಶಾಸಕರ ವಿರುದ್ಧ ಸಲ್ಲಿಸಿದ್ದ ಅನರ್ಹತೆ ಅರ್ಜಿಗಳನ್ನು ಮಹಾರಾಷ್ಟ್ರ ಸ್ಪೀಕರ್ ವಜಾಗೊಳಿಸಿದ್ದನ್ನು ಪ್ರಶ್ನಿಸಿ ಶಿವಸೇನೆ ಮುಖ್ಯ ಸಚೇತಕರೂ ಆಗಿರುವ ಏಕನಾಥ್ ಶಿಂಧೆ ಬಣದ ಸದಸ್ಯ ಭರತ್ ಗೋಗಾವಲೆ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಉದ್ಧವ್ ಠಾಕ್ರೆ ಬಣದ ಸದಸ್ಯರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ. ಅಲ್ಲದೆ ಶಿವಸೇನೆ ಪಕ್ಷದ ಸದಸ್ಯತ್ವವನ್ನು ಸ್ವಯಂಪ್ರೇರಿತವಾಗಿ ತ್ಯಜಿಸಿದ್ದಾರೆ ಎಂದು ಗೋಗಾವಲೆ ತಮ್ಮ ಅರ್ಜಿಯಲ್ಲಿ ಆಪಾದಿಸಿದ್ದಾರೆ.

ಜುಲೈ 4, 2023ರಂದು ವಿಧಾನಸಭೆಯಲ್ಲಿ ನಡೆದ ವಿಶ್ವಾಸ ಮತ ಯಾಚನೆ ಸಮಯದಲ್ಲಿ ಕಾಂಗ್ರೆಸ್ ಮತ್ತು ಎನ್‌ಸಿಪಿಯೊಂದಿಗೆ ಸೇರಿಕೊಂಡು ಠಾಕ್ರೆ ಬಣದ ಶಾಸಕರು ಶಿವಸೇನೆ ಸರ್ಕಾರದ ವಿರುದ್ಧ ಮತ ಚಲಾಯಿಸಿದ್ದಾರೆ. ಈ ಅಂಶವನ್ನು ಸ್ಪೀಕರ್ ಪರಿಗಣಿಸಿಲ್ಲ ಎಂದು ಶಿಂಧೆ ಬಣ ಹೇಳಿಕೊಂಡಿದೆ.

ಪ್ರಕರಣದ ಹಿನ್ನೆಲೆ :

ಮಹಾರಾಷ್ಟ್ರದಲ್ಲಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್‌ಸಿಪಿ ಪಕ್ಷಗಳು ಜೊತೆಗೂಡಿ ಮಹಾ ವಿಕಾಸ್ ಅಘಾಡಿ ಸರ್ಕಾರ ರಚಿಸಿತ್ತು. ಉದ್ದವ್ ಠಾಕ್ರೆ ಮುಖ್ಯಮಂತ್ರಿಯಾಗಿದ್ದರು. ಸರ್ಕಾರ ಸುಸೂತ್ರವಾಗಿ ನಡೆಯುತ್ತಿದ್ದಾಗ, 2022 ಜೂನ್ ತಿಂಗಳಲ್ಲಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ಶಿವಸೇನೆ ಶಾಸಕರು ಉದ್ದವ್ ಆಡಳಿತದ ವಿರುದ್ದ ದಿಢೀರ್ ಬಂಡೆದಿದ್ದರು. ಬಳಿಕ ಕೆಲ ದಿನಗಳ ರಾಜಕೀಯ ಮೇಲಾಟದ ಬಳಿಕ ಶಿಂಧೆ ಬಣ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿತ್ತು. ಶಿವಸೇನೆಯ ಒಟ್ಟು 55 ಶಾಸಕರ ಪೈಕಿ ಸುಮಾರು 37 ಮಂದಿ ಏಕನಾಥ್ ಶಿಂಧೆ ಅವರನ್ನು ಬೆಂಬಲಿಸಿದ್ದರು. ಈ ಮೂಲಕ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನಗೊಂಡಿತ್ತು.

ಬಳಿಕ, ಉದ್ದವ್ ಠಾಕ್ರೆ ಬಣ ಸಿಎಂ ಏಕನಾಥ್ ಶಿಂಧೆ ಸೇರಿದಂತೆ ಅವರ ಬಣದ ಶಾಸಕರನ್ನು ಅಮಾನತುಗೊಳಿಸುವಂತೆ ಸ್ಪೀಕರ್‌ಗೆ ಅರ್ಜಿ ಸಲ್ಲಿಸಿದ್ದರು. ಸ್ಪೀಕರ್ ರಾಹುಲ್ ನಾರ್ವೇಕರ್‌ ಅರ್ಜಿ ಕುರಿತು ಯಾವುದೇ ತೀರ್ಮಾನ ಕೈಗೊಳ್ಳದೆ ಒಂದು ವರ್ಷ ವಿಳಂಬ ಮಾಡಿದ್ದರು. ಈ ಹಿನ್ನೆಲೆ ಉದ್ದವ್ ಬಣ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡ ಬಳಿಕ, ಜನವರಿ 10,2024ರಂದು ಸ್ಪೀಕರ್ ನಾರ್ವೇಕರ್ ಶಿಂಧೆ ಬಣದ ಪರ ನಿಲುವು ತಾಳಿದ್ದರು.

ಶಿಂಧೆ ಬಣವು 55 ಶಾಸಕರ ಪೈಕಿ 37 ಮಂದಿಯ ಬಹುಮತ ಹೊಂದಿದ ಪರಿಣಾಮ ಉದ್ದವ್ ಬಣದ ಸುನಿಲ್ ಪ್ರಭು ಅವರು ಪಕ್ಷದ ವಿಪ್ ಅಲ್ಲ ಎಂದು ಸ್ಪೀಕರ್‌ ನಾರ್ವೇಕರ್‌ ಜನವರಿ 10ರಂದು ನಿರ್ಧರಿಸಿದ್ದರು. ಹೀಗಾಗಿ ಶಿವಸೇನೆ ಶಾಸಕಾಂಗ ಪಕ್ಷದ ಸಭೆ ಕರೆಯಲು ಸುನಿಲ್‌ ಪ್ರಭು ಅವರಿಗೆ ಯಾವುದೇ ಅಧಿಕಾರ ಇಲ್ಲ ಮತ್ತು ಸಭೆ ಕರೆ ನೀಡುವ ವಾಟ್ಸಾಪ್‌ ಸಂದೇಶವನ್ನು 12 ಗಂಟೆಗಳಷ್ಟು ಕಡಿಮೆ ಅವಧಿಯಲ್ಲಿ ಕಳಿಸಲಾಗಿದೆ ಎಂದು ಒತ್ತಿ ಹೇಳಿದ್ದರು.

ಇದಲ್ಲದೆ, ಭರತ್ ಗೋಗಾವಲೆ ಅವರನ್ನು ಪಕ್ಷದ ವಿಪ್ ಆಗಿ ನೇಮಿಸಿರುವುದು ಮತ್ತು ಏಕನಾಥ್ ಶಿಂಧೆ ಅವರು ನಾಯಕರಾಗಿ ಆಯ್ಕೆಯಾಗಿರುವುದು ಸಿಂಧುವಾಗಿದೆ ಎಂದು ಎಂದು ಅವರು ತೀರ್ಪು ನೀಡಿದ್ದರು.

ಇದನ್ನೂ ಓದಿ : ಮಥುರಾ: ಶಾಹಿ ಈದ್ಗಾ ಮಸೀದಿ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, "ಯಾವುದೇ ಸಂದರ್ಭದಲ್ಲೂ...

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...